ಸಿನಿಮಾ ರಂಗದಿಂದಲೇ ನಾನು ಚಿರಂಜೀವಿ: ಇಫಿಯಲ್ಲಿ ಚಿರಂಜೀವಿ ಭಾವುಕ

ಕಥಾವಸ್ತು, ವಿಷಯದತ್ತಲೇ ಮತ್ತೆ ಸಿನಿಮಾ ರಂಗ : ಹೀಗೆ ಮುನ್ನಡೆಯಲಿ ಎಂದ ರಾಣಾ ದಗ್ಗುಬಾಟಿ

Team Udayavani, Nov 28, 2022, 7:09 PM IST

1-daadad

Chiranjeevi, cinema, Chiranjeevi, emotional

ಪಣಜಿ: ’ಸಿನಿಮಾ ರಂಗ ನನ್ನನ್ನು ಚಿರಂಜೀವಿಯಾಗಿಸಿದೆ’ ಎಂದವರು ತೆಲುಗಿನ ಖ್ಯಾತ ಹಿರಿಯ ನಟ ಚಿರಂಜೀವಿ.

ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವದ (ಇಫಿ) 53ನೇ ಆವೃತ್ತಿಯ ಸಮಾರೋಪ ಸಮಾರಂಭದಲ್ಲಿ ಸೋಮವಾರ ಭಾರತೀಯ ಚಿತ್ರರಂಗ ವರ್ಷದ ವ್ಯಕ್ತಿ ಪ್ರಶಸ್ತಿಯನ್ನು ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.

‘ಇದೊಂದು ಆತ್ಮೀಯ ಘಳಿಗೆ. ನಾನೊಬ್ಬ ಮಧ್ಯಮ ವರ್ಗದ ಕುಟುಂಬದಿಂದ ಬಂದವನು. ಸಿನಿಮಾ ರಂಗ ನನಗೆ ಎಲ್ಲವನ್ನೂ ಕೊಟ್ಟಿದೆ. ಪ್ರಸಿದ್ಧಿ, ಗೌರವ, ಬದುಕು ಎಲ್ಲವೂ ಅದರಿಂದ ಸಿಕ್ಕಿದೆ. ಸಿನಿಮಾ ರಂಗ ಹಾಗೂ ಅಭಿಮಾನಿಗಳು ನನ್ನನ್ನು ’ಚಿರಂಜೀವಿ’ಯಾಗಿಸಿದ್ದಾರೆ. ಇದಕ್ಕಾಗಿ ವಂದನೆಗಳು’ ಎಂದು ಭಾವುಕರಾಗಿ ನುಡಿದರು.

‘ನಾಲ್ಕು ದಶಕಗಳಿಂದ ಚಿತ್ರರಂಗದಲ್ಲಿದ್ದೆ. ಒಂದು ದಶಕ ರಾಜಕೀಯದಲ್ಲಿದ್ದು ಪ್ರೇಕ್ಷಕರೊಂದಿಗಿನ ಸಂಬಂಧ ಕಳೆದುಕೊಂಡಿದ್ದೆ. ಆಮೇಲೆ ವಾಪಸು ಚಿತ್ರರಂಗಕ್ಕೆ ಬಂದಾಗ ಅಭಿಮಾನಿಗಳು ಅಭೂತಪೂರ್ವವಾಗಿ ಸ್ವಾಗತಿಸಿದ ರೀತಿ ನನ್ನನ್ನು ಮೂಕ ವಿಸ್ಮಿತನಾಗಿಸಿತ್ತು. ಆಗ ಒಂದು ದಶಕ ನಾನೇ ಅಭಿಮಾನಿಗಳೊಂದಿಗೆ ಬಾಂಧವ್ಯ ಕಳೆದುಕೊಂಡಿದ್ದೆ. ಅವರಲ್ಲ ಎಂಬುದು ಅರ್ಥವಾಯಿತು. ಜತೆಗೆ ಸಿನಿಮಾ ಕ್ಷೇತ್ರದ ಮಹತ್ವ ಅರಿವಾಯಿತು. ಇದೊಂದು ಅದ್ಭುತವಾದ ಕ್ಷೇತ್ರ . ಇನ್ನೆಂದೂ ಇದರಿಂದ ದೂರ ಹೋಗಲಾರೆ’ ಎಂದು ಹೇಳಿದರು.

‘ಸಿನಿಮಾ ಭ್ರಷ್ಟಾಚಾರ ರಹಿತ ಕ್ಷೇತ್ರ. ನಿಮಗೆ ಪ್ರತಿಭೆಯಿದ್ದರೆ ಪ್ರದರ್ಶಿಸಲು ಅತ್ಯುತ್ತಮ ವೇದಿಕೆ. ಯಾವ ಮಟ್ಟಕ್ಕಾದರೂ ಮುಟ್ಟಬಹುದು. ಅವಕಾಶಗಳು ಮುಕ್ತವಾಗಿರುತ್ತವೆ’ ಎಂದರು.

