ಚಕ್ರವರ್ತಿ ಚರಿತ್ರೆ : ಡಾನ್‌ವೊಬ್ಬನ ಹೈವೋಲ್ಟೇಜ್‌ ಸ್ಟೋರಿ


Team Udayavani, Apr 9, 2017, 4:02 PM IST

1 nn.jpg

ದರ್ಶನ್‌ ನಾಯಕರಾಗಿರುವ “ಚಕ್ರವರ್ತಿ’ ಚಿತ್ರ ಏಪ್ರಿಲ್‌ 14 ರಂದು ಬಿಡುಗಡೆಯಾಗುತ್ತಿದೆ. ಚಿತ್ರ ಆರಂಭವಾದ ದಿನದಿಂದಲೂ ಅಭಿಮಾನಿಗಳ ಕುತೂಹಲಕ್ಕೆ ಕಾರಣವಾದ ಈ ಚಿತ್ರದಲ್ಲಿ ದರ್ಶನ್‌ ಮೂರು ಶೇಡ್‌ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಅವರ ಬದಲಾದ ಗೆಟಪ್‌ ಅನ್ನು ಕೂಡಾ ಅಭಿಮಾನಿಗಳು ಸ್ವಾಗತಿಸಿದ್ದು, ಅದೇ ರೀತಿ ಸಿನಿಮಾವನ್ನು ಜನ ಇಷ್ಟಪಡುತ್ತಾರೆಂಬ ವಿಶ್ವಾಸ ಚಿತ್ರತಂಡಕ್ಕಿದೆ. ದರ್ಶನ್‌ ಅವರ ಕೆಲವು ಸಿನಿಮಾಗಳಿಗೆ ಸಂಭಾಷಣೆ ಬರೆದಿರುವ ಚಿಂತನ್‌ ಈ ಚಿತ್ರದ ನಿರ್ದೇಶಕರು. ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿರುವ ಚಿಂತನ್‌ “ಚಕ್ರವರ್ತಿ’ ಬಗ್ಗೆ ಇಲ್ಲಿ ಮಾತನಾಡಿದ್ದಾರೆ ….

“ನಿಜಕ್ಕೂ ನಾನು ಅದೃಷ್ಟವಂತ ‘ – ಹೀಗೆ ಖುಷಿಯಿಂದ ಹೇಳಿಕೊಳ್ಳುತ್ತಾರೆ ಚಿಂತನ್‌. ಚಿಂತನ್‌ ಬೇರ್ಯಾರೂ ಅಲ್ಲ, “ಚಕ್ರವರ್ತಿ’ ಚಿತ್ರದ ನಿರ್ದೇಶಕರು. “ಚಕ್ರವರ್ತಿ’ ಅವರ ನಿರ್ದೇಶನದ ಚೊಚ್ಚಲ ಸಿನಿಮಾ. ಚೊಚ್ಚಲ ಸಿನಿಮಾದಲ್ಲೇ ಸ್ಟಾರ್‌ ನಟನ ಹಾಗೂ ಬಿಗ್‌ಬಜೆಟ್‌ನ ಸಿನಿಮಾ ನಿರ್ದೇಶಿಸಿದ ಖುಷಿ ಚಿಂತನ್‌ಗಿದೆ. ಅದಕ್ಕಿಂತ ಹೆಚ್ಚಾಗಿ ಈಗಾಗಲೇ ಸಿನಿಮಾ ಬಗ್ಗೆ ಹೆಚ್ಚುತ್ತಿರುವ ಕ್ರೇಜ್‌ ಕಂಡು ಚಿಂತನ್‌ ಖುಷಿಯಾಗಿದ್ದಾರೆ. “ಮೊದಲ ಸಿನಿಮಾದಲ್ಲೇ ಒಳ್ಳೆಯ ತಂಡ ಸಿಕ್ಕಿದೆ. ಎಲ್ಲರ ಪ್ರೋತ್ಸಾಹದಿಂದ ಸಿನಿಮಾ ನಾವು ಅಂದುಕೊಂಡಂತೆ ಬಂದಿದೆ. ದರ್ಶನ್‌ ಅಭಿಮಾನಿಗಳು ಏನು ಬಯಸುತ್ತಾರೋ ಆ ಎಲ್ಲಾ ಅಂಶಗಳು ಈ ಸಿನಿಮಾದಲ್ಲಿದೆ’ ಎನ್ನುತ್ತಾರೆ ಚಿಂತನ್‌. ಚಿಂತನ್‌, ದರ್ಶನ್‌ ಕ್ಯಾಂಪ್‌ಗೆ ಹೊಸದಾಗಿ ಸೇರಿಕೊಂಡವರಲ್ಲ. ಅನೇಕ ವರ್ಷಗಳಿಂದ ದರ್ಶನ್‌ ಸಿನಿಮಾಗಳಿಗೆ ಕೆಲಸ ಮಾಡಿಕೊಂಡು ಬಂದಿದ್ದಾರೆ.

