The Kerala Story ನಟಿಯ ಮೊಬೈಲ್ ನಂಬರ್ ಲೀಕ್: ಮೆಸೇಜ್, ಕಾಲ್ನಿಂದ ನಟಿಗೆ ಕಿರುಕುಳ
Team Udayavani, May 25, 2023, 1:36 PM IST
ಮುಂಬಯಿ: ʼದಿ ಕೇರಳ ಸ್ಟೋರಿʼ ನಟಿ ಅದಾ ಶರ್ಮಾ ಸಿನಿಮಾ ರಿಲೀಸ್ ಆದಾಗಿನಿಂದ ಟಾಕ್ ಆಫ್ ದಿ ಟೌನ್ ಆಗಿದ್ದಾರೆ. ಸಿನಿಮಾದಲ್ಲಿನ ಅವರ ನಟನೆ ಬಗ್ಗೆ ಜನ ಶಹಬ್ಬಾಸ್ ಗಿರಿಯನ್ನು ಕೊಟ್ಟಿದ್ದು ಒಂದು ಕಡೆಯಾದರೆ, ಇನ್ನೊಂದೆಡೆ ಈ ಸಿನಿಮಾವನ್ನು ಆಯ್ದುಕೊಂಡ ಬಗ್ಗೆಯೂ ಕೆಲ ಜನ ಅವರ ವಿರುದ್ಧ ಕಿಡಿಕಾರಿದ್ದಾರೆ.
ವಿವಾದದ ಹೊರತಾಗಿಯೂ ಸುದೀಪ್ತೋ ಸೇನ್ ನಿರ್ದೇಶನದ ಸಿನಿಮಾ 200 ಕೋಟಿ ಕ್ಲಬ್ ಸೇರಿದೆ. ಸಿನಿಮಾವನ್ನು ಅಭೂತಪೂರ್ವವಾಗಿ ಯಶಸ್ಸುಗೊಳಿಸಿದ ಪ್ರೇಕ್ಷಕರಿಗೆ ನಟಿ ಅದಾ ಶರ್ಮಾ ಧನ್ಯವಾದವನ್ನು ಹೇಳಿದ್ದಾರೆ.
ಸಿನಿಮಾ ರಿಲೀಸ್ ಆದಾಗಿನಿಂದ ಸಿನಿಮಾ ತಂಡಕ್ಕೆ ಕೆಲವರಿಂದ ಬೆದರಿಕೆಗಳು ಬಂದಿರುವುದು ವರದಿಯಾಗಿತ್ತು. ಇದೀಗ ನಟಿ ಅದಾ ಶರ್ಮಾ ಅವರ ವೈಯಕ್ತಿಕ ಫೋನ್ ನಂಬರ್ ನ್ನು ಹ್ಯಾಕರ್ ವೊಬ್ಬ ಲೀಕ್ ಮಾಡಿದ್ದಾನೆ ಎನ್ನಲಾಗಿದೆ.
‘jhamunda_bolte’ ಎಂಬ ಬಳಕೆದಾರ ಇನ್ಸ್ಟಾಗ್ರಾಮ್ ನಲ್ಲಿ ನಟಿಯ ಫೋನ್ ನಂಬರ್ ಲೀಕ್ ಮಾಡಿದ್ದಾನೆ. ಕೆಲವರು ನಟಿಯ ನಂಬರ್ ಪಡೆದು ನಟಿಗೆ ನಾನಾ ರೀತಿಯಲ್ಲಿ ಮೆಸೇಜ್ ಗಳನ್ನು ಮಾಡಿ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. ಇದಾದ ಬಳಿಕ ಹ್ಯಾಕರ್ ಶರ್ಮಾ ನನ್ನಿಂದ ಬೇಸರದಲ್ಲಿದ್ದಾರೆ. ಇನ್ನೊಮ್ಮೆ ಮುಸ್ಲಿಂಮರ ವಿರುದ್ಧದ ಸಿನಿಮಾ ಬಂದರೆ ರಿಜೆಕ್ಟ್ ಮಾಡಿ ಎಂದು ಮತ್ತೊಂದು ಪೋಸ್ಟ್ ಮಾಡಿದ್ದಾನೆ. ಹೊಸ ನಂಬರ್ ಬಳಸಿದರೆ ಅದನ್ನು ಕೂಡ ಲೀಕ್ ಮಾಡುತ್ತೇನೆ ಎಂದು ಬೆದರಿಕೆಯನ್ನು ಹಾಕಿದ್ದಾನೆ.
ನಟಿಯ ಅಭಿಮಾನಿಗಳು ಅಕೌಂಟ್ ಬಗ್ಗೆ ಕೂಡಲೇ ರಿಪೋರ್ಟ್ ಮಾಡಿದ ಬಳಿಕ ಆತನ ಅಕೌಂಟ್ ಸ್ಥಗಿತಗೊಂಡಿದೆ. ಕೆಲವೇ ಕ್ಷಣವಿದ್ದ ನಟಿಯ ನಂಬರ್ ಪೋಸ್ಟ್ ವೈರಲ್ ಆಗಿದೆ.
ಆದರೆ ನಟಿ ಅದಾ ಶರ್ಮಾ ಈ ಬಗ್ಗೆ ಇನ್ನು ಯಾವ ಪ್ರತಿಕ್ರಿಯೆ ನೀಡಿಲ್ಲ.
ʼದಿ ಕೇರಳ ಸ್ಟೋರಿʼ ಯಶಸ್ಸಿನಲ್ಲಿರುವ ನಟಿ ಅದಾ ಶರ್ಮಾ ಶೀಘ್ರದಲ್ಲಿ ತನ್ನ ಮುಂದಿನ ಚಿತ್ರದ ಬಗ್ಗೆ ಅನೌನ್ಸ್ ಮಾಡಲಿದ್ದಾರೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramayana Movie: ʼರಾವಣʼನ ಪತ್ನಿಯಾಗಿ ಯಶ್ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?
ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ
ಮೀಟಿಂಗ್ ಮಾಡೋಕ್ಕೂ ರೇಟ್ ಫಿಕ್ಸ್: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ
Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?
Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ
MUST WATCH
ಹೊಸ ಸೇರ್ಪಡೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