Case of Kondana; ‘ಖುಷಿ’ಗೆ ವಿಭಿನ್ನ ಪಾತ್ರದ ಮೇಲೆ ಭರ್ಜರಿ ನಿರೀಕ್ಷೆ…


Team Udayavani, Jan 11, 2024, 3:11 PM IST

kushee ravi spoke about Case of Kondana

“ದಿಯಾ’ ಖ್ಯಾತಿಯ ಖುಷಿ ರವಿ ನಾಯಕಿಯಾಗಿ ಅಭಿನಯಿಸಿರುವ “ಕೇಸ್‌ ಆಫ್ ಕೊಂಡಾಣ’ ಸಿನಿಮಾ ಜ. 26ರಂದು ತೆರೆಗೆ ಬರುತ್ತಿದೆ. ಇನ್ನು ಈ ಸಿನಿಮಾದಲ್ಲಿ ಮೊದಲ ಬಾರಿಗೆ ನಾಯಕ ನಟ ವಿಜಯ ರಾಘವೇಂದ್ರ ಅವರಿಗೆ ಜೋಡಿಯಾಗಿ ಅಭಿನಯಿಸಿರುವ ಖುಷಿ ರವಿ, ಸಿನಿಮಾದ ಬಗ್ಗೆ ಮತ್ತು ತಮ್ಮ ಪಾತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಯ ಮಾತುಗಳನ್ನಾಡಿದ್ದಾರೆ.

“ಕೇಸ್‌ ಆಫ್ ಕೊಂಡಾಣ’ ಸಿನಿಮಾದಲ್ಲಿ ನಿಮ್ಮ ಪಾತ್ರವೇನು?

“ಕೇಸ್‌ ಆಫ್ ಕೊಂಡಾಣ’ ಸಿನಿಮಾದಲ್ಲಿ ನಾನು ನಾನು ವಿಜಯ ರಾಘವೇಂದ್ರ ಅವರಿಗೆ ಜೋಡಿಯಾಗಿ ಕಾಣಿಸಿ ಕೊಂಡಿದ್ದೇನೆ. ಈ ಸಿನಿಮಾದಲ್ಲಿ ನನ್ನದು ಡಾಕ್ಟರ್‌ ಸಹನಾ ಎಂಬ ವೈದ್ಯೆಯ ಪಾತ್ರ. ತುಂಬ ವೃತ್ತಿಪರವಾಗಿ ಕೆಲಸ ಮಾಡುವ, ಬಡವರಿಗೆ ತನ್ನಿಂದ ಒಂದಷ್ಟು ಸಹಾಯ ವಾಗಬೇಕು ಎಂದು ಬಯಸುವಂಥ ಹುಡುಗಿಯ ಪಾತ್ರವಿದು. ಸಿನಿಮಾದಲ್ಲಿ ನನ್ನ ಪಾತ್ರಕ್ಕೆ ಅದರದ್ದೇ ಆದ ಮಹತ್ವವಿದೆ.

ಮೊದಲ ಬಾರಿ ವಿಜಯ ರಾಘವೇಂದ್ರ ಜತೆ ಅಭಿನಯಿಸಿದ್ದು ಹೇಗಿತ್ತು?

ವಿಜಯ ರಾಘವೇಂದ್ರ ತುಂಬ ವೃತ್ತಿಪರ ಕಲಾವಿದ. ಒಂದು ಪಾತ್ರಕ್ಕೆ ಹೇಗೆ ಜೀವ ತುಂಬಬೇಕು ಎಂಬುದು ಅವರಿಗೆ ತುಂಬ ಚೆನ್ನಾಗಿ ಗೊತ್ತಿದೆ. ಸಹ ಕಲಾವಿದರಿಗೆ ಒಂದಷ್ಟು ಸ್ಫೂರ್ತಿ ತುಂಬಿ, ಅವರನ್ನು ಚೆನ್ನಾಗಿ ಅಭಿನಯಿಸುವಂತೆ ಮಾಡುವ ಗುಣ ಅವರಲ್ಲಿದೆ. ಸಿನಿಮಾದ ಶೂಟಿಂಗ್‌ ವೇಳೆ ವಿಜಯ ರಾಘವೇಂದ್ರ ಅವರಿಂದ ಸಾಕಷ್ಟು ಕಲಿತಿದ್ದೇನೆ. ತುಂಬ ಕಂಫ‌ರ್ಟ್‌ ಜೋನ್‌ನಲ್ಲಿ ಅವರೊಂದಿಗೆ ಕೆಲಸ ಮಾಡಿದ್ದೇನೆ.

“ಕೇಸ್‌ ಆಫ್ ಕೊಂಡಾಣ’ ಚಿತ್ರೀಕರಣದ ಅನುಭವ ಹೇಗಿತ್ತು?

ತುಂಬ ಚೆನ್ನಾಗಿತ್ತು. ಕಳೆದ ವರ್ಷ ಜನವರಿಯಲ್ಲಿ ಇದೇ ವೇಳೆ ಸಿನಿಮಾದ ಶೂಟಿಂಗ್‌ ನಡೆಯುತ್ತಿತ್ತು. ಈ ವರ್ಷ ಜನವರಿ ವೇಳೆಗೆ ಸಿನಿಮಾದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಸಿನಿಮಾ ಬಿಡುಗಡೆಗೆ ರೆಡಿಯಾಗುತ್ತಿದೆ. ಇಡೀ ಚಿತ್ರತಂಡ ನಿಗಧಿತ ಸಮಯದಲ್ಲಿ, ಅಂದುಕೊಂಡಂತೆ “ಕೇಸ್‌ ಆಫ್ ಕೊಂಡಾಣ’ ಸಿನಿಮಾವನ್ನು ತೆರೆಗೆ ತರುತ್ತಿದೆ. ತುಂಬ ವೃತ್ತಿಪರವಾಗಿ, ಅಚ್ಚುಕಟ್ಟಾಗಿ ಈ ಸಿನಿಮಾದ ಕೆಲಸವಾಗಿದೆ.

