‘ದಿ ಸ್ಟೋರಿ ಟೆಲ್ಲರ್‌’ : ಸತ್ಯಜಿತ್‌ ರೇ ಅವರಿಗೆ ಸಲ್ಲಿಸಿದ ಕಾಣಿಕೆ


Team Udayavani, Nov 23, 2022, 9:53 AM IST

story-teller

ಪಣಜಿ: ‘ದಿ ಸ್ಟೋರಿ ಟೆಲ್ಲರ್‌ ಮೇರು ಚಿತ್ರ ನಿರ್ದೇಶಕ ಸತ್ಯಜಿತ್‌ ರೇಗೆ ಸಲ್ಲಿಸಿರುವ ಗೌರವವಲ್ಲದೇ ಮತ್ತೇನೂ ಅಲ್ಲ’.

ಇಫಿ ಚಿತ್ರೋತ್ಸವದಲ್ಲಿ ಅಂತಾರಾಷ್ಟ್ರೀಯ ಸಿನಿಮಾ ಸ್ಪರ್ಧೆಯಲ್ಲಿ ಪ್ರಶಸ್ತಿಗೆ ಸೆಣಸುತ್ತಿರುವ ಅನಂತ್‌ ನಾರಾಯಣ್‌ ಮಹಾದೇವನ್‌ ಅವರ ’ದಿ ಸ್ಟೋರಿ ಟೆಲ್ಲರ್‌’ ಚಿತ್ರದ ಪ್ರಧಾನ ಪಾತ್ರ ನಿರ್ವಹಿಸಿರುವ ಅದಿಲ್ ಹುಸೇನ್‌ ಹೇಳಿದ ಮಾತಿದು.

ಕಲಾವಿದನಾಗಿ ನಾನು ಹೇಳುವುದಾದರೆ, ಕಲೆ ಎಲ್ಲದರಿಂದಲೂ ಮುಕ್ತ ಹಾಗು ಸ್ವತಂತ್ರವಾಗಿರಬೇಕು. ಆದರೆ ಇಂದಿನ ಸಂದರ್ಭದಲ್ಲಿ ಎಷ್ಟೊಂದು ವಾಣಿಜ್ಯ ಸಂಗತಿಗಳು ಸಿನಿಮಾ ನಿರ್ಮಾಣದಂಥ ಪ್ರಕ್ರಿಯೆಯಲ್ಲಿ ಒಳಗೊಂಡಿಯೆಂದರೆ, ಯಾವುದೂ ಪುಕ್ಕಟೆಗೆ ಸಿಗದು, ಬಾರದು. ಕಲಾವಿದ ಸಮುದಾಯದ ಬಹಳ ಮುಖ್ಯವಾದ ಜವಾಬ್ದಾರಿಯೆಂದರೆ ನಿಜವಾದ ಕರ್ತೃವಿಗೆ ಗೌರವ ನೀಡುವುದು ಹಾಗೂ ಕೃತಿ ಚೌರ್ಯ ಮಾಡದಿರುವುದು. ಕೃತಿಸೌಮ್ಯ ಎಂಬುದು ಎಷ್ಟು ದೊಡ್ಡ ಸವಾಲಿನ ಸಂಗತಿಯಾಗಿದೆ ಎಂದರೆ, ಇದು ಸಿನಿಮಾದಲ್ಲಷ್ಟೇ ಅಲ್ಲ, ಎಲ್ಲ ಕ್ಷೇತ್ರಗಳ ಸಮಸ್ಯೆಯಿದು’ ಎಂದವರು ನಟಿ ತನಿಶ್ತಾ ಚಟರ್ಜಿ.

ಕಾರ್ಮಿಕ ನಿಯಮದ ಪ್ರಕಾರ ಯಾವುದೇ ಪುಕ್ಕಟೆಯಾಗಿ ಪಡೆದರೆ, ಅದರ ಪರಿಣಾಮಗಳನ್ನು ಅನುಭವಿಸಬೇಕೆಂದಿದೆ. ಹಾಗಾಗಿ ಯಾವುದೇ ಉತ್ಪನ್ನ ಅಥವಾ ಸೇವೆ ಪಡೆದರೆ, ಸಂಬಂಧಪಟ್ಟವನಿಗೆ ಅದಕ್ಕೆ ಹಣವನ್ನು ಅಥವಾ ಕೃತಜ್ನತೆಯನ್ನು ಸಲ್ಲಿಸಲೇಬೇಕು. ಅದು ಕಲೆ ಇರಬಹುದು, ಏನೇ ಇರಬಹುದು.

