ಡ್ರಗ್ಸ್ ಖರೀದಿ, ಮಾರಾಟ ಜಾಲದಲ್ಲಿ ರಿಯಾ ಶಾಮೀಲು ಸಾಬೀತು; ಭಾನುವಾರ ರಿಯಾ ಬಂಧನ?

ರಿಯಾ ಚಕ್ರವರ್ತಿ ವಿಚಾರಣೆ ನಡೆಸಲು ಭಾನುವಾರ ಹಾಜರಾಗುವಂತೆ ಎನ್ ಸಿಬಿ ಸಮನ್ಸ್ ಜಾರಿಗೊಳಿಸುವ ಸಾಧ್ಯತೆ ಇದೆ

Team Udayavani, Sep 5, 2020, 2:47 PM IST

ಡ್ರಗ್ಸ್ ಖರೀದಿ, ಮಾರಾಟ ಜಾಲದಲ್ಲಿ ರಿಯಾ ಶಾಮೀಲು ಸಾಬೀತು; ಭಾನುವಾರ ರಿಯಾ ಬಂಧನ?

ನವದೆಹಲಿ:ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ಡ್ರಗ್ಸ್ ಮಾಫಿಯಾ ಪ್ರಮುಖ ಕಾರಣ ಎಂಬ ವಿಚಾರ ಮುನ್ನೆಲೆಗೆ ಬಂದ ನಂತರ ಮಾದಕ ದ್ರವ್ಯ ನಿಯಂತ್ರಣ ಬ್ಯುರೋ ಅಧಿಕಾರಿಗಳು ಹಲವಾರು ಮಾಹಿತಿಯನ್ನು ಬಯಲಿಗೆಳೆದಿದ್ದಾರೆ. ಅಲ್ಲದೇ ರಿಯಾ ಕೂಡಾ ಡ್ರಗ್ಸ್ ಜಾಲದಲ್ಲಿ ಶಾಮೀಲಾಗಿರುವುದಾಗಿ ತಿಳಿಸಿದ್ದಾರೆ.

ರಿಯಾ ಚಕ್ರವರ್ತಿಯ ವಾಟ್ಸಪ್ ಚಾಟ್ಸ್ ವಿಶ್ಲೇಷಣೆ ನಡೆಸಿದ ಎನ್ ಸಿಬಿ ತನಿಖೆ ನಡೆಸಿದ ಸಂದರ್ಭದಲ್ಲಿ ನಟಿ ಮಾದಕ ವಸ್ತುಗಳನ್ನು ಖರೀದಿಸಿ ಮಾರಾಟ ಮಾಡುತ್ತಿರುವುದು ಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ. ಶುಕ್ರವಾರ ಎನ್ ಸಿಬಿ ಅಧಿಕಾರಿಗಳು ರಿಯಾ ಚಕ್ರವರ್ತಿ ಮನೆ ಮೇಲೆ ದಾಳಿ ನಡೆಸಿದ್ದರು.

ರಿಯಾ ಸಹೋದರ ಶೋವಿಕ್ ಚಕ್ರವರ್ತಿ ಹಾಗೂ ಸುಶಾಂತ್ ರಜಪೂತ್ ಮನೆಯ ಮ್ಯಾನೇಜರ್ ಸ್ಯಾಮ್ಯುಯೆಲ್ ಮಿರಾಂಡಾನನ್ನು ಸುಮಾರು 9ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು. ನಂತರ ಶುಕ್ರವಾರ ರಾತ್ರಿ ಮಿರಾಂಡಾನನ್ನು ಅಧಿಕಾರಿಗಳು ಬಂಧಿಸಿದ್ದರು.