 “ಕೇಸ್‌ ಆಫ್ ಕೊಂಡಾಣ’ ಹೇಗೆ ವಿಭಿನ್ನ?

ನಮ್ಮ ನಡುವೆಯೇ ನಡೆಯಬಹುದಾದ ವಿಷಯವನ್ನು ಇಟ್ಟುಕೊಂಡು ತುಂಬ ರಿಯಲಿಸ್ಟಿಕ್‌ ಆಗಿ “ಕೇಸ್‌ ಆಫ್ ಕೊಂಡಾಣ’ ಸಿನಿಮಾವನ್ನು ತೋರಿಸಲಾಗಿದೆ. ಸಾಮಾನ್ಯವಾಗಿ ಅನೇಕ ಸಿನಿಮಾದಲ್ಲಿ ಲಾಜಿಕ್‌ ಇರುವುದಿಲ್ಲ ಎಂಬ ಮಾತಿದೆ. ಆದರೆ ಈ ಸಿನಿಮಾದಲ್ಲಿ ಪ್ರತಿಯೊಂದಕ್ಕೂ ಸಾಕಷ್ಟು ಲಾಜಿಕ್‌ ಇಟ್ಟುಕೊಂಡು ಚಿತ್ರಕಥೆಯನ್ನು ಹೇಳಲಾಗಿದೆ. ಆಡಿಯನ್ಸ್‌ಗೆ ತುಂಬ ನೈಜವಾಗಿ ಸಿನಿಮಾ ಕನೆಕ್ಟ್ ಆಗುತ್ತದೆ.

“ಕೇಸ್‌ ಆಫ್ ಕೊಂಡಾಣ’ ಮೇಲೆ ನಿಮ್ಮ ನಿರೀಕ್ಷೆ?

ಇತ್ತೀಚೆಗೆ ಇಂಥ ಸಿನಿಮಾಗಳನ್ನು ನೋಡುವವರ ಸಂಖ್ಯೆ ಹೆಚ್ಚಾಗುತ್ತಿದೆ. “ಕೇಸ್‌ ಆಫ್ ಕೊಂಡಾಣ’ ಪ್ರತಿ ಕ್ಷಣ ಕೂಡ ನೋಡುಗರ ಕುತೂಹಲ ಕೆರಳಿಸುತ್ತ ಕ್ಲೈಮ್ಯಾಕ್ಸ್‌ವರೆಗೆ ಕರೆದುಕೊಂಡು ಬರುತ್ತದೆ. ಈಗಾಗಲೇ ಸಿನಿಮಾದ ಫ‌ಸ್ಟ್‌ಲುಕ್‌, ಟೀಸರ್‌ ಎಲ್ಲದಕ್ಕೂ ಅದ್ಭುತ ರೆಸ್ಪಾನ್ಸ್‌ ಸಿಗುತ್ತಿದೆ. ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆಯ ಮಾತುಗಳು ಕೇಳಿಬರುತ್ತಿದೆ. ಖಂಡಿತವಾಗಿಯೂ ಸಿನಿಮಾ ಥಿಯೇಟರ್‌ನಲ್ಲೂ ಆಡಿಯನ್ಸ್‌ಗೆ ಇಷ್ಟವಾಗಲಿದೆ ಎಂಬ ವಿಶ್ವಾಸವಿದೆ.

ಜಿ. ಎಸ್‌. ಕಾರ್ತಿಕ ಸುಧನ್‌

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aradhana

Aradhana; ಕಾಟೇರಾದಲ್ಲಿ ನಾನು ಸ್ಟ್ರಾಂಗ್‌ ಗರ್ಲ್; ಮಾಲಾಶ್ರೀ ಪುತ್ರಿಯ ಗ್ರ್ಯಾಂಡ್ ಎಂಟ್ರಿ

rishab-shetty

ಪಂಜುರ್ಲಿ ಕೋಲದಲ್ಲಿ ದೈವ ಬಣ್ಣ ತೆಗೆದು ಪ್ರಸಾದ ನೀಡಿದ್ದು ಮರೆಯಲಾಗದ್ದು; ರಿಷಬ್ ಶೆಟ್ಟಿ

TDY-39

ಸಾರ್ವಜನಿಕರೇ ಆನ್‌ಲೈನ್‌ ಆಮಿಷಕ್ಕೆ ಮಾರುಹೋಗದಿರಿ

ಉದಯವಾಣಿ ಸಂದರ್ಶನ: ಸಿಎಂ ಆಗಲು ಸಮಾವೇಶ ಮಾಡುತ್ತಿಲ್ಲ; ಸಿದ್ದರಾಮಯ್ಯ  

ಉದಯವಾಣಿ ಸಂದರ್ಶನ: ಸಿಎಂ ಆಗಲು ಸಮಾವೇಶ ಮಾಡುತ್ತಿಲ್ಲ; ಸಿದ್ದರಾಮಯ್ಯ  

thumb-3

ಯೋಜನೆ- ಯೋಚನೆ ಅಖಂಡ ಭಾರತಕ್ಕಾಗಿ: ಉದಯವಾಣಿಯೊಂದಿಗೆ ಡಾ| ಡಿ. ವೀರೇಂದ್ರ ಹೆಗ್ಗಡೆ ಮಾತುಕತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.