ಅಭಿಮಾನಿಯ ಸಂಕಷ್ಟಕ್ಕೆ ಮಿಡಿದ ‘ಮೆಗಾ’ ಹೃದಯ…ಚಿಕಿತ್ಸೆಗೆ ಹಣ ನೀಡಿದ ಚಿರಂಜೀವಿ
Team Udayavani, Feb 20, 2021, 6:25 PM IST
ಆಂಧ್ರಪ್ರದೇಶ: ಮೆಗಾಸ್ಟಾರ್ ಚಿರಂಜೀವಿ ತನ್ನ ಅಭಿಮಾನಿಯೋರ್ವನ ಕಷ್ಟಕ್ಕೆ ನೆರವಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದವನ ಚಿಕಿತ್ಸೆಗೆ 1 ಲಕ್ಷ ರೂ. ನೀಡಿ ಮಾನವೀಯತೆ ಮೆರೆದಿದ್ದಾರೆ.
ತಮ್ಮ ಅಭಿನಯದ ಮೂಲಕ ಲಕ್ಷಾಂತರ ಅಭಿಮಾನಿಗಳ ಹೃದಯ ಸಾಮ್ರಾಟರಾಗಿರುವ ಚಿರಂಜೀವಿ, ತಮ್ಮ ವ್ಯಕ್ತಿತ್ವದಿಂದಲೂ ಜನಪ್ರಿಯತೆ ಗಳಿಸಿದ್ದಾರೆ. ಕಷ್ಟ ಹೇಳಿಕೊಂಡು ಬಂದವರಿಗೆ ಕೈಲಾದ ಸಹಾಯ ಮಾಡುವ ಮೂಲಕ ನೊಂದವರ ಪಾಲಿಗೆ ರಿಯಲ್ ಹೀರೋ ಆಗಿದ್ದಾರೆ.
ಚಿರಂಜೀವಿ ಅವರ ಅಭಿಮಾನಿ ಹಾಗೂ ಆಲ್ ಇಂಡಿಯಾ ಚಿರಂಜೀವಿ ಯೂತ್ ಸಂಘಟನೆಯ ಅಧ್ಯಕ್ಷ ಪಿ.ಸುರೇಶ್ ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ. ವಾರದಲ್ಲಿ ಮೂರ್ನಾಲ್ಕು ದಿನ ಚಿಕಿತ್ಸೆಗೆಂದು ಕಡಪಾ ಹಾಗೂ ತಿರುಪತಿಗೆ ಓಡಾಡುತ್ತಿದ್ದ. ತನ್ನ ಅಭಿಮಾನಿಯ ಈ ಸಂಕಷ್ಟದ ವಿಚಾರ ಚಿರಂಜೀವಿಯವರ ಗಮನಕ್ಕೆ ಬಂದಿದೆ. ಕೂಡಲೇ ಅಭಿಮಾನಿಯ ಬಳಿ ತೆರಳಿದ ಮೆಗಾ ಸ್ಟಾರ್, ಆತನ ಚಿಕಿತ್ಸೆಗೆ ಒಂದು ಲಕ್ಷ ರೂ. ನೀಡುವ ಮೂಲಕ ಸಹಾಯ ಹಸ್ತ ಚಾಚಿದ್ದಾರೆ.
ಇನ್ನು ಚಿರಂಜೀವಿ ಅವರು ತಮ್ಮ ಚಾರಿಟೇಬಲ್ ಟ್ರಸ್ಟ್ ನಿಂದ ಅನೇಕ ಜನಮೆಚ್ಚುವ ಕಾರ್ಯ ಮಾಡುತ್ತಿದ್ದಾರೆ. ಅವರದೇ ಹೆಸರಿನಲ್ಲಿರುವ ‘ಚಿರಂಜೀವಿ ಬ್ಲಡ್ ಬ್ಯಾಂಕ್’ ಗೆ ಸ್ವತಃ ತಾವೇ ರಕ್ತದಾನ ಮಾಡಿ, ಇತರರಿಗೆ ಮಾದರಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಮಿತಾಭ್ ಟು ಶಾರುಖ್: ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?
Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
MUST WATCH
ಹೊಸ ಸೇರ್ಪಡೆ
Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು
H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