Kollywood: 4 ಬಾರಿ ರಜಿನಿಕಾಂತ್‌ ಜೊತೆ ನಟಿಸುವ ಅವಕಾಶ ಬಂದರೂ ತಿರಸ್ಕರಿಸಿದ ಖ್ಯಾತ ನಟಿ ಈಕೆ


Team Udayavani, Nov 29, 2023, 4:19 PM IST

Kollywood: 4 ಬಾರಿ ರಜಿನಿಕಾಂತ್‌ ಜೊತೆ ನಟಿಸುವ ಅವಕಾಶ ಬಂದರೂ ತಿರಸ್ಕರಿಸಿದ ಖ್ಯಾತ ನಟಿ ಈಕೆ

ಚೆನ್ನೈ: ಭಾರತ ಸಿನಿಮಾರಂಗದ ದಿಗ್ಗಜ ನಟರಲ್ಲಿ ಒಬ್ಬರಾಗಿರುವ ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಅವರಿಂದು ಸಿನಿರಂಗದಲ್ಲಿ ಮಾಡಿರುವ ಸಾಧನೆ ಒಂದೆರೆಡಲ್ಲ. ಬಹುತೇಕ ಈಗಿನ ಕಾಲದ ಕಲಾವಿದರಿಗೆ ಎಲ್ಲರಿಗೂ ತಾನ್ನೊಮ್ಮೆ ರಜಿನಿಕಾಂತ್‌ ಅವರೊಂದಿಗೆ ನಟಿಸಬೇಕು, ಸಿನಿಮಾ ಮಾಡಬೇಕೆನ್ನುವ ಕನಸು ಇದ್ದೇ ಇರುತ್ತದೆ.

ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಅವರ ಸಿನಿಮಾಗಳು ಹೊಸ ದಾಖಲೆಯನ್ನೇ ಬರೆಯುತ್ತವೆ. ಅವರ ಹಳೆಯ ಕಾಲದ ಸಿನಿಮಾಗಳಂತೂ ಇಂಡಸ್ಟ್ರಿ ಹಿಟ್‌ ಆಗಿವೆ. ಈಗಲೂ ಅವರ ಒಂದೊಂದು ಸಿನಿಮಾಗಳು ಹೊಸ ರೀತಿಯ ದಾಖಲೆಗಳನ್ನು ಬಾಕ್ಸ್‌ ಆಫೀಸ್‌ ನಲ್ಲಿ ಮಾಡುತ್ತವೆ.

ರಜಿನಿಕಾಂತ್‌ ಅವರೊಂದಿಗೆ ನಟಿಸುವ ಅವಕಾಶ ಸಿಕ್ಕರೆ, ಯಾವ ಕಲಾವಿದರು ತಾನೇ ಬೇಡ ಹೇಳುತ್ತಾರೆ. ಆದರೆ ಒಂದಲ್ಲ ಎರಡಲ್ಲ ನಾಲ್ಕು ಸಲಿ ರಜಿನಿಕಾಂತ್‌ ಅವರಿಗೆ ನಟಿಸುವ ಅವಕಾಶ ಸಿಕ್ಕರೂ ಆ ಆಫರ್‌ ನ್ನು ಖ್ಯಾತ ನಟಿಯೊಬ್ಬರು ನಿರಾಕರಿಸಿದ್ದರು ಎನ್ನುವುದರ ಬಗ್ಗೆ ನಿಮಗೆ ಗೊತ್ತಾ?

ಯಾರು ಆ ಖ್ಯಾತ ನಟಿ:  ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಅವರ ಸಿನಿಮಾದಲ್ಲಿ ನಟಿಸಲು ಖ್ಯಾತ ಬಾಲಿವುಡ್‌ ನಟಿ ಐಶ್ವರ್ಯಾ ರೈ ಬಚ್ಚನ್‌ ಅವರಿಗೆ ಸತತ ನಾಲ್ಕು ಬಾರಿ ಆಫರ್‌ ಬಂದಿತ್ತು. ಆದರೆ ಅವರು ಅದನ್ನು ಒಪ್ಪಿರಲಿಲ್ಲ.

