ಸಾಹೇಬರು ಖುಷ್‌ಹುವಾ!


Team Udayavani, Jan 4, 2018, 11:08 AM IST

Manoranjan.jpg

“ಬೃಹಸ್ಪತಿ’… ಇದು ರವಿಚಂದ್ರನ್‌ ಪುತ್ರ ಮನೋರಂಜನ್‌ ಅಭಿನಯದ ಎರಡನೇ ಚಿತ್ರ. ಇದು ತಮಿಳಿನ “ವಿಐಪಿ’ ರಿಮೇಕ್‌. ಅಲ್ಲಿ ಧನುಷ್‌ ಮಾಡಿದ್ದ ಪಾತ್ರವನ್ನು ಇಲ್ಲಿ ಮನೋರಂಜನ್‌ ನಿರ್ವಹಿಸಿದ್ದಾರೆ. ಮೊದಲ ಚಿತ್ರಕ್ಕೂ ಎರಡನೇ ಚಿತ್ರಕ್ಕೂ ಸಾಕಷ್ಟು ಬದಲಾಗಿರುವ ಮನೋರಂಜನ್‌, “ಬೃಹಸ್ಪತಿ’ಯ ಪಾತ್ರ ಮತ್ತು ಅನುಭವ ಕುರಿತು ಮಾತನಾಡಿದ್ದಾರೆ.

* ಇಲ್ಲಿ ಸಿಕ್ಕಾಪಟ್ಟೆ ವಕೌìಟ್‌ ಮಾಡಿದಂತೆ ಕಾಣುತ್ತಲ್ವಾ?
ಹೌದು, ಕ್ಲೈಮ್ಯಾಕ್ಸ್‌ ದೃಶ್ಯಕ್ಕೆ ಒಂದಷ್ಟು ದೇಹ ಗಟ್ಟಿಗೊಳಿಸಬೇಕಿತ್ತು. ಆ ಪಾತ್ರ ಸ್ಲಿಮ್‌ ಆಗಿ, ಕಟ್ಟುಮಸ್ತಾಠಗಿ ಕಾಣಬೇಕಿತ್ತು. ಹಾಗಾಗಿ ಎಂಟು ಕೆಜಿ ತೂಕ ಕಡಿಮೆ ಮಾಡಿಕೊಂಡೆ. ರೆಗ್ಯುಲರ್‌ ವಕೌìಟ್‌ ಮಾಡಿದೆ. ಸಾಕಷ್ಟು ಡಯೆಟ್‌ ಕೂಡ ಮಾಡಿದೆ. 30 ದಿನಗಳ ಶೂಟಿಂಗ್‌ನಲ್ಲೂ ಡಯೆಟ್‌ನಲ್ಲೇ ಇದ್ದೆ.

* ಬೃಹಸ್ಪತಿ ಬಗ್ಗೆ ಹೇಳುವುದಾದರೆ?
ನಿಜಕ್ಕೂ ಇದು ಚಾಲೆಂಜಿಂಗ್‌ ಸಬೆjಕ್ಟ್. ಧನುಶ್‌ ಅವರ 25ನೇ ಚಿತ್ರವಿದು. ಮೊದಲು ನನಗೆ ಅವಕಾಶ ಬಂದಾಗ, ಮಾಡುವುದೋ, ಬೇಡವೋ ಎಂಬ ಪ್ರಶ್ನೆ ಕಾಡುತ್ತಿತ್ತು. ಯಾಕೆಂದರೆ, ಅಲ್ಲಿ ಧನುಷ್‌ರಂತಹ ಸೂಪರ್‌ಸ್ಟಾರ್‌ ನಟ ಮಾಡಿದ ಪಾತ್ರವನ್ನು ನನ್ನ ಕೈಯಲ್ಲಿ ಮಾಡೋಕ್ಕಾಗುತ್ತಾ ಎಂಬ ಅನುಮಾನವಿತ್ತು. ಯಾಕೆಂದರೆ, ನಾನಿನ್ನೂ ಹೊಸಬ. ಆ ಮಟ್ಟಕ್ಕೆ ಜೀವ ತುಂಬಲು ಸಾಧ್ಯನಾ? ಅನಿಸಿತ್ತು. ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಮತ್ತು ನಿರ್ದೇಶಕ ನಂದಕಿಶೋರ್‌ ಅವರು ವಿಶ್ವಾಸ ತುಂಬಿದ್ದರಿಂದ ಒಪ್ಪಿಕೊಂಡೆ. ಇದೊಂದು ಬೇರೆ ರೀತಿಯ ಚಿತ್ರ ಎನ್ನಬಹುದಷ್ಟೇ.

