
ಬಾಲಿವುಡ್ ಹಿರಿಯ ನಟಿ ಆಶಾ ಪರೇಖ್ ಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ
ಕಟಿ ಪತಂಗ್, ತೀಸ್ರಿ ಮಂಝಿಲ್, ಕಾರ್ವಾನ್ ಸೇರಿದಂತೆ ನೂರಾರು ಸಿನಿಮಾಗಳಲ್ಲಿ ಪರೇಖ್ ಅಭಿನಯಿಸಿದ್ದರು.
Team Udayavani, Sep 27, 2022, 3:20 PM IST

ನವದೆಹಲಿ: ಭಾರತೀಯ ಸಿನಿಮಾರಂಗಕ್ಕೆ ನೀಡಿರುವ ಮಹತ್ತರ ಕೊಡುಗೆಯನ್ನು ಪರಿಗಣಿಸಿ ಗೌರವಿಸುವ ನಿಟ್ಟಿನಲ್ಲಿ 2020ನೇ ಸಾಲಿನ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಬಾಲಿವುಡ್ ಹಿರಿಯ ನಟಿ ಆಶಾ ಫರೇಖ್(79ವರ್ಷ) ಅವರಿಗೆ ನೀಡಲು ನಿರ್ಧರಿಸಲಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:‘ಕುಳ್ಳನ ಹೆಂಡತಿ’ ಪ್ರೇಮ ಪುರಾಣ!; ರಿಲೀಸ್ ಗೆ ರೆಡಿಯಾದ ಹೊಸಬರ ಚಿತ್ರ
ಭಾರತೀಯ ಚಿತ್ರರಂಗಕ್ಕೆ ಪರೇಖ್ ಅವರ ಕೊಡುಗೆ ಮಹತ್ತರವಾದದ್ದು, ಈ ಹಿನ್ನೆಲೆಯಲ್ಲಿ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯ ಜ್ಯೂರಿ ಹಿರಿಯ ನಟಿ ಆಶಾ ಪರೇಖ್ ಅವರನ್ನು ಆಯ್ಕೆ ಮಾಡಿರುವುದಾಗಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.
Honoured to announce that the Dadasaheb Phalke Selection Jury has decided to recognise & award Smt Asha Parekh ji for her exemplary lifetime contribution to Indian Cinema.
The Dadasaheb Phalke Award shall be presented by the Hon President of India at
68th NFA in Vigyan Bhawan. pic.twitter.com/3MPa0HhvDL— Anurag Thakur (@ianuragthakur) September 27, 2022
ದಾದಾಸಾಹೇಬ್ ಫಾಲ್ಕೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವದ ಪ್ರಶಸ್ತಿಯಾಗಿದೆ. 1960, 70ರ ದಶಕದಲ್ಲಿ ಆಶಾ ಪರೇಖ್ ಬಾಲಿವುಡ್ ನ ಬೇಡಿಕೆಯ ನಟಿಯಾಗಿದ್ದರು. ದಿಲ್ ದೇಖೆ, ದೇಖೋ, ಕಟಿ ಪತಂಗ್, ತೀಸ್ರಿ ಮಂಝಿಲ್, ಕಾರ್ವಾನ್ ಸೇರಿದಂತೆ ನೂರಾರು ಸಿನಿಮಾಗಳಲ್ಲಿ ಪರೇಖ್ ಅಭಿನಯಿಸಿದ್ದರು.
ಆಶಾ ಪರೇಖ್ ಬಾಲ ನಟಿಯಾಗಿ ಅಭಿನಯಿಸುವ ಮೂಲಕ ಬೆಳ್ಳಿಪರದೆಗೆ ಪ್ರವೇಶಿಸಿದ್ದರು. 1952ರಲ್ಲಿ ತೆರೆಕಂಡಿದ್ದ ಬಾಲಿವುಡ್ ನ “ಮಾ” ಚಿತ್ರದಲ್ಲಿ ಪರೇಖ್ ಬಾಲನಟಿಯಾಗಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ಬಳಿಕ 1954ರಲ್ಲಿ ಬಾಪ್ ಬೇಟಿ ಸಿನಿಮಾದಲ್ಲಿ ನಟಿಸಿದ್ದರು. ಆದರೆ 1959ರಲ್ಲಿ ಶಮ್ಮಿ ಕಪೂರ್ ನಾಯಕನ ಪಾತ್ರದಲ್ಲಿ ನಟಿಸಿದ್ದ ದಿಲ್ ದೇಖೆ, ದೇಖೋ ಸಿನಿಮಾದಲ್ಲಿ ಪರೇಖ್ ಹೀರೊಯಿನ್ ಆಗಿ ನಟಿಸಿದ್ದು, ಈ ಸಿನಿಮಾ ಭರ್ಜರಿ ಹಿಟ್ ಆಗಿತ್ತು. ಅಲ್ಲಿಂದ ಪರೇಖ್ ತಮ್ಮ ಸಿನಿ ಜೀವನದ ಪಯಣದಲ್ಲಿ ಹಿಂದಿರುಗಿ ನೋಡಿಲ್ಲ. 1995ರಲ್ಲಿ ಆಶಾ ಪರೇಖ್ ನಟನೆಗೆ ಗುಡ್ ಬೈ ಹೇಳಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್ ಖಾನ್ ಗೆ ಸಿನಿಮಾ ಆಫರ್ ಕೊಟ್ಟ ಆಮಿರ್: ನಿರ್ಮಾಪಕರಾಗಿ ಕಂಬ್ಯಾಕ್ ಮಾಡ್ತಾರ ಮಿ.ಪರ್ಫೆಕ್ಟ್?

