Vishnu Manchu: ‘ಕಣ್ಣಪ್ಪ’ ಚಿತ್ರೀಕರಣದ ವೇಳೆ ಅವಘಡ; ಆಸ್ಪತ್ರೆಗೆ ದಾಖಲಾದ ನಟ ವಿಷ್ಣು ಮಂಚು
Team Udayavani, Oct 30, 2023, 11:08 AM IST
ಚೆನ್ನೈ: ನಟ ವಿಷ್ಣು ಮಂಚು ಅವರ ಬಹು ನಿರೀಕ್ಷಿತ, ಬಿಗ್ ಬಜೆಟ್ ‘ಕಣ್ಣಪ್ಪ’ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಸಿನಿಮಾದ ಚಿತ್ರೀಕರಣದ ವೇಳೆ ನಟ ವಿಷ್ಣು ಮಂಚು ಅವರಿಗೆ ಗಾಯವಾಗಿದೆ ಎಂದು ವರದಿಯಾಗಿದೆ.
ಈಗಾಗಲೇ ತನ್ನ ಬಹು ತಾರಾಗಣದಿಂದಲೇ ಸದ್ದು ಮಾಡಿರುವ ‘ಕಣ್ಣಪ್ಪ’ ಚಿತ್ರೀಕರಣದ ಹಂತದಲ್ಲಿಯೂ ಸುದ್ದಿಯಾಗಿದೆ. ನಟ ವಿಷ್ಣು ಮಂಚು ಅವರಿಗೆ ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ಗಾಯವಾಗಿದೆ ಎಂದು ವರದಿಯಾಗಿದೆ.
ಕಳೆದ ತಿಂಗಳಿನಿಂದಲೇ ಸಿನಿಮಾದ ಚಿತ್ರೀಕರಣ ಆರಂಭಗೊಂಡಿದೆ. ಇತ್ತೀಚೆಗೆ(ಅ.29 ರಂದು) ನಟ ವಿಷ್ಣು ಮಂಚು ಅವರ ಕೈಗೆ ಡ್ರೋಣ್ ಕ್ಯಾಮೆರಾದ ರೆಕ್ಕೆಯೊಂದು(ಬ್ಲೇಡ್) ತಾಗಿ ಏಟಾಗಿದೆ. ಡ್ರೋಣ್ ಬಳಸುವ ವೇಳೆ, ಡ್ರೋಣ್ ಬಳಸುವಾತನ ನಿಯಂತ್ರಣ ತಪ್ಪಿ ಡ್ರೋಣ್ ಕ್ಯಾಮರಾದ ರೆಕ್ಕೆ ವಿಷ್ಣು ಅವರ ಕೈಗೆ ತಾಗಿದ ಪರಿಣಾಮ ಅವರಿಗೆ ಗಾಯವಾಗಿದೆ. ಈ ಕಾರಣದಿಂದ ತಕ್ಷಣ ಚಿತ್ರೀಕರಣವನ್ನು ನಿಲ್ಲಿಸಲಾಗಿದೆ. ಡ್ರೋಣ್ ಕ್ಯಾಮರಾದ ಸಿಗ್ನಲ್ ಕೊರತೆಯಿಂದ ಈ ಘಟನೆ ನಡೆದಿದೆ ಎನ್ನಲಾಗಿದೆ.
ಘಟನೆಯ ಪರಿಣಾಮ ವಿಷ್ಣು ಮಂಚು ಅವರ ಕೈ ಹಾಗೂ ಭುಜಕ್ಕೆ ಕೆಲ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.
ಸಿನಿಮಾದಲ್ಲಿ ಪ್ರಭಾಸ್, ಮೋಹನ್ ಲಾಲ್, ಶಿವರಾಜ್ ಕುಮಾರ್ ನಯನಾತಾರ ಸೇರಿದಂತೆ ಅನೇಕ ಕಲಾವಿದರು ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಬರೋಬ್ಬರಿ 100 ಕೋಟಿ ರೂ. ವೆಚ್ಚದಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