ಭಾರತ ರತ್ನ ಪ್ರಶಸ್ತಿ ತನ್ನ ತಂದೆಯ ಕಾಲ್ಬೆರಳಿಗೆ ಸಮ: ಬಿಲ್ಡಪ್ ಬಾಲಯ್ಯನ ಹೊಸ ವಿವಾದ
Team Udayavani, Jul 22, 2021, 1:32 PM IST
ಹೈದರಾಬಾದ್ : ವಿಚಿತ್ರ ಮ್ಯಾನರಿಸಂನಿಂದ ಗುರುತಿಸಿಕೊಂಡಿರುವ ಟಾಲಿವುಡ್ ನಟ ನಂದಮೂರಿ ಬಾಲಕೃಷ್ಣ ಅವರು, ಭಾರತ ರತ್ನ ಪ್ರಶಸ್ತಿ ತನ್ನ ತಂದೆ ಎನ್ ಟಿ ರಾಮರಾವ್ ಅವರ ಕಾಲ್ಬೆರಳಿಗೆ ಸಮ ಎಂದು ಹೇಳುವ ಮೂಲಕ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ನಂದಮೂರಿ ಬಾಲಕೃಷ್ಣ, ಎ.ಆರ್. ರೆಹಮಾನ್ ಅವರ ಬಗ್ಗೆ ಕೇಳಲಾದ ಪ್ರಶ್ನೆಗೆ ಎ.ಆರ್. ರೆಹಮಾನ್ ಯಾರು ಎಂಬುದೇ ನನಗೆ ಗೊತ್ತಿಲ್ಲ. ಅವರು ಆಸ್ಕರ್ ಪ್ರಶಸ್ತಿ ಪಡೆದಿದ್ದಾರೆಂದು ಕೇಳಿದ್ದೇನೆ. ಆದರೆ, ನನಗಿನ್ನೂ ಅವರು ಯಾರೆಂದೇ ಗೊತ್ತಾಗಿಲ್ಲ. ರೆಹಮಾನ್ ಎಲ್ಲೋ ಹತ್ತು ವರ್ಷಕ್ಕೊಂದು ಹಿಟ್ ಗೀತೆಯನ್ನು ಕೊಡುತ್ತಾರೆ ಅಷ್ಟೇ ಎಂದು ಉಡಾಪೆ ಉತ್ತರ ನೀಡಿದ್ದಾರೆ.
ಇದಿಷ್ಟೇ ಅಲ್ಲದೆ, ಭಾರತದ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನ ಪ್ರಶಸ್ತಿಯ ಬಗ್ಗೆಯೂ ಲೇವಡಿ ಮಾಡುವ ಮೂಲಕ ನಂದಮೂರಿ ಬಾಲಕೃಷ್ಣ ವಿವಾದಕ್ಕೀಡಾಗಿದ್ದಾರೆ. ಭಾರತ ರತ್ನ ಪ್ರಶಸ್ತಿ ನನ್ನ ತಂದೆ ಎನ್ಟಿಆರ್ ಅವರ ಕಾಲಿನ ಬೆರಳಿನ ಉಗುರಿಗೆ ಸಮಾನ. ಯಾವ ಪ್ರಶಸ್ತಿಗಳೂ ನಮ್ಮ ಕುಟುಂಬ ಟಾಲಿವುಡ್ ಚಿತ್ರರಂಗಕ್ಕೆ ನೀಡಿರುವ ಕೊಡುಗೆಯನ್ನು ಮೀರಿಸಲು ಸಾಧ್ಯವಿಲ್ಲ. ನಮಗ್ಯಾರಿಗೂ ಪ್ರಶಸ್ತಿಗಳು ಬಂದಿಲ್ಲವೆಂದರೆ ಆ ಪ್ರಶಸ್ತಿಗಳೇ ಬೇಸರ ಮಾಡಿಕೊಳ್ಳಬೇಕೇ ಹೊರತು ನಾವಲ್ಲ ಎಂದು ಹೇಳಿದ್ದಾರೆ.
ಬಾಲಕೃಷ್ಣ ಹೇಳಿಕೆಯಿಂದ ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್ ಗೆ ಗುರಿಯಾಗುತ್ತಿದ್ದಾರೆ, ಎಆರ್ ರೆಹಮಾನ್ ಅಭಿಮಾನಿಗಳು ಬಾಲಯ್ಯ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್