ಎನ್ ಸಿಬಿಯ ಕ್ರೈಂ ವರದಿ ಪ್ರಕಾರ, ರಿಯಾ ಚಕ್ರವರ್ತಿಯ ವಾಟ್ಸಪ್ ಚಾಟ್ ನ ವಿಶ್ಲೇಷಣೆ ನಡೆಸಿದಾಗ ರಿಯಾ ಹಾಗೂ ಆಕೆಯ ಆಪ್ತರು ಡ್ರಗ್ಸ್ ಜಾಲದ ಸಂಚನ್ನು ಹೊಂದಿರುವುದು ಪತ್ತೆಯಾಗಿದೆ, ಇವರು ಡ್ರಗ್ಸ್ ಮಾರಾಟ, ಖರೀದಿ, ಸೇವನೆ ಹಾಗೂ ಸಾಗಾಟ ನಡೆಸುತ್ತಿದ್ದರು ಎಂಬುದು ತಿಳಿದು ಬಂದಿದೆ. ಮೇಲ್ನೋಟಕ್ಕೆ ನಾವು ಎನ್ ಡಿಪಿಎಸ್ ಕಾಯ್ದೆಯಡಿ ದಾಖಲಿಸುವ ಪ್ರಕರಣವಾಗಿದೆ ಎಂದು ತಿಳಿಸಿದೆ.

ಮೂಲಗಳ ಪ್ರಕಾರ, ರಿಯಾ ಚಕ್ರವರ್ತಿ ವಿಚಾರಣೆ ನಡೆಸಲು ಭಾನುವಾರ ಹಾಜರಾಗುವಂತೆ ಎನ್ ಸಿಬಿ ಸಮನ್ಸ್ ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಅಲ್ಲದೇ ವಿಚಾರಣೆ ನಂತರ ಆಕೆಯ ಬಂಧನ ಸಾಧ್ಯತೆ ದಟ್ಟವಾಗಿದೆ ಎಂದು ಊಹಾಪೋಹ ಹರಿದಾಡುತ್ತಿದೆ.

ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋವಿಕ್ ಚಕ್ರವರ್ತಿ ಮತ್ತು ಸ್ಯಾಮ್ಯುಯೆಲ್ ಮಿರಾಂಡನನ್ನು ಬಂಧಿಸಿ ಮುಂಬೈನ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ರಿಯಾ ಚಕ್ರವರ್ತಿ ಸಹೋದರ ಶೋವಿಕ್ ಹಾಗೂ ಸುಶಾಂತ್ ಸಿಂಗ್ ರಜಪೂತ್ ಮ್ಯಾನೇಜರ್ ಸ್ಯಾಮ್ಯುಯೆಲ್ ಮಿರಾಂಡನನ್ನು ಮುಂಬೈ ಕೋರ್ಟ್ ಸೆಪ್ಟೆಂಬರ್ 9ರವರೆಗೆ ಮಾದಕ ವಸ್ತು ನಿಯಂತ್ರಣ ಬ್ಯುರೋ (ಎನ್ ಸಿಬಿ) ಅಧಿಕಾರಿಗಳ ವಶಕ್ಕೆ ಒಪ್ಪಿಸಿ ಆದೇಶ ನೀಡಿದೆ.ಈವರೆಗೂ ಇಬ್ಬರನ್ನೂ ಮಾದಕ ವಸ್ತು ಸೇವನೆ ಪರೀಕ್ಷೆಗೆ ಒಳಪಡಿಸಿಲ್ಲ ಎಂದು ವರದಿ ತಿಳಿಸಿದೆ.

ರಿಯಾ ಚಕ್ರವರ್ತಿ ಅಪೇಕ್ಷೆಯಂತೆ ಡ್ರಗ್ಸ್ ಖರೀದಿಸಿ ಉಪಯೋಗಿಸುತ್ತಿರುವುದಾಗಿ ಶೋವಿಕ್ ಚಕ್ರವರ್ತಿ ಶುಕ್ರವಾರ ಎನ್ ಸಿಬಿ ಅಧಿಕಾರಿಗಳ ಮುಂದೆ ತಪ್ಪೊಪ್ಪಿಕೊಂಡಿರುವುದಾಗಿ ವರದಿ ತಿಳಿಸಿದೆ. ಈತ ಸುಶಾಂತ್ ಸಿಂಗ್ ರಜಪೂತ್ ಗೆ ಮಾತ್ರ ಡ್ರಗ್ಸ್ ವಿತರಿಸಿಲ್ಲ, ಬಾಲಿವುಡ್ ಸ್ಟಾರ್ ಗಳಿಗೂ ವಿತರಿಸುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.