* ಎಲ್ಲೋ ಒಂದು ಕಡೆ ಸರಿಯಾಗಿ ಪ್ರಚಾರ ಸಿಗುತ್ತಿಲ್ಲ ಅನಿಸುತ್ತಿಲ್ಲವೇ?
ಹಾಗೇನೂ ಇಲ್ಲ, ರಾಕ್‌ಲೈನ್‌ ವೆಂಕಟೇಶ್‌ ಅವರು ಏನೇ ಮಾಡಿದರೂ ಪಕ್ಕಾ ಪ್ಲಾನ್‌ ಮಾಡುತ್ತಾರೆ. ಈಗಾಗಲೇ ಸಾಕಷ್ಟು ಟಿವಿ, ಚಾನೆಲ್‌ಗ‌ಳಲ್ಲಿ ಸಂದರ್ಶನ ನಡೆದಿದೆ. ಅವರ ಪ್ಲಾನ್‌ ಪ್ರಕಾರವೇ ನಡೆಯುತ್ತಿದೆ.

* ಇಲ್ಲಿ ಇಷ್ಟವಾದ ಅಂಶ?
ಅಪ್ಪ-ಅಮ್ಮನ ಎಪಿಸೋಡ್‌, ನಾಯಕ-ನಾಯಕಿ ಕಿತ್ತಾಡುವ ದೃಶ್ಯ ಸೇರಿದಂತೆ ಇನ್ನೂ ಕೆಲವು ವಿಶೇಷ ದೃಶ್ಯಗಳು ನನಗಷ್ಟೇ ಅಲ್ಲ, ಎಲ್ಲರಿಗೂ ಇಷ್ಟವಾಗುತ್ತವೆ. ಇನ್ನು, ಲೆಂಥಿ ಡೈಲಾಗ್‌ ಹೇಳಿರುವುದು ಎಲ್ಲರಿಗೂ ಇಷ್ಟ. ಅದೊಂದು ಚಾಲೆಂಜಿಂಗ್‌ ಆಗಿತ್ತು.

* ದೊಡ್ಡ ಬ್ಯಾನರ್‌ನ ಕೆಲಸ ಹೇಗಿತ್ತು?
ನಾನು ನಿಜಕ್ಕೂ ಲಕ್ಕಿ. ಮೊದಲ ಚಿತ್ರ ಜಯಣ್ಣ ಅವರ ಬ್ಯಾನರ್‌ನಲ್ಲಿ ಮಾಡಿದೆ. ಎರಡನೇ ಚಿತ್ರ ಕೂಡ ರಾಕ್‌ಲೈನ್‌ ವೆಂಕಟೇಶ್‌ ಅವರ ಬ್ಯಾನರ್‌ನಲ್ಲಿ ಮಾಡಿದೆ. ನಾನು ಅದೃಷ್ಟವಂತ. ರಾಕ್‌ಲೈನ್‌ ವೆಂಕಟೇಶ್‌ ಅವರನ್ನು ನಾನು ಚಿಕ್ಕಂದಿನಿಂದಲೂ ನೋಡುತ್ತಿದ್ದೇನೆ. ಅವರ ಬ್ಯಾನರ್‌, ನಮ್ಮ ಬ್ಯಾನರ್‌ ಇದ್ದಂತೆ. ನಿನಗೇನು ಬೇಕೋ ಕೇಳು, ಏನಾದರೂ ತಗೋ, ಸುಸ್ತಾದರೆ ರೆಸ್ಟ್‌ ಮಾಡು, ನಿನ್ನನ್ನು ಯಾರೂ ಏನೂ ಕೇಳ್ಳೋಲ್ಲ, ಆರಾಮವಾಗಿ ಕೆಲಸ ಮಾಡು ಅನ್ನುತ್ತಿದ್ದರು. ಅಂತಹ ಬ್ಯಾನರ್‌ನಲ್ಲಿ ಕೆಲಸ ಮಾಡಿದ್ದು ಖುಷಿ ಕೊಟ್ಟಿದೆ. 

* ಕನ್ನಡಕ್ಕೇನಾದ್ರೂ ಬದಲಾವಣೆಯಾಗಿದೆಯಾ?
ನಾನು ಬದಲಾಗಿದ್ದೇನೆ ಅಷ್ಟೇ. “ಸಾಹೇಬ’ ಸಾಫ್ಟ್ ಪಾತ್ರ. ಇಲ್ಲಿ ಟಪೋರಿಯಂತಹ ಪಾತ್ರ. ಸ್ಕ್ರಿಪ್ಟ್ ಹಾಗೇ ಇದ್ದರೂ, ನಾನು ಬದಲಾಗಿದ್ದೇನೆಂದು ಹೇಳಬಹುದು. 