ಸಂಭಾಷಣೆಯಿಂದ ಹಿಡಿದು ಕಥೆ ಡಿಸ್ಕಶನ್‌ ವರೆಗೂ ದರ್ಶನ್‌ ಜೊತೆ ಚಿಂತನ್‌ ತೊಡಗಿಸಿಕೊಂಡಿದ್ದಾರೆ. ಹಾಗಾಗಿ, ದರ್ಶನ್‌ ಏನು ಬಯಸುತ್ತಾರೆ, ಅವರ ಬಾಡಿ ಲಾಂಗ್ವೇಜ್‌ ಹೇಗಿರುತ್ತದೆ ಎಂಬುದು ಚಿಂತನ್‌ಗೆ ಚೆನ್ನಾಗಿಯೇ ಗೊತ್ತಿದೆ. ಅವೆಲ್ಲವೂ “ಚಕ್ರವರ್ತಿ’ಯಲ್ಲಿ ವಕೌìಟ್‌ ಆಗಿದೆ ಎನ್ನುತ್ತಾರೆ ಚಿಂತನ್‌. “ಈ ಸಿನಿಮಾದಲ್ಲಿ ದರ್ಶನ್‌ ಅವರನ್ನು ಬೇರೆ ರೀತಿ ತೋರಿಸಲು ಪ್ರಯತ್ನಿಸಿದ್ದೇನೆ. ಅನೇಕ ವರ್ಷಗಳಿಂದ ದರ್ಶನ್‌ ಆವರನ್ನು ಹತ್ತಿರದಿಂದ ನೋಡಿದ್ದರಿಂದ ನನಗೆ ಅವರ ಬಾಡಿ ಲಾಂಗ್ವೇಜ್‌, ಮ್ಯಾನರಿಸಂ ಎಲ್ಲವೂ ಚೆನ್ನಾಗಿ ಗೊತ್ತಿತ್ತು. ಅದಕ್ಕೆ ತಕ್ಕಂತೆ ಕಥೆ ಮಾಡಿದ್ದೇವೆ’ ಎನ್ನುವುದು ಚಿಂತನ್‌ ಮಾತು. 

3 ಶೇಡ್‌ನ‌ಲ್ಲಿ ದರ್ಶನ್‌ ಖದರ್‌
ಈಗಾಗಲೇ “ಚಕ್ರವರ್ತಿ’ಯಲ್ಲಿ ದರ್ಶನ್‌ ಅವರ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಂಡಿರುವ ಫೋಟೋಗಳು ರಾರಾಜಿಸುತ್ತಿವೆ. ಮೂರು ಗೆಟಪ್‌ ಗಳಲ್ಲಿ ದರ್ಶನ್‌ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದು, ಮೂರಕ್ಕೆ ಮೂರೂ ಗೆಟಪ್‌ಗ್ಳನ್ನು ಅಭಿಮಾನಿಗಳು ಇಷ್ಟಪಟ್ಟಿದ್ದಾರೆ. ಅಷ್ಟಕ್ಕೂ ಒಂದೇ ಸಿನಿಮಾದಲ್ಲಿ ದರ್ಶನ್‌ ಮೂರು ಅವತಾರವೆತ್ತಲು ಕಾರಣವೇನು ಎಂದರೆ ಕಥೆ ಎಂದು ಉತ್ತರಿಸುತ್ತಾರೆ ಚಿಂತನ್‌.

