ನಯನ ತಾರಾ, ವಿಘ್ನೇಶ್ ಶಿವನ್ ಜೋಡಿ ಹಕ್ಕಿಗಳು ಸಾಮಾಜಿಕ ಜಾಲತಾಣಗಳಲ್ಲಿ ಟಾಪ್ ಟ್ರೆಂಡಿಂಗ್..!


Team Udayavani, Mar 25, 2021, 1:12 PM IST

Here’s Why Nayanthara And Boyfriend Vignesh Shivan Are Trending

ನವ ದೆಹಲಿ : ದಕ್ಷಿಣ ಭಾರತದ ಬಹು ಬೇಡಿಕೆಯ ಮೋಹಕ ನಟಿ ನಯನ ತಾರಾ ಮತ್ತು ಅವರ ಭಾವಿ ಸಂಗಾತಿ ನಿರ್ದೇಶಕ ವಿಘ್ನೇಶ್ ಶಿವನ್ ಅವರು ಇಂದು(ಗುರುವಾರ. ಮಾರ್ಚ್ 25) ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್ ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಗುರುವಾರ ಬೆಳಿಗ್ಗೆ ವಿಘ್ನೇಶ್ ಶಿವನ್ ಅವರು ತಮ್ಮ ಭಾವಿ ಸಂಗಾತಿ ನಯನ ತಾರಾ ಅವರೊಂದಿಗಿನ ಫೋಟೋವೊಂದನ್ನು ಪೋಸ್ಟ್ ಮಾಡಿದರು.

ಫೋಟೋದಲ್ಲಿ ಜೋಡಿಯ ಮುಖಗಳನ್ನು ನಮಗೆ ಕಾಣಲು ಸಾಧ್ಯವಿಲ್ಲ, ನಯನ ತಾರಾ ತಮ್ಮ ಭಾವಿ ಸಂಗಾತಿ, ನಿರ್ದೇಶಕ ವಿಘ್ನೇಶ್ ಶಿವನ್ ಅವರ ಎದೆಯ ಮೇಲೆ ಎಡಗೈಯಿಂದ ಮುಟ್ಟುತ್ತಾ ಮುದ್ದಿಸುತ್ತಿರುವಂತೆ ಕಾಣಿಸುತ್ತದೆ.

ಓದಿ :  ಬಾರ್ಕೂರು ಏಕನಾಥೇಶ್ವರಿ ದೇವಸ್ಥಾನ: ಮುಂಬಯಿಗರಿಂದ ಸಂಕಷ್ಟ ಚತುರ್ದಶಿ ಪೂಜೆ

ಫೋಟೋದಲ್ಲಿ ನಯನ ತಾರ ತಮ್ಮ ಚೆಂದದ ಎಡಗೈಯ ಉಗುರುಗಳಿಗೆ ವೈಟ್ ಕ್ರೀಮ್ ಕಲರ್ ನ ನೈಲ್ ಪಾಲಿಶ್ ಹಾಕಿರುವುದನ್ನು ಮತ್ತು ಉಂಗುರ ತೊಟ್ಟುಕೊಂಡಿರುವುದನ್ನು  ಕಾಣಬಹುದು.

 

View this post on Instagram

 

A post shared by Vignesh Shivan (@wikkiofficial)

ವಿಘ್ನೇಶ್ ಶಿವನ್ ಅವರ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಭರಪೂರ ಕಮೆಂಟ್ ಗಳಿಗೆ ಸಾಕ್ಷಿಯಾಗಿದೆ. ಜೋಡಿಯ ಕುತೂಹಲಕರವಾದ ಈ ಫೋಟೋ ಅಭಿಮಾನಿಗಳಿಗೆ ಸಂತಸ  ಉಂಟುಮಾಡಿದೆ ಎನ್ನುವುದನ್ನು ಕಮೆಂಟ್ ಗಳಲ್ಲಿ ಕಾಣಬಹುದು. ಅಷ್ಟೇ ಅಲ್ಲದೇ, ಪ್ರೇಮಿಗಳ ಭಾವ ಕೆರಳಿಸುವಂತಿದೆ ಈ ಫೋಟೋ.

ಇನ್ನು, ನೀವು ವಿಘ್ನೇಶ್ ಶಿವನ್ ಅವರ ಇನ್ಸ್ಟಾಗ್ರಾಮ್ ಖಾತೆಯನ್ನು ಪರಿಶೀಲಿಸಿದರೆ, ನಯನ ತಾರಾ ಅವರು ಅದೇ ಉಂಗುರವನ್ನು ಧರಿಸಿರುವ ಅನೇಕ ಫೋಟೋಗಳು ಕಾಣಸಿಗುತ್ತವೆ.

