ಜೀತ ಮಾಡಲು ಸಿದ್ಧರಾದ ಡೈನಾಮಿಕ್‌ ಹೀರೋ ದೇವರಾಜ್‌


Team Udayavani, Oct 13, 2021, 8:56 AM IST

gkjhgfdsa

ನಟ ಡೈನಾಮಿಕ್‌ ಹೀರೋ ದೇವರಾಜ್‌ ಅಭಿನಯದ “ಹುಲಿಯಾ’, “ಕಂಬಾಲಹಳ್ಳಿ’ ಚಿತ್ರಗಳ ಬಗ್ಗೆ ಅನೇಕರಿಗೆ ಗೊತ್ತಿರಬಹುದು. 90ರ ದಶಕದಲ್ಲಿ ತೆರೆಗೆ ಬಂದಿದ್ದ ಸಾಮಾಜಿಕ ಅಸಮಾನತೆಯ ಕಥಾಹಂದರ ಹೊಂದಿದ್ದ ಈ ಚಿತ್ರಗಳು ಆಗಿನ ಕಾಲಕ್ಕೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದವು. ಇದೀಗ ಅಂಥದ್ದೇ ಮತ್ತೂಂದು ಚಿತ್ರದಲ್ಲಿ ಪ್ರೇಕ್ಷಕರ ಮುಂದೆ ಬರೋದಕ್ಕೆ ದೇವರಾಜ್‌ ತಯಾರಾಗುತ್ತಿದ್ದಾರೆ.

ಹೌದು, ಸಾಹಿತಿ ಕುಂ. ವೀರಭದ್ರಪ್ಪ ಅವರ “ಉಡ’ ಎನ್ನುವ ಕಥೆ ಈಗ “ಮಾನ’ ಎನ್ನುವ ಹೆಸರಿನಲ್ಲಿ ಸಿನಿಮಾವಾಗಿ ತೆರೆಗೆ ಬರುತ್ತಿದೆ. ಈ ಚಿತ್ರದಲ್ಲಿ ನಟ ದೇವರಾಜ್‌ ಜೀತ ಮಾಡುವ ಕೂಲಿ ಆಳು ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಸುಮಾರು ಮೂರುವರೆ ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಮತ್ತು ನಿರ್ಮಾಪಕನಾಗಿ ಗುರುತಿಸಿಕೊಂಡಿರುವ ಡೇವಿಡ್‌ ಸೆಬಾಸ್ಟಿಯನ್‌ “ಮಾನ’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಈ ಚಿತ್ರದ ಪ್ರೀ-ಪ್ರೊಡಕ್ಷನ್‌ ಕೆಲಸಗಳು ಪೂರ್ಣಗೊಂಡಿದ್ದು, ಇದೇ ದಸರಾ ಹಬ್ಬದ ಸಂದರ್ಭದಲ್ಲಿ “ಮಾನ’ ಚಿತ್ರದ ಮುಹೂರ್ತ ಸರಳವಾಗಿ ನೆರವೇರಿದೆ. ಮುಹೂರ್ತದ ಬಳಿಕ ಮಾತನಾಡಿದ ನಟ ದೇವರಾಜ್‌, “ಇದೊಂದು ಸಾಮಾಜಿಕ ಕಥಾಹಂದರ ಸಿನಿಮಾ. ಕುಂ. ವೀರಭದ್ರಪ್ಪ ನನ್ನ ಮೆಚ್ಚಿನ ಲೇಖಕರಲ್ಲೊಬ್ಬರು. ಅವರ ಅನೇಕ ಕಥೆಗಳು ನನಗೆ ಇಷ್ಟ.

ಈ ಹಿಂದೆ ಕೂಡ ಅವರ ಕಥೆಯನ್ನು ಇಟ್ಟುಕೊಂಡು “ಕೆಂಡದಮಳೆ’ ಸಿನಿಮಾ ಮಾಡಿ¨ªೆ. ಕಥೆ ಕೇಳಿದ ಕೂಡಲೇ ಇಷ್ಟವಾಯ್ತು. ಹಾಗಾಗಿ ಈ ಪಾತ್ರ ಒಪ್ಪಿಕೊಂಡೆ. ಇದರಲ್ಲಿ ನನ್ನದು ಜೀತ ಮಾಡುವ ಕೂಲಿಯ ಪಾತ್ರ. ಮೇಲ್ನೋಟಕ್ಕೆ “ಹುಲಿಯಾ’ ಥರದ ಪಾತ್ರದಂತೆ ಕಂಡರೂ, ಆ ಸಿನಿಮಾಕ್ಕೂ ಇದಕ್ಕೂ ತುಂಬ ವ್ಯತ್ಯಾಸ, ವಿಭಿನ್ನತೆ ಇದೆ. “ಹುಲಿಯಾ’ ಉತ್ತರ ಕರ್ನಾಟಕದಲ್ಲಿ ನಡೆಯುವಂಥ ಕಥೆ ಇದು ದಕ್ಷಿಣ ಕರ್ನಾಟಕದಲ್ಲಿ ನಡೆಯುವಂಥ ಕಥೆ. ನನ್ನ ಪಾತ್ರದ ವೇಷಭೂಷಣ, ಭಾಷೆ ಎಲ್ಲವೂ ಹಳೇ ಮೈಸೂರು ಶೈಲಿಯಲ್ಲಿರುತ್ತದೆ. ಸಿನಿಮಾದ ಸಬ್ಜೆಕ್ಟ್ ತುಂಬ ಹ್ಯೂಮರಸ್‌ ಆಗಿದೆ ಹಾಗೆಯೇ ಸಿನಿಮಾ ಕೂಡ ಮೂಡಿಬರುತ್ತದೆ ಎಂಬ ವಿಶ್ವಾಸವಿದೆ’ ಎಂದು “ಮಾನ’ ಚಿತ್ರದ ಕಥೆ ಮತ್ತು ಪಾತ್ರ ಪರಿಚಯ ಮಾಡಿಕೊಟ್ಟರು.

ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಡೇವಿಡ್‌, “ಇದೊಂದು ನೈಜ ಘಟನೆ ಆಧರಿತ 70ರ ದಶಕದ ಕಥೆ. ಕುಂವಿ ಅವರ ಕಥೆಯನ್ನು ಅವರೊಂದಿಗೆ ಚರ್ಚಿಸಿ ಸಿನಿಮಾ ರೂಪದಲ್ಲಿ ತೆರೆಮೇಲೆ ತರುತ್ತಿದ್ದೇವೆ. ಜಮೀನಾªರರು, ಕೂಲಿ, ಜೀತ, ಸಾಮಾಜಿಕ ಅಸಮಾನತೆಯ ವಿರುದ್ದದ ಹೋರಾಟದ ಸುತ್ತ ಇಡೀ ಸಿನಿಮಾ ನಡೆಯುತ್ತದೆ.

ಹಳೇ ಮೈಸೂರು, ಚನ್ನಪಟ್ಟಣ ಹಿನ್ನೆಲೆಯಾಗಿಟ್ಟುಕೊಂಡು ಸಿನಿಮಾದ ಕಥೆ ಸಾಗುತ್ತದೆ. ದೇವರಾಜ್‌, ಉಮಾಶ್ರೀ ಸೇರಿದಂತೆ ಅನೇಕ ಕಲಾವಿದರು ಈ ಸಿನಿಮಾದ ಮುಖ್ಯಪಾತ್ರಗಳಲ್ಲಿ ಅಭಿನಯಿಸುತ್ತಿದ್ದು, ಇದೇ ತಿಂಗಳಿನಲ್ಲಿ ಚಿತ್ರೀಕರಣ ಶುರುವಾಗಲಿದೆ’ ಎಂದು ಮಾಹಿತಿ ನೀಡಿದರು. ಕಾಂತಲಕ್ಷ್ಮೀ ರಮೇಶ ಬಾಬು “ಮಾನ’ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸುತ್ತಿದ್ದಾರೆ. ಸದ್ಯ ಮುಹೂರ್ತ ನಡೆಸಿ ಚಿತ್ರೀಕರಣ ಆರಂಭಿಸಿರುವ ಚಿತ್ರತಂಡ, ಮುಂದಿನ ವರ್ಷದ ಮಧ್ಯ ಭಾಗದಲ್ಲಿ “ಮಾನ’ವನ್ನು ತೆರೆಗೆ ತರುವ ಯೋಚನೆ ಹಾಕಿಕೊಂಡಿದೆ.

ಟಾಪ್ ನ್ಯೂಸ್

Balasore Tragedy; ಭೀಕರ ರೈಲ್ವೆ ದುರಂತದಲ್ಲಿ ಶವಾಗಾರವಾಗಿದ್ದ ಶಾಲೆ ನೆಲಸಮ

Balasore Tragedy; ಭೀಕರ ರೈಲ್ವೆ ದುರಂತದಲ್ಲಿ ಶವಾಗಾರವಾಗಿದ್ದ ಶಾಲೆ ನೆಲಸಮ

BIPARJOY ಚಂಡಮಾರುತ 24ಗಂಟೆಯಲ್ಲಿ ತೀವ್ರ ಸ್ವರೂಪ-ಕರಾವಳಿ ಭಾಗದಲ್ಲಿ ತೀವ್ರ ಮಳೆ ಸಾಧ್ಯತೆ

BIPARJOY ಚಂಡಮಾರುತ 24ಗಂಟೆಯಲ್ಲಿ ತೀವ್ರ ಸ್ವರೂಪ-ಕರಾವಳಿ ಭಾಗದಲ್ಲಿ ತೀವ್ರ ಮಳೆ ಸಾಧ್ಯತೆ

Human Milk Bank: ಎದೆ ಹಾಲು ಕೊರತೆ: 4 ಜಿಲ್ಲೆಯಲ್ಲಿ ಅಮೃತಧಾರೆ ಕೇಂದ್ರ

Human Milk Bank: ಎದೆ ಹಾಲು ಕೊರತೆ: 4 ಜಿಲ್ಲೆಯಲ್ಲಿ “ಅಮೃತಧಾರೆ ಕೇಂದ್ರ”

