ಸಾಮಾಜಿಕ ಜಾಲತಾಣದ ಎಫೆಕ್ಟ್: ಮುತ್ತಯ್ಯ ಮುರಳೀಧರನ್ ಬಯೋಪಿಕ್ ಗೆ ಸೇತುಪತಿ ಗುಡ್ ಬೈ
ಜೆರ್ಸಿಯನ್ನು ತೊಟ್ಟು ಸಿನಿಮಾ ಮಾಡಲು ಮುಂದಾಗಿರುವುದು ದುರಂತ ಎಂದು ಟೀಕಿಸಲಾಗುತ್ತಿದೆ.
Team Udayavani, Oct 19, 2020, 6:48 PM IST
ಚೆನ್ನೈ: ಶ್ರೀಲಂಕಾ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಜೀವನಾಧಾರಿತ ಚಿತ್ರ “800” ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಈ ಸಿನಿಮಾದಲ್ಲಿನ ನಟನೆಯಿಂದ ಹಿಂದೆ ಸರಿದಿರುವುದಾಗಿ ವಿಜಯ್ ಸೇತುಪತಿ ಸೋಮವಾರ(ಅಕ್ಟೋಬರ್ 19, 2020) ಘೋಷಿಸಿದ್ದಾರೆ.
“ನಾನು ಈ ಸಿನಿಮಾದಿಂದ ಹೊರಬಂದಿದ್ದೇನೆ” ಎಂದು ವಿಜಯ್ ಸೇತುಪತಿ ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಮುತ್ತಯ್ಯ ಮುರಳೀಧರನ್ ಹೇಳಿಕೆಯನ್ನು ಕೂಡಾ ಟ್ವೀಟ್ ಮಾಡಿದ್ದಾರೆ. “800” ಸಿನಿಮಾದಿಂದ ವಿಜಯ್ ಹೊರಗುಳಿದಿರುವುದಾಗಿ ಮಾಧ್ಯಮ ವಕ್ತಾರ ಯುವ್ ರಾಜ್ ಕೂಡಾ ತಿಳಿಸಿದ್ದಾರೆ.
ಯಾಕೆ ವಿರೋಧ?
நன்றி.. வணக்கம் ?? pic.twitter.com/PMCPBDEgAC
— VijaySethupathi (@VijaySethuOffl) October 19, 2020
ಇದನ್ನೂ ಓದಿ:ಮುರಳೀಧರನ್ ಬಯೋಪಿಕ್ ಗೆ ಯಾಕಿಷ್ಟು ತೊಂದರೆ? ನಿಂತುಹೋಗುತ್ತಾ ವಿಜಯ್ ಸೇತುಪತಿ ಚಿತ್ರ
ಮುತ್ತಯ್ಯ ಮುರಳೀಧರನ್ ಶ್ರೀಲಂಕಾದ ಕ್ರಿಕೆಟಿಗ. ಶ್ರೀಲಂಕಾದಲ್ಲಿರುವ ತಮಿಳು ಜನರ ಮೇಲೆ ಅಲ್ಲಿನ ಸರ್ಕಾರ ದಬ್ಬಾಳಿಕೆ ಮಾಡಿದೆ, ಅನೇಕ ತಮಿಳರನ್ನು ಹತ್ಯೆಗೆ ಕಾರಣವಾಗಿದೆ. ಇಂತಹ ಸಂದರ್ಭದಲ್ಲಿ ತಮಿಳರ ಪರವಾಗಿ ಮುತ್ತಯ್ಯ ಮುರಳೀಧರನ್ ಮಾತನಾಡಿರಲಿಲ್ಲ. ಇಷ್ಟೆಲ್ಲಾ ಆಗಿರುವಾಗ ತಮಿಳು ನಟನೊಬ್ಬ ಶ್ರೀಲಂಕಾ ಧ್ವಜದ ಜೆರ್ಸಿಯನ್ನು ತೊಟ್ಟು ಸಿನಿಮಾ ಮಾಡಲು ಮುಂದಾಗಿರುವುದು ದುರಂತ ಎಂದು ಟೀಕಿಸಲಾಗುತ್ತಿದೆ. ನಟ ವಿಜಯ್ ಸೇತುಪತಿ ತಮ್ಮ ನಿರ್ಧಾರವನ್ನು ಬದಲಿಸಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸಿದ್ದರರು. ಕೆಲ ದಿನಗಳ ಹಿಂದೆ ಈ ವಿಚಾರ ಟ್ವಿಟ್ಟರ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ
Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್ʼ
“ದೊಡ್ಡ ಸೌತ್ ಸಿನಿಮಾ ಮಾಡುತ್ತಿದ್ದೇನೆ” ಎಂದ ಕರೀನಾ: ಯಶ್ ಜೊತೆ ಬೇಬೋ ನಟಿಸೋದು ಪಕ್ಕಾ?
ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ
ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಬಿಗ್ ಬಿ ಹೇಳಿದ್ದೇನು