“ಚಿತ್ರದಲ್ಲಿ ಕಥೆಗೂ ಹೆಚ್ಚಿನ ಪ್ರಾಮುಖ್ಯತೆ ಕೊಟ್ಟಿದ್ದೇವೆ. ಇದೊಂದು ಗಟ್ಟಿ ಕಥೆ ಹೊಂದಿರುವ ಕಮರ್ಷಿಯಲ್‌ ಸಿನಿಮಾ. ಚಿತ್ರ 80ರ ದಶಕದ ಅಂತ್ಯದಲ್ಲಿ ಕಥೆ ತೆರೆದುಕೊಳ್ಳುತ್ತದೆ. ಹೀಗೆ ತೆರೆದುಕೊಳ್ಳುವ ಕಥೆ ಮೂರು ಶೇಡ್‌ ಗಳಿಗೆ ದಾರಿ ಮಾಡಿಕೊಡುತ್ತದೆ. ಒಂದೇ ಸಿನಿಮಾದಲ್ಲಿ ದರ್ಶನ್‌ ಅವರನ್ನು ಮೂರು ಶೇಡ್‌ಗಳಲ್ಲಿ ನೋಡುವ ಅವಕಾಶ ಅವರ ಅಭಿಮಾನಿಗಳಿಗೆ ಸಿಕ್ಕಿದೆ’ ಎನ್ನುತ್ತಾರೆ ಚಿಂತನ್‌. ಚಿತ್ರದಲ್ಲಿ ದರ್ಶನ್‌ ಡಾನ್‌ ಆಗಿ ಕಾಣಿಸಿಕೊಂಡಿದ್ದಾರೆ.

ಅದು ಇಂಟರ್‌ನ್ಯಾಶನಲ್‌ ಲೆವೆಲ್‌ನ ಡಾನ್‌. ಒಬ್ಬ ಸಾಮಾನ್ಯ ವ್ಯಕ್ತಿ ಪರಿಸ್ಥಿತಿಯಿಂದಾಗಿ ಹೇಗೆ ಡಾನ್‌ ಆಗುತ್ತಾನೆ ಮತ್ತು ಅದಕ್ಕೆ ಕಾರಣವಾಗುವ ಅಂಶಗಳೇನೂ ಎಂಬುದನ್ನು ಇಲ್ಲಿ ಹೇಳಲಾಗಿದೆ. ತನ್ನ ಸುತ್ತಲ ಪರಿಸರದಲ್ಲಿ ಡಾನ್‌ ಆಗಿ ಮೆರೆಯುತ್ತಿದ್ದ ವ್ಯಕ್ತಿ ಮುಂದೆ ಹೇಗೆ ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಯುತ್ತಾನೆ, ವಿದೇಶಗಳಲ್ಲೂ ತನ್ನ ಸಾಮ್ರಾಜ್ಯವನ್ನು ಹೇಗೆ ವಿಸ್ತರಿಸುತ್ತಾನೆ ಎಂಬ ಅಂಶ ಇಲ್ಲಿ ತುಂಬಾ ಕುತೂಹಲಕಾರಿಯಾಗಿದೆ’ ಎನ್ನುತ್ತಾರೆ ಚಿಂತನ್‌. ಹಾಗಾದರೆ ಇದು ಔಟ್‌ ಅಂಡ್‌ ಔಟ್‌ ಆ್ಯಕ್ಷನ್‌ ಸಿನಿಮಾನಾ ಎಂಬ ಪ್ರಶ್ನೆ ಬರುತ್ತದೆ. ಅದಕ್ಕೆ ಉತ್ತರ ಖಂಡಿತಾ ಅಲ್ಲ, ಇದೊಂದು ಫ್ಯಾಮಿಲಿ ಎಂಟರ್‌ಟೈನರ್‌ ಎನ್ನುತ್ತಾರೆ ಅವರು. “ಚಿತ್ರದಲ್ಲಿ ಮಾಸ್‌ ಹಾಗೂ ಕ್ಲಾಸ್‌ ಪ್ರೇಕ್ಷಕರಿಗೆ ಬೇಕಾಗುವಂತಹ ಅಂಶಗಳಿವೆ. ಇಲ್ಲಿ ಸೆಂಟಿಮೆಂಟ್‌ಗೂ ಹೆಚ್ಚು ಒತ್ತುಕೊಡಲಾಗಿದೆ. ಆರಂಭದಲ್ಲಿ ಲವ್‌, ಮದುವೆ … ಹೀಗೆ ಫ್ಯಾಮಿಲಿ ಡ್ರಾಮಾ ಕೂಡಾ ಇದೆ. ಖಂಡಿತಾ ಇದು ಪ್ರೇಕ್ಷಕರಿಗೆ ಇಷ್ಟವಾಗುತ್ತದೆ. ಆ ಕಾರಣದಿಂದಲೇ ಇಲ್ಲಿ ತುಂಬಾ ಮೆಲೋಡಿ ಹಾಡುಗಳಿವೆ. ಹೊಸದಾಗಿ ಮದುವೆಯಾದ ಗಂಡ-ಹೆಂಡತಿಯ ನಡುವಿನ ಪ್ರೀತಿ ಸೇರಿದಂತೆ ಸಾಕಷ್ಟು ಸೂಕ್ಷ್ಮ ಅಂಶಗಳನ್ನು ಇಲ್ಲಿ ಹೇಳಲಾಗಿದೆ’ ಎಂದು ಸಿನಿಮಾ ಬಗ್ಗೆ ಹೇಳುತ್ತಾರೆ ಚಿಂತನ್‌. ಮೊದಲೇ ಹೇಳಿದಂತೆ ಚಿತ್ರದಲ್ಲಿ ದರ್ಶನ್‌ ಇಂಟರ್‌ನ್ಯಾಶನಲ್‌ ಲೆವೆಲ್‌ನ ಡಾನ್‌. ಹಾಗಾಗಿ, ಮಲೇಷ್ಯಾ ಹಾಗೂ ಥಾಯ್ಲೆಂಡ್‌ಗಳಲ್ಲಿ 20 ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ. ಒಬ್ಬ ಡಾನ್‌ ಬೇರೆ ದೇಶಗಳಲ್ಲೂ ತನ್ನ ಸಾಮ್ರಾಜ್ಯವನ್ನು ಹೇಗೆ ವಿಸ್ತರಿಸಿರುತ್ತಾನೆ ಎಂಬುದನ್ನು ಇಲ್ಲಿ ತೋರಿಸಲಾಗಿದೆಯಂತೆ.