‘ಒಂದು ಪಾತ್ರದೊಳಗೆ ತಲ್ಲೀನವಾಗುವ ಮೂಲಕ ನನ್ನೊಳಗೇ ಆ ಪಾತ್ರ ಬೆಳೆಯುವಂತೆ ಮಾಡಿಕೊಳ್ಳುತ್ತೇನೆ. ಆಗ ಮಾತ್ರ ಆ ಪಾತ್ರಕ್ಕೆ ನ್ಯಾಯ ಸಲ್ಲಿಸಲು ಸಾಧ್ಯವಾಗುತ್ತದೆ. ಒಂದು ಪಾತ್ರಕ್ಕೆ ಸಲ್ಲಬೇಕಾದ ನ್ಯಾಯ ಒದಗಿಸುವುದೇ ಒಬ್ಬ ಉತ್ತಮ ಕಲಾವಿದನ ಕರ್ತವ್ಯ’ ಎಂದರು ಅದಿಲ್ ಹುಸೇನ್‌.

ಒಂದು ಕಲೆಯ ಮುಖ್ಯ ಉದ್ದೇಶವೇ ನಮ್ಮನ್ನು ನಮ್ಮ ಅಸ್ತಿತ್ವದ ಕುರಿತೇ ಪ್ರಶ್ನೆಗಳನ್ನು ಕೇಳುವಂತೆ ಸಶಕ್ತಗೊಳಿಸುವುದು. ಸಿನಿಮಾ ಎಂದರೆ ಬರೀ ದುಡ್ಡು ಮಾಡುವುದಲ್ಲ; ಜಾಗೃತಿ ಮೂಡಿಸುವುದೂ ಸಹ ಅದರ ಹೊಣೆಗಾರಿಕೆ ಎಂಬುದು ಅದಿಲ್ ಹುಸೇನ್‌ ಅಭಿಪ್ರಾಯ.

ಈ ಚಿತ್ರ ಕೃತಿಚೌರ್ಯದ ಕುರಿತು ಪ್ರಬಲವಾದ ಸಂದೇಶವನ್ನು ನೀಡುತ್ತದೆ. ಮೂರು ವರ್ಷಗಳ ಸುದೀರ್ಘ ಹಾಗೂ ಸವಾಲಿನ ಪಯಣದ ಬಳಿಕವೂ ಸಂತೋಷ ಸಿಕ್ಕಿದೆ ಎಂದವರು ಚಿತ್ರದ ನಿರ್ಮಾಪಕ ಸುಚ್ಚಂದಾ ಚಟರ್ಜಿ.

ಅನಂತ್‌ ನಾರಾಯಣ್‌ ಮಹಾದೇವನ್‌ ಚಿತ್ರ ನಿರ್ದೆಶಿಸಿದ್ದರೆ, ಕಿರೀಟ್‌ ಖುರಾನಾ ಚಿತ್ರಕಥೆ ಬರೆದಿದ್ದಾರೆ. ಅಲ್ಫೋನ್ಸ್ ರಾಯ್‌ ಸಿನೆ ಛಾಯಾಗ್ರಹಣ, ಗೌರವ್‌ ಗೋಪಾಲ್ ಝಾರ ಸಂಕಲನವಿದೆ. ಪಾತ್ರವರ್ಗದಲ್ಲಿ ಪರೇಶ್‌ ರಾವಲ್‌, ಅದಿಲ್‌ ಹುಸೇನ್‌, ರೇವತಿ, ತನಿಶ್ತಾ ಚಟರ್ಜಿ, ಜಯೇಶ್‌ ಮತ್ತಿತರರು ಇದ್ದಾರೆ.