* ಸಿನ್ಮಾ ನೋಡಿದಾಗ ಹೇಗನ್ನಿಸಿತು?
ಡಬ್ಬಿಂಗ್‌ ಮಾಡಿ, ಮೊದಲ ಔಟ್‌ಪುಟ್‌ ನೋಡಿದಾಗ, ಏನೋ ಮಿಸ್‌ ಆಗ್ತಾ ಇದೆ ಅಂತನಿಸಿತು. ನಿರ್ದೇಶಕರಿಗೂ ಹಾಗೇ ಅನಿಸಿದಾಗ, ಪುನಃ  ಡಬ್ಬಿಂಗ್‌ ಮಾಡಿದೆ. ಆ ಬಳಿಕ ನೋಡಿದಾಗ, ಮನಸ್ಸಿಗೆ ಖುಷಿಯಾಯ್ತು. ಈಗ ಆ ಔಟ್‌ಪುಟ್‌ ನೋಡಿದರೆ, ಮೊದಲಿಗಿಂತ ಚೆನ್ನಾಗಿ ಬಂದಿದೆ ಅನಿಸಿತು. 

* ಸಿನಿಮಾ ಬಗ್ಗೆ ಅಪ್ಪಾಜಿ ಏನಂತಾರೆ?
ಮೊದಲು ಈ ಅವಕಾಶ ಬಂದಾಗ, ಡ್ಯಾಡಿಗೆ ಚಿತ್ರ ತೋರಿಸಿದೆ. ಚೆನ್ನಾಗಿರುತ್ತೆ, ನೀನು ಮಾಡು ಅಂದ್ರು. ಈ ಚಿತ್ರ ಒಪ್ಪೋಕೆ ಆ ಕಾರಣವೂ ಒಂದು.

* ಮುಂದೆ ಒಪ್ಪಿದ ಚಿತ್ರ?
ಸದ್ಯಕ್ಕೆ ಯಾವುದಕ್ಕೂ ಸಹಿ ಮಾಡಿಲ್ಲ. ಫೆಬ್ರವರಿಯಲ್ಲಿ ಹೊಸ ಚಿತ್ರ ಅನೌನ್ಸ್‌ ಮಾಡ್ತೀನಿ. “ಸಾಹೇಬ’ ಬಳಿಕ ಬಹಳಷ್ಟು ಚಿತ್ರ ಬಂದವು. ಆ ಪೈಕಿ ಹೊಸಬರೇ ಜಾಸ್ತಿ. ಒಳ್ಳೆಯ ಕಥೆ ಕೇಳಿದ್ದೇನೆ. ನಾಲ್ಕು ಕಥೆಗಳನ್ನು ಹಾಗೇ ಇಟ್ಟಿದ್ದೇನೆ. ಈ ಚಿತ್ರದ ನಂತರ ಆ ಬಗ್ಗೆ ಹೇಳ್ತೀನಿ.

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kushee ravi spoke about Case of Kondana

Case of Kondana; ‘ಖುಷಿ’ಗೆ ವಿಭಿನ್ನ ಪಾತ್ರದ ಮೇಲೆ ಭರ್ಜರಿ ನಿರೀಕ್ಷೆ…

aradhana

Aradhana; ಕಾಟೇರಾದಲ್ಲಿ ನಾನು ಸ್ಟ್ರಾಂಗ್‌ ಗರ್ಲ್; ಮಾಲಾಶ್ರೀ ಪುತ್ರಿಯ ಗ್ರ್ಯಾಂಡ್ ಎಂಟ್ರಿ

rishab-shetty

ಪಂಜುರ್ಲಿ ಕೋಲದಲ್ಲಿ ದೈವ ಬಣ್ಣ ತೆಗೆದು ಪ್ರಸಾದ ನೀಡಿದ್ದು ಮರೆಯಲಾಗದ್ದು; ರಿಷಬ್ ಶೆಟ್ಟಿ

TDY-39

ಸಾರ್ವಜನಿಕರೇ ಆನ್‌ಲೈನ್‌ ಆಮಿಷಕ್ಕೆ ಮಾರುಹೋಗದಿರಿ

ಉದಯವಾಣಿ ಸಂದರ್ಶನ: ಸಿಎಂ ಆಗಲು ಸಮಾವೇಶ ಮಾಡುತ್ತಿಲ್ಲ; ಸಿದ್ದರಾಮಯ್ಯ  

ಉದಯವಾಣಿ ಸಂದರ್ಶನ: ಸಿಎಂ ಆಗಲು ಸಮಾವೇಶ ಮಾಡುತ್ತಿಲ್ಲ; ಸಿದ್ದರಾಮಯ್ಯ  

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.