ಸುಶಾಂತ್ ಕೇಸ್ ಬೆನ್ನಲ್ಲೇ ನಟಿ ಆತ್ಮಹತ್ಯೆ ಪ್ರಕರಣ ತೆಲುಗಿನ ಖ್ಯಾತ ನಿರ್ಮಾಪಕನ ಬಂಧನ

ಈಕೆ ಆತ್ಮಹತ್ಯೆಗೂ ಮುನ್ನ ಕೊನೆಯದಾಗಿ ಕರೆ ಮಾಡಿದ್ದು ದೇವರಾಜ್ ರೆಡ್ಡಿಗೆ.

Team Udayavani, Sep 17, 2020, 3:10 PM IST

ಸುಶಾಂತ್ ಕೇಸ್ ಬೆನ್ನಲ್ಲೇ ನಟಿ ಆತ್ಮಹತ್ಯೆ ಪ್ರಕರಣ ತೆಲುಗಿನ ಖ್ಯಾತ ನಿರ್ಮಾಪಕನ ಬಂಧನ

ಹೈದರಾಬಾದ್: ಕಿರುತೆರೆ ನಟಿಯೊಬ್ಬಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗಿನ ಹೆಸರಾಂತ ನಿರ್ಮಾಪಕರೊಬ್ಬರನ್ನು ಬಂಧಿಸಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ. ಈಗಾಗಲೇ ಬಾಲಿವುಡ್ ನಲ್ಲಿ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿರುವ ನಡುವೆ ತೆಲುಗು ಸಿನಿಮಾರಂಗದಲ್ಲಿ ಈ ಘಟನೆ ನಡೆದಿದೆ.

ಹೈದರಾಬಾದ್ ನ ಮಧುರಾ ನಗರದಲ್ಲಿರುವ ಅಪಾರ್ಟ್ ಮೆಂಟ್ ನ ಬಾತ್ ರೂಂನಲ್ಲಿ ಟೆಲಿವಿಷನ್ ನಟಿ ಕೊಂಡಪಲ್ಲಿ ಶ್ರಾವಣಿ ಸೆಪ್ಟೆಂಬರ್ 8ರಂದು ಶವವಾಗಿ ಪತ್ತೆಯಾಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ತೆಲುಗಿನ ಬ್ಲಾಕ್ ಬಸ್ಟರ್ “ಆರ್ ಎಕ್ಸ್ 100” ಸಿನಿಮಾದ ನಿರ್ಮಾಪಕ ಅಶೋಕ್ ರೆಡ್ಡಿಯನ್ನು ಬುಧವಾರ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಶ್ರಾವಣಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಸಾಯಿ ಕೃಷ್ಣ ರೆಡ್ಡಿ ಮತ್ತು ದೇವರಾಜ್ ರೆಡ್ಡಿ ಕೂಡಾ ಆರೋಪಿಗಳಾಗಿದ್ದಾರೆ. ಇಬ್ಬರನ್ನೂ ಬಂಧಿಸಿದ್ದು, ಸೋಮವಾರದವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಪರಸ್ತ್ರೀ ಜೊತೆ ಸಂಗ ಮಾಡಿದ ತಂದೆ! ಚಿನ್ನಾಭರಣ ಮಾರಿ ತನ್ನ ಮಗನ ಹತ್ಯೆಗೆ ಸುಪಾರಿ ನೀಡಿದ

2018ರಲ್ಲಿ ತನಗೂ, ಸಾಯಿ ಕೃಷ್ಣ ರೆಡ್ಡಿಗೂ ಸಂಬಂಧ ಇದ್ದಿರುವುದಾಗಿ ಹೇಳಿದ್ದಳು. ನಂತರ ಅಶೋಕ್ ರೆಡ್ಡಿ ಹಾಗೂ ದೇವರಾಜ್ ರೆಡ್ಡಿ ಜತೆಗೂ ಇದ್ದಿರುವುದಾಗಿ ತಿಳಿಸಿದ್ದಳು. ಇಬ್ಬರನ್ನೂ ಟಿಕ್ ಟಾಕ್ ಮೂಲಕ ಭೇಟಿಯಾಗಿ ಪರಿಚಯವಾಗಿರುವುದಾಗಿ ವಿವರಿಸಿದ್ದಳು.

ನಟಿ ಶ್ರಾವಣಿ ಅಶೋಕ್ ರೆಡ್ಡಿಯನ್ನು ಭೇಟಿಯಾಗಿದ್ದು, ಪ್ರೇಮತೋ ಕಾರ್ತಿಕ್ ಎಂಬ ತೆಲುಗು ಸಿನಿಮಾ ನಿರ್ಮಾಣದ ಸಂದರ್ಭದಲ್ಲಿ. ಈಕೆ ಆತ್ಮಹತ್ಯೆಗೂ ಮುನ್ನ ಕೊನೆಯದಾಗಿ ಕರೆ ಮಾಡಿದ್ದು ದೇವರಾಜ್ ರೆಡ್ಡಿಗೆ. ನನಗೆ ಮೂವರ ಕಿರುಕುಳ ತಾಳಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದಾಳೆ ಎಂದು ವರದಿ ಹೇಳಿದೆ.

ಕೊಂಡಪಲ್ಲಿ ಶ್ರಾವಣಿ ತೆಲುಗಿನ ಜನಪ್ರಿಯ ಸೀರಿಯಲ್ ಗಳಾದ “ ಮನಸು ಮಮತಾ” ಹಾಗೂ ಮೌನರಾಗಂನಲ್ಲಿ ಮುಖ್ಯ ಪಾತ್ರ ನಿರ್ವಹಿಸಿದ್ದಳು. ಈಕೆ ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ನಿವಾಸಿಯಾಗಿದ್ದು, ಕಳೆದ ಎಂಟು ವರ್ಷಗಳಿಂದ ಟಿವಿ ಸೀರಿಯಲ್ ಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಳು ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.