‘ನಿಜ ಜೀವನದಲ್ಲಿ ಹೀರೋ ಆಗಿ’ : ನಟ ವಿಜಯ್ ಗೆ ಬುದ್ಧಿವಾದ ಹೇಳಿ 1 ಲಕ್ಷ ದಂಡ ವಿಧಿಸಿದ ಕೋರ್ಟ್
Team Udayavani, Jul 13, 2021, 9:06 PM IST
ಚೆನ್ನೈ : ವಿದೇಶದಿಂದ ಆಮದು ಮಾಡಿಕೊಂಡಿದ್ದ ದುಬಾರಿ ಕಾರಿಗೆ ತೆರಿಗೆ ಮನ್ನಾ ಮಾಡುವಂತೆ ಕೋರ್ಟ್ ಮೊರೆ ಹೋಗಿದ್ದ ತಮಿಳು ನಟ ವಿಜಯ್ ಅವರಿಗೆ ಭಾರಿ ಮುಖಭಂಗವಾಗಿದೆ. ಜೊತೆಗೆ ನೀವು ನಿಜ ಜೀವನದಲ್ಲಿ ಹೀರೋ ಆಗಿ ಎಂದು ನ್ಯಾಯಪೀಠ ಕಿವಿ ಮಾತು ಹೇಳಿದೆ.
ನಟ ವಿಜಯ್ ಅವರು ಇಂಗ್ಲೆಂಡ್ ನಿಂದ ರೋಲ್ಸ್ ರಾಯ್ಸ್ ಘೋಸ್ಟ್ ಕಾರು ಆಮದು ಮಾಡಿಕೊಂಡಿದ್ದರು. ಮದ್ರಾಸ್ ಹೈಕೋರ್ಟ್ಗೆ ವಿಜಯ್ ತೆರಿಗೆ ವಿನಾಯಿತಿ ನೀಡುವಂತೆ ಅರ್ಜಿಯನ್ನು ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ನಟನಿಗೆ ಛೀಮಾರಿ ಹಾಕಿದೆ.
2012ರಲ್ಲಿ ನಟ ವಿಜಯ್ ಸಲ್ಲಿಸಿದ್ದ ತೆರಿಗೆ ವಿನಾಯಿತಿಯ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್ನ ನ್ಯಾ.ಎಸ್.ಎಮ್.ಸುಬ್ರಮಣಿಯಮ್ ಅವರಿದ್ದ ಪೀಠವು, ನಿಜವಾದ ಹೀರೋಗಳು ಸರಿಯಾದ ಸಮಯಕ್ಕೆ ತೆರಿಗೆ ಕಟ್ಟುತ್ತಾರೆ. ನೀವು ನಿಜ ಜೀವನದ ಹೀರೋಗಳಾಗಿ, ಬರಿಯ ತೆರೆಯ ಮೇಲಿನ ಹೀರೋಗಳಾಗಿ ಉಳಿಯಬೇಡಿ ಎಂದಿದೆ. ಜೊತೆಗೆ ನ್ಯಾಯಾಲಯವು 1ಲಕ್ಷ ರೂ.ಗಳ ದಂಡವನ್ನೂ ವಿಜಯ್ಗೆ ವಿಧಿಸಿದ್ದು, ಅದನ್ನು ತಮಿಳುನಾಡು ಮುಖ್ಯಮಂತ್ರಿ ಪರಿಹಾರ ನಿಧಿಗೆ ಪಾವತಿಸುವಂತೆ ತಿಳಿಸಿದೆ.
ವಿಜಯ್ ಅವರ ವರ್ತನೆಯು ಬಹಳ ಜನರನ್ನು ಪ್ರಭಾವಿಸುವ ಸಾಮರ್ಥ್ಯವನ್ನು ಹೊಂದಿದೆ. ತಮಿಳುನಾಡಿನಂತಹ ರಾಜ್ಯದಲ್ಲಿ ಚಿತ್ರ ನಟರು ಬೇರೆಲ್ಲರಿಗಿಂತ ಹೆಚ್ಚು ಜನರನ್ನು ಪ್ರಭಾವಿಸುತ್ತಾರೆ. ನಟರೇ ಹೀಗೆ ಮಾಡಿದರೆ ತಪ್ಪು ಸಂದೇಶ ಹೋದಂತಾಗುತ್ತದೆ. ನಿಜವಾದ ನಾಯಕನಾದವನು ದೇಶಕ್ಕೆ ಕಟ್ಟಬೇಕಾದ ತೆರಿಗೆಯನ್ನು ತಪ್ಪದೇ ಕಟ್ಟುತ್ತಾನೆ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?