ಸುಶಾಂತ್ 5 ದಿನದಲ್ಲಿ 14 ಬಾರಿ ಸಿಮ್ ಬದಲಾಯಿಸಿದ್ದೇಕೆ? ಬಿಹಾರ ಪೊಲೀಸರಿಂದ ಸತ್ಯ ಬಯಲು
ಸುಶಾಂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆ ಕೆಕೆ ಸಿಂಗ್ ಅವರು ದೂರು ದಾಖಲಿಸಿದ್ದರು.
Team Udayavani, Aug 3, 2020, 9:32 AM IST
ಮುಂಬೈ:ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ತನಿಖೆ ನಡೆಸಲು ಬಿಹಾರ ಪೊಲೀಸರು ಬೆನ್ನತ್ತಿದ್ದು, ಇದರಿಂದಾಗಿ ಮುಂಬೈ ಮತ್ತು ಬಿಹಾರ ಪೊಲೀಸರ ನಡುವೆ ಜಿದ್ದಾಜಿದ್ದಿ ನಡೆಯತೊಡಗಿದೆ ಎಂದು ವರದಿ ತಿಳಿಸಿದೆ.
ಬಿಹಾರ ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ನಟ ಸುಶಾಂತ್ ಸಿಂಗ್ ಜೂನ್ 9ರಿಂದ 13ರವರೆಗೆ 14 ಸಿಮ್ ಕಾರ್ಡ್ಸ್ ಬದಲಾಯಿಸಿರುವುದಾಗಿ ತಿಳಿದು ಬಂದಿದೆ. ಸುಶಾಂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆ ಕೆಕೆ ಸಿಂಗ್ ಅವರು ದೂರು ದಾಖಲಿಸಿದ್ದರು. ಇದರಲ್ಲಿ ಸುಶಾಂತ್ ಗೆಳತಿ ರಿಯಾ ಚಕ್ರವರ್ತಿ ಹೆಸರನ್ನು ಉಲ್ಲೇಖಿಸಿದ್ದು, ನಂತರ ಬಿಹಾರ ಪೊಲೀಸರು ತನಿಖೆ ನಡೆಸಲು ಆರಂಭಿಸಿದ್ದರು.
ಸುಶಾಂತ್ ಸಿಂಗ್ ಅವರ ಮಾಜಿ ಮ್ಯಾನೇಜರ್ ಉಡುಪಿ ಮೂಲದ ದಿಶಾ ಸಾಲಿಯಾನ್ ಆತ್ಮಹತ್ಯೆಯ ಹಿಂದಿನ ಕಾರಣ ಬಹುಶಃ ಸುಶಾಂತ್ ಗೆ ತಿಳಿದಿರಬಹುದು ಎಂದು ಶಂಕಿಸಿರುವ ವಿಶೇಷ ತನಿಖಾ ತಂಡ, ಈ ಹಿನ್ನೆಲೆಯಲ್ಲಿಯೇ ಸುಶಾಂತ್ ಹಲವು ಬಾರಿ ಮೊಬೈಲ್ ಸಂಖ್ಯೆ ಬದಲಾಯಿಸಲು ಕಾರಣವಾಗಿರಬಹುದು ಎಂದು ಹೇಳಿದೆ.
ಪೊಲೀಸ್ ಅಧಿಕಾರಿಗಳ ಪ್ರಕಾರ, ದಿಶಾ ಸಾಲಿಯಾನ್ ಆತ್ಮಹತ್ಯೆಗೂ ಮುನ್ನ ಆಕೆ ಸುಶಾಂತ್ ಸಿಂಗ್ ಗೆ ಕರೆ ಮಾಡಿ ಕೆಲವು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಳು. ಈ ನಿಟ್ಟಿನಲ್ಲಿಯೇ ಸುಶಾಂತ್ ಅವರನ್ನು ಬೆದರಿಸಲು ಕಾರಣವಾಗಿತ್ತು ಹಾಗೂ ಹೆದರಿಕೆಯಿಂದ ಪದೇ, ಪದೇ ನಂಬರ್ ಬದಲಾಯಿಸುತ್ತಿದ್ದರು ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