ತುನಿಶಾ, ವೈಶಾಲಿ, ಪಲ್ಲವಿ.. 2022 ರಲ್ಲಿ ಪ್ರೀತಿಯಲ್ಲೇ ಅಂತ್ಯ ಕಂಡ ಕಿರುತೆರೆ ನಟಿಯರು ಇವರು..


Team Udayavani, Dec 27, 2022, 11:10 AM IST

tdy-7

ಮುಂಬಯಿ: ತುನಿಶಾ ಶರ್ಮಾಳ ಘಟನೆ ಹಿಂದಿ ಕಿರುತೆರೆ ಲೋಕಕ್ಕೆ ಆಘಾತ ನೀಡಿದೆ. ನಗುಮುಖದಿಂದ ಎಲ್ಲರೊಂದಿಗೆ ಆತ್ಮೀಯವಾಗಿ ಸೆಟ್‌ ನಲ್ಲಿರುತ್ತಿದ್ದ ತುನಿಶಾ ಅದೇ ಸೆಟ್‌ ನಲ್ಲಿ ನೇಣಿಗೆ ಶರಣಾಗಿ ಎಲ್ಲರನ್ನೂ ದುಃಖದ ಮಡುವಿಗೆ ದೂಡಿದ್ದಾರೆ. ಟಿವಿ ಲೋಕದ ತಾರೆಯರು ಈ ರೀತಿ ಹೆಜ್ಜೆಯಿಟ್ಟು ಜೀವನವನ್ನು ಮುಗಿಸಿರುವುದು ಇದೇ ಮೊದಲಲ್ಲ. 2022 ರಲ್ಲಿ ಬಣ್ಣದ ಲೋಕದಿಂದ ಮರೆಯಾಗಿ, ಇಹಲೋಕ ತ್ಯಜಿಸಿದ ನಟಿಯರ ಪಟ್ಟಿ ಇಲ್ಲಿದೆ…

ವೈಶಾಲಿ ಠಕ್ಕರ್ : ನೀವು ಹಿಂದಿ ಧಾರಾವಾಹಿಗಳನ್ನು ನೋಡುತ್ತಿದ್ದರೆ, ವೈಶಾಲಿ ಅವರನ್ನು ಖಂಡಿತವಾಗಿಯೂ ನೋಡಿರುತ್ತೀರಿ, ಹಿಂದಿಯ ಜನಪ್ರಿಯ ʼಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈʼ ಸೀರಿಯಲ್‌ ನಲ್ಲಿ ನಟಿಸುತ್ತಿದ್ದ ನಟಿ 2022 ರಲ್ಲಿ ಇಂದೋರ್‌ ನಲ್ಲಿನ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದರು. ಇವರ ಸಾವಿಗೆ  ಮಾಜಿ ಗೆಳೆಯ ರಾಹುಲ್ ನವಲನ್ ಕಾರಣವೆಂದು ಆರೋಪ ಕೇಳಿ ಬಂದಿತ್ತು.

ಪಲ್ಲವಿ ದೇ: 25 ವರ್ಷದ ಪಲ್ಲವಿ ದೇ ಬಂಗಾಳಿ ಬಣ್ಣದ ಲೋಕದಲ್ಲಿ ಜನಪ್ರಿಯ ಹೆಸರು. “ಮೊನು ಮಾನೆ ನಾ” (Mon Mane Na) ಸೀರಿಯಲ್‌ ನಲ್ಲಿ ಪ್ರಧಾನ ಪಾತ್ರ ಮಾಡುತ್ತಿದ್ದರು. ಅಪಾರ ಅಭಿಮಾನಿಗಳ ಪ್ರೀತಿಯನ್ನು ಸಂಪಾದಿಸಿದ ಅವರು, 2022 ರ ಮೇನಲ್ಲಿ ದುರಂತ ಅಂತ್ಯ ಕಂಡಿದ್ದರು. ಈ ಪ್ರಕರಣದಲ್ಲಿ ಪಲ್ಲವಿ ಅವರ ಗೆಳಯ ಸಾಗ್ನಿಕ್ ಚಕ್ರವರ್ತಿ ಅವರನ್ನು ಬಂಧಿಸಲಾಗಿತ್ತು.

ಬಿದಿಶಾ ಡಿ ಮಜುಂದಾರ್: 21 ವರ್ಷದ ಬಿದಿಶಾ ಮಾಡೆಲ್‌ ಹಾಗೂ ನಟಿಯಾಗಿ ಖ್ಯಾತಿಯಾಗಿದ್ದರು. ಇದೇ ವರ್ಷದ ಮೇ 25 ರಂದು ಸಂಜೆ ಕೋಲ್ಕತ್ತಾದ ಅಪಾರ್ಟ್‌ ಮೆಂಟ್‌ ವೊಂದರಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಅವರು ಪತ್ತೆಯಾಗಿದ್ದರು. ಈ ವೇಳೆ ಪೊಲೀಸರಿಗೆ ಸಾವಿಗೆ ಇರುವ ಕಾರಣವನ್ನು ಬರೆದಿರುವ ಪತ್ರ ಲಭ್ಯವಾಗಿತ್ತು. ಗೆಳೆಯ ಅಭಿನವ್ ಬೇರಾ ಅವರೊಂದಿಗೆ ಬ್ರೇಕಪ್‌ ಈ ಘಟನೆಗೆ ಕಾರಣವೆಂದು ತನಿಖೆಯಲ್ಲಿ ಬಯಲಾಗಿತ್ತು.

ಮಂಜುಷಾ ನಿಯೋಗಿ:  ನಟಿ ಹಾಗೂ ಮಾಡೆಲ್‌ ಆಗಿ ಹೆಸರುಗಳಿಸಿದ್ದ ಮಂಜುಷಾ ನಿಯೋಗಿ 2022ರ ಮೇ 27 ರಂದು ಕೋಲ್ಕತ್ತಾದ ನಿವಾಸದಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಈ ಪ್ರಕರಣಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲವಾದರೂ ಮಂಜುಷಾ ಅವರ ತಾಯಿ ನನ್ನ ಮಗಳು ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಿದ್ದರು.

ರಶ್ಮಿರೇಖಾ ಓಜಾ: ಒಡಿಯಾ ಧಾರಾವಾಹಿ ʼಕಮಿತಿ ಕಭಿ ಕಹಾʼನಲ್ಲಿ ನಟಿಸಿ ಖ್ಯಾತಿಯಾಗಿದ್ದ ರಶ್ಮಿರೇಖಾ ಭುವನೇಶ್ವರ್ ನಲ್ಲಿ  ಸಾವಿಗೀಡಾಗಿದ್ದರು. ಈ ಘಟನೆಯ ಹಿಂದೆ ರಶ್ಮಿ ಅವರ ಗೆಳೆಯ ಸಂತೋಷ ಪತ್ರ ಅವರ ಹೆಸರು ಕೇಳಿ ಬಂದಿತ್ತು.

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.