ದಳಪತಿ 67ನೇ ಸಿನಿಮಾಕ್ಕೆ ನಾಯಕಿಯಾಗಿ ತ್ರಿಷಾ ಆಯ್ಕೆ: 14 ವರ್ಷದ ಬಳಿಕ ಒಂದೇ ಸ್ಕ್ರೀನ್ ನಲ್ಲಿ ನಟನೆ

ಕೇರಳ ಚಲನಚಿತ್ರ ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ಅಡೂರ್ ಗೋಪಾಲಕೃಷ್ಣನ್ ರಾಜೀನಾಮೆ

ಪಠಾಣ್ ಅಬ್ಬರಕ್ಕೆ ನಡುಗಿದ ಬಾಕ್ಸಾಫೀಸ್: ಭಾರತದಲ್ಲೇ 300 ಕೋಟಿ ಗಳಿಸಿದ ಶಾರುಖ್ ಸಿನಿಮಾ

ಮೊದಲ ಬಾರಿ ಮಗಳ ಮುಖ ರಿವೀಲ್ ಮಾಡಿದ ಪಿಂಕಿ: ವೈರಲ್ ಆಯಿತು ಕ್ಯೂಟ್ ಮಾಲ್ತಿ ಫೋಟೋ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಕೊಣಾಜೆ ಪೊಲೀಸರ ದಾಳಿ: 27 ಲಕ್ಷ ರೂ ಮೌಲ್ಯದ 111ಕೆ.ಜಿ. ಗಾಂಜಾ ವಶ, ಮೂವರ ಬಂಧನ

ಗ್ರಾಮ ಪಂಚಾಯತ್ ಚುನಾವಣೆ: ಚುನಾವಣ ಆಯೋಗದಿಂದ ವೇಳಾಪಟ್ಟಿ ಪ್ರಕಟ

ಬೈಬಲ್ಗೆ ಬೆಂಕಿ ಹಚ್ಚಿ ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಚಾರಗೈದ ಆರೋಪಿಯ ಬಂಧನ

ರಕ್ಷಣಾ ಕ್ಷೇತ್ರಕ್ಕೆ 5.94 ಲಕ್ಷ ಕೋಟಿ ರೂ.: ದೇಶೀಯವಾಗಿ ಶಸ್ತ್ರಾಸ್ತ್ರ ತಯಾರಿಕೆಗೆ ಒತ್ತು

ಗಂಗೊಳ್ಳಿ: ಸ್ಕೀಮ್ ಹೆಸರಿನಲ್ಲಿ ಗ್ರಾಹಕರಿಗೆ ಕೋಟ್ಯಂತರ ರೂ. ವಂಚನೆ