ಖ್ಯಾತ ನಿರ್ಮಾಪಕ ಯಶ್‌‌ ಚೋಪ್ರಾ ಪತ್ನಿ ಪಮೇಲಾ ಚೋಪ್ರಾ ನಿಧನ


Team Udayavani, Apr 20, 2023, 12:56 PM IST

ಖ್ಯಾತ ನಿರ್ಮಾಪಕ ಯಶ್‌‌ ಚೋಪ್ರಾ ಪತ್ನಿ ಪಮೇಲಾ ಚೋಪ್ರಾ ನಿಧನ

ಮುಂಬಯಿ: ಬಾಲಿವುಡ್‌ ನ ಖ್ಯಾತ ನಿರ್ಮಾಪಕ ಯಶ್‌ ಚೋಪ್ರಾ (74) ಅವರ ಪತ್ನಿ ಪಮೇಲಾ ಚೋಪ್ರಾ ಗುರುವಾರ (ಏ.20 ರಂದು) ಮುಂಜಾನೆ ನಿಧನರಾಗಿದ್ದಾರೆ.

ಹಿನ್ನೆಲೆ ಗಾಯಕಿಯಾಗಿಯೂ, ನಿರ್ಮಾಪಕಿಯಾಗಿಯೂ ಗುರುತಿಸಿಕೊಂಡಿದ್ದ ಅವರು ಕಳೆದ 15 ದಿನಗಳಿಂದ ಅನಾರೋಗ್ಯದಿಂದ ಮುಂಬಯಿಯ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ವೆಂಟಿಲೇಟೆರ್‌ ನಲ್ಲಿದ್ದ ಅವರು ಗುರುವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದ ಸುದ್ದಿಯನ್ನು ಯಶ್‌ ರಾಜ್‌ ಫಿಲ್ಮ್ಸ್‌ ಅಧಿಕೃತವಾಗಿ ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದೆ.

ಇತ್ತೀಚೆಗೆ ಪಮೇಲಾ ಚೋಪ್ರಾ ಅವರು ಯಶ್‌ ರಾಜ್‌ ಫಿಲ್ಮ್ಸ್‌ ನ ಡಾಕ್ಯುಮೆಂಟರಿ ʼದಿ ರೊಮ್ಯಾಂಟಿಕ್ಸ್ʼ ನಲ್ಲಿ ಕಾಣಿಸಿಕೊಂಡಿದ್ದರು. ಇದರಲ್ಲಿ ಅವರು ತನ್ನ ಪತಿ ಯಶ್‌ ರಾಜ್‌ ಅವರ ಸಿನಿಮಾ ಜರ್ನಿ ಬಗ್ಗೆ ಮಾತಾನಡಿದ್ದರು.‌

ಇದನ್ನೂ ಓದಿ: IPL 2023 ಆರ್ ಸಿಬಿ ಗೆ ಜೋಶ್ ತಂದ ಹೇಜಲ್ ವುಡ್: ಪಂಜಾಬ್ ವಿರುದ್ಧ ಆಡುವ ಸಾಧ್ಯತೆ

1970 ರಲ್ಲಿ ಯಶ್‌ ಚೋಪ್ರಾರನ್ನು ವಿವಾಹವಾದ ಅವರಿಗೆ ಆದಿತ್ಯ ಮತ್ತು ಉದಯ್ ಚೋಪ್ರಾ ಎಂಬ ಇಬ್ಬರು ಗಂಡು ಮಕ್ಕಳಿದ್ದಾರೆ. ಆದಿತ್ಯ ಚಲನಚಿತ್ರ ನಿರ್ಮಾಪಕ ಮತ್ತು ನಿರ್ದೇಶಕ.ಆದಿತ್ಯ ರಾಣಿ ಮುಖರ್ಜಿ ಅವರನ್ನು ವಿವಾಹವಾಗಿದ್ದಾರೆ. ಉದಯ್ ಒಬ್ಬ ನಟ ಮತ್ತು ಚಲನಚಿತ್ರ ನಿರ್ಮಾಪಕರಾಗಿದ್ದಾರೆ.

ಹಿನ್ನೆಲೆ ಗಾಯಕಿಯೂ ಆಗಿದ್ದ ಅವರು, ಹಲವಾರು ಚಲನಚಿತ್ರ ಗೀತೆಗಳನ್ನು ಹಾಡಿದ್ದಾರೆ. ತನ್ನ ಗಂಡನ ಸಿನಿಮಾವಾದ ʼಕಭಿ ಕಭಿʼ (1976), ʼಮುಜ್ಸೆ ದೋಸ್ತಿ ಕರೋಗೆʼ (2002) ಸಿನಿಮಾದ ಹಾಡುಗಳನ್ನು ಹಾಡಿದ್ದಾರೆ. ಇದಲ್ಲದೆ ಅವರು 1993 ರಲ್ಲಿ ಬಂದ ʼಐನಾʼ ಸಿನಿಮಾವನ್ನು ನಿರ್ಮಾಣ ಮಾಡಿದ್ದರು.

ಪಮೇಲಾ ಅವರು ತಮ್ಮ ಪತಿ ಯಶ್ ಚೋಪ್ರಾ, ಅವರ ಪುತ್ರ ಆದಿತ್ಯ ಚೋಪ್ರಾ ಮತ್ತು ವೃತ್ತಿಪರ ಲೇಖಕಿ ತನುಜಾ ಚಂದ್ರ ಅವರೊಂದಿಗೆ ಸೇರಿ 1997 ರ ತನ್ನ ಪತಿಯ ಚಲನಚಿತ್ರ ʼದಿಲ್ ತೋ ಪಾಗಲ್ ಹೈʼ ಚಿತ್ರದ ಸ್ಕ್ರಿಪ್ಟ್ ಬರೆದಿದ್ದರು. ʼದಿಲ್ ತೋ ಪಾಗಲ್ ಹೈʼ ಚಿತ್ರದ ʼಏಕ್ ದುಜೆ ಕೆ ವಾಸ್ತೆʼ ಹಾಡಿನಲ್ಲಿ ತನ್ನ ಪತಿಯೊಂದಿಗೆ ಕಾಣಿಸಿಕೊಂಡಿದ್ದರು.

ಅವರ ಪತಿ ಯಶ್‌ ಚೋಪ್ರಾ 2012 ರಲ್ಲಿ ನಿಧನರಾಗಿದ್ದಾರೆ.

ನಿರ್ಮಾಪಕಿಯ ನಿಧನಕ್ಕೆ ಅನುಷ್ಕಾ ಶರ್ಮಾ, ಅಜಯ್ ದೇವಗನ್‌ ಸೇರಿದಂತೆ ಬಿಟೌನ್‌ ಗಣ್ಯರು ಕಂಬನಿ ಮಿಡಿದಿದ್ದಾರೆ.

 

View this post on Instagram

 

A post shared by Yash Raj Films (@yrf)

 

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.