Pankaj Udhas: ಖ್ಯಾತ ಗಜಲ್‌ ಗಾಯಕ ಪಂಕಜ್‌ ಉದಾಸ್‌ ನಿಧನ


Team Udayavani, Feb 26, 2024, 5:29 PM IST

Pankaj Udhas: ಖ್ಯಾತ ಗಜಲ್‌ ಗಾಯಕ ಪಂಕಜ್‌ ಉದಾಸ್‌ ನಿಧನ

ಮುಂಬಯಿ: ಖ್ಯಾತ ಗಜಲ್‌  ಹಾಗೂ ಹಿನ್ನೆಲೆ ಗಾಯಕ ಪಂಕಜ್ ಉದಾಸ್‌(72) ಸೋಮವಾರ(ಫೆ.26 ರಂದು) ನಿಧನ ಹೊಂದಿದರು.

ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಅವರು ಹೊಂದಿದ್ದಾರೆ ಎಂದು ಅವರ ತಂಡ ದೃಢಪಡಿಸಿದೆ. ಕಳೆದ ಕೆಲ ಸಮಯದಿಂದ ಪಂಕಜ್‌ ಅವರು ಅನಾರೋಗ್ಯದಲ್ಲಿ ಬಳಲುತ್ತಿದ್ದರು. ಅವರ ಆರೋಗ್ಯ ಸ್ಥಿತಿ ದಿನ ಕಳೆದಂತೆ ಹದಗೆಟ್ಟಿತು. ಇಂದು ಮುಂಜಾನ 11 ಗಂಟೆಗೆ ಅವರು ನಿಧನರಾದರು ಎಂದು ʼಇಂಡಿಯಾ ಟುಡೆʼ ಗೆ ಹೇಳಿದೆ.

ಅವರ ಪುತ್ರಿ ನಯಾಬ್ ಉದಾಸ್ ಅವರು ತಮ್ಮ ತಂದೆಯ ನಿಧನದ ಬಗ್ಗೆ ಇನ್ಸ್ಟಾಗ್ರಾಮ್‌ ನಲ್ಲಿ ಪೋಸ್ಟ್‌ ಮಾಡಿದ್ದಾರೆ. “ದೀರ್ಘಕಾಲದ ಅನಾರೋಗ್ಯದಿಂದ 26 ಫೆಬ್ರವರಿ 2024 ರಂದು ಪದ್ಮಶ್ರೀ ಪಂಕಜ್ ಉದಾಸ್ ಅವರು ಹೊಂದಿದರು. ಅವರ ನಿಧನದ ವಿಚಾರವನ್ನು ನಿಮಗೆ ತಿಳಿಸಲು ನಾವು ತುಂಬಾ ದುಃಖಿತರಾಗಿದ್ದೇವೆ” ಎಂದು ಅವರು ಪೋಸ್ಟ್‌ ನಲ್ಲಿ ತಿಳಿಸಿದ್ದಾರೆ.

ಮೇ 17, 1951 ರಂದು ಗುಜರಾತ್‌ನಲ್ಲಿ ಜನಿಸಿದ ಅವರು, ಚಿಕ್ಕ ವಯಸ್ಸಿನಲ್ಲೇ ಗಜಲ್‌ ಹಾಡುಗಳಿಗೆ ಪ್ರಭಾವಿತರಾದರು.1980 ಮತ್ತು 1990 ರ ದಶಕದಲ್ಲಿ ಅವರು ಗಜಲ್‌ ಹಾಡುಗಳಿಂದ ಜನಪ್ರಿಯತೆಯನ್ನು ಪಡೆದುಕೊಂಡರು.

1981ರಲ್ಲಿ ʼಮುಕರಾರ್ʼ, 1982ರಲ್ಲಿ ʼತರನ್ನಮ್ʼ, 1983ರಲ್ಲಿ ಮೆಹಫಿಲ್ ಆಲ್ಬಮ್‌ಗಳು ಅಪಾರ ಕೇಳುಗರನ್ನು ರಂಜಿಸಿತ್ತು.

1989 ರಲ್ಲಿ ಅವರು ‘ನಬೀಲ್’ ಎಂಬ ಆಲ್ಬಂ ಅನ್ನು ಬಿಡುಗಡೆ ದ್ದರು. ಇದು ಇವರ ಅತೀ ಹೆಚ್ಚು ಮಾರಾಟವಾದ ಆಲ್ಬಂಗಳಲ್ಲಿ ಒಂದಾಗಿದೆ. ಇದರ ಮೊದಲ ಕಾಪಿ ಹರಾಜಿನಲ್ಲಿ 1 ಲಕ್ಷಕ್ಕೆ ಮಾರಾಟವಾಗಿತ್ತು. ಇದರಲ್ಲಿ ಬಂದ ಹಣವನ್ನು ಅವರು ಕ್ಯಾನ್ಸರ್ ರೋಗಿಗಳ ಸಹಾಯ ಸಂಘಕ್ಕೆ ನೀಡಿದ್ದರು.

ಪಂಕಜ್ ಉದಾಸ್ ಹಲವಾರು ಆಲ್ಬಮ್‌ಗಳು ಮತ್ತು ಸಿಂಗಲ್‌ಗಳನ್ನು ಬಿಡುಗಡೆ ಮಾಡಿದ್ದರು. ‘ಚಿಟ್ಟಿ ಆಯಿ ಹೈ’, ‘ಔರ್ ಅಹಿಸ್ತಾ’ ,’ಜೀಯೇ ತೋ ಜೀಯೇ ಕೈಸೆ’ ಈ ಹಾಡುಗಳು ಎವರ್‌ ಗ್ರೀನ್‌ ಹಿಟ್‌ ಸಾಲಿಗೆ ಸೇರಿವೆ.  ಮಹೇಶ್‌ ಭಟ್‌ ಅವರ ʼನಾಮ್‌ʼ ಸಿನಿಮಾದ ಹಾಡನ್ನು ಹಾಡುವ ಮೂಲಕ ಹಿನ್ನೆಲೆ ಗಾಯಕರಾಗಿಯೂ ಗುರುತಿಸಿಕೊಂಡರು.

ಇನ್ನು ಕನ್ನಡದಲ್ಲೂ ಗಜಲ್‌ ಮೂಲಕ್‌ ಪಂಕಜ್‌ ಉದಾಸ್‌ ರಂಜಿಸಿದ್ದಾರೆ. ಕಿಚ್ಚ ಸುದೀಪ್‌ ಅವರ ʼಸ್ಪರ್ಶʼ ಸಿನಿಮಾದ ʼಚಂದಕ್ಕಿಂತ ಚಂದ..ʼ ಗಜಲ್‌ ಗೆ ಪಂಕಜ್‌ ದನಿಯಾಗಿದ್ದರು.

ಇವರ ಸಾಧನೆಗೆ  ಭಾರತ ಸರ್ಕಾರ 2006 ರಲ್ಲಿ ಇವರಿಗೆ ಪದ್ಮಶ್ರೀ ಗೌರವವನ್ನು ನೀಡಿತು. ಇವರ ಸಹೋದರರಾದ ನಿರ್ಮಲ್‌ ಉದಾಸ್‌, ಮನಹಾರ್‌ ಉದಾಸ್ ಕೂಡ ಗಾಯಕರಾಗಿದ್ದಾರೆ.

ಅವರ ನಿಧನಕ್ಕೆ ಬಿಟೌನ್‌ ಹಾಗೂ ಇತರೆ ಗಣ್ಯರು ಕಂಬನಿ ಮಿಡಿದಿದ್ದಾರೆ.

 

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.