ಜೀತ ಮಾಡಲು ಸಿದ್ಧರಾದ ಡೈನಾಮಿಕ್‌ ಹೀರೋ ದೇವರಾಜ್‌


Team Udayavani, Oct 13, 2021, 8:56 AM IST

gkjhgfdsa

ನಟ ಡೈನಾಮಿಕ್‌ ಹೀರೋ ದೇವರಾಜ್‌ ಅಭಿನಯದ “ಹುಲಿಯಾ’, “ಕಂಬಾಲಹಳ್ಳಿ’ ಚಿತ್ರಗಳ ಬಗ್ಗೆ ಅನೇಕರಿಗೆ ಗೊತ್ತಿರಬಹುದು. 90ರ ದಶಕದಲ್ಲಿ ತೆರೆಗೆ ಬಂದಿದ್ದ ಸಾಮಾಜಿಕ ಅಸಮಾನತೆಯ ಕಥಾಹಂದರ ಹೊಂದಿದ್ದ ಈ ಚಿತ್ರಗಳು ಆಗಿನ ಕಾಲಕ್ಕೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದವು. ಇದೀಗ ಅಂಥದ್ದೇ ಮತ್ತೂಂದು ಚಿತ್ರದಲ್ಲಿ ಪ್ರೇಕ್ಷಕರ ಮುಂದೆ ಬರೋದಕ್ಕೆ ದೇವರಾಜ್‌ ತಯಾರಾಗುತ್ತಿದ್ದಾರೆ.

ಹೌದು, ಸಾಹಿತಿ ಕುಂ. ವೀರಭದ್ರಪ್ಪ ಅವರ “ಉಡ’ ಎನ್ನುವ ಕಥೆ ಈಗ “ಮಾನ’ ಎನ್ನುವ ಹೆಸರಿನಲ್ಲಿ ಸಿನಿಮಾವಾಗಿ ತೆರೆಗೆ ಬರುತ್ತಿದೆ. ಈ ಚಿತ್ರದಲ್ಲಿ ನಟ ದೇವರಾಜ್‌ ಜೀತ ಮಾಡುವ ಕೂಲಿ ಆಳು ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಸುಮಾರು ಮೂರುವರೆ ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಮತ್ತು ನಿರ್ಮಾಪಕನಾಗಿ ಗುರುತಿಸಿಕೊಂಡಿರುವ ಡೇವಿಡ್‌ ಸೆಬಾಸ್ಟಿಯನ್‌ “ಮಾನ’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಈ ಚಿತ್ರದ ಪ್ರೀ-ಪ್ರೊಡಕ್ಷನ್‌ ಕೆಲಸಗಳು ಪೂರ್ಣಗೊಂಡಿದ್ದು, ಇದೇ ದಸರಾ ಹಬ್ಬದ ಸಂದರ್ಭದಲ್ಲಿ “ಮಾನ’ ಚಿತ್ರದ ಮುಹೂರ್ತ ಸರಳವಾಗಿ ನೆರವೇರಿದೆ. ಮುಹೂರ್ತದ ಬಳಿಕ ಮಾತನಾಡಿದ ನಟ ದೇವರಾಜ್‌, “ಇದೊಂದು ಸಾಮಾಜಿಕ ಕಥಾಹಂದರ ಸಿನಿಮಾ. ಕುಂ. ವೀರಭದ್ರಪ್ಪ ನನ್ನ ಮೆಚ್ಚಿನ ಲೇಖಕರಲ್ಲೊಬ್ಬರು. ಅವರ ಅನೇಕ ಕಥೆಗಳು ನನಗೆ ಇಷ್ಟ.

