Let’s fight this Virus Let’s kill this virus; ಚಿರು, ನಾಗಾರ್ಜುನ, ಧರ್ಮ, ವರುಣ್ ಹಾಡು

ಚಿರಂಜೀವಿ, ನಾಗಾರ್ಜುನ, ವರುಣ್ ತೇಜ ಮತ್ತು ಸಾಯಿ ಧರ್ಮ ಮತ್ತು ಕೋಟಿ ಅವರ ಈ ಪ್ರಯತ್ನಕ್ಕೆ ಭೇಷ್ ಎಂದ ಪ್ರಧಾನಿ ಮೋದಿ

Team Udayavani, Apr 5, 2020, 3:37 PM IST

Let’s fight this Virus Let’s kill this virus; ಚಿರು, ನಾಗಾರ್ಜುನ, ಧರ್ಮ, ವರುಣ್ ಹಾಡು

ನವದೆಹಲಿ: ವಿಶ್ವವನ್ನೇ ರಣರಂಗ ಮಾಡಿಕೊಂಡು ಮರಣ ಮೃದಂಗ ಬಾರಿಸುತ್ತಿರುವ ಕೋವಿಡ್ 19 ವೈರಸ್ ವಿರುದ್ಧ ಜನ ಜಾಗೃತಿಗಾಗಿ ವಿಶ್ವಾದ್ಯಂತ ಸರಕಾರಗಳು, ಸೆಲೆಬ್ರಿಟಿಗಳು, ವೈದ್ಯ ಸಮೂಹ, ಪೊಲೀಸರು, ಸಂಘ ಸಂಸ್ಥೆಗಳು ಹಲವಾರು ಜಾಗೃತಿ ಸಂದೇಶ, ವಿಡಿಯೋ, ಕಾರ್ಟೂನ್, ಚಿತ್ರಗಳನ್ನು ರಚಿಸುವ ಮೂಲಕ ಜನಸಾಮಾನ್ಯರಲ್ಲಿ ಈ ಮಾರಕ ವೈರಸ್ ಹರಡುವ ಕುರಿತಾದ ಜಾಗೃತಿಯನ್ನು ಮೂಡಿಸುತ್ತಿದ್ದಾರೆ.

ಇದೀಗ ಇದಕ್ಕೆ ಹೊಸ ಸೇರ್ಪಡೆಯೆಂಬಂತೆ ಭಾರತದಲ್ಲಿ ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ಗಳಾಗಿರುವ ಚಿರಂಜೀವಿ, ನಾಗಾರ್ಜುನ ಸೇರಿದಂತೆ ಇನ್ನೂ ಕೆಲವು ನಟರು ಸೇರಿಕೊಂಡು ‘ಕೋವಿಡ್ 19’ ಹಾಡೊಂದನ್ನು ತಯಾರಿಸಿದ್ದಾರೆ.

ಶ್ರೀನಿವಾಸ ಮೌಳಿ ಅವರು ಬರೆದು ಸಂಗೀತ ನಿರ್ದೇಶಕ ಕೋಟಿ ಸಂಯೋಜನೆ ಮಾಡಿ ಹಾಡಿರುವ ಮೂರು ನಿಮಿಷಗಳ ಈ ಹಾಡಿನಲ್ಲಿ ಕೋವಿಡ್ 19 ವೈರಸ್ ವಿರುದ್ಧ ಹೋರಾಡಲು ನಾವು ಏನು ಮಾಡಬೇಕೆಂಬುದನ್ನು ಮನಮುಟ್ಟುವ ರೀತಿಯಲ್ಲಿ ವಿವರಿಸಲಾಗಿದೆ. ಕೈಗಳನ್ನು ಸ್ವಚ್ಛ ಮಾಡುವ ವಿಧಾನ, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವ ರೀತಿ ಮತ್ತು ಸೋಂಕಿನ ಲಕ್ಷಣಗಳಿದ್ದಲ್ಲಿ ಪರೀಕ್ಷೆ ಮಾಡಿಸಿಕೊಳ್ಳುವ ಅಗತ್ಯತೆ ಹಾಗೂ ಐಸೊಲೇಷನ್ ಗೊಳಗಾಗುವುದು ಇತ್ಯಾದಿಗಳನ್ನು ಈ ಹಾಡಿನಲ್ಲಿ ಹೇಳಲಾಗಿದೆ.

