54th IFFI ಉದ್ಘಾಟನೆ: ಶೀಘ್ರ ಭಾರತ ಮನೋರಂಜನಾ ಕ್ಷೇತ್ರದಲ್ಲಿ 3ನೇ ಸ್ಥಾನಕ್ಕೆ: ಠಾಕೂರ್

ಚಲನಚಿತ್ರೋತ್ಸವದಲ್ಲಿ ವರ್ಷದಿಂದ ವರ್ಷಕ್ಕೆ ಹೊಸತನ

Team Udayavani, Nov 20, 2023, 9:04 PM IST

1————ssa

ಪಣಜಿ: ಜಗತ್ತಿನಲ್ಲಿಯೇ ಪ್ರಪ್ರಥಮವಾಗಿ ಚಂದ್ರನ ದಕ್ಷಿಣಧ್ರುವದಲ್ಲಿ ಚಂದ್ರಯಾನ ಪೂರ್ಣಗೊಳಿಸಿದ ದೇಶ ಭಾರತವು ಶೀಘ್ರದಲ್ಲಿಯೇ ಮನೋರಂಜನಾ ಕ್ಷೇತ್ರದಲ್ಲಿಯೂ ಜಗತ್ತಿನಲ್ಲಿ 3 ನೇ ಸ್ಥಾನಕ್ಕೆ ಬರಲಿದೆ. ಅಂತಾರಾಷ್ಟ್ರೀಯ ಚಲನಚಿತ್ತೋತ್ಸವವು 2047 ರ ಸಂದರ್ಭದಲ್ಲಿ ಜಗತ್ತಿನ ನಂಬರ್ 1 ಫೆಸ್ಟಿವಲ್ ಆಗಲಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸರಣ ಮಂತ್ರಿ ಅನುರಾಗ್ ಠಾಕೂರ್ ವಿಶ್ವಾಸ ವ್ಯಕ್ತಪಡಿಸಿದರು.

ಗೋವಾ ರಾಜಧಾನಿ ಪಣಜಿ ಸಮೀಪದ ಬಾಂಬೋಲಿಂ ಶಾಮಪ್ರಸಾದ ಮುಖರ್ಜಿ ಸ್ಟೇಡಿಯಂನಲ್ಲಿ ಸೋಮವಾರ (ನ 20) ಸಂಜೆ 54 ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಭಾರತೀಯ ಸಾಂಸ್ಕೃತಿಕ ಛಾಪನ್ನು ಭಾರತದಲ್ಲಿ ಮಾತ್ರವಲ್ಲದೆ ದಕ್ಷಿಣ ಏಷ್ಯಾ ಮತ್ತು ಇತರ ಪ್ರದೇಶಗಳಲ್ಲಿಯೂ ಕಾಣಬಹುದು. ಭಾರತದ ಯಾವುದೇ ಚಲನಚಿತ್ರಗಳನ್ನು ಪೈರಸಿ ಮಾಡಿದರೆ ಅಂತವರಿಗೆ 3 ವರ್ಷ ಜೈಲು ಶಿಕ್ಷೆ ಮತ್ತು 5 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇಂತಹ ಕಾನೂನನ್ನು ಕೇವಲ ಭಾರತದಲ್ಲಿ ಕೇಂದ್ರ ಸರಕಾರ ಜಾರಿಗೆ ತಂದಿದೆ. ಯಾವುದೇ ಚಲನಚಿತ್ರಗಳನ್ನು ಕಳ್ಳತನ ಮಾಡುವಂತಿಲ್ಲ ಎಂದರು.

ಪ್ರಸಕ್ತ ಚಲನಚಿತ್ರೋತ್ಸವದಲ್ಲಿ 78 ದೇಶಗಳ ಚಲನಚಿತ್ರಗಳು ಪ್ರದರ್ಶನಗೊಳ್ಳಲಿದೆ. ಕಳೆದ ವರ್ಷದ ಚಲನಚಿತ್ರಕ್ಕೆ ಹೋಲಿಸಿದರೆ ಪ್ರಸಕ್ತ ವರ್ಷ ಶೇ 3 ರಷ್ಟು ಹೆಚ್ಚು ಚಲನಚಿತ್ರಗಳನ್ನು ಚಲನಚಿತ್ರೋತ್ಸವದಲ್ಲಿ ವೀಕ್ಷಿಸಬಹುದಾಗಿದೆ ಎಂದರು.