ರಜಿನಿಕಾಂತ್‌ ವೃತ್ತಿ ಬದುಕಿನ ಹಿಟ್‌ ಸಿನಿಮಾಗಳಲ್ಲಿ ಒಂದಾಗಿರುವ 1999 ರಲ್ಲಿ ಬಂದ ʼ ಪಡೆಯಪ್ಪʼ ಸಿನಿಮಾದಲ್ಲಿ ನಟಿಸಲು ಐಶ್ವರ್ಯಾ ಅವರಿಗೆ ಆಫರ್‌ ಬಂದಿತ್ತು. ಆದರೆ ಆ ಪಾತ್ರಕ್ಕೆ ಐಶ್ವರ್ಯಾ ಒಪ್ಪದೆ ಇದ್ದಾಗ, ಸಿನಿಮಾದಲ್ಲಿ ರಮ್ಯಾ ಕೃಷ್ಣನ್ ಮತ್ತು ಸೌಂದರ್ಯ ಅವರು ಕಾಣಿಸಿಕೊಂಡಿದ್ದರು. ಇನ್ನು 2002 ರಲ್ಲಿ ರಜಿನಿಕಾಂತ್‌ ಅವರ ʼಬಾಬಾʼ ಸಿನಿಮಾಕ್ಕೂ ಐಶ್ವರ್ಯಾ ರೈ ಅವರಿಗೆ ನಟಿಯಾಗಿ ತೆರೆ ಹಂಚಿಕೊಳ್ಳಲು ಆಫರ್‌ ನೀಡಲಾಗಿತ್ತು, ಆ ಸಿನಿಮಾವನ್ನು ಐಶ್ವರ್ಯಾ ಒಪ್ಪಿಕೊಳ್ಳಿಲ್ಲ.  ಈ ಸಿನಿಮಾದಲ್ಲಿ ರಜಿನಿಕಾಂತ್‌ ಜೊತೆ ಮನೀಶಾ ಕೊಯಿರಾಲಾ ಕಾಣಿಸಿಕೊಂಡಿದ್ದರು.

ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಅವರ ಮತ್ತೊಂದು ಹಿಟ್‌ ʼಚಂದ್ರಮುಖಿʼ ಚಿತ್ರಕ್ಕೂ ಐಶ್ವರ್ಯಾ ಅವರಿಗೆ ಆಫರ್ ನೀಡಲಾಗಿತ್ತು. ಆದರೆ ಅದನ್ನು ಐಶ್ವರ್ಯಾ ರಿಜೆಕ್ಟ್‌ ಮಾಡಿದ್ದರು. ಇವರ ಬದಲಿಗೆ ಸಿನಿಮಾದಲ್ಲಿ ಜ್ಯೋತಿಕಾ ಕಾಣಿಸಿಕೊಂಡಿದ್ದರು.

ಇನ್ನು ರಜಿನಿಕಾಂತ್‌ ವೃತ್ತಿ ಬದುಕಿನ ಬ್ಲಾಕ್‌ ಬಸ್ಟರ್‌ ʼಶಿವಾಜಿ: ದಿ ಬಾಸ್‌ʼ ಸಿನಿಮಾದಲ್ಲೂ ಐಶ್ವರ್ಯಾ ರೈ ಅವರು ಕಾಣಿಸಿಕೊಳ್ಳಲಿದ್ದರು. ಆದರೆ ಆಫರ್‌ ತಿರಸ್ಕರಿಸಿದ ಕಾರಣ ಶ್ರಿಯಾ ಶರಣ್‌ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡರು.