Tokyo airport

Tokyo airport ರನ್ ವೇಯಲ್ಲಿ ಮುಖಾಮುಖಿಯಾದ ಎರಡು ಪ್ಯಾಸೆಂಜರ್ ವಿಮಾನಗಳು

Vijayapura; 5ನೇ ಸ್ನಾತಕೋತ್ತರ ಪರೀಕ್ಷೆ ಬರೆಯುತ್ತಿರುವ 81ರ ವೃದ್ಧ

Vijayapura; 5ನೇ ಸ್ನಾತಕೋತ್ತರ ಪರೀಕ್ಷೆ ಬರೆಯುತ್ತಿರುವ 81ರ ವೃದ್ಧ

Shardul Thakur joins a list of elite names with his third successive fifty-plus score at The Oval

WTC Final 2023: ಬ್ರಾಡ್ಮನ್-  ಬಾರ್ಡರ್‌ ದಾಖಲೆ ಸರಿಗಟ್ಟಿದ ಶಾರ್ದೂಲ್ ಠಾಕೂರ್

Sachin Pilot May Float Own Party: congress says its a rumours

Congress ತೊರೆದು ಹೊಸ ಪಕ್ಷ ಕಟ್ಟುವತ್ತ ಸಚಿನ್ ಪೈಲಟ್ ಚಿತ್ತ? ಏನಿದು ಹೊಸ ಬೆಳವಣಿಗೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada movie darbar review

Movie Review: ದರ್ಬಾರ್‌ ಒಳಗೊಂದು ನಗೆಹಬ್ಬ

Instagram ತೊರೆದ ಬಾಲಿವುಡ್‌ ನಟಿ ಕಾಜೋಲ್‌

Instagram ತೊರೆದ ಬಾಲಿವುಡ್‌ ನಟಿ ಕಾಜೋಲ್‌

Daredevil mustafa running successfully

Daredevil Mustafa ಮುಖದಲ್ಲಿ ಗೆಲುವಿನ ನಗೆ

Jackie Shroff’s wife: 58 ಲಕ್ಷ ರೂ.ವಂಚನೆ; ದೂರು ದಾಖಲಿಸಿದ ಜಾಕಿ ಶ್ರಾಫ್‌ ಪತ್ನಿ ಆಯೀಷಾ

Jackie Shroff’s wife: 58 ಲಕ್ಷ ರೂ.ವಂಚನೆ; ದೂರು ದಾಖಲಿಸಿದ ಜಾಕಿ ಶ್ರಾಫ್‌ ಪತ್ನಿ ಆಯೀಷಾ

jersey number 10 movie running successfully

ನಾಲ್ಕನೇ ವಾರಕ್ಕೆ ‘ಜರ್ಸಿ ನಂಬರ್‌ 10’

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

Balasore Tragedy; ಭೀಕರ ರೈಲ್ವೆ ದುರಂತದಲ್ಲಿ ಶವಾಗಾರವಾಗಿದ್ದ ಶಾಲೆ ನೆಲಸಮ

Balasore Tragedy; ಭೀಕರ ರೈಲ್ವೆ ದುರಂತದಲ್ಲಿ ಶವಾಗಾರವಾಗಿದ್ದ ಶಾಲೆ ನೆಲಸಮ

Kannada movie darbar review

Movie Review: ದರ್ಬಾರ್‌ ಒಳಗೊಂದು ನಗೆಹಬ್ಬ

BIPARJOY ಚಂಡಮಾರುತ 24ಗಂಟೆಯಲ್ಲಿ ತೀವ್ರ ಸ್ವರೂಪ-ಕರಾವಳಿ ಭಾಗದಲ್ಲಿ ತೀವ್ರ ಮಳೆ ಸಾಧ್ಯತೆ

BIPARJOY ಚಂಡಮಾರುತ 24ಗಂಟೆಯಲ್ಲಿ ತೀವ್ರ ಸ್ವರೂಪ-ಕರಾವಳಿ ಭಾಗದಲ್ಲಿ ತೀವ್ರ ಮಳೆ ಸಾಧ್ಯತೆ

Human Milk Bank: ಎದೆ ಹಾಲು ಕೊರತೆ: 4 ಜಿಲ್ಲೆಯಲ್ಲಿ ಅಮೃತಧಾರೆ ಕೇಂದ್ರ

Human Milk Bank: ಎದೆ ಹಾಲು ಕೊರತೆ: 4 ಜಿಲ್ಲೆಯಲ್ಲಿ “ಅಮೃತಧಾರೆ ಕೇಂದ್ರ”

Tokyo airport

Tokyo airport ರನ್ ವೇಯಲ್ಲಿ ಮುಖಾಮುಖಿಯಾದ ಎರಡು ಪ್ಯಾಸೆಂಜರ್ ವಿಮಾನಗಳು