ಇದನ್ನೂ ಓದಿ : 54th IFFI ಗೆ ಚಾಲನೆ: ಮಾಧುರಿ ದೀಕ್ಷಿತ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರಧಾನ

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಗೋವಾ ಸಿಎಂ ಡಾ.ಪ್ರಮೋದ ಸಾವಂತ್ ಮಾತನಾಡಿ, ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಗೋವಾ ರಾಜ್ಯ ಖಾಯಂ ಸ್ಥಳವಾಗಿದೆ. ಇದರಿಂದಾಗಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ವರ್ಷದಿಂದ ವರ್ಷಕ್ಕೆ ಹೊಸತನವನ್ನು ಕಾಣಬಹುದಾಗಿದೆ. 2004 ರಲ್ಲಿ ದಿ.ಮನೋಹರ್ ಪರೀಕರ್ ರವರು ಗೋವಾದಲ್ಲಿ ಆರಂಭಿಸಿದ ಚಲನಚಿತ್ರೋತ್ಸವ ಇಂದು ಜಗತ್ತಿನ ಚಲನಚಿತ್ರ ಕ್ಷೇತ್ರದ ವೇದಿಕೆಯಾಗಿ ನಿಂತಿದೆ. ಗೋವಾ ಸಿನಿಮಾ ವಲಯದಲ್ಲಿ ನಿಧಾನವಾಗಿ ಪ್ರಗತಿ ಸಾಧಿಸುತ್ತಿದೆ, ಗೋವಾ ಎಂಟರ್‍ಟೈನ್‍ಮೆಂಟ್ ಕಾರ್ಪೊರೇಷನ್ ರಾಜ್ಯದಲ್ಲಿ ಫಿಲ್ಮ್ ಸಿಟಿ ಸ್ಥಾಪಿಸಲು ಉತ್ಸುಕವಾಗಿದೆ. ಫಿಲ್ಮ್‍ಸಿಟಿ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಲಾಗುವುದು. ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಜಗತ್ತಿನ ಎಲ್ಲ ಪ್ರತಿನಿಧಿಗಳಿಗೆ ಸ್ವಾಗತ ಕೋರುತ್ತೇನೆ ಎಂದರು.

ಚಲನಚಿತ್ರ ಕ್ಷೇತ್ರಕ್ಕೆ ನೀಡಿದ ಕೊಡುಗೆಗೆ ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ರವರಿಗೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್, ವಾರ್ತಾ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ.ಎಲ್.ಮುರುಗನ್, ಕೇಂದ್ರ ಸಚಿವ ಶ್ರೀಪಾದ ನಾಯಕ್, ಶಾಹಿದ್ ಕಪೂರ್ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಬಾಲಿವುಡ್‍ನ ಹಲವು ನಟರು ಭಾಗವಹಿಸಿದ್ದು, ಕರಣ್ ಜೋಹರ್, ಸನ್ನಿ ಡಿಯೋಲ್, ಶ್ರಿಯಾ ಸರನ್, ನುಸ್ರತ್ ಭರುಚಾ, ಪಂಕಜ್ ತ್ರಿಪಾಠಿ ಮತ್ತು ಇತರ ತಾರೆಯರ ಜತೆಗೆ ಸಂಗೀತಗಾರರಾದ ಶಾಂತನು ಮೊಯಿತ್ರಾ, ಶ್ರೇಯಾ ಘೋಷಾಲ್ ಮತ್ತು ಸುಖವಿಂದರ್ ಸಿಂಗ್, ನಟ ಮತ್ತು ನಿರೂಪಕಿ ಅಪರಶಕ್ತಿ ಖುರಾನಾ ಮತ್ತು ಕರಿಷ್ಮಾ ತನ್ನಾ ಕೂಡ ಉಪಸ್ಥಿತರಿದ್ದರು.

ವಿವಿಧ ಭಾಷೆಯ ಅನೇಕ ಸಿನಿ ಕಲಾವಿದರು, ನಿರ್ದೇಶಕರು, ಬರಹಗಾರರು ಮತ್ತು ಚಲನಚಿತ್ರ ಪ್ರೇಮಿಗಳು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.  ಚಲನಚಿತ್ರೋತ್ಸವ ನವೆಂಬರ್ 28 ರ ವರೆಗೆ ನಡೆಯಲಿದೆ.  270 ಕ್ಕೂ ಹೆಚ್ಚು ಚಲನ ಚಿತ್ರಗಳು ವಿವಿಧ ಭಾಗಗಳಲ್ಲಿ ಪ್ರದರ್ಶನ ಗೊಳ್ಳಲಿವೆ.