ಈ ಹಿಂದೆ ಕೂಡ ಅವರ ಕಥೆಯನ್ನು ಇಟ್ಟುಕೊಂಡು “ಕೆಂಡದಮಳೆ’ ಸಿನಿಮಾ ಮಾಡಿ¨ªೆ. ಕಥೆ ಕೇಳಿದ ಕೂಡಲೇ ಇಷ್ಟವಾಯ್ತು. ಹಾಗಾಗಿ ಈ ಪಾತ್ರ ಒಪ್ಪಿಕೊಂಡೆ. ಇದರಲ್ಲಿ ನನ್ನದು ಜೀತ ಮಾಡುವ ಕೂಲಿಯ ಪಾತ್ರ. ಮೇಲ್ನೋಟಕ್ಕೆ “ಹುಲಿಯಾ’ ಥರದ ಪಾತ್ರದಂತೆ ಕಂಡರೂ, ಆ ಸಿನಿಮಾಕ್ಕೂ ಇದಕ್ಕೂ ತುಂಬ ವ್ಯತ್ಯಾಸ, ವಿಭಿನ್ನತೆ ಇದೆ. “ಹುಲಿಯಾ’ ಉತ್ತರ ಕರ್ನಾಟಕದಲ್ಲಿ ನಡೆಯುವಂಥ ಕಥೆ ಇದು ದಕ್ಷಿಣ ಕರ್ನಾಟಕದಲ್ಲಿ ನಡೆಯುವಂಥ ಕಥೆ. ನನ್ನ ಪಾತ್ರದ ವೇಷಭೂಷಣ, ಭಾಷೆ ಎಲ್ಲವೂ ಹಳೇ ಮೈಸೂರು ಶೈಲಿಯಲ್ಲಿರುತ್ತದೆ. ಸಿನಿಮಾದ ಸಬ್ಜೆಕ್ಟ್ ತುಂಬ ಹ್ಯೂಮರಸ್‌ ಆಗಿದೆ ಹಾಗೆಯೇ ಸಿನಿಮಾ ಕೂಡ ಮೂಡಿಬರುತ್ತದೆ ಎಂಬ ವಿಶ್ವಾಸವಿದೆ’ ಎಂದು “ಮಾನ’ ಚಿತ್ರದ ಕಥೆ ಮತ್ತು ಪಾತ್ರ ಪರಿಚಯ ಮಾಡಿಕೊಟ್ಟರು.

ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಡೇವಿಡ್‌, “ಇದೊಂದು ನೈಜ ಘಟನೆ ಆಧರಿತ 70ರ ದಶಕದ ಕಥೆ. ಕುಂವಿ ಅವರ ಕಥೆಯನ್ನು ಅವರೊಂದಿಗೆ ಚರ್ಚಿಸಿ ಸಿನಿಮಾ ರೂಪದಲ್ಲಿ ತೆರೆಮೇಲೆ ತರುತ್ತಿದ್ದೇವೆ. ಜಮೀನಾªರರು, ಕೂಲಿ, ಜೀತ, ಸಾಮಾಜಿಕ ಅಸಮಾನತೆಯ ವಿರುದ್ದದ ಹೋರಾಟದ ಸುತ್ತ ಇಡೀ ಸಿನಿಮಾ ನಡೆಯುತ್ತದೆ.

ಹಳೇ ಮೈಸೂರು, ಚನ್ನಪಟ್ಟಣ ಹಿನ್ನೆಲೆಯಾಗಿಟ್ಟುಕೊಂಡು ಸಿನಿಮಾದ ಕಥೆ ಸಾಗುತ್ತದೆ. ದೇವರಾಜ್‌, ಉಮಾಶ್ರೀ ಸೇರಿದಂತೆ ಅನೇಕ ಕಲಾವಿದರು ಈ ಸಿನಿಮಾದ ಮುಖ್ಯಪಾತ್ರಗಳಲ್ಲಿ ಅಭಿನಯಿಸುತ್ತಿದ್ದು, ಇದೇ ತಿಂಗಳಿನಲ್ಲಿ ಚಿತ್ರೀಕರಣ ಶುರುವಾಗಲಿದೆ’ ಎಂದು ಮಾಹಿತಿ ನೀಡಿದರು. ಕಾಂತಲಕ್ಷ್ಮೀ ರಮೇಶ ಬಾಬು “ಮಾನ’ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸುತ್ತಿದ್ದಾರೆ. ಸದ್ಯ ಮುಹೂರ್ತ ನಡೆಸಿ ಚಿತ್ರೀಕರಣ ಆರಂಭಿಸಿರುವ ಚಿತ್ರತಂಡ, ಮುಂದಿನ ವರ್ಷದ ಮಧ್ಯ ಭಾಗದಲ್ಲಿ “ಮಾನ’ವನ್ನು ತೆರೆಗೆ ತರುವ ಯೋಚನೆ ಹಾಕಿಕೊಂಡಿದೆ.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.