ನಾಲ್ಕು ಬಾರಿ ಆಫರ್‌ ರಿಜೆಕ್ಟ್‌ ಮಾಡಿದ ಬಳಿಕ ಕೊನೆಗೂ ಐಶ್ವರ್ಯಾ ರೈ ಅವರು ಶಂಕರ್‌ ಅವರ ʼಎಂದಿರಾನ್‌ʼ (ರೋಬೋಟ್) ಸಿನಿಮಾದಲ್ಲಿ ಜೊತೆಯಾಗಿ ತೆರೆ ಹಂಚಿಕೊಂಡರು. ಈ ಸಿನಿಮಾ ದೊಡ್ಡ ಹಿಟ್‌ ಆಯಿತು. ಸಿನಿಮಾದಲ್ಲಿನ ವಿ. ಶ್ರೀನಿವಾಸ್ ಮೋಹನ್‌ಗೆ ಅತ್ಯುತ್ತಮ ಸ್ಪೆಷೆಲ್‌ ಎಫೆಕ್ಟ್‌  ಮತ್ತು ಸಾಬು ಸಿರಿಲ್‌ಗೆ ಅತ್ಯುತ್ತಮ ನಿರ್ಮಾಣ ವಿನ್ಯಾಸಕ್ಕಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು  ಬಂದಿದ್ದವು. ಆದರೆ ಇದಾದ ಬಳಿಕ ಬಂದ ʼ2.0ʼ ನಲ್ಲಿ ಐಶ್ವರ್ಯಾ ರೈ ಕಾಣಿಸಿಕೊಂಡಿಲ್ಲ.

ಸದ್ಯ ರಜಿನಿಕಾಂತ್‌ ʼತಲೈವರ್‌ 170ʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇದಾದ ಬಳಿಕ ಲೋಕೇಶ್‌ ಕನಕರಾಜ್‌ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

 

ಟಾಪ್ ನ್ಯೂಸ್

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‌Movies: ಇಲ್ಲಿದೆ ಐಎಂಡಿಬಿ ವರ್ಷದ ಜನಪ್ರಿಯ ಹಾಗೂ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ

‌Movies: ಇಲ್ಲಿದೆ ಐಎಂಡಿಬಿ ವರ್ಷದ ಜನಪ್ರಿಯ ಹಾಗೂ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ

Divorce ಕಠಿಣ ಎನಿಸಿದರೂ ಸಂತೋಷವಾಗಿದ್ದೇನೆ: ಕಿರಣ್‌ ರಾವ್‌

Divorce ಕಠಿಣ ಎನಿಸಿದರೂ ಸಂತೋಷವಾಗಿದ್ದೇನೆ: ಕಿರಣ್‌ ರಾವ್‌

1-nati

Contact lenses ಧರಿಸಿದ ನಟಿಗೆ ಈಗ ಕಣ್ಣೇ ಕಾಣಿಸ್ತಿಲ್ಲ!

ಅರ್ಜುನ್‌ ಜತೆ ಬ್ರೇಕಪ್‌ ಬಳಿಕ 50ರ ಹರೆಯದ ಮಲೈಕಾ ಬಾಳಲ್ಲಿ ʼಮಿಸ್ಟರಿ ಮ್ಯಾನ್‌ʼ ಎಂಟ್ರಿ?

ಅರ್ಜುನ್‌ ಜತೆ ಬ್ರೇಕಪ್‌ ಬಳಿಕ 50ರ ಹರೆಯದ ಮಲೈಕಾ ಬಾಳಲ್ಲಿ ʼಮಿಸ್ಟರಿ ಮ್ಯಾನ್‌ʼ ಎಂಟ್ರಿ?

1428

Viral: ಖ್ಯಾತ ನಟಿಯ ಬಾತ್‌ರೂಮ್‌ ವಿಡಿಯೋ ಲೀಕ್.. ನಟಿಯಿಂದಲೇ ವಿಡಿಯೋ ರೆಕಾರ್ಡ್?

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.