 

View this post on Instagram

 

A post shared by Vignesh Shivan (@wikkiofficial)

 

View this post on Instagram

 

A post shared by Vignesh Shivan (@wikkiofficial)

 

View this post on Instagram

 

A post shared by Vignesh Shivan (@wikkiofficial)

2019 ರಲ್ಲಿ, ನಯನ ತಾರಾ ಅವರು ವಿಘ್ನೇಶ್ ಶಿವನ್ ಅವರನ್ನು ತಮ್ಮ ‘ನಿಶ್ಚಿತ ವರ / ಫಿಯಾನ್ಸ್ ‘ ಎಂದು ಹೇಳುವ ಮೂಲಕ ಸಂತಸ ಪಟ್ಟಿದ್ದರು. ಇದು ಅವರ ನಿಶ್ಚಿತಾರ್ಥ ಮತ್ತು ವಿವಾಹಗಳ ಬಗ್ಗೆ ಅಭಿಮಾನಿಗಳಲ್ಲಿ, ಸಿನೆಮಾ ಕ್ಷೇತ್ರದಲ್ಲಿ ಅದರಲ್ಲೂ ದಕ್ಷಿಣ ಭಾರತದ ಸಿನೆಮಾ ಕ್ಷೇತ್ರದಲ್ಲಿ ಭಾರಿ ಗುಸು ಗುಸು ಗಾಸಿಪ್ ಹರಿದಾಡುವಂತೆ ಮಾಡಿತ್ತು.  2015 ರಲ್ಲಿ ವಿಘ್ನೇಶ್ ನಿರ್ದೇಶನದ ನಾನಮ್ ರೌಡಿಧಾನ್ ಚಿತ್ರದ ಸೆಟ್‌ ನಲ್ಲಿ ನಯನ ತಾರಾ ಮತ್ತು ವಿಘ್ನೇಶ್ ಶಿವನ್ ಭೇಟಿಯಾಗಿದ್ದರು. ಈ ಚಿತ್ರದಲ್ಲಿ ನಯನ ತಾರಾ ಮುಖ್ಯ ಪಾತ್ರ ವಹಿಸಿದ್ದರು. ಈ ಸಿನೆಮಾ ಇವರಿಬ್ಬರ ನಡುವೆ ಪ್ರೇಮಾಂಕುರ ಉಂಟಾಗುವುದಕ್ಕೆ ಸಾಕ್ಷಿಯಾಯಿತು.

ಓದಿ :  ಮಲೆ ಮಹದೇಶ್ವರ ಬೆಟ್ಟದ ಪಾರ್ವತಿ ಅಮ್ಮನವರ ಚಿನ್ನದ ಕರಡಿಗೆ ನಾಪತ್ತೆ!

ಕಳೆದ ಸೆಪ್ಟೆಂಬರ್‌ ನಲ್ಲಿ, ರಾಷ್ಟ್ರವ್ಯಾಪಿ ಲಾಕ್ಡೌನ್ ತೆರವಾಗಿದ್ದ ಸಂದರ್ಭದಲ್ಲಿ, ನಯನ ತಾರಾ ಮತ್ತು ವಿಘ್ನೇಶ್ ಶಿವನ್ ಗೋವಾದಲ್ಲಿ  ಮೋಜು ಮಸ್ತಿ ಮಾಡಿದ್ದರು. ಇವರೊಂದಿಗೆ ಇಬ್ಬರ ಪೋಷಕರೂ ಕೂಡ ಇದ್ದಿದ್ದರು. ಮತ್ತು ವಿಘ್ನೇಶ್ ತಮ್ಮ 35 ನೇ ಹುಟ್ಟುಹಬ್ಬವನ್ನು ನಯನ ತಾರಾ ಮತ್ತು ಅವರ ಕುಟುಂಬದೊಂದಿಗೆ ಗೋವಾದಲ್ಲಿ ಆಚರಿಸಿಕೊಂಡಿದ್ದರು.

ಓದಿ : ಬಸವಕಲ್ಯಾಣ ಅಭ್ಯರ್ಥಿಯಾಗಲು ಬಿಜೆಪಿಗೆ ಟಿಕೆಟ್ ಆಕಾಂಕ್ಷಿಯಿಂದ ದೊಡ್ಡ ಮಟ್ಟದ ಹಣ ಸಂದಾಯ: HDK

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

9

ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ

12

ಮೀಟಿಂಗ್‌ ಮಾಡೋಕ್ಕೂ ರೇಟ್‌ ಫಿಕ್ಸ್‌: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕ ಚೋಪ್ರಾ ದಂಪತಿ

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.