ಮೊದಲ ಚಿತ್ರದಲ್ಲಿ ಬಹುತಾರಾಗಣ
ಚಿಂತನ್‌ ಖುಷಿಗೆ ಮತ್ತೂಂದು ಕಾರಣವೆಂದರೆ ಚಿತ್ರದ ತಾರಾಬಳಗ. ಮೊದಲ ಚಿತ್ರದಲ್ಲೇ ದರ್ಶನ್‌ರಂತಹ ಸ್ಟಾರ್‌ ನಟನಿಗೆ ಸಿನಿಮಾ ಮಾಡಿದ ಖುಷಿ ಒಂದು ಕಡೆಯಾದರೆ ಮೊದಲ ಸಿನಿಮಾದಲ್ಲಿ ಬಹುತಾರಾಗಣ ಸಿಕ್ಕ ಖುಷಿ ಮತ್ತೂಂದು ಕಡೆ. ಚಿತ್ರದಲ್ಲಿ ದೀಪಾ ಸನ್ನಿಧಿ ನಾಯಕಿಯಾದರೆ, ಸೃಜನ್‌ ಲೋಕೇಶ್‌, ಆದಿತ್ಯ, ಯಶಸ್‌, ಕುಮಾರ್‌ ಬಂಗಾರಪ್ಪ, ಚಾರುಲತಾ, ಶರತ್‌ ಲೋಹಿತಾಶ್ವ, ದಿನಕರ್‌ ತೂಗುದೀಪ ಸೇರಿದಂತೆ ಅನೇಕರು ಈ ಚಿತ್ರದಲ್ಲಿ ನಟಿಸಿದ್ದಾರೆ. ಮೊದಲ ಚಿತ್ರದಲ್ಲೇ ಇಷ್ಟೊಂದು ಮಂದಿ ಕಲಾವಿದರ ಜೊತೆ ಕೆಲಸ ಮಾಡಿದ ಖುಷಿ ಚಿಂತನ್‌ಗಿದೆ. “ಇಂತಹ ಅವಕಾಶ ಎಲ್ಲರಿಗೂ ಸಿಗಲ್ಲ. ಆದರೆ ನನಗೆ ಮೊದಲ ಸಿನಿಮಾದಲ್ಲೇ ಸಿಕ್ಕಿದೆ. ದರ್ಶನ್‌ ಸೇರಿದಂತೆ ಪ್ರತಿಯೊಬ್ಬರ ಪ್ರೋತ್ಸಾಹದಿಂದ ಸಿನಿಮಾ ನನ್ನ ಕಲ್ಪನೆಯಂತೆ ಮೂಡಿಬಂದಿದೆ’ ಎಂದು ಹೇಳುತ್ತಾರೆ.

