ಸುಶಾಂತ್ 5 ದಿನದಲ್ಲಿ 14 ಬಾರಿ ಸಿಮ್ ಬದಲಾಯಿಸಿದ್ದೇಕೆ? ಬಿಹಾರ ಪೊಲೀಸರಿಂದ ಸತ್ಯ ಬಯಲು
ಸುಶಾಂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆ ಕೆಕೆ ಸಿಂಗ್ ಅವರು ದೂರು ದಾಖಲಿಸಿದ್ದರು.
Team Udayavani, Aug 3, 2020, 9:32 AM IST
ಮುಂಬೈ:ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ತನಿಖೆ ನಡೆಸಲು ಬಿಹಾರ ಪೊಲೀಸರು ಬೆನ್ನತ್ತಿದ್ದು, ಇದರಿಂದಾಗಿ ಮುಂಬೈ ಮತ್ತು ಬಿಹಾರ ಪೊಲೀಸರ ನಡುವೆ ಜಿದ್ದಾಜಿದ್ದಿ ನಡೆಯತೊಡಗಿದೆ ಎಂದು ವರದಿ ತಿಳಿಸಿದೆ.
ಬಿಹಾರ ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ನಟ ಸುಶಾಂತ್ ಸಿಂಗ್ ಜೂನ್ 9ರಿಂದ 13ರವರೆಗೆ 14 ಸಿಮ್ ಕಾರ್ಡ್ಸ್ ಬದಲಾಯಿಸಿರುವುದಾಗಿ ತಿಳಿದು ಬಂದಿದೆ. ಸುಶಾಂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆ ಕೆಕೆ ಸಿಂಗ್ ಅವರು ದೂರು ದಾಖಲಿಸಿದ್ದರು. ಇದರಲ್ಲಿ ಸುಶಾಂತ್ ಗೆಳತಿ ರಿಯಾ ಚಕ್ರವರ್ತಿ ಹೆಸರನ್ನು ಉಲ್ಲೇಖಿಸಿದ್ದು, ನಂತರ ಬಿಹಾರ ಪೊಲೀಸರು ತನಿಖೆ ನಡೆಸಲು ಆರಂಭಿಸಿದ್ದರು.
ಸುಶಾಂತ್ ಸಿಂಗ್ ಅವರ ಮಾಜಿ ಮ್ಯಾನೇಜರ್ ಉಡುಪಿ ಮೂಲದ ದಿಶಾ ಸಾಲಿಯಾನ್ ಆತ್ಮಹತ್ಯೆಯ ಹಿಂದಿನ ಕಾರಣ ಬಹುಶಃ ಸುಶಾಂತ್ ಗೆ ತಿಳಿದಿರಬಹುದು ಎಂದು ಶಂಕಿಸಿರುವ ವಿಶೇಷ ತನಿಖಾ ತಂಡ, ಈ ಹಿನ್ನೆಲೆಯಲ್ಲಿಯೇ ಸುಶಾಂತ್ ಹಲವು ಬಾರಿ ಮೊಬೈಲ್ ಸಂಖ್ಯೆ ಬದಲಾಯಿಸಲು ಕಾರಣವಾಗಿರಬಹುದು ಎಂದು ಹೇಳಿದೆ.
ಪೊಲೀಸ್ ಅಧಿಕಾರಿಗಳ ಪ್ರಕಾರ, ದಿಶಾ ಸಾಲಿಯಾನ್ ಆತ್ಮಹತ್ಯೆಗೂ ಮುನ್ನ ಆಕೆ ಸುಶಾಂತ್ ಸಿಂಗ್ ಗೆ ಕರೆ ಮಾಡಿ ಕೆಲವು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಳು. ಈ ನಿಟ್ಟಿನಲ್ಲಿಯೇ ಸುಶಾಂತ್ ಅವರನ್ನು ಬೆದರಿಸಲು ಕಾರಣವಾಗಿತ್ತು ಹಾಗೂ ಹೆದರಿಕೆಯಿಂದ ಪದೇ, ಪದೇ ನಂಬರ್ ಬದಲಾಯಿಸುತ್ತಿದ್ದರು ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ
Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್ʼ
“ದೊಡ್ಡ ಸೌತ್ ಸಿನಿಮಾ ಮಾಡುತ್ತಿದ್ದೇನೆ” ಎಂದ ಕರೀನಾ: ಯಶ್ ಜೊತೆ ಬೇಬೋ ನಟಿಸೋದು ಪಕ್ಕಾ?
ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ
ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಬಿಗ್ ಬಿ ಹೇಳಿದ್ದೇನು
MUST WATCH
ಹೊಸ ಸೇರ್ಪಡೆ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು
Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