ಜೀವನ ಪರ್ಯಂತ ಪಶ್ಚಾತ್ತಾಪ ಪಡುವೆ: ಅಪಘಾತದಲ್ಲಿ ಸ್ನೇಹಿತೆ ಸಾವಿಗೆ ನಟಿ ಯಶಿಕಾ ಕಣ‍್ಣೀರು


Team Udayavani, Aug 3, 2021, 7:14 PM IST

dtrrtre

ಚೆನ್ನೈ : ಜುಲೈ 25 ರಂದು ಮಹಾಬಲಿಪುರಂ ಬಳಿ ನಡೆದ ಡೆಡ್ಲಿ ಕಾರು ಅಪಘಾತದಲ್ಲಿ ಅದೃಷ್ಟವಶಾತ್ ಬದುಕುಳಿದ ನಟಿ ಯಶಿಕಾ ಆನಂದ್ ಅವರು ಕೊಂಚ ಗುಣಮುಖರಾಗಿದ್ದಾರೆ. ಇದುವರೆಗೂ ಐಸಿಯುನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದ ಅವರು ಇದೀಗ ಚೇತರಿಸಿಕೊಂಡಿದ್ದು, ಅಪಘಾತ ನಡೆದ ದುರಂತದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

ಬದುಕಿರೋದಕ್ಕೆ ಜೀವನಪರ್ಯಂತ ಪಶ್ಚಾತ್ತಾಪದಲ್ಲಿ ಇರುವಂತಾಯ್ತು ಎಂದು ಬೇಸರ ವ್ಯಕ್ತಪಡಿಸಿರುವ ಯಶಿಕಾ, “ನನಗೆ ಈಗ ಏನಾಗುತ್ತಿದೆ ಎಂದು ಈಗ ಹೇಳಲಾಗುತ್ತಿಲ್ಲ. ನಾನು ಬದುಕಿರುವುದಕ್ಕೆ ಜೀವನಪರ್ಯಂತ ಪಶ್ಚಾತ್ತಾಪ ಪಡುವೆ. ನನ್ನನ್ನು ಅಪಘಾತದಿಂದ ಬದುಕಿಸಿದೆ ಎಂದು ದೇವರಿಗೆ ಧನ್ಯವಾದ ಹೇಳಲಾ ಅಥವಾ ನನ್ನ ಗೆಳತಿಯನ್ನು ಕರೆದುಕೊಂಡು ಹೋದೆ ಅಂತ ದ್ವೇಷಿಸಲಾ? ಒಂದೂ ಅರ್ಥವಾಗುತ್ತಿಲ್ಲ. ಅಪಘಾತದಲ್ಲಿ ಸಾವನ್ನಪ್ಪಿದ ನನ್ನ ಗೆಳತಿ ಪಾವನಿಯನ್ನು ತುಂಬ ಮಿಸ್ ಮಾಡಿಕೊಳ್ತೀನಿ.  ದಯವಿಟ್ಟು ನನ್ನನ್ನು ಕ್ಷಮಿಸು. ನಿನ್ನ ಕುಟುಂಬವನ್ನು ನಾನು ತುಂಬ ಸಂಕಷ್ಟಕ್ಕೆ ನೂಕಿದೆ.”

‘’ಪ್ರತಿಕ್ಷಣ ನಾನು ನಿನ್ನನ್ನು ಮಿಸ್ ಮಾಡಿಕೊಳ್ಳುವೆ. ಬದುಕಿರುವುದಕ್ಕೆ ಕೊನೆಯ ತನಕ ಪಶ್ಚಾತ್ತಾಪದಲ್ಲಿ ಇರುವೆ. ನಿನ್ನ ಆತ್ನಕ್ಕೆ ಶಾಂತಿ ಸಿಗಲಿ, ಆದಷ್ಟು ಬೇಗ ನನ್ನ ಹತ್ತಿರ ಬಾ ಎಂದು ಪ್ರಾರ್ಥಿಸುವೆ. ನಿನ್ನ ಕುಟುಂಬ ಕೂಡ ನನ್ನನ್ನು ಕ್ಷಮಿಸಿವೆ. ನಿನ್ನ ನೆನಪುಗಳನ್ನು ಸದಾ ಸಂಭ್ರಮಿಸುವೆ”.

“ಅದೃಷ್ಟವಶಾತ್ ನನ್ನ ಮುಖಕ್ಕೆ ಏನೂ ಆಗಿಲ್ಲ. ಇದು ನನ್ನ ಮರುಜನ್ಮ. ಮಾನಸಿಕವಾಗಿ, ದೈಹಿಕವಾಗಿ ನನಗೆ ಗಾಯಗಳಾಗಿವೆ. ದೇವರು ನನಗೆ ಶಿಕ್ಷೆ ನೀಡಿದ್ದಾನೆ. ನಾನು ಏನು ಕಳೆದುಕೊಂಡಿದ್ದೀನೋ ಅದರ ಮುಂದೆ ಇದು ಏನೂ ಅಲ್ಲ.”

‘’ಕಾನೂನು ಎಲ್ಲರಿಗೂ ಒಂದೇ. ನಾವು ಕುಡಿದು ಗಾಡಿ ಓಡಿಸುತ್ತಿರಲಿಲ್ಲ ಎಂದು ಪೊಲೀಸರು ಅಧಿಕೃತವಾಗಿ ಹೇಳಿದ್ದಾರೆ. ಹೀಗಿದ್ದಾಗ್ಯೂ ಕೆಲವರು ನಮ್ಮ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಅನೇಕರು ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಇದು ತುಂಬ ಸೂಕ್ಷ್ಮವಾದ ವಿಷಯ. ನನ್ನ ಬಲಗಾಲು ಫ್ರ್ಯಾಕ್ಚರ್ ಆಗಿದೆ. ಸರ್ಜರಿ ನಂತರ ನಾನು ರೆಸ್ಟ್ ಮಾಡುತ್ತಿದ್ದೇನೆ. ಇನ್ನು 5 ತಿಂಗಳುಗಳ ಕಾಲ ನನಗೆ ನಡೆಯಲು, ನಿಂತುಕೊಳ್ಳಲು ಆಗಲ್ಲ. ಪೂರ್ತಿ ದಿನ ನಾನು ಹಾಸಿಗೆ ಮೇಲೆ ಇರುವೆ. ಅದೇ ಹಾಸಿಗೆ ಮೇಲೆ ಮೂತ್ರ-ಮಲ ವಿಸರ್ಜನೆ ಮಾಡಿಕೊಳ್ಳಬೇಕು. ನನಗೆ ಬಲ ಹಾಗೂ ಎಡಕ್ಕೂ ತಿರುಗಲು ಆಗಲ್ಲ” ಎಂದು ಯಶಿಕಾ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.