ಬಾಲಿವುಡ್ ನ ಹಿರಿಯ ಗಾಯಕ ಭೂಪಿಂದರ್ ಸಿಂಗ್ ನಿಧನ
Team Udayavani, Jul 18, 2022, 11:10 PM IST
ಮುಂಬೈ : ಬಾಲಿವುಡ್ ನ ಖ್ಯಾತ ಗಾಯಕ ಭೂಪಿಂದರ್ ಸಿಂಗ್ ಸೋಮವಾರ ಸಂಜೆ ಮುಂಬೈನ ಅಂಧೇರಿಯಲ್ಲಿರುವ ಕ್ರಿಟಿಕೇರ್ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು.
ಈ ಕುರಿತು ಅವರ ಪತ್ನಿ ಮಾಧ್ಯಮಗಳಿಗೆ ನೀಡಿದ ಹೇಳಿಕೆಯಂತೆ ಭೂಪಿಂದರ್ ಸಿಂಗ್ ಅವರಿಗೆ ಕರುಳಿಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದು ಸೋಮವಾರ ಸಂಜೆ ನಿಧನ ಹೊಂದಿದರು ಎಂದು ತಿಳಿಸಿದ್ದಾರೆ, ಅಲ್ಲದೆ ಅಂತ್ಯಕ್ರಿಯೆಯನ್ನು ಮಂಗಳವಾರ ನಡೆಸುವುದಾಗಿ ತಿಳಿಸಿದ್ದಾರೆ,
ಕ್ರಿಟಿಕೇರ್ ಏಷ್ಯಾ ಆಸ್ಪತ್ರೆಯ ನಿರ್ದೇಶಕರಾದ ಡಾ.ದೀಪಕ್ ನಾಮಜೋಶಿ ಮಾತನಾಡಿ, ಭೂಪಿಂದರ್ ಅವರನ್ನು ಕಳೆದ ಹತ್ತು ದಿನಗಳ ಹಿಂದೆಯೇ ನಮ್ಮ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕರುಳು ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಅದೇ ಸಮಯದಲ್ಲಿ ಅವರಲ್ಲಿ ಕೋವಿಡ್ -19 ದೃಢಪಟ್ಟಿತ್ತು ಹಾಗಾಗಿ ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಸಂಜೆ 7:45 ಕ್ಕೆ ನಿಧನರಾದರು ಎಂದು ಹೇಳಿದ್ದಾರೆ.
ಭೂಪಿಂದರ್ ಸಿಂಗ್ ಅವರು ದಿಲ್ ಡೂನ್ಡ್ ತಾ ಹೈ, ನಾಮ್ ಗಮ್ ಜಾಯೇಗಾ, ಏಕ್ ಅಕೇಲಾ ಈಸ್ ಶಾಹೆರ್ ಮೇ, ಬೀಟಿ ನಾ ಬೀಟೈ ರೈನಾ, ಹುಜೂರ್ ಈಸ್ ಕದರ್ ಭೀ ನಾ ಇತ್ರಾ ಕೆ ಚಲಿಯೇ, ಕಿಸಿ ನಝರ್ ಕೋ ತೇರಾ ಇಂತೆಝರ್ ಆಜ್ ಭಿ ಹೈ, ಬದಲೋನ್ ಸೇ ಕಾತ್ ಕಾಟ್ ಕೇ ಮುಂತಾದ ಹಾಡುಗಳಿಗೆ ಹೆಸರುವಾಸಿಯಾಗಿದ್ದರು.
Singer & Guitarist #BhupinderSingh ‘s demise is a great loss to the film industry especially the music world .
Heartfelt condolences to his wife #Mitalee ji and the entire family.
Will always be remembered through his songs.
ॐ शान्ति !
? pic.twitter.com/ocKrf6viDQ— Ashoke Pandit (@ashokepandit) July 18, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