ತರಿಣಿ ರಂಜನ್‌ ಬಂಡೋಪಾಧ್ಯಾಯ ಒಬ್ಬ ಕಥೆ ಹೇಳುವವ. ಒಂದು ಉದ್ಯೋಗಕ್ಕೆ ಅಂಟಿಕೊಳ್ಳದೇ 32 ಉದ್ಯೋಗಗಳನ್ನು ಬದಲಾಯಿಸಿರುವವ. ಈಗ 60 ಆಗಿದೆ. ನಿವೃತ್ತಿ ತೆಗೆದುಕೊಂಡಿದ್ದಾನೆ. ಕೋಲ್ಕತ್ತಾವಾಸಿ. ಆದರೆ ಅವನನ್ನು ಬಲವಾಗಿ ಕಾಡುತ್ತಿರುವ ಒಂದೇ ಒಂದು ಸಂಗತಿಯೆಂದರೆ ’ತನ್ನ ಪತ್ನಿಗೆ ಸಾಕಷ್ಟು ಸಮಯ ನೀಡದಿರುವುದು. ಈಗ ಅವನು ಎಲ್ಲದರಿಂದ ಮುಕ್ತಿ, ಸ್ವತಂತ್ರ, ಸಾಕಷ್ಟು ಸಮಯವಿದೆ. ಆದರೆ ಉಳಿದವರಾರೂ ಅವನ ಬಳಿಇಲ್ಲ ಎಂಬುದೇ ವಿರೋಧಾಭಾಸ.

ಟಾಪ್ ನ್ಯೂಸ್

ವಿಜಯಪುರ: ಪರವಾನಿಗೆ ಇಲ್ಲದೆ ವಾಹನದಲ್ಲಿ ಸಾಗಿಸುತ್ತಿದ್ದ 47 ಲಕ್ಷ ರೂ‌. ಮೌಲ್ಯದ ಮದ್ಯ ವಶ

ವಿಜಯಪುರ: ಪರವಾನಿಗೆ ಇಲ್ಲದೆ ವಾಹನದಲ್ಲಿ ಸಾಗಿಸುತ್ತಿದ್ದ 47 ಲಕ್ಷ ರೂ‌. ಮೌಲ್ಯದ ಮದ್ಯ ವಶ

akhilesh

ಯಾವುದೇ ಪಕ್ಷದ ಬಗ್ಗೆ ಸಹಾನುಭೂತಿ ಹೊಂದುವುದು ಮುಖ್ಯ ಅಲ್ಲ: ಅಖಿಲೇಶ್

ವನಿತಾ ಪ್ರೀಮಿಯರ್‌ ಲೀಗ್‌ : ಚೊಚ್ಚಲ ಪ್ರಶಸ್ತಿ ಮುಂಬೈ ಇಂಡಿಯನ್ಸ್‌ ಪಾಲು

ವನಿತಾ ಪ್ರೀಮಿಯರ್‌ ಲೀಗ್‌ : ಚೊಚ್ಚಲ ಪ್ರಶಸ್ತಿ ಮುಂಬೈ ಇಂಡಿಯನ್ಸ್‌ ಪಾಲು

1-saddsadsad-asds

ಜೆಡಿಎಸ್ 25 ಸ್ಥಾನ ಗೆಲ್ಲಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಗ್ಯಾರಂಟಿ: ಡಾ.ಯತೀಂದ್ರ

1-sadsad-as-d

ವಿಶ್ವ ಚಾಂಪಿಯನ್‌ಶಿಪ್: ಪ್ರಶಸ್ತಿ ಮುಡಿಗೇರಿಸಿಕೊಂಡ ಬಾಕ್ಸರ್ ನಿಖತ್ ಜರೀನ್

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ನ್ಪೋಟ್ಸ್‌ನ “ಟ್ರೋಫಿ ಟೂರ್‌’

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ಸ್ಪೋರ್ಟ್ಸ್ ನ “ಟ್ರೋಫಿ ಟೂರ್‌’



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮೊಳಗೆ ಬೆಳೆಯುವಂಥ ಪಾತ್ರಗಳು ನನಗಿಷ್ಟ : ಗ್ರೀಷ್ಮಾ ಶ್ರೀಧರ್‌

