Gayatri Joshi: ನಟಿ ಗಾಯತ್ರಿ ಜೋಶಿ ಕಾರು ಅಪಘಾತ; ಮತ್ತೊಂದು ಕಾರಿನಲ್ಲಿದ್ದ ದಂಪತಿ ಮೃತ್ಯು
Team Udayavani, Oct 4, 2023, 10:20 AM IST
ನವದೆಹಲಿ: ಬಾಲಿವುಡ್ ನಟಿ ಗಾಯತ್ರಿ ಜೋಶಿ ಮತ್ತು ಅವರ ಪತಿ ವಿಕಾಸ್ ಒಬೆರಾಯ್ ಅವರ ಕಾರು ಅಪಘಾತಕ್ಕೀಡಾದ ಘಟನೆ ಇಟಲಿಯಲ್ಲಿ ನಡೆದಿದೆ.
ಹಾಲಿಡೇಯ ಸಮಯ ಕಳೆಯಲು ನಟಿ ಗಾಯತ್ರಿ ಹಾಗೂ ಉದ್ಯಮಿ ಆಗಿರುವ ಅವರ ಪತಿ ವಿಕಾಸ್ ಇಟಲಿಗೆ ತೆರಳಿದ್ದರು. ಈ ವೇಳೆ ಕಾರಿನಲ್ಲಿ ಹೋಗುತ್ತಿರುವಾಗ ಈ ಅಪಘಾತ ಸಂಭವಿಸಿದೆ ಎಂದು ವರದಿ ತಿಳಿಸಿದೆ.
ಗಾಯತ್ರಿ ಮತ್ತು ಅವರ ಪತಿ ಲಂಬೋರ್ಗಿನಿ ಕಾರಿನಲ್ಲಿ ತೆರಳಿದ್ದರು. ಫೆರಾರಿ ಕಾರು ಮೊದಲು ಕ್ಯಾಂಪರ್ ವಾಹನಕ್ಕೆ ಢಿಕ್ಕಿ ಹೊಡೆದಿದ್ದು, ಕ್ಯಾಂಪರ್ ವಾಹನವನ್ನು ಹಿಂದಿಕ್ಕುವ ಭರದಲ್ಲಿ ಈ ಅಪಘಾತವ ಸಂಭವಿಸಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ ಗಾಯತ್ರಿ ಅವರ ವಾಹನ ಹಾಗೂ ಅಪಘಾತಕ್ಕೀಡಾದ ಫೆರಾರಿ ಕಾರು ಮುಂದೆ ಹೋಗುತ್ತಿದ್ದ ಕ್ಯಾಂಪರ್ ವಾಹನವನ್ನು ಓವರ್ ಟೇಕ್ ಮಾಡಲು ಹೋಗುವ ಅವಸರದಲ್ಲಿ ಈ ಅಪಘಾತ ನಡೆದಿದೆ ಎನ್ನಲಾಗಿದೆ. ಸಾರ್ಡಿನಿಯಾದ ಗ್ರಾಮೀಣ ರಸ್ತೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.
ಅಪಘಾತದ ಪರಿಣಾಮ ಫೆರಾರಿ ಕಾರು ಪಲ್ಟಿಯಾಗಿದ್ದು, ಅದರಲ್ಲಿದ್ದ ಸ್ವಿಸ್ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇತ್ತ ಕ್ಯಾಂಪರ್ ನಡುರಸ್ತೆಯಲ್ಲೇ ಪಲ್ಟಿಯಾಗಿದೆ.
ವರದಿಗಳ ಪ್ರಕಾರ, ಪ್ರಾಣ ಕಳೆದುಕೊಂಡ ದಂಪತಿಗಳನ್ನು ಮಾರ್ಕಸ್ ಕ್ರೌಟ್ಲಿ (67) ಮತ್ತು ಅವರ ಪತ್ನಿ ಮೆಲಿಸ್ಸಾ ಕ್ರೌಟ್ಲಿ (63) ಎಂದು ಗುರುತಿಸಲಾಗಿದೆ. ಅವರು ಸ್ವಿಟ್ಜರ್ಲೆಂಡ್ನ ಜ್ಯೂರಿಚ್ನಿಂದ ಬಂದಿದ್ದರು.
ಸದ್ಯ ಗಾಯತ್ರಿ ದಂಪತಿ ಪ್ರಾಣಪಾಯದಿಂದ ಪಾರಾಗಿದ್ದು, ದೇವರ ದಯೆದಿಂದ ನಾವು ಸುರಕ್ಷಿತವಾಗಿದ್ದೇವೆ ಎಂದು ನಟಿ ಗಾಯತ್ರಿ “ಫ್ರೀ ಪ್ರೆಸ್ ಜರ್ನಲ್” ಗೆ ತಿಳಿಸಿದ್ದಾರೆ.
ಅಪಘಾತದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಗಾಯತ್ರಿ ಜೋಶಿ 2004 ರಲ್ಲಿ ‘ಸ್ವದೇಸ್’ ನಲ್ಲಿ ನಟಿಸಿ ಗಮನ ಸೆಳೆದಿದ್ದರು. ನಟನೆಗೆ ಬರುವ ಮುನ್ನ ಅವರು ವಿಡಿಯೋ ಜಾಕಿ ಮತ್ತು ರೂಪದರ್ಶಿ ಆಗಿದ್ದರು. ಅವರು 2005 ರಿಂದ ಉದ್ಯಮಿ ವಿಕಾಸ್ ಒಬೆರಾಯ್ ಅವರನ್ನು ವಿವಾಹವಾದರು.ಜಗಜಿತ್ ಸಿಂಗ್ ಅವರ ‘ಕಘಜ್ ಕಿ ಕಷ್ಟಿ’ ಮತ್ತು ಹನ್ಸ್ ರಾಜ್ ಹನ್ಸ್ ಅವರ ‘ಝಂಜರಿಯಾ’ ಮ್ಯೂಸಿಕ್ ವಿಡಿಯೋದಲ್ಲಿ ವೀಡಿಯೊಗಳಲ್ಲಿ ಕಾಣಿಸಿಕೊಂಡಿದ್ದಾರೆ.
Two deaths on a Ferrari in Sardina, Italy pic.twitter.com/skT3CaXg0T
— Globe Clips (@globeclip) October 3, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