‘ರಾಜಕೀಯ ಕ್ಷೇತ್ರದ ಕುರಿತು ಮತ್ತೊಮ್ಮೆ ಗಮನಹರಿಸಿ’ ಎಂಬ ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ಅವರ ಮನವಿಗೆ ‘ಆ ಕುರಿತು ಆಮೇಲೆ ಮಾತನಾಡೋಣ’ ಎಂದು ಮುಗುಳ್ನಕ್ಕು ಉತ್ತರಿಸಿದರು. ತೆಲುಗಿನಲ್ಲಿ ಮಾತನಾಡಿದ್ದು ವಿಶೇಷವಾಗಿತ್ತು.

ಕಥಾವಸ್ತು, ವಿಷಯದತ್ತಲೇ ಮತ್ತೆ ಸಿನಿಮಾ ರಂಗ

‘ಕಥಾವಸ್ತು, ವಿಷಯದತ್ತಲೇ ಮತ್ತೆ ಸಿನಿಮಾ ರಂಗ ಸಾಗತೊಡಗಿದೆ. ಇದೊಂದು ಒಳ್ಳೆಯ ಬೆಳವಣಿಗೆ. ಚಿತ್ರೋತ್ಸವಗಳು ಸದಾ ಸಿನಿಮಾ ರಂಗದ ಸ್ವತಂತ್ರ ಧ್ವನಿಗಳಿಗೆ ವೇದಿಕೆ ಕಲ್ಪಿಸುತ್ತಿದೆ. ಇದು ಹೀಗೆ ಮುನ್ನಡೆಯಲಿ’ ಎಂದರು ಮತ್ತೊಬ್ಬ ತೆಲುಗಿನ ನಟ ರಾಣಾ ದಗ್ಗುಬಾಟಿ.

ಸಿನಿಮಾವಲ್ಲದೇ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದೀರಿ. ಯಾವುದು ನಿಮಗೆ ಬಹಳ ಇಷ್ಟವೆಂಬ ಪ್ರಶ್ನೆಗೆ, ‘ನಾನು ಯಾವುದನ್ನೇ ತೆಗೆದುಕೊಳ್ಳಲಿ. ಅದನ್ನು ಖುಷಿಯಿಂದ ಮಾಡುವೆ. ಹಾಗಾಗಿ ಅದು ಮುಖ್ಯ, ಇದು ಅಮುಖ್ಯ ಎಂಬುದಿಲ್ಲ’ ಎಂದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chef chidambara kannada movie

Chef Chidambara: ಅನಿರುದ್ಧ್ ಅಡುಗೆ ಶುರು

tdy-7

Bollywood: ರಿಮೇಕ್‌ ಆಗಿ ಮತ್ತೆ ತೆರೆಗೆ ಬರಲಿದೆ 70ರ ದಶಕದ ಮೂರು ಹಿಟ್‌ ಸಿನಿಮಾಗಳು

ನಮ್ಮೊಳಗೆ ಬೆಳೆಯುವಂಥ ಪಾತ್ರಗಳು ನನಗಿಷ್ಟ : ಗ್ರೀಷ್ಮಾ ಶ್ರೀಧರ್‌

ನಮ್ಮೊಳಗೆ ಬೆಳೆಯುವಂಥ ಪಾತ್ರಗಳು ನನಗಿಷ್ಟ : ಗ್ರೀಷ್ಮಾ ಶ್ರೀಧರ್‌

ಕಾಶ್ಮೀರ್ ಫೈಲ್ಸ್ ಅಸಭ್ಯ ಚಿತ್ರ ಎಂದು ನಡಾವ್ ಗೆ ನಾಚಿಕೆಯಾಗಬೇಕು…ಇಸ್ರೇಲ್ ರಾಯಭಾರಿ ಆಕ್ರೋಶ

ಕಾಶ್ಮೀರ್ ಫೈಲ್ಸ್ ಅಸಭ್ಯ ಚಿತ್ರ ಎಂದು ನಡಾವ್ ಗೆ ನಾಚಿಕೆಯಾಗಬೇಕು…ಇಸ್ರೇಲ್ ರಾಯಭಾರಿ ಆಕ್ರೋಶ

“ದಿ ಕಾಶ್ಮೀರ್ ಫೈಲ್ಸ್” ಇದೊಂದು ಅಸಭ್ಯ ಚಿತ್ರ: ಚಲನಚಿತ್ರೋತ್ಸವದ ತೀರ್ಪುಗಾರ ನಡಾವ್ ಲ್ಯಾಪಿಡ್ ಟೀಕೆ

“ದಿ ಕಾಶ್ಮೀರ್ ಫೈಲ್ಸ್” ಇದೊಂದು ಅಸಭ್ಯ ಚಿತ್ರ: IFFI ಚಿತ್ರೋತ್ಸವದಲ್ಲಿ ತೀರ್ಪುಗಾರ ನಡಾವ್ ಲ್ಯಾಪಿಡ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.