ನಮ್ಮೊಳಗೆ ಬೆಳೆಯುವಂಥ ಪಾತ್ರಗಳು ನನಗಿಷ್ಟ : ಗ್ರೀಷ್ಮಾ ಶ್ರೀಧರ್‌

ಕಾಶ್ಮೀರ್ ಫೈಲ್ಸ್ ಅಸಭ್ಯ ಚಿತ್ರ ಎಂದು ನಡಾವ್ ಗೆ ನಾಚಿಕೆಯಾಗಬೇಕು…ಇಸ್ರೇಲ್ ರಾಯಭಾರಿ ಆಕ್ರೋಶ

ಕಾಶ್ಮೀರ್ ಫೈಲ್ಸ್ ಅಸಭ್ಯ ಚಿತ್ರ ಎಂದು ನಡಾವ್ ಗೆ ನಾಚಿಕೆಯಾಗಬೇಕು…ಇಸ್ರೇಲ್ ರಾಯಭಾರಿ ಆಕ್ರೋಶ

“ದಿ ಕಾಶ್ಮೀರ್ ಫೈಲ್ಸ್” ಇದೊಂದು ಅಸಭ್ಯ ಚಿತ್ರ: ಚಲನಚಿತ್ರೋತ್ಸವದ ತೀರ್ಪುಗಾರ ನಡಾವ್ ಲ್ಯಾಪಿಡ್ ಟೀಕೆ

“ದಿ ಕಾಶ್ಮೀರ್ ಫೈಲ್ಸ್” ಇದೊಂದು ಅಸಭ್ಯ ಚಿತ್ರ: IFFI ಚಿತ್ರೋತ್ಸವದಲ್ಲಿ ತೀರ್ಪುಗಾರ ನಡಾವ್ ಲ್ಯಾಪಿಡ್

1-sadsad

53 ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಮಾರೋಪ; ಸ್ಪ್ಯಾನಿಷ್‌ ಚಿತ್ರಕ್ಕೆ ಗೋಲ್ಡನ್‌ ಪೀಕಾಕ್‌ ಪ್ರಶಸ್ತಿ

1-daadad

ಸಿನಿಮಾ ರಂಗದಿಂದಲೇ ನಾನು ಚಿರಂಜೀವಿ: ಇಫಿಯಲ್ಲಿ ಚಿರಂಜೀವಿ ಭಾವುಕ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ವಿಜಯಪುರ: ಪರವಾನಿಗೆ ಇಲ್ಲದೆ ವಾಹನದಲ್ಲಿ ಸಾಗಿಸುತ್ತಿದ್ದ 47 ಲಕ್ಷ ರೂ‌. ಮೌಲ್ಯದ ಮದ್ಯ ವಶ

ವಿಜಯಪುರ: ಪರವಾನಿಗೆ ಇಲ್ಲದೆ ವಾಹನದಲ್ಲಿ ಸಾಗಿಸುತ್ತಿದ್ದ 47 ಲಕ್ಷ ರೂ‌. ಮೌಲ್ಯದ ಮದ್ಯ ವಶ

akhilesh

ಯಾವುದೇ ಪಕ್ಷದ ಬಗ್ಗೆ ಸಹಾನುಭೂತಿ ಹೊಂದುವುದು ಮುಖ್ಯ ಅಲ್ಲ: ಅಖಿಲೇಶ್

ವನಿತಾ ಪ್ರೀಮಿಯರ್‌ ಲೀಗ್‌ : ಚೊಚ್ಚಲ ಪ್ರಶಸ್ತಿ ಮುಂಬೈ ಇಂಡಿಯನ್ಸ್‌ ಪಾಲು

ವನಿತಾ ಪ್ರೀಮಿಯರ್‌ ಲೀಗ್‌ : ಚೊಚ್ಚಲ ಪ್ರಶಸ್ತಿ ಮುಂಬೈ ಇಂಡಿಯನ್ಸ್‌ ಪಾಲು

1-saddsadsad-asds

ಜೆಡಿಎಸ್ 25 ಸ್ಥಾನ ಗೆಲ್ಲಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಗ್ಯಾರಂಟಿ: ಡಾ.ಯತೀಂದ್ರ

1-sadsad-as-d

ವಿಶ್ವ ಚಾಂಪಿಯನ್‌ಶಿಪ್: ಪ್ರಶಸ್ತಿ ಮುಡಿಗೇರಿಸಿಕೊಂಡ ಬಾಕ್ಸರ್ ನಿಖತ್ ಜರೀನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.