ಇಫಿ ಚಿತ್ರೋತ್ಸವ: ಹತ್ತು ಸಾವಿರ ಪ್ರತಿನಿಧಿಗಳ ಭಾಗವಹಿಸುವಿಕೆ

ಅತಿಥಿಗಳನ್ನು ಕೇಳುವವರೇ ಇಲ್ಲ ! ಐಡಿ ಇಲ್ಲದೇ ಯಾರಿಗೂ ಒಳ ಪ್ರವೇಶವಿಲ್ಲ

Team Udayavani, Nov 23, 2022, 7:42 PM IST

1-sadsasd

ಪಣಜಿ: ಈ ಬಾರಿಯ ಚಿತ್ರೋತ್ಸವದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು ವಾರ್ತಾ ಮತ್ತು ಪ್ರಸಾರ ಇಲಾಖೆ ಕಾರ್ಯದರ್ಶಿ ಅಪೂರ್ವ ಚಂದ್ರ ತಿಳಿಸಿದ್ದಾರೆ.

ಇಫಿ ಚಿತ್ರೋತ್ಸವದ ಕುರಿತಾದ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, “ಒಟ್ಟು ಹತ್ತು ಸಾವಿರಕ್ಕೂ ಹೆಚ್ಚು ಮಂದಿ ನೋಂದಾಯಿಸಿ ಭಾಗವಹಿಸಿದ್ದಾರೆ. ನಮ್ಮ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ಬಂದ ಕಾರಣ ನವೆಂಬರ್ ‌21 ರ ಬಳಿಕ ನೋಂದಣಿಯನ್ನು ಸ್ಥಗಿತಗೊಳಿಸಲಾಯಿತುʼ ಎಂದು ಹೇಳಿದರು.

ಹತ್ತು ಸಾವಿರ ಮಂದಿ ಪ್ರತಿನಿಧಿಗಳ ಪೈಕಿ ಬಹುತೇಕ ಭಾರತದ ವಿವಿಧ ರಾಜ್ಯಗಳಿಂದ ಬಂದಿದ್ದಾರೆ. ಸುಮಾರು ೪೦ ಮಂದಿ ವಿದೇಶಿ ಪ್ರತಿನಿಧಿಗಳಿದ್ದು, ಅಮೆರಿಕ, ಬ್ರಿಟನ್‌, ದಕ್ಷಿಣ ಕೊರಿಯಾ ಇತ್ಯಾದಿ ದೇಶಗಳಿಂದ ಭಾಗವಹಿಸಿದ್ದಾರೆ ಎಂದು ವಿವರಿಸಿದರು.

ಈ ಬಾರಿ ಅಂತಾರಾಷ್ಟೀಯ ಸ್ಪರ್ಧೆಯ ಸಿನಿಮಾಗಳನ್ನು ನಗರದ ಮತ್ತೊಂದು ಭಾಗವಾದ ಪೂರ್ವರಿಯಂಗೆ ಏಕೆ ಹಾಕಿದ್ದೀರಿ? ಇದರಿಂದ ಸಿನಿಮಾಸಕ್ತರಿಗೆ ತೊಂದರೆಯಾಗಿದೆ ಎಂಬ ಪ್ರಶ್ನೆಗೆ, “ಈ ಬಾರಿ ಗಾಲಾ ಪ್ರೀಮಿಯರ್‌ ಪರಿಕಲ್ಪನೆಯನ್ನು ಜಾರಿಗೊಳಿಸಿದ್ದೇವೆ. ಇದಕ್ಕಾಗಿ ರೆಡ್‌ ಕಾರ್ಪೆಟ್‌ ಅಗತ್ಯವಿದೆ. ಪೂರ್ವರಿಯಂ ನಲ್ಲಿ ರೆಡ್‌ ಕಾರ್ಪೆಟ್‌ ಗೆ ಸೌಲಭ್ಯವಿಲ್ಲ. ಹಾಗಾಗಿ ನಾವು ಇಲ್ಲಿ (ಐನಾಕ್ಸ್‌) ಗಾಲಾ ಪ್ರೀಮಿಯರ್‌ ಗಳಿಗೆ ಅವಕಾಶ ಕಲ್ಪಿಸುವ ಸಲುವಾಗಿ ಆಂತಾರಾಷ್ಟ್ರೀಯ ಸ್ಪರ್ಧೆಯ ಸಿನಿಮಾಗಳನ್ನು ಸ್ಥಳಾಂತರಿಸಬೇಕಾಯಿತುʼ ಎಂದರು.

ಈ ವರ್ಷಕ್ಕೇ ಕಲಾ ಅಕಾಡೆಮಿ ದುರಸ್ತಿಗೊಳ್ಳುತ್ತದೆಂದು ನಿರೀಕ್ಷಿಸಿದ್ದೆವು. ಆದರೆ ಆಗಿಲ್ಲ. ಬಹುಶಃ ಶೀಘ್ರವೇ ಆಗಬಹುದು. ಕಲಾ ಅಕಾಡೆಮಿಯೂ ಲಭ್ಯವಾದರೆ ಈ ಸಮಸ್ಯೆ ಬಗೆಹರಿಯಬಹುದು ಎಂದರಲ್ಲದೇ, ರೆಡ್‌ ಕಾರ್ಪೆಟ್‌ ಗಾಗಿ ಆಗಾಗ್ಗೆ ಐನಾಕ್ಸ್‌ ಒಂದು ಮತ್ತು ಐನಾಕ್ಸ್‌ ಮೂರರ ನಡುವಿನ ರಸ್ತೆ ಮುಚ್ಚುವುದರ ಬಗ್ಗೆ ಗಮನಹರಿಸುವುದಾಗಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಅತಿಥಿಗಳನ್ನು ಕೇಳುವವರೇ ಇಲ್ಲ !

ಈ ಬಾರಿ ಅತಿಥಿಗಳ ನಿರ್ವಹಣೆ ಕುರಿತು ಟೀಕೆಗಳು ಕೇಳಿಬರುತ್ತಲೇ ಇವೆ. ಬುಧವಾರವೂ ಅಂಥದ್ದೇ ಪ್ರಸಂಗಗಳು ನಡೆದವು. ಮೊದಲನೆಯದಾಗಿ ಉತ್ಸವದ ಮಿಡ್‌ ಫೆಸ್ಟ್‌ ಚಿತ್ರ ಫಿಕ್ಸೇಷನ್‌ ನ ನಿರ್ಮಾಪಕ ಮ್ಯಾಕ್ಸ್‌ ಟಾಪ್ಲಿನ್‌ ಚಿತ್ರೋತ್ಸವಕ್ಕೆ ಇಂದು ಆಗಮಿಸಿದರು. ಅವರಿಗೆ ಉಳಿದುಕೊಳ್ಳಲು ವ್ಯವಸ್ಥೆ ಆಗಿತ್ತಾದರೂ ಅವರಿಗೆ ನೀಡಲಾಗುವ ಐಡಿ ಕಾರ್ಡ್ ಲಭ್ಯವಿರಲಿಲ್ಲ. ಉಳಿದುಕೊಂಡ ಹೋಟೆಲ್‌ ನಲ್ಲೂ ಕೊಟ್ಟಿರಲಿಲ್ಲ.

ಆ ಬಳಿಕ ಇಫಿ ಕೌಂಟರ್‌ ನಲ್ಲಿ ಬಂದು ಕೇಳಿದರೆ ಸೂಕ್ತ ಮಾಹಿತಿ ಸಿಗಲಿಲ್ಲ. ಐಡಿ ಕಾರ್ಡ್‌ ಇಲ್ಲದೇ ಯಾರಿಗೂ ಒಳಗೆ ಪ್ರವೇಶವಿಲ್ಲ. ಇವರು ತಮ್ಮ ವಿವರವನ್ನು ನೀಡಿದರೂ ಪ್ರಯೋಜನವಾಗಲಿಲ್ಲ. ಒಂದು ಗಂಟೆಗೆ ಒಳಗೆ ಮೀಟಿಂಗ್‌ ನಲ್ಲಿ ಭಾಗವಹಿಸಬೇಕಿತ್ತು. ಆದರೆ 12. 50 ರವರೆಗೂ ಐಡಿಗೆ ಅಲೆದಾಡಬೇಕಾಯಿತು. ಅಂತಿಮವಾಗಿ ಮಾಧ್ಯಮವೊಂದರ ಪ್ರತಿನಿಧಿಯ ಸಹಾಯದಿಂದ ಐಡಿ ಪಡೆಯಲು ಸಾಕು ಬೇಕಾಯಿತು.

ಇದೇ ಅನುಭವ ಮತ್ತೊಬ್ಬ ನಿರ್ದೇಶಕಿಗೆ ಆಗಿದೆ. ಮೈ ಲವ್‌ ಅಫೇರ್‌ ವಿಥ್‌ ಮ್ಯಾರೇಜ್‌ ಆನಿಮೇಷನ್‌ ಸಿನಿಮಾದ ನಿರ್ದೇಶಕಿ ಸಿಗ್ಮೆ ಬೌಮಾನೆಯವರ ಚಿತ್ರವೂ ಪ್ರದರ್ಶನಗೊಳ್ಳಬೇಕಿತ್ತು. ಆದರೆ ಅವರಿಗೂ ಇದೇ ಸಮಸ್ಯೆ. ಎಲ್ಲೆಲ್ಲಿ ಅಲೆದರೂ ಅವರಿಂದ ಇವರಿಗೆ ಸಮಸ್ಯೆ ವರ್ಗಾವಣೆಯಾಗುತ್ತಿತ್ತೇ ಹೊರತು ಸಮಸ್ಯೆ ಬಗೆಹರಿಯಲಿಲ್ಲ. ಅಂತಿಮವಾಗಿ ಕಾಡಿ ಬೇಡಿ ಪಡೆದುಕೊಳ್ಳುವ ಸ್ಥಿತಿ ಬಂದಿತ್ತು ಎಂದು ಮಾಧ್ಯಮಗಳಿಗೆ ವಿವರಿಸಿದ್ದಾರೆ.

ಟಾಪ್ ನ್ಯೂಸ್

ರಾಮನ ಅವತಾರ ತಾಳಿದ ರಿಷಿ; ಫ‌ಸ್ಟ್‌ ಲುಕ್‌ ಪೋಸ್ಟರ್‌ ಬಂತು

ರಾಮನ ಅವತಾರ ತಾಳಿದ ರಿಷಿ; ಫ‌ಸ್ಟ್‌ ಲುಕ್‌ ಪೋಸ್ಟರ್‌ ಬಂತು

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

navazuddin

ನಟ ನವಾಜುದ್ದೀನ್,ಮಾಜಿ ಪತ್ನಿಗೆ ಮಕ್ಕಳ ಸಲುವಾಗಿ ಹಾಜರಾಗಲು ಹೇಳಿದ ಹೈಕೋರ್ಟ್

ಬೆಂದೂರ್ ವೆಲ್; ಖಾಸಗಿ ಬಸ್ ಧಾವಂತಕ್ಕೆ ಮತ್ತೊಂದು ಬಲಿ, ನಿಲ್ಲಿಸದೆ ಪರಾರಿಯಾದ ಚಾಲಕ

ಬೆಂದೂರ್ ವೆಲ್; ಖಾಸಗಿ ಬಸ್ ಧಾವಂತಕ್ಕೆ ಮತ್ತೊಂದು ಬಲಿ, ನಿಲ್ಲಿಸದೆ ಪರಾರಿಯಾದ ಚಾಲಕ

4-mangaluru

ಮಂಗಳೂರು: 14ನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು

ಸಿನಿಮಾಕ್ಕೆ ಭಾಷೆಗಳ ಗಡಿ ಸಲ್ಲದು…: ಕನ್ನಡಕ್ಕೆ ಬಂದ ಅನುಪಮ್ ಖೇರ್

ಸಿನಿಮಾಕ್ಕೆ ಭಾಷೆಗಳ ಗಡಿ ಸಲ್ಲದು…: ಕನ್ನಡಕ್ಕೆ ಬಂದ ಅನುಪಮ್ ಖೇರ್

tdy-10

ಚನ್ನಪಟ್ಟಣಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಯಾರು?



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮೊಳಗೆ ಬೆಳೆಯುವಂಥ ಪಾತ್ರಗಳು ನನಗಿಷ್ಟ : ಗ್ರೀಷ್ಮಾ ಶ್ರೀಧರ್‌

ನಮ್ಮೊಳಗೆ ಬೆಳೆಯುವಂಥ ಪಾತ್ರಗಳು ನನಗಿಷ್ಟ : ಗ್ರೀಷ್ಮಾ ಶ್ರೀಧರ್‌

ಕಾಶ್ಮೀರ್ ಫೈಲ್ಸ್ ಅಸಭ್ಯ ಚಿತ್ರ ಎಂದು ನಡಾವ್ ಗೆ ನಾಚಿಕೆಯಾಗಬೇಕು…ಇಸ್ರೇಲ್ ರಾಯಭಾರಿ ಆಕ್ರೋಶ

ಕಾಶ್ಮೀರ್ ಫೈಲ್ಸ್ ಅಸಭ್ಯ ಚಿತ್ರ ಎಂದು ನಡಾವ್ ಗೆ ನಾಚಿಕೆಯಾಗಬೇಕು…ಇಸ್ರೇಲ್ ರಾಯಭಾರಿ ಆಕ್ರೋಶ

“ದಿ ಕಾಶ್ಮೀರ್ ಫೈಲ್ಸ್” ಇದೊಂದು ಅಸಭ್ಯ ಚಿತ್ರ: ಚಲನಚಿತ್ರೋತ್ಸವದ ತೀರ್ಪುಗಾರ ನಡಾವ್ ಲ್ಯಾಪಿಡ್ ಟೀಕೆ

“ದಿ ಕಾಶ್ಮೀರ್ ಫೈಲ್ಸ್” ಇದೊಂದು ಅಸಭ್ಯ ಚಿತ್ರ: IFFI ಚಿತ್ರೋತ್ಸವದಲ್ಲಿ ತೀರ್ಪುಗಾರ ನಡಾವ್ ಲ್ಯಾಪಿಡ್

1-sadsad

53 ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಮಾರೋಪ; ಸ್ಪ್ಯಾನಿಷ್‌ ಚಿತ್ರಕ್ಕೆ ಗೋಲ್ಡನ್‌ ಪೀಕಾಕ್‌ ಪ್ರಶಸ್ತಿ

1-daadad

ಸಿನಿಮಾ ರಂಗದಿಂದಲೇ ನಾನು ಚಿರಂಜೀವಿ: ಇಫಿಯಲ್ಲಿ ಚಿರಂಜೀವಿ ಭಾವುಕ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ರಾಮನ ಅವತಾರ ತಾಳಿದ ರಿಷಿ; ಫ‌ಸ್ಟ್‌ ಲುಕ್‌ ಪೋಸ್ಟರ್‌ ಬಂತು

ರಾಮನ ಅವತಾರ ತಾಳಿದ ರಿಷಿ; ಫ‌ಸ್ಟ್‌ ಲುಕ್‌ ಪೋಸ್ಟರ್‌ ಬಂತು

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

crime (2)

ಬಳ್ಳಾರಿ: ತವರು ಮನೆ ಸೇರಿದ್ದ ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ

navazuddin

ನಟ ನವಾಜುದ್ದೀನ್,ಮಾಜಿ ಪತ್ನಿಗೆ ಮಕ್ಕಳ ಸಲುವಾಗಿ ಹಾಜರಾಗಲು ಹೇಳಿದ ಹೈಕೋರ್ಟ್

ಬೆಂದೂರ್ ವೆಲ್; ಖಾಸಗಿ ಬಸ್ ಧಾವಂತಕ್ಕೆ ಮತ್ತೊಂದು ಬಲಿ, ನಿಲ್ಲಿಸದೆ ಪರಾರಿಯಾದ ಚಾಲಕ

ಬೆಂದೂರ್ ವೆಲ್; ಖಾಸಗಿ ಬಸ್ ಧಾವಂತಕ್ಕೆ ಮತ್ತೊಂದು ಬಲಿ, ನಿಲ್ಲಿಸದೆ ಪರಾರಿಯಾದ ಚಾಲಕ