ಈ ಚಿತ್ರದ ಮೂಲಕ ದರ್ಶನ್‌ ಸಹೋದರ ದಿನಕರ್‌ ತೂಗುದೀಪ ಕೂಡಾ ಬಣ್ಣ ಹಚ್ಚಿದ್ದಾರೆ. “ದಿನಕರ್‌ ವಿಲನ್‌ ಆಗಿ ನಟಿಸಿದ್ದಾರೆ. ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಒಬ್ಬ ಒಳ್ಳೆಯ ವಿಲನ್‌ ಸಿಗುತ್ತಾರೆ ಎಂಬ ವಿಶ್ವಾಸವಿದೆ’ ಎನ್ನುತ್ತಾರೆ ಚಿಂತನ್‌.

ಇನ್ನು, ನಿರ್ಮಾಪಕ ಸಿದ್ಧಾಂತ್‌ ಬಗ್ಗೆ ಹೇಳಲು ಚಿಂತನ್‌ ಮರೆಯುವುದಿಲ್ಲ. “ಒಬ್ಬ ನಿರ್ದೇಶಕನಾಗಿ ನಾನು ಏನೇ ಕನಸು ಕಂಡಿರಬಹುದು. ಅದನ್ನು ತೆರೆಮೇಲೆ ತರುವಲ್ಲಿ ನಿರ್ಮಾಪಕನ ಸಹಕಾರ ತುಂಬಾ ಮುಖ್ಯವಾಗುತ್ತದೆ. ಆ ನಿಟ್ಟಿನಲ್ಲಿ ನಿರ್ಮಾಪಕ ಸಿದ್ಧಾಂತ್‌ ಅವರ ಸಿನಿಮಾ ಪ್ರೀತಿಯನ್ನು ಮೆಚ್ಚಲೇಬೇಕು.

ಸಿನಿಮಾ ಇವತ್ತು ಇಷ್ಟೊಂದು ಅದ್ಧೂರಿಯಾಗಿ ಮೂಡಿಬಂದಿದೆ ಎಂದರೆ ಅದಕ್ಕೆ ಕಾರಣ ಸಿದ್ಧಾಂತ್‌. ನಿರ್ದೇಶಕನಾಗಿ ನಾನು ಕೇಳಿದ್ದೆಲ್ಲವನ್ನು ನೀಡಿದ್ದಾರೆ’ ಎನ್ನುತ್ತಾರೆ. “ಚಕ್ರವರ್ತಿ’ ಚಿತ್ರ ಏಪ್ರಿಲ್‌ 14 ರಂದು ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ಈಗಾಗಲೇ ಬಿಝಿನೆಸ್‌ ವಿಷಯದಲ್ಲೂ “ಚಕ್ರವರ್ತಿ’ ಸುದ್ದಿ ಮಾಡುತ್ತಿದ್ದು, ಸುಮಾರು 350 ರಿಂದ 400 ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. “ಸಿನಿಮಾದ ನಿರೀಕ್ಷೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಚಿತ್ರ ಆ ನಿರೀಕ್ಷೆಯ ಮಟ್ಟವನ್ನು ತಲುಪುತ್ತದೆ ಎಂಬ ವಿಶ್ವಾಸವಿದೆ’ ಎನ್ನುವುದು ಚಿಂತನ್‌ ಮಾತು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

kushee ravi spoke about Case of Kondana

Case of Kondana; ‘ಖುಷಿ’ಗೆ ವಿಭಿನ್ನ ಪಾತ್ರದ ಮೇಲೆ ಭರ್ಜರಿ ನಿರೀಕ್ಷೆ…

aradhana

Aradhana; ಕಾಟೇರಾದಲ್ಲಿ ನಾನು ಸ್ಟ್ರಾಂಗ್‌ ಗರ್ಲ್; ಮಾಲಾಶ್ರೀ ಪುತ್ರಿಯ ಗ್ರ್ಯಾಂಡ್ ಎಂಟ್ರಿ

rishab-shetty

ಪಂಜುರ್ಲಿ ಕೋಲದಲ್ಲಿ ದೈವ ಬಣ್ಣ ತೆಗೆದು ಪ್ರಸಾದ ನೀಡಿದ್ದು ಮರೆಯಲಾಗದ್ದು; ರಿಷಬ್ ಶೆಟ್ಟಿ

TDY-39

ಸಾರ್ವಜನಿಕರೇ ಆನ್‌ಲೈನ್‌ ಆಮಿಷಕ್ಕೆ ಮಾರುಹೋಗದಿರಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.