ಬ್ರೇಕಪ್ ವದಂತಿಗೆ ತೆರೆ: ರೆಸ್ಟೋರೆಂಟ್ನಲ್ಲಿ ಭೇಟಿಯಾದ ರಶ್ಮಿಕಾ – ವಿಜಯ್
Team Udayavani, Jun 24, 2023, 4:49 PM IST
ಹೈದರಾಬಾದ್: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡಾ ಇಬ್ಬರ ನಡುವಿನ ಸ್ನೇಹದಲ್ಲಿ ಬಿರುಕು ಕಾಣಿಸಿಕೊಂಡಿದೆ ಎನ್ನುವ ಮಾತುಗಳು ಎಲ್ಲೆಡೆ ಹಬ್ಬುತ್ತಿದ್ದಂತಯೇ ಇಬ್ಬರು ಮತ್ತೆ ಜೊತೆಯಾಗಿ ಕಾಣಿಸಿಕೊಂಡಿರುವುದು ಟಾಲಿವುಡ್ ರಂಗದಲ್ಲಿ ಹಾಟ್ ಟಾಪಿಕ್ ಆಗಿದೆ.
ʼಗೀತಾ – ಗೋವಿಂದಂʼ ಬಳಿಕ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡಾ ಇಬ್ಬರು ಆತ್ಮೀಯವಾಗಿ ಇರುವುದು ಗೊತ್ತಿರುವ ವಿಚಾರ. ಇಬ್ಬರೂ ಅನೇಕ ಬಾರಿ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಇಬ್ಬರು ಡೇಟಿಂಗ್ ನಡೆಸುತ್ತಿರುವ ವಿಚಾರ ಅನೇಕ ಬಾರಿ ಚರ್ಚೆಯಾಗಿತ್ತು. ದೇವರಕೊಂಡ ಹಾಗೂ ನಾನು ಜಸ್ಟ್ ಫ್ರೆಂಡ್ಸ್ ಎನ್ನುವುದನ್ನು ಸ್ವತಃ ರಶ್ಮಿಕಾ ಅವರೇ ಈ ಹಿಂದೆ ಹೇಳಿದ್ದರು.
ಆದರೆ ಇತ್ತೀಚೆಗೆ ರಶ್ಮಿಕಾ – ಬೆಲ್ಲಂಕೊಂಡ ಶ್ರೀನಿವಾಸ್ ಇಬ್ಬರು ಮುಂಬೈ ಏರ್ ಪೋರ್ಟ್ ನಲ್ಲಿ ಕಾಣಿಸಿಕೊಂಡಿದ್ದರು. ಇದನ್ನು ನೋಡಿ ರಶ್ಮಿಕಾ ವಿಜಯ್ ಅವರೊಂದಿಗೆ ಬ್ರೇಕಪ್ ಮಾಡಿಕೊಂಡಿದ್ದಾರೆ ಎಂದು ಕೆಲ ಗಾಸಿಪ್ ಗಳು ಹಬ್ಬಿದ್ದವು.
ಇದೀಗ ನಟಿ ರಶ್ಮಿಕಾ ಬಹು ಸಮಯದ ಬಳಿಕ ಮತ್ತೆ ದೇವರಕೊಂಡಾ ಅವರೊಂದಿಗೆ ಕಾಣಿಸಿಕೊಂಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ರೆಸ್ಟೋರೆಂಟ್ ವೊಂದರಲ್ಲಿ ನಟಿ ರಶ್ಮಿಕಾ ಹಾಗೂ ದೇವರಕೊಂಡಾ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಈ ಕುರಿತ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಬ್ರೇಕಪ್ ವದಂತಿಯ ನಡುವೆ ಇಬ್ಬರು ಮತ್ತೆ ಜೊತೆಯಾಗಿ ಕಾಣಿಸಿಕೊಂಡಿರುವುದು ಅಭಿಮಾನಿಗಳಲ್ಲಿ ಸಂತಸವನ್ನುಂಟು ಮಾಡಿದೆ. ರಶ್ಮಿಕಾ – ವಿಜಯ್ ಭೇಟಿಯಲ್ಲಿ ಅವರ ಕುಟುಂಬ ಸದಸ್ಯರು ಕೂಡ ಹಾಜರಿದ್ದರು ಎಂದು ವರದಿ ತಿಳಿಸಿದೆ.
ಸದ್ಯ ರಶ್ಮಿಕಾ ಬಾಲಿವುಡ್ ನಲ್ಲಿ ರಣ್ಬೀರ್ ಕಪೂರ್ ‘ಅನಿಮಲ್’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ʼಖುಷಿʼ ಸಿನಿಮಾದಲ್ಲಿ ವಿಜಯ್ ದೇವರಕೊಂಡಾ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ಸಮಂತಾ ಅವರು ನಾಯಕಿಯಾಗಿ ನಟಿಸಿದ್ದಾರೆ.
True GentleMan @TheDeverakonda pic.twitter.com/n2wLRun0o1
— THE VB (@Mr_ViolentBoy) June 24, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