ಟಾಪ್ ನ್ಯೂಸ್

mPuttur ಹಾಲು ಸಂಸ್ಕರಣೆ, ಪ್ಯಾಕಿಂಗ್‌ ಘಟಕ: ಜಾಗ ಮಂಜೂರಿಗೆ ಸರಕಾರದ ಅನುಮತಿ

Puttur ಹಾಲು ಸಂಸ್ಕರಣೆ, ಪ್ಯಾಕಿಂಗ್‌ ಘಟಕ: ಜಾಗ ಮಂಜೂರಿಗೆ ಸರಕಾರದ ಅನುಮತಿ

Actress Leelavathi ಲೀನಾ ಸಿಕ್ವೇರಾ ಲೀಲಾವತಿಯಾಗಿ ಸಿನಿ ಲೋಕದ ಪಯಣ

Actress Leelavathi ಲೀನಾ ಸಿಕ್ವೇರಾ ಲೀಲಾವತಿಯಾಗಿ ಸಿನಿ ಲೋಕದ ಪಯಣ

priyank

Savarkar ಭಾವಚಿತ್ರ ಅಳವಡಿಕೆ ಚರ್ಚೆ ಮುನ್ನೆಲೆಗೆ

RBI

Repo ದರ ಯಥಾಸ್ಥಿತಿ: ದೂರದೃಷ್ಟಿಯ ನಿರ್ಧಾರ

1-sadsadasd

Session; ಈಡೇರದ ಆಶಯ: ಈ ಬಾರಿಯೂ ಉತ್ತರ ಕರ್ನಾಟಕದ ಸಮಸ್ಯೆಗೆ ಸಿಕ್ಕಿಲ್ಲ ಅಭಯ

1-sadsad

Kota Shivarama Karanth; ಅನಂತತೆಗಳ ಆಗರ ಶಿವರಾಮ ಕಾರಂತ

1-sdsdasdas

Illiterate; ಅಕ್ಷರಸ್ಥನಿಗೆ ಅನಕ್ಷರಸ್ಥರ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TDY-11

Fighter Teaser ಔಟ್: ಇಂಟರ್‌ನೆಟ್‌ ನಲ್ಲಿ ಬೆಂಕಿ ಹಚ್ಚಿದ ಹೃತಿಕ್‌ – ದೀಪಿಕಾ ಕೆಮೆಸ್ಟ್ರಿ

Tollywood: ಗೆಳತಿ ಆತ್ಮಹತ್ಯೆ ಪ್ರಕರಣದಲ್ಲಿ ʼಪುಷ್ಪʼ ನಟನ ಬಂಧನ; ಚಿತ್ರೀಕರಣಕ್ಕೆ ಅಡ್ಡಿ

Tollywood: ಗೆಳತಿ ಆತ್ಮಹತ್ಯೆ ಪ್ರಕರಣದಲ್ಲಿ ʼಪುಷ್ಪʼ ನಟನ ಬಂಧನ; ಚಿತ್ರೀಕರಣಕ್ಕೆ ಅಡ್ಡಿ

TOXIC

Welcome to ‘Toxic’ World: ರಾಕಿಭಾಯ್‌ ಹೊಸ ಸಿನಿಮಾದ ಟೈಟಲ್‌ ಬಿಡುಗಡೆ

Mumbai: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಬಾಲಿವುಡ್ ನ ಹಿರಿಯ ನಟ ʻಜೂನಿಯರ್ ಮೆಹಮೂದ್ʼ ನಿಧನ

Mumbai: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಬಾಲಿವುಡ್ ನ ಹಿರಿಯ ನಟ ʻಜೂನಿಯರ್ ಮೆಹಮೂದ್ʼ ನಿಧನ

1-sadads

Viral ‘drunk’ video; ವದಂತಿಗಳಿಗೆ ತೆರೆ ಎಳೆದ ಸನ್ನಿ ಡಿಯೋಲ್

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

mPuttur ಹಾಲು ಸಂಸ್ಕರಣೆ, ಪ್ಯಾಕಿಂಗ್‌ ಘಟಕ: ಜಾಗ ಮಂಜೂರಿಗೆ ಸರಕಾರದ ಅನುಮತಿ

Puttur ಹಾಲು ಸಂಸ್ಕರಣೆ, ಪ್ಯಾಕಿಂಗ್‌ ಘಟಕ: ಜಾಗ ಮಂಜೂರಿಗೆ ಸರಕಾರದ ಅನುಮತಿ

Actress Leelavathi ಲೀನಾ ಸಿಕ್ವೇರಾ ಲೀಲಾವತಿಯಾಗಿ ಸಿನಿ ಲೋಕದ ಪಯಣ

Actress Leelavathi ಲೀನಾ ಸಿಕ್ವೇರಾ ಲೀಲಾವತಿಯಾಗಿ ಸಿನಿ ಲೋಕದ ಪಯಣ

priyank

Savarkar ಭಾವಚಿತ್ರ ಅಳವಡಿಕೆ ಚರ್ಚೆ ಮುನ್ನೆಲೆಗೆ

RBI

Repo ದರ ಯಥಾಸ್ಥಿತಿ: ದೂರದೃಷ್ಟಿಯ ನಿರ್ಧಾರ

1-sadsadasd

Session; ಈಡೇರದ ಆಶಯ: ಈ ಬಾರಿಯೂ ಉತ್ತರ ಕರ್ನಾಟಕದ ಸಮಸ್ಯೆಗೆ ಸಿಕ್ಕಿಲ್ಲ ಅಭಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.