ಸುಶಾಂತ್ ಸಿಂಗ್ ಆತ್ಮಹತ್ಯೆಗೂ ಮುನ್ನ ಗೂಗಲ್ ನಲ್ಲಿ ಹುಡುಕಾಡಿದ ವಿಷಯ ಯಾವುದು ಗೊತ್ತಾ?

ಕೆಕೆ ಸಿಂಗ್ ಅವರು ರಿಯಾ ಚಕ್ರವರ್ತಿ(ಸುಶಾಂತ್ ಗೆಳತಿ) ವಿರುದ್ಧ ಬಿಹಾರದಲ್ಲಿ ದೂರು ದಾಖಲಿಸಿದ್ದರು.

Team Udayavani, Aug 3, 2020, 2:18 PM IST

ಸುಶಾಂತ್ ಸಿಂಗ್ ಆತ್ಮಹತ್ಯೆಗೂ ಮುನ್ನ ಗೂಗಲ್ ನಲ್ಲಿ ಹುಡುಕಾಡಿದ ವಿಷಯ ಯಾವುದು ಗೊತ್ತಾ?

ಮುಂಬೈ:ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸ್ ಕಮೀಷನರ್ ಪರಂ ಬೀರ್ ಸಿಂಗ್

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ, ಸುಶಾಂತ್ ಸಿಂಗ್ ಸಾಯುವ ಮೊದಲು ಗೂಗಲ್ ನಲ್ಲಿ ಕೆಲವು ಮಾಹಿತಿ ಸರ್ಚ್ (ಹುಡುಕು) ಮಾಡಿರುವ ವಿಷಯ ಬಹಿರಂಗಗೊಳಿಸಿದ್ದಾರೆ.

ಮುಂಬೈ ಪೊಲೀಸ್ ಕಮಿಷನರ್ ಸಿಂಗ್ ಅವರು ನೀಡಿರುವ ಮಾಹಿತಿ ಪ್ರಕಾರ, ಸುಶಾಂತ್ ಸಿಂಗ್ ಗೂಗಲ್ ನಲ್ಲಿ ಅತೀ ಹೆಚ್ಚು ಬಾರಿ “ನೋವಿಲ್ಲದ ಸಾವು” , ಸ್ಕಿಜೋಫ್ರೇನಿಯಾ(ತೀವ್ರ ತರದ ಖಿನ್ನತೆ) ಹಾಗೂ ಬೈಪೊಲಾರ್ ಡಿಸಾರ್ಡರ್(ಮಾನಸಿಕ ಕಾಯಿಲೆ) ವಿಷಯದ ಕುರಿತು ಹುಡುಕಾಡಿರುವುದಾಗಿ ತಿಳಿಸಿದ್ದಾರೆ.

ಮಾಜಿ ಕಾರ್ಯದರ್ಶಿ, ಉಡುಪಿ ಮೂಲದ ದಿಶಾ ಸಾಲಿಯಾನ್ ಸಾವಿನ ಪ್ರಕರಣದಲ್ಲಿ ಸುಶಾಂತ್ ಸಿಂಗ್ ವಿರುದ್ಧ ಆರೋಪ ಕೇಳಿ ಬರತೊಡಗಿದ ನಂತರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು. ಸುಶಾಂತ್ ಸಾಯೋದಕ್ಕಿಂತ ಐದು ದಿನದ ಮೊದಲು ದಿಶಾ ಆತ್ಮಹತ್ಯೆಗೆ ಶರಣಾಗಿದ್ದಳು. ಅಷ್ಟೇ ಅಲ್ಲ ತನ್ನ ಬಗ್ಗೆ ಏನೆಲ್ಲಾ ಲೇಖನ, ವರದಿಗಳು ಬಂದಿದೆ ಎಂಬ ಬಗ್ಗೆ ಸುಶಾಂತ್ ಗೂಗಲ್ ನಲ್ಲಿ ಹುಡುಕಾಡಿರುವುದಾಗಿ ಸಿಂಗ್ ವಿವರಿಸಿದ್ದಾರೆ.

ಜೂನ್ 14(2020)ರಂದು ಸುಶಾಂತ್ ಸಿಂಗ್ ರಜಪೂತ್ ಮುಂಬೈನ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಮುಂಬೈನಲ್ಲಿಯೇ ಅವರ ಅಂತ್ಯ ಸಂಸ್ಕಾರ ನೆರವೇರಿಸಲಾಗಿತ್ತು. ಜುಲೈ26ರಂದು ಸುಶಾಂತ್ ತಂದೆ ಕೆಕೆ ಸಿಂಗ್ ಅವರು ರಿಯಾ ಚಕ್ರವರ್ತಿ(ಸುಶಾಂತ್ ಗೆಳತಿ) ವಿರುದ್ಧ ಬಿಹಾರದಲ್ಲಿ ದೂರು ದಾಖಲಿಸಿದ್ದರು.

ಪಾಟ್ನಾದಿಂದ ಆಗಮಿಸಿದ್ದ ಪೊಲೀಸರ ತಂಡ ಈ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದೆ. ಏತನ್ಮಧ್ಯೆ ಪಾಟ್ನದ ಪೊಲೀಸ್ ವರಿಷ್ಠಾಧಿಕಾರಿ ವಿನಯ್ ತಿವಾರಿ ಭಾನುವಾರ ಮುಂಬೈಗೆ ಆಗಮಿಸುತ್ತಿರುವಂತೆಯೇ ಬಿಎಂಸಿ (ಮುಂಬೈ ಮಹಾನಗರ ಪಾಲಿಕೆ) ಅಧಿಕಾರಿಗಳು ರಾತ್ರಿ ಬಲವಂತವಾಗಿ ಕ್ವಾರಂಟೈನ್ ಗೆ ಕಳುಹಿಸಿರುವುದಾಗಿ ವರದಿಯಾಗಿದೆ.

ಯಾವುದೇ ಅಧಿಕಾರಿಯನ್ನು ಕ್ವಾರಂಟೈನ್ ಕಳುಹಿಸಿರುವ ಕಾರ್ಯದಲ್ಲಿ ನಮ್ಮದು ಯಾವ ಕೈವಾಡವೂ ಇಲ್ಲ. ಇದು ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳ ಕೆಲಸವಾಗಿದೆ ಎಂದು ಮುಂಬೈ ಪೊಲೀಸ್ ಕಮಿಷನರ್ ಸಿಂಗ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.