Kollywood: 4 ಬಾರಿ ರಜಿನಿಕಾಂತ್‌ ಜೊತೆ ನಟಿಸುವ ಅವಕಾಶ ಬಂದರೂ ತಿರಸ್ಕರಿಸಿದ ಖ್ಯಾತ ನಟಿ ಈಕೆ


Team Udayavani, Nov 29, 2023, 4:19 PM IST

Kollywood: 4 ಬಾರಿ ರಜಿನಿಕಾಂತ್‌ ಜೊತೆ ನಟಿಸುವ ಅವಕಾಶ ಬಂದರೂ ತಿರಸ್ಕರಿಸಿದ ಖ್ಯಾತ ನಟಿ ಈಕೆ

ಚೆನ್ನೈ: ಭಾರತ ಸಿನಿಮಾರಂಗದ ದಿಗ್ಗಜ ನಟರಲ್ಲಿ ಒಬ್ಬರಾಗಿರುವ ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಅವರಿಂದು ಸಿನಿರಂಗದಲ್ಲಿ ಮಾಡಿರುವ ಸಾಧನೆ ಒಂದೆರೆಡಲ್ಲ. ಬಹುತೇಕ ಈಗಿನ ಕಾಲದ ಕಲಾವಿದರಿಗೆ ಎಲ್ಲರಿಗೂ ತಾನ್ನೊಮ್ಮೆ ರಜಿನಿಕಾಂತ್‌ ಅವರೊಂದಿಗೆ ನಟಿಸಬೇಕು, ಸಿನಿಮಾ ಮಾಡಬೇಕೆನ್ನುವ ಕನಸು ಇದ್ದೇ ಇರುತ್ತದೆ.

ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಅವರ ಸಿನಿಮಾಗಳು ಹೊಸ ದಾಖಲೆಯನ್ನೇ ಬರೆಯುತ್ತವೆ. ಅವರ ಹಳೆಯ ಕಾಲದ ಸಿನಿಮಾಗಳಂತೂ ಇಂಡಸ್ಟ್ರಿ ಹಿಟ್‌ ಆಗಿವೆ. ಈಗಲೂ ಅವರ ಒಂದೊಂದು ಸಿನಿಮಾಗಳು ಹೊಸ ರೀತಿಯ ದಾಖಲೆಗಳನ್ನು ಬಾಕ್ಸ್‌ ಆಫೀಸ್‌ ನಲ್ಲಿ ಮಾಡುತ್ತವೆ.

ರಜಿನಿಕಾಂತ್‌ ಅವರೊಂದಿಗೆ ನಟಿಸುವ ಅವಕಾಶ ಸಿಕ್ಕರೆ, ಯಾವ ಕಲಾವಿದರು ತಾನೇ ಬೇಡ ಹೇಳುತ್ತಾರೆ. ಆದರೆ ಒಂದಲ್ಲ ಎರಡಲ್ಲ ನಾಲ್ಕು ಸಲಿ ರಜಿನಿಕಾಂತ್‌ ಅವರಿಗೆ ನಟಿಸುವ ಅವಕಾಶ ಸಿಕ್ಕರೂ ಆ ಆಫರ್‌ ನ್ನು ಖ್ಯಾತ ನಟಿಯೊಬ್ಬರು ನಿರಾಕರಿಸಿದ್ದರು ಎನ್ನುವುದರ ಬಗ್ಗೆ ನಿಮಗೆ ಗೊತ್ತಾ?

ಯಾರು ಆ ಖ್ಯಾತ ನಟಿ:  ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಅವರ ಸಿನಿಮಾದಲ್ಲಿ ನಟಿಸಲು ಖ್ಯಾತ ಬಾಲಿವುಡ್‌ ನಟಿ ಐಶ್ವರ್ಯಾ ರೈ ಬಚ್ಚನ್‌ ಅವರಿಗೆ ಸತತ ನಾಲ್ಕು ಬಾರಿ ಆಫರ್‌ ಬಂದಿತ್ತು. ಆದರೆ ಅವರು ಅದನ್ನು ಒಪ್ಪಿರಲಿಲ್ಲ.

ರಜಿನಿಕಾಂತ್‌ ವೃತ್ತಿ ಬದುಕಿನ ಹಿಟ್‌ ಸಿನಿಮಾಗಳಲ್ಲಿ ಒಂದಾಗಿರುವ 1999 ರಲ್ಲಿ ಬಂದ ʼ ಪಡೆಯಪ್ಪʼ ಸಿನಿಮಾದಲ್ಲಿ ನಟಿಸಲು ಐಶ್ವರ್ಯಾ ಅವರಿಗೆ ಆಫರ್‌ ಬಂದಿತ್ತು. ಆದರೆ ಆ ಪಾತ್ರಕ್ಕೆ ಐಶ್ವರ್ಯಾ ಒಪ್ಪದೆ ಇದ್ದಾಗ, ಸಿನಿಮಾದಲ್ಲಿ ರಮ್ಯಾ ಕೃಷ್ಣನ್ ಮತ್ತು ಸೌಂದರ್ಯ ಅವರು ಕಾಣಿಸಿಕೊಂಡಿದ್ದರು. ಇನ್ನು 2002 ರಲ್ಲಿ ರಜಿನಿಕಾಂತ್‌ ಅವರ ʼಬಾಬಾʼ ಸಿನಿಮಾಕ್ಕೂ ಐಶ್ವರ್ಯಾ ರೈ ಅವರಿಗೆ ನಟಿಯಾಗಿ ತೆರೆ ಹಂಚಿಕೊಳ್ಳಲು ಆಫರ್‌ ನೀಡಲಾಗಿತ್ತು, ಆ ಸಿನಿಮಾವನ್ನು ಐಶ್ವರ್ಯಾ ಒಪ್ಪಿಕೊಳ್ಳಿಲ್ಲ.  ಈ ಸಿನಿಮಾದಲ್ಲಿ ರಜಿನಿಕಾಂತ್‌ ಜೊತೆ ಮನೀಶಾ ಕೊಯಿರಾಲಾ ಕಾಣಿಸಿಕೊಂಡಿದ್ದರು.

ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಅವರ ಮತ್ತೊಂದು ಹಿಟ್‌ ʼಚಂದ್ರಮುಖಿʼ ಚಿತ್ರಕ್ಕೂ ಐಶ್ವರ್ಯಾ ಅವರಿಗೆ ಆಫರ್ ನೀಡಲಾಗಿತ್ತು. ಆದರೆ ಅದನ್ನು ಐಶ್ವರ್ಯಾ ರಿಜೆಕ್ಟ್‌ ಮಾಡಿದ್ದರು. ಇವರ ಬದಲಿಗೆ ಸಿನಿಮಾದಲ್ಲಿ ಜ್ಯೋತಿಕಾ ಕಾಣಿಸಿಕೊಂಡಿದ್ದರು.

ಇನ್ನು ರಜಿನಿಕಾಂತ್‌ ವೃತ್ತಿ ಬದುಕಿನ ಬ್ಲಾಕ್‌ ಬಸ್ಟರ್‌ ʼಶಿವಾಜಿ: ದಿ ಬಾಸ್‌ʼ ಸಿನಿಮಾದಲ್ಲೂ ಐಶ್ವರ್ಯಾ ರೈ ಅವರು ಕಾಣಿಸಿಕೊಳ್ಳಲಿದ್ದರು. ಆದರೆ ಆಫರ್‌ ತಿರಸ್ಕರಿಸಿದ ಕಾರಣ ಶ್ರಿಯಾ ಶರಣ್‌ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡರು.

ನಾಲ್ಕು ಬಾರಿ ಆಫರ್‌ ರಿಜೆಕ್ಟ್‌ ಮಾಡಿದ ಬಳಿಕ ಕೊನೆಗೂ ಐಶ್ವರ್ಯಾ ರೈ ಅವರು ಶಂಕರ್‌ ಅವರ ʼಎಂದಿರಾನ್‌ʼ (ರೋಬೋಟ್) ಸಿನಿಮಾದಲ್ಲಿ ಜೊತೆಯಾಗಿ ತೆರೆ ಹಂಚಿಕೊಂಡರು. ಈ ಸಿನಿಮಾ ದೊಡ್ಡ ಹಿಟ್‌ ಆಯಿತು. ಸಿನಿಮಾದಲ್ಲಿನ ವಿ. ಶ್ರೀನಿವಾಸ್ ಮೋಹನ್‌ಗೆ ಅತ್ಯುತ್ತಮ ಸ್ಪೆಷೆಲ್‌ ಎಫೆಕ್ಟ್‌  ಮತ್ತು ಸಾಬು ಸಿರಿಲ್‌ಗೆ ಅತ್ಯುತ್ತಮ ನಿರ್ಮಾಣ ವಿನ್ಯಾಸಕ್ಕಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು  ಬಂದಿದ್ದವು. ಆದರೆ ಇದಾದ ಬಳಿಕ ಬಂದ ʼ2.0ʼ ನಲ್ಲಿ ಐಶ್ವರ್ಯಾ ರೈ ಕಾಣಿಸಿಕೊಂಡಿಲ್ಲ.

ಸದ್ಯ ರಜಿನಿಕಾಂತ್‌ ʼತಲೈವರ್‌ 170ʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇದಾದ ಬಳಿಕ ಲೋಕೇಶ್‌ ಕನಕರಾಜ್‌ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

 

ಟಾಪ್ ನ್ಯೂಸ್

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.