ಕೋವಿಡ್ ಮಹಾಮಾರಿಗೆ ನಿರ್ದೇಶಕ ತಮೀರ ಸಾವು
Team Udayavani, Apr 27, 2021, 1:33 PM IST
ಚೆನ್ನೈ: ಮಹಾಮಾರಿ ಕೋವಿಡ್ ಬಲಿಯಾಗುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ತಮಿಳು ಚಿತ್ರರಂಗದ ಹಿರಿಯ ಸಿನಿಮಾ ನಿರ್ದೇಶಕ ತಮೀರ ಸಾವನ್ನಪ್ಪಿದ್ದಾರೆ.
ಕಳೆದ ಕೆಲ ದಿನಗಳಿಂದ ಕೋವಿಡ್ ಸೋಂಕಿನಿಂದ ನರಳುತ್ತಿದ್ದ ತಮೀರ ಅವರು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಸೋಮವಾರ ಕೊನೆಯುಸಿರೆಳೆದಿದ್ದಾರೆ.
ಫೇಮಸ್ ನಿರ್ದೇಶಕರುಗಳಾದ ಕೆ. ಬಾಲಚಂದೆರ್ ಹಾಗೂ ಭಾರತೀಯರಾಜಾ ಅವರ ಬಳಿ ಸಹಾಯಕ ನಿರ್ದೇಶಕರಾಗಿ ತಮೀರ ಕೆಲಸ ಮಾಡಿದ್ದರು. ತಮಿಳಿನ ‘ರೆಟ್ಟೈಸುಜಿ’ ಸಿನಿಮಾ ಮೂಲಕ ಫುಲ್ ಪ್ಲೆಡ್ಜ್ ನಿರ್ದೇಶಕರಾಗಿ ಬಡ್ತಿ ಪಡೆದರು. ಬೆಳ್ಳಿ ಪರದೆ ಮೇಲಿನ ಸಿನಿಮಾಗಳಷ್ಟೆ ಅಲ್ಲದೆ ವೆಬ್ ಸಿರಿಸ್ಗಳಿಗೂ ಇವರು ವರ್ಕ್ ಮಾಡಿದ್ದಾರೆ. ಇವರ ನಿರ್ದೇಶಿಸಿದ್ದ ‘ಪರ್ಫೆಕ್ಟ್ ಹಸ್ಬಂಡ್’ ವೆಬ್ ಸಿರಿಸ್ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.
ಇನ್ನು ಕೋವಿಡ್ ಎರಡನೇ ಅಲೆಗೆ ಚಿತ್ರರಂಗದ ಕೆಲವರು ಬಲಿಯಾಗಿದ್ದಾರೆ. ಸೋಮವಾರವಷ್ಟೆ ಕನ್ನಡ ಚಿತ್ರದಲ್ಲಿ ಕೋಟಿ ನಿರ್ಮಾಪಕರೆಂದೆ ಖ್ಯಾತಿ ಪಡೆದ ರಾಮು ಅವರು ಕೋವಿಡ್ಗೆ ಬಲಿಯಾಗಿದ್ದಾರೆ. ಸ್ಯಾಂಡಲ್ವುಡ್ನ ಹಿರಿಯ ನಟಿ ಮಾಲಾಶ್ರೀಯವರ ಪತಿಯೂ ಆಗಿದ್ದ ರಾಮು, ಕೋವಿಡ್ ವಿರುದ್ಧ ಹೋರಾಟದಲ್ಲಿ ಸೋತು ಸಾವಿಗೆ ಶರಣಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?