Leo: ರಿಲೀಸ್‌ ಗೂ ಮುನ್ನ ವಿವಾದದಲ್ಲಿ ಸಿಲುಕಿದ ದಳಪತಿ ವಿಜಯ್‌ ʼಲಿಯೋʼ: ನಟನ ವಿರುದ್ಧ ದೂರು


Team Udayavani, Jun 26, 2023, 3:48 PM IST

Leo: ರಿಲೀಸ್‌ ಗೂ ಮುನ್ನ ವಿವಾದದಲ್ಲಿ ಸಿಲುಕಿದ ದಳಪತಿ ವಿಜಯ್‌ ʼಲಿಯೋʼ: ನಟನ ವಿರುದ್ಧ ದೂರು

ಚೆನ್ನೈ: ದಳಪತಿ ವಿಜಯ್‌ ಅವರ ʼಲಿಯೋʼ ಸಿನಿಮಾ ಸದ್ಯ ಕಾಲಿವುಡ್‌ ನಲ್ಲಿ ಟ್ರೆಂಡಿಂಗ್‌ ಟಾಕ್.‌ ಇತ್ತೀಚೆಗಷ್ಟೇ ಸಿನಿಮಾದ ಫಸ್ಟ್‌ ಲುಕ್‌ ಹಾಗೂ ಹಾಡು ರಿಲೀಸ್‌ ಆಗಿದ್ದು, ವಿಜಯ್‌ ಅಭಿಮಾನಿಗಳಿಗೆ ಡಬಲ್‌ ಖುಷಿ ಕೊಟ್ಟಿದೆ.

ಲೋಕೇಶ್‌ ಕನಕರಾಜ್‌ ನಿರ್ದೇಶನದ ʼಲಿಯೋʼ ವರ್ಷದ ಬಹು ನಿರೀಕ್ಷಿತ ಸಿನಿಮಾಗಳ ಸಾಲಿಗೆ ಸೇರಿದೆ. ಇತ್ತೀಚೆಗಷ್ಟೇ ವಿಜಯ್‌ ಹುಟ್ಟುಹಬ್ಬಕ್ಕೆ ʼಲಿಯೋʼ ಚಿತ್ರತಂಡ ಸಿನಿಮಾದ ಫಸ್ಟ್‌ ಲುಕ್‌ ರಿಲೀಸ್‌ ಮಾಡಿದೆ. ಕೈಯಲ್ಲಿ ಸುತ್ತಿಗೆಯೊಂದನ್ನು ಹಿಡಿದುಕೊಂಡು ಮಾಸ್‌ ಅವತಾರದಲ್ಲಿ ವಿಜಯ್‌ ಕಾಣಿಸಿಕೊಂಡಿದ್ದಾರೆ. “ಪಳಗಿಸದ ನದಿಗಳ ಜಗತ್ತು, ಶಾಂತವಾದ ನೀರು ದೈವಿಕ ದೇವತೆಗಳಾಗುತ್ತವೆ ಅಥವಾ ಭಯಾನಕ ರಾಕ್ಷಸರಾಗುತ್ತವೆ.” ಎಂದು ಪೋಸ್ಟರ್‌ ನಲ್ಲಿ ಬರೆಯಲಾಗಿದೆ.  ಈ ಪೋಸ್ಟರ್‌ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಇದರ ಜೊತೆ ಸಿನಿಮಾ ತಂಡ ʼನಾ ರೆಡಿʼ ಲಿರಿಕಲ್‌ ವಿಡಿಯೋ ಹಾಡನ್ನು ಕೂಡ ರಿಲೀಸ್‌ ಮಾಡಿದೆ. ಈ ಹಾಡು ಸೋಶಿಯಲ್‌ ಮೀಡಿಯಾದಲ್ಲಿ ಹವಾ ಎಬ್ಬಿಸಿದೆ. ವಿಜಯ್‌ ಅವರ ಸ್ಟೆಪ್‌ ಗಳನ್ನು ನೋಡಿ ಫ್ಯಾನ್ಸ್‌ ಫಿದಾ ಆಗಿದ್ದಾರೆ. ಈ ಹಾಡಿನ ಸುತ್ತ ಈಗ ವಿವಾದ ಸುತ್ತಿಕೊಂಡಿದೆ. ಅದಕ್ಕೆ ಕಾರಣ ಆರ್‌ ಟಿಐ ಕಾರ್ಯಕರ್ತರೊಬ್ಬರು ನೀಡಿರುವ ದೂರು.

ಕೊರುಕ್ಕುಪ್ಪೆಟ್ಟೈ ಮೂಲದ ಆರ್‌ಟಿಐ ಕಾರ್ಯಕರ್ತ ಸೆಲ್ವಂ ಹಾಡಿನಲ್ಲಿ ಡ್ರಗ್ಸ್ ಸೇವನೆ ಮತ್ತು ರೌಡಿಸಂನ್ನು ವೈಭವೀಕರಿಸುವ ದೃಶ್ಯಗಳಿವೆ ಎಂದು ಜೂನ್ 25ರಂದು ಆನ್‌ಲೈನ್‌ನಲ್ಲಿ ದೂರು ದಾಖಲಿಸಿದ್ದು, ಜು.26ರ ಬೆಳಗ್ಗೆ 10 ಗಂಟೆ ಸುಮಾರಿಗೆ ಅರ್ಜಿ ಸಲ್ಲಿಕೆಯಾಗಿದೆ. ಚಿತ್ರತಂಡದ ವಿರುದ್ಧ ಮಾದಕ ದ್ರವ್ಯ ನಿಯಂತ್ರಣ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಮಾದಕ ವಸ್ತುಗಳ ಬಳಕೆಯ ವಿರುದ್ಧ ಚೆನ್ನೈ ಪೊಲೀಸರು ನಗರದಾದ್ಯಂತ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ನಟ ಕಾರ್ತಿ ಮತ್ತು ವಿಜಯ್ ಆಂಟೋನಿ ಭಾಗವಹಿಸಿದ್ದಾರೆ.

ʼಲಿಯೋʼ ಸಿನಿಮಾಕ್ಕೆ ಅನಿರುದ್ಧ್ ರವಿಚಂದರ್‌ ಅವರು ಮ್ಯೂಸಿಕ್ ನೀಡಿದ್ದು, ನಟಿ ತ್ರಿಷಾ ಕೃಷ್ಣನ್‌ 14 ವರ್ಷಗಳ ಬಳಿಕ ವಿಜಯ್‌ ಅವರ ಜೊತೆಯಾಗಿ ನಟಿಸಿದ್ದಾರೆ. ಸಂಜಯ್‌ ದತ್‌ ,ಅರ್ಜುನ್, ಮಿಸ್ಕಿನ್, ಮನ್ಸೂರ್ ಅಲಿ ಖಾನ್, ಗೌತಮ್ ಮೆನನ್, ಪ್ರಿಯಾ ಆನಂದ್, ಮ್ಯಾಥ್ಯೂ ಥಾಮಸ್, ಸ್ಯಾಂಡಿ ಮಾಸ್ಟರ್ ಮುಂತಾದ ನಟರು ಸಿನಿಮಾದಲ್ಲಿ ನಟಿಸಿದ್ದಾರೆ.

‘ಲಿಯೋʼ ಅಕ್ಟೋಬರ್‌ ವೇಳೆಗೆ ರಿಲೀಸ್‌ ಆಗುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.