ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದೆ ಅಲ್ಲು ಅರ್ಜುನ್ ಕುಟುಂಬದಿಂದ ಮತ್ತೊಂದು ಪ್ರತಿಭೆ
Team Udayavani, Jul 16, 2021, 2:28 PM IST
ಹೈದರಾಬಾದ್ : ತೆಲುಗು ಚಿತ್ರರಂಗದಲ್ಲಿ ಹಲವು ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಅಲ್ಲು ಅರ್ಜುನ್ ಕುಟುಂಬದಿಂದ ಮತ್ತೊಂದು ಪ್ರತಿಭೆ ಇದೀಗ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದೆ.
ಹೌದು, ಅಲ್ಲು ಕುಟುಂಬದ ನಾಲ್ಕನೇ ತಲೆಮಾರಿನ ಕುಡಿ ಇದೀಗ ಬಣ್ಣದ ಲೋಕಕ್ಕೆ ಎಂಟ್ರಿ ಕೊಡುತ್ತಿದೆ. ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಅವರ ಪುತ್ರಿ ಅಲ್ಲು ಅರ್ಹಾ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾಳೆ. ಈ ಬಗ್ಗೆ ಅಲ್ಲು ಅರ್ಜುನ್ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ.
‘ಶಾಕುಂತಲಂ ಸಿನಿಮಾ ಮೂಲಕ ಅಲ್ಲು ಕುಟುಂಬದ ನಾಲ್ಕನೇ ತಲೆಮಾರಿನ ಅಲ್ಲು ಅರ್ಹಾ ಚಿತ್ರಕ್ಕೆ ಕಾಲಿಡುತ್ತಿರುವುದು ನಮಗೆ ಹೆಮ್ಮೆಯ ಕ್ಷಣ. ಇಂಥ ಸುಂದರ ಸಿನಿಮಾದಲ್ಲಿ ನನ್ನ ಮಗಳಿಗೆ ಚೊಚ್ಚಲ ಅವಕಾಶ ನೀಡಿರುವುದಕ್ಕೆ ನಿರ್ದೇಶಕ ಗುಣಶೇಖರ್ ಅವರಿಗೆ ಧನ್ಯವಾದಗಳು. ನನ್ನ ಮಗಳು ಮೊದಲ ಸಿನಿಮಾದಲ್ಲೇ ಸಮಂತಾ ಅಕ್ಕಿನೇನಿ ಜೊತೆ ಅಭಿನಯಿಸಿದ್ದನ್ನು ನೋಡಲು ಖುಷಿ ಆಗುತ್ತದೆ. ಶಾಕುಂತಲಂ ತಂಡದ ಎಲ್ಲ ಕಲಾವಿದರು ಮತ್ತು ತಾಂತ್ರಿಕ ವರ್ಗಕ್ಕೆ ನನ್ನ ಶುಭ ಹಾರೈಕೆಗಳು’ ಎಂದು ಅಲ್ಲು ಅರ್ಜುನ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
ಅಲ್ಲು ಅರ್ಜುನ್ ಪುತ್ರಿ ಅಲ್ಲು ಅರ್ಹಾಗೆ ಇನ್ನೂ 4ರ ಪ್ರಾಯ. ಈ ಪುಟಾಣಿಗೆ ಸಮಂತಾ ಅಕ್ಕಿನೇನಿ ನಟನೆಯ ‘ಶಾಕುಂತಲಂ’ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದೆ. ಪೌರಾಣಿಕ ಕಥಾಹಂದರ ಇರುವ ಈ ಸಿನಿಮಾದಲ್ಲಿ ಸಮಂತಾ ಅವರು ಶಕುಂತಲೆಯ ಪಾತ್ರ ಮಾಡಲಿದ್ದು, ಶಕುಂತಲೆ ಪುತ್ರ ಭರತನ ಪಾತ್ರಕ್ಕೆ ಅಲ್ಲು ಅರ್ಹಾ ಬಣ್ಣ ಹಚ್ಚಲಿದ್ದಾಳೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramayana Movie: ʼರಾವಣʼನ ಪತ್ನಿಯಾಗಿ ಯಶ್ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?
ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ
ಮೀಟಿಂಗ್ ಮಾಡೋಕ್ಕೂ ರೇಟ್ ಫಿಕ್ಸ್: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ
Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?
Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ
MUST WATCH
ಹೊಸ ಸೇರ್ಪಡೆ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ
ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ ಟಿಕೆಟ್ ಡೌಟ್
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