ಧೋನಿ ಆಯ್ತು, ಈಗ ವಿಜಯ್ ಸೇತುಪತಿ ಮಗಳಿಗೆ ಅತ್ಯಾಚಾರ ಬೆದರಿಕೆ!
Team Udayavani, Oct 20, 2020, 1:00 PM IST
ಚೆನ್ನೈ: ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಸೋಲನುಭವಿಸಿತು ಎಂಬ ಕಾರಣಕ್ಕೆ ಅಭಿಮಾನಿಯೋರ್ವ ಮಹೇಂದ್ರ ಸಿಂಗ್ ಧೋನಿ ಪುತ್ರಿ ಮೇಲೆ ಅತ್ಯಾಚಾರ ಬೆದರಿಕೆ ಒಡ್ಡಿದ್ದ ಘಟನೆ ನಡೆದು ಕೆಲವೇ ದಿನಗಳಲ್ಲಿ ಇಂತಹ ಮತ್ತೊಂದು ಘಟನೆ ನಡೆದಿದ್ದು, ನಾಗರಿಕ ಸಮಾಜ ತಲೆತಗ್ಗಿಸುವಂತಿದೆ.
“800” ಚಿತ್ರದಿಂದ ಹೊರಬಂದ ತಮಿಳು ನಟ ವಿಜಯ್ ಸೇತುಪತಿ ಪುತ್ರಿಯನ್ನುಅತ್ಯಾಚಾರ ಮಾಡುವುದಾಗ ವ್ಯಕ್ತಿಯೋರ್ವ ಟ್ವಿಟ್ಟರ್ ನಲ್ಲಿ ಹೇಳಿಕೊಂಡಿದ್ದು ಇದೀಗ ವೈರಲ್ ಆಗಿದೆ.
ಶ್ರೀಲಂಕಾದ ದಿಗ್ಗಜ ಕ್ರಿಕೆಟರ್ ಮುತ್ತಯ್ಯ ಮುರಳೀಧರನ್ ಜೀವನಾಧಾರಿತ ಚಿತ್ರದ “800” ದಲ್ಲಿ ತಾನು ನಟಿಸುವುದಾಗಿ ಸೇತುಪತಿ ಘೋಷಿಸಿದ್ದರು. ಆದರೆ ಇದು ತಮಿಳರ ಭಾವನೆಗೆ ಧಕ್ಕೆ ಬರುತ್ತದೆ ಎಂದು ಚಿತ್ರಕ್ಕೆ ತಮಿಳುನಾಡಿನಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು. ಸಾಮಾಜಿಕ ಒತ್ತಡದ ಕಾರಣಕ್ಕೆ ತಾನು ಚಿತ್ರದಿಂದ ಹೊರಬರುತ್ತಿದ್ದು, ತಾನು ಮುರಳೀಧರನ್ ಪಾತ್ರದಲ್ಲಿ ನಟಿಸುವುದಿಲ್ಲ ಎಂದು ವಿಜಯ್ ಸೇತುಪತಿ ಸೋಮವಾರ ಟ್ವೀಟ್ ಮೂಲಕ ತಿಳಿಸಿದ್ದರು.
ಇದನ್ನೂ ಓದಿ:ಮುರಳೀಧರನ್ ಬಯೋಪಿಕ್ ಗೆ ಯಾಕಿಷ್ಟು ತೊಂದರೆ? ನಿಂತುಹೋಗುತ್ತಾ ವಿಜಯ್ ಸೇತುಪತಿ ಚಿತ್ರ
ಇದಾಗಿ ಕೆಲವೇ ಗಂಟೆಗಳಲ್ಲಿ ವ್ಯಕ್ತಿಯೋರ್ವ ವಿಜಯ್ ಸೇತುಪತಿ ಪುಟ್ಟ ಮಗಳಿಗೆ ಬೆದರಿಕೆ ಹಾಕಿದ್ದಾನೆ. ಈ ಟ್ವೀಟ್ ವೈರಲ್ ಆಗಿದ್ದು, ಆತನ ವಿರುದ್ದ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾನೆ.
ಗಾಯಕಿ ಚಿನ್ಮಯಿ ಶ್ರೀಪಾದ ಕೂಡಾ ಆಕ್ರೋಶ ವ್ಯಕ್ತಪಡಿಸಿದ್ದು, ಅತ್ಯಾಚಾರ ಮಾಡುವ ಬಗ್ಗೆ ಸಾರ್ವಜನಿಕವಾಗಿ ಹೇಳುವುದು ಕೂಡಾ ಅಪರಾಧ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಸಾಮಾಜಿಕ ಜಾಲತಾಣದ ಎಫೆಕ್ಟ್: ಮುತ್ತಯ್ಯ ಮುರಳೀಧರನ್ ಬಯೋಪಿಕ್ ಗೆ ಸೇತುಪತಿ ಗುಡ್ ಬೈ
ಕೆಲ ದಿನಗಳ ಹಿಂದೆಯಷ್ಟೇ ಚೆನ್ನೈ ಸೂಪರ್ ಕಿಂಗ್ಸ್ ಸೋಲನುಭವಿಸಿದ ಕಾರಣ ಮಹೇಂಧ್ರ ಸಿಂಗ್ ಧೋನಿ ಪುತ್ರಿ ಝೀವಾ ವಿರುದ್ಧ ಅತ್ಯಾಚಾರ ಬೆದರಿಕೆ ಹಾಕಲಾಗಿತ್ತು. ಇದು ಕೂಡಾ ವೈರಲ್ ಆಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು