ಗೋವಾ ಚಿತ್ರೋತ್ಸವ: ಭಾರತೀಯ ಪನೋರಮಾಕ್ಕೆ ಚಾಲನೆ; ‘ಪಿಂಕಿ ಎಲ್ಲಿ’ ಪ್ರದರ್ಶನ


Team Udayavani, Jan 19, 2021, 12:13 PM IST

ಗೋವಾ ಚಿತ್ರೋತ್ಸವ: ಭಾರತೀಯ ಪನೋರಮಾಕ್ಕೆ ಚಾಲನೆ; ‘ಪಿಂಕಿ ಎಲ್ಲಿ’ ಪ್ರದರ್ಶನ

ಪಣಜಿ: ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವ (ಇಫಿ) ದ ಪ್ರಧಾನ ಧಾರೆ ಭಾರತೀಯ ಪನೋರಮಾ ವಿಭಾಗಕ್ಕೆ ಚಾಲನೆ ಸಿಕ್ಕಿದ್ದು ಸೋಮವಾರ.

ಒಟ್ಟು 23 ಭಾರತೀಯ ಚಲನಚಿತ್ರಗಳ ಪ್ರದರ್ಶನ ಕಥಾ ವಿಭಾಗದಲ್ಲಿ ಪ್ರದರ್ಶನಗೊಂಡರೆ, 20 ಚಿತ್ರಗಳು ಕಥೇತರ ವಿಭಾಗದಲ್ಲಿ ಪ್ರದರ್ಶನಗೊಳ್ಳುತ್ತಿವೆ. ಕನ್ನಡದ ಪೃಥ್ವಿ ಕೊಣನೂರು ನಿರ್ದೇಶನದ ಪಿಂಕಿ ಎಲ್ಲಿ? ಪ್ರದರ್ಶನ ವಿಭಾಗದ ಉದ್ಘಾಟನಾ ದಿನವೇ ಐನಾಕ್ಸ್‌ 2 ರಲ್ಲಿ ಪ್ರದರ್ಶನವಾಯಿತು.

ಅಂಕಿತ್‌ ಕೊಥಾರಿಯವರ ‘ಪಂಚಿಕಾ’ ಕಥೇತರ ವಿಭಾಗದ ಉದ್ಘಾಟನಾ ಚಿತ್ರವಾದರೆ, ‘ಸಾಂದ್‌ ಕಿ ಆಂಖ್‌’ಕಥಾ ವಿಭಾಗದ ಉದ್ಘಾಟನಾ ಚಿತ್ರ. ಪನೋರಮಾ ವಿಭಾಗದ ಚಿತ್ರ ಪ್ರದರ್ಶನ ಉದ್ಘಾಟನಾ ಸಂದರ್ಭ ಮಾತನಾಡಿದ ಸಾಂದ್‌ ಕಿ ಆಂಖ್‌ ಚಿತ್ರ ನಿರ್ದೇಶಕ ತುಷಾರ್‌ ಹಿರಾನಂದನಿ, ತಮ್ಮ ಮಗಳನ್ನು ಹುರಿದುಂಬಿಸುವ ಸಲುವಾಗಿ ಇಬ್ಬರು ಅಜ್ಜಿಯರು ಸ್ಥಳೀಯ ಶೂಟಿಂಗ್‌ ತರಬೇತಿ ಗೆ ಸೇರಿ, 352 ಮೆಡಲ್‌ಗಳನ್ನು ಗಳಿಸುವ ಕಥೆ ನನ್ನ ಚಿತ್ರದ್ದು. ಇಡೀ ಚಿತ್ರ ನಿಮಗೆ ಹೊಸ ಅನುಭವವನ್ನೇ ನೀಡುತ್ತದೆ ಎಂದರು.

ಹಾಗೆಯೇ ಪಂಚಿಕಾ ಸಹ ಗುಜರಾತ್‌ನ ರಣ್‌ ನಲ್ಲಿ ನಡೆಯುವ ಇಬ್ವರು ಪುಟ್ಟ ಮಕ್ಕಳ ನಡುವಿನ ಸ್ನೇಹ ಸಂಬಂಧಗಳು ಹಾಗೂ ಅದರ ಹಿಂದಿನ ಸಮಾಜದ ನೇತ್ಯಾತ್ಮಕ ಛಾಯೆ ಕುರಿತಾದದ್ದು.

ಇದನ್ನೂ ಓದಿ:ಎಪ್ಪತ್ತರ ದಶಕ ಹಿಂದಿ ಚಿತ್ರರಂಗದ ಸುವರ್ಣ ಯುಗ: ಗೋವಾ ಚಿತ್ರೋತ್ಸವದಲ್ಲಿ ರಾಹುಲ್‌ ರವೇಲ್

ಈ ವಿಭಾಗದಲ್ಲಿ ಹಿಂದಿ, ಅಸ್ಸಾಮಿ, ಕನ್ನಡ, ಮಲಯಾಳಂ, ಮರಾಠಿ, ಬಂಗಾಳಿ, ತಮಿಳು, ತೆಲುಗು, ಸಂಸ್ಕೃತ, ಛತ್ತೀಸ್‌ಗರಿ, ಮಣಿಪುರಿ, ಒರಿಯಾ ಸೇರಿದಂತೆ ಹಲವಾರು ಭಾರತೀಯ ಭಾಷೆಯ ಚಲನಚಿತ್ರಗಳು ಪ್ರದರ್ಶಿತವಾಗುತ್ತಿವೆ.

ಬ್ರಿಡ್ಜ್‌, ಅವಿಜಾಂತ್ರಿಕ್‌, ಬ್ರಹ್ಮ ಜಾನೆ ಗೋಪೋನ್‌ ಕೊಮ್ಮೊಟಿ, ಆ ಡಾಗ್‌ ಆ್ಯಂಡ್‌ ಹಿಸ್‌ ಮ್ಯಾನ್‌, ಅಪ್‌ ಅಪ್‌ ಅಪ್‌, ಆವರ್ತನ್‌, ಸಾಂದ್‌ಕ ಆಂಖ್‌, ಪಿಂಕಿ ಎಲ್ಲಿ?, ಸೇಫ್‌, ಟ್ರಾನ್ಸ್‌, ಕೆಟ್ಟಿಯೊಳನು ಎಂತೆ ಮಲಕಾ, ತಹಿರಾ, ಇಗಿ ಕೊನ, ಜೂನ್‌, ಪ್ರವಾಸ್‌, ಕರ್ಖಾನಿಸಾಂಚಿ ವಾರಿ, ಕಲಿರಾ ಆಟಿಟ, ನಮೊ, ತಾಯೇನ್‌ ಹಾಗೂ ಘಟಂ ಚಿತ್ರಗಳಿವೆ. ಇದರೊಂದಿಗೆ ಜನಪ್ರಿಯ ಧಾರೆಯಿಂದ ಅಸುರನ್‌, ಕಪ್ಪೆಲಾ ಹಾಗೂ ಚಿತ್‌ ಚೋರ್‌ ಚಿತ್ರಗಳು ಪ್ರದರ್ಶಿತವಾಗುತ್ತಿವೆ.

ಒಳ್ಳೆಯ ಅಭಿಪ್ರಾಯ

ಸೋಮವಾರ ಪ್ರದರ್ಶನದ ಬಳಿಕ ಚಿತ್ರರಸಿಕರು ‘ಪಿಂಕಿ ಎಲ್ಲಿ’ ತಂಡಕ್ಕೆ ಅಭಿನಂದನೆ ಸಲ್ಲಿಸಿದರು. ಒಳ್ಳೆಯ ಎಳೆಯನ್ನು ಆಧರಿಸಿ ಚೆನ್ನಾಗಿ ಸಿನಿಮಾ ಮಾಡಿದ್ದೀರಿ. ನಟರೂ ಚೆನ್ನಾಗಿ ನಟಿಸಿದ್ದಾರೆ ಎಂದು ಪ್ರೇಕ್ಷಕರು ತಂಡಕ್ಕೆ ತಿಳಿಸಿದರು. ಚಿತ್ರದಲ್ಲಿ ಪ್ರಧಾನ ಪಾತ್ರದಲ್ಲಿ ನಟಿಸಿದ ಗುಂಜಾಲಮ್ಮರ ಅಭಿನಯಕ್ಕೂ ಒಳ್ಳೆಯ ಅಭಿಪ್ರಾಯ ವ್ಯಕ್ತವಾಯಿತು.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chef chidambara kannada movie

Chef Chidambara: ಅನಿರುದ್ಧ್ ಅಡುಗೆ ಶುರು

tdy-7

Bollywood: ರಿಮೇಕ್‌ ಆಗಿ ಮತ್ತೆ ತೆರೆಗೆ ಬರಲಿದೆ 70ರ ದಶಕದ ಮೂರು ಹಿಟ್‌ ಸಿನಿಮಾಗಳು

ನಮ್ಮೊಳಗೆ ಬೆಳೆಯುವಂಥ ಪಾತ್ರಗಳು ನನಗಿಷ್ಟ : ಗ್ರೀಷ್ಮಾ ಶ್ರೀಧರ್‌

ನಮ್ಮೊಳಗೆ ಬೆಳೆಯುವಂಥ ಪಾತ್ರಗಳು ನನಗಿಷ್ಟ : ಗ್ರೀಷ್ಮಾ ಶ್ರೀಧರ್‌

ಕಾಶ್ಮೀರ್ ಫೈಲ್ಸ್ ಅಸಭ್ಯ ಚಿತ್ರ ಎಂದು ನಡಾವ್ ಗೆ ನಾಚಿಕೆಯಾಗಬೇಕು…ಇಸ್ರೇಲ್ ರಾಯಭಾರಿ ಆಕ್ರೋಶ

ಕಾಶ್ಮೀರ್ ಫೈಲ್ಸ್ ಅಸಭ್ಯ ಚಿತ್ರ ಎಂದು ನಡಾವ್ ಗೆ ನಾಚಿಕೆಯಾಗಬೇಕು…ಇಸ್ರೇಲ್ ರಾಯಭಾರಿ ಆಕ್ರೋಶ

“ದಿ ಕಾಶ್ಮೀರ್ ಫೈಲ್ಸ್” ಇದೊಂದು ಅಸಭ್ಯ ಚಿತ್ರ: ಚಲನಚಿತ್ರೋತ್ಸವದ ತೀರ್ಪುಗಾರ ನಡಾವ್ ಲ್ಯಾಪಿಡ್ ಟೀಕೆ

“ದಿ ಕಾಶ್ಮೀರ್ ಫೈಲ್ಸ್” ಇದೊಂದು ಅಸಭ್ಯ ಚಿತ್ರ: IFFI ಚಿತ್ರೋತ್ಸವದಲ್ಲಿ ತೀರ್ಪುಗಾರ ನಡಾವ್ ಲ್ಯಾಪಿಡ್

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.