ಕೋಟಿ ಅವರ ಧ್ವನಿಯಲ್ಲಿ ಮೂಡಿಬಂದಿರುವ ಈ ಹಾಡಿನಲ್ಲಿ ಲೆಟ್ಸ್ ಫೈಟ್ ದಿಸ್ ವೈರಸ್, ಲೆಟ್ಸ್ ಕಿಲ್ ದಿಸ್ ವೈರಸ್ – ಲೆಟ್ಸ್ ದೂ ಇಟ್ ಟುಗೆದರ್, ಲೆಟ್ಸ್ ಲಿವ್ ಹೆಲ್ದಿಯರ್ (ಈ ವೈರಸ್ ವಿರುದ್ಧ ಹೋರಾಡೋಣ, ಈ ವೈರಸ್ ನಾಶ ಮಾಡೋಣ ; ಇದನ್ನು ನಾವೆಲ್ಲರೂ ಜೊತೆಯಾಗಿಯೇ ಮಾಡೋಣ, ಎಲ್ಲರೂ ಆರೋಗ್ಯದಿಂದಿರೋಣ) ಎಂಬ ಸಾಲು ತುಂಬಾ ಪವರ್ ಫುಲ್ ಆಗಿ ಮೂಡಿಬಂದಿದೆ.

ವಿಶೇಷವೆಂದರೆ ಚಿರಂಜೀವಿ, ನಾಗಾರ್ಜುನ, ವರುಣ್ ತೇಜ್ ಮತ್ತು ಸಾಯಿ ಧರಮ್ ತೇಜ ಅವರೆಲ್ಲಾ ತಮ್ಮ ತಮ್ಮ ಮನೆಯಲ್ಲಿದ್ದುಕೊಂಡೇ ಈ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ.  ದಕ್ಷಿಣ ಭಾರತ ಚಿತ್ರರಂಗದಲ್ಲಿ ಕೋಟಿ ಎಂದೇ ಹೆಸರುವಾಸಿಯಾಗಿರುವ ಖ್ಯಾತ ಸಂಗೀತ ನಿರ್ದೇಶಕ ಸಾಲೂರಿ ಕೋಟೇಶ್ವರ ರಾವ್  ಅವರು ಈ ಹಾಡನ್ನು ಸಂಯೋಜನೆ ಮಾಡಿದ್ದಾರೆ. ನಟ ವರುಣ್ ತೇಜ್ ಅವರು ಚಿರಂಜೀವಿ ಅವರ ಸಹೋದರ ನಾಗೇಂದ್ರ ಬಾಬು ಅವರ ಪುತ್ರ ಮತ್ತು ಸಾಯಿ ಧರಮ್ ತೇಜ್ ಅವರು ಚಿರಂಜೀವಿ ಅವರ ಸಹೋದರಿಯ ಪುತ್ರನಾಗಿದ್ದಾರೆ.

ಇದೀಗ ಈ ಜಾಗೃತಿ ಹಾಡಿನ ವಿಡಿಯೋವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು. ಈ ನಟರ ಪ್ರಯತ್ನಕ್ಕೆ ಪ್ರಧಾನಿ ಮೋದಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಮಾತ್ರವಲ್ಲದೇ ಈ ಪ್ರಯತ್ನಕ್ಕೆ ತೆಲುಗು ಭಾಷೆಯಲ್ಲೇ ತಮ್ಮ ಅಭಿನಂದನೆಗಳನ್ನು ಪ್ರಧಾನಿಯವರು ಸಲ್ಲಿಸಿರುವುದು ವಿಶೇಷವಾಗಿದೆ.

ನಟ ಚಿರಂಜೀವಿ ಅವರು ಈ ಹಾಡನ್ನು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ ಮಾತ್ರವಲ್ಲದೇ ಇದೇ ರೀತಿಯ ಕ್ರಿಯೇಟಿವ್ ಯೋಚನೆಗಳ ಮೂಲಕ ಕೋವಿಡ್ 19 ವೈರಸ್ ವಿರುದ್ಧ ಜಾಗೃತಿ ಮೂಡಿಸುವಂತೆ ತಮ್ಮ ಅಭಿಮಾನಿಗಳಿಗೆ ಈ ನಟ ಕರೆ ಕೊಟ್ಟಿದ್ದಾರೆ.

ಮೆಗಾಸ್ಟಾರ್ ಚಿರಂಜೀವಿ ಅವರು ಕಳೆದ ವಾರವಷ್ಟೇ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಖಾತೆಯನ್ನು ತೆರೆದಿದ್ದರು. ಮತ್ತು ಮೊದಲ ಪೋಸ್ಟ್ ಆಗಿ ತಮ್ಮ ತಾಯಿಯ ಜೊತೆ ಇರುವ ಫೊಟೋವನ್ನು ಅಪ್ ಲೋಡ್ ಮಾಡಿದ್ದರು ಹಾಗೂ ಈ ಮೂಲಕ ಲಾಕ್ ಡೌನ್ ಸಂದರ್ಭದಲ್ಲಿ ನಾವೆಲ್ಲರೂ ನಮ್ಮ ಮನೆಯ ಹಿರಿಯರ ಕಾಳಜಿ ವಹಿಸುವುದು ಅಗತ್ಯ ಎಂಬ ಸಂದೇಶವನ್ನು ನೀಡಿದ್ದರು.

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.