Suriya 42 ಗೆ ಟೈಟಲ್ ಫಿಕ್ಸ್: ಯುದ್ಧ ಭೂಮಿಯಲ್ಲಿ ಸವಾರಿ ಹೊರಟ ʼಕಂಗುವʼ
Team Udayavani, Apr 16, 2023, 11:00 AM IST
ಚೆನ್ನೈ: ಸೂಪರ್ ಸ್ಟಾರ್ ಸೂರ್ಯ ಅವರ ಬಹು ನಿರೀಕ್ಷಿತ 42ನೇ ಸಿನಿಮಾಕ್ಕೆ ಟೈಟಲ್ ಫಿಕ್ಸ್ ಆಗಿದೆ. ಟೈಟಲ್ ರಿವೀಲ್ ಅದ್ಧೂರಿ ಟೀಸರ್ ಮೂಲಕ ಚಿತ್ರತಂಡ ರಿಲೀಸ್ ಮಾಡಿದೆ.
ವಾರಿಯರ್ ಪೋಸ್ಟರ್ ಮೂಲಕ ಸಿಕ್ಕಾಪಟ್ಟೆ ವೈರಲ್ ಆಗಿದ್ದ ಸೂರ್ಯ, ಈಗ ಟೀಸರ್ ನಲ್ಲಿ ಮಿಂಚಿದ್ದಾರೆ. ಸೂರ್ಯ – ಶಿವ ಕಾಂಬಿನೇಷನ್ ನ ಚಿತ್ರಕ್ಕೆ ʼ ಕಂಗುವʼ ಎಂದು ಟೈಟಲ್ ಇಡಲಾಗಿದೆ. ಯುದ್ದಭೂಮಿಯಲ್ಲಿ ಹೋರಾಟ ಮಾಡುವ ಯೋಧನಂತೆ ಕುದುರೆ ಸವಾರಿ ಮಾಡುತ್ತಾ, ದುಷ್ಟರ ಸಂಹಾರಕ್ಕೆ ನಾಯಕ ಹೊರಟಿರುವ ದೃಶ್ಯವನ್ನು ತೋರಿಸಿ ಸಿನಿಮಾದ ಟೈಟಲ್ ರಿವೀಲ್ ಮಾಡಿದ್ದಾರೆ.
ಮೇಲ್ನೋಟಕ್ಕೆ ಇದೊಂದು ಯುದ್ಧಭೂಮಿಯ ಕಥಾಹಂದರದ ಸಿನಿಮಾದಂತೆ ಕಾಣುತ್ತದೆ. ಅದ್ಧೂರಿ ಮೇಕಿಂಗ್, ಸಾಹಸ ಕಲೆ ಚಿತ್ರದಲ್ಲಿರಬಹುದು. ಇದೊಂದು ಅಡ್ವಂಚರ್ ಡ್ರಾಮಾ ಸಿನಿಮಾವಾಗಿದ್ದು, ಸೂರ್ಯ ಇದರಲ್ಲಿ ವೆಂಕಟೇರ್, ಅರತಾರ್, ಮಂದಾಂಕರ್, ಮುಕಾತಾರ್ ಮತ್ತು ಪೆರುಮಾನಾಥರ್ ಎಂಬ ಐದು ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸೂರ್ಯ ಫ್ಯಾನ್ಸ್ ಗಳು ಟೀಸರ್ ನೋಡಿ ಭೇಷ್ ಎಂದಿದ್ದಾರೆ.
ಇದನ್ನೂ ಓದಿ: ವಿವೇಕಾನಂದ ರೆಡ್ಡಿ ಪ್ರಕರಣ: ಆಂಧ್ರ ಸಿಎಂ ಜಗನ್ ಸಂಬಂಧಿ ವೈಎಸ್ ಭಾಸ್ಕರ ರೆಡ್ಡಿ ಬಂಧನ
ಅಂದಹಾಗೆ ಸಿನಿಮಾ 3ಡಿಯಲ್ಲಿ 10 ಭಾಷೆಯಲ್ಲಿ 2024 ರ ಆರಂಭದಲ್ಲಿ ರಿಲೀಸ್ ಆಗಲಿದೆ ಎಂದು ಚಿತ್ರತಂಡ ಹೇಳಿದೆ.
ಬಾಲಿವುಡ್ ಬ್ಯೂಟಿ ದಿಶಾ ಪಟಾನಿ ಈ ಸಿನಿಮಾದ ಮೂಲಕ ಕಾಲಿವುಡ್ ಗೆ ಎಂಟ್ರಿ ಕೊಡಲಿದ್ದಾರೆ. ಕೋವೈ ಸರಳಾ, ಯೋಗಿ ಬಾಬು, ಆನಂದ್ ರಾಜ್, ರೆಡಿನ್ ಕಿಂಗ್ಸ್ಲಿ, ರವಿ ರಾಘವೇಂದ್ರ ಮುಂತಾದ ಕಲಾವಿದರ ದಂಡು ಸಿನಿಮಾದಲ್ಲಿರಲಿದೆ.
ಕೆ.ಇ.ಜ್ಞಾನವೇಲ್ ರಾಜಾ ಅವರ ಸ್ಟುಡಿಯೋ ಗ್ರೀನ್, ಯುವಿ ಕ್ರಿಯೇಷನ್ಸ್ ಸಹಯೋಗದೊಂದಿಗೆ ಸಿನಿಮಾ ತೆರೆಗೆ ಬರಲಿದೆ. ದೇವಿ ಶ್ರೀ ಪ್ರಸಾದ್ ಮ್ಯೂಸಿಕ್ ಸಿನಿಮಾಕ್ಕಿರಲಿದೆ.
A Man with Power of Fire & a saga of a Mighty Valiant Hero.#Suriya42 Titled as #Kanguva In 10 Languages🔥
In Theatres Early 2024Title video 🔗: https://t.co/xRe9PUGAzP@KanguvaTheMovie @Suriya_offl @DishPatani @directorsiva @ThisIsDSP @StudioGreen2 @UV_Creations @kegvraja pic.twitter.com/0uWXDIMCTM
— Studio Green (@StudioGreen2) April 16, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು