ಸಿನೆಮಾದ ನಟಿ ಈ 8ರ ಪೋರಿ

ಬಹುಮುಖ ಪ್ರತಿಭೆ ಶ್ಲಾಘಾ ಸಾಲಿಗ್ರಾಮ

Team Udayavani, Mar 19, 2020, 5:37 AM IST

ಸಿನೆಮಾದ ನಟಿ ಈ 8ರ ಪೋರಿ

ಸಣ್ಣ ವಯಸ್ಸಿನಲ್ಲಿ ನಟನೆಯ ಮೂಲಕ ಲಕ್ಷಾಂತರ ಅಭಿಮಾನಿಗಳನ್ನು ಗಳಿಸಿರುವ ಪುಟ್ಟ ಪೋರಿ ಗಿರ್ಮಿಟ್‌ ಸಿನೆಮಾದ ನಾಯಕಿ ಶ್ಲಾಘಾ ಸಾಲಿಗ್ರಾಮ. ಕನ್ನಡದ “ಕಟಕ’ ಸಿನೆಮಾದ ಮೂಲಕ ರಾಜ್ಯಾದ್ಯಂತ ಪರಿಚಿತಳಾಗಿ ಇತ್ತೀಚೆಗೆ ತೆರೆಕಂಡ “ಗಿರ್ಮಿಟ್‌’ ಸಿನೆಮಾದ ಮೂಲಕ ಮತ್ತಷ್ಟು ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡಿದ್ದಾಳೆ.

ಕುಂದಾಪುರದ ಕೆ. ರಾಘವೇಂದ್ರ ಆಚಾರ್‌ ಮತ್ತು ಮಾಲಾ ದಂಪತಿ ಪುತ್ರಿ ಶ್ಲಾಘಾ. ಮೂರನೇ ವಯಸ್ಸಿನಲ್ಲಿ ಸಾಲಿಗ್ರಾಮ ಗುರು ನರಸಿಂಹ ದೇವಸ್ಥಾನ ದಲ್ಲಿ ನೃತ್ಯ ಪ್ರದರ್ಶನ ನೀಡಿ ಬಳಿಕ ವಿವಿಧ ಸಂಘ – ಸಂಸ್ಥೆ , ಶಾಲಾ – ಕಾಲೇಜಿನಲ್ಲಿ 200ಕ್ಕೂ ಹೆಚ್ಚಿನ ನೃತ್ಯ ಪ್ರದರ್ಶನವನ್ನು ನೀಡಿದ್ದಾಳೆ. ಪ್ರಸ್ತುತ ತೆಕ್ಕಟ್ಟೆ ವಿಶ್ವ ವಿನಾಯಕ ಸಿಬಿಎಸ್‌ಇ ಶಾಲೆಯಲ್ಲಿ ಮೂರನೇ ತರಗತಿ ವಿದ್ಯಾರ್ಥಿನಿ.

ಸಿನೆಮಾ- ಕಿರುಚಿತ್ರ
2016ರಲ್ಲಿ ರವಿ ಬಸ್ರೂರು ಅವರ ಕಟಕ ಸಿನೆಮಾಕ್ಕಾಗಿ ನಡೆದ ಆಡಿಷನ್‌ನಲ್ಲಿ ಶ್ಲಾಘಾ ಆಯ್ಕೆಯಾದಳು. ಇದೆ ಸಂದರ್ಭ ಸಚಿನ್‌ ಬಸ್ರೂರು ಅವರ “ಅಮ್ಮ’ ಆಲ್ಬಮ್‌ ಸಾಂಗ್‌ನಲ್ಲಿ ಅಭಿನಯಿಸುವ ಅವಕಾಶ ಸಿಕ್ಕಿತು. ಇತ್ತೀಚೆಗೆ ಗಿರ್ಮಿಟ್‌ ಸಿನೆಮಾದಲ್ಲಿ ನಾಯಕಿಯ ಪಾತ್ರದಲ್ಲಿ ಅಭಿನಯಿಸಿದ್ದಾಳೆ. ಶೇಷಾದ್ರಿ ಅವರ ಮೂಕಜ್ಜಿಯ ಕನಸುಗಳು ಸಿನೆಮಾ ದಲ್ಲೂ ನಟಿಸಿದ್ದಾಳೆ. ಜತೆಗೆ ಕೆಲವು ಕಿರುಚಿತ್ರದಲ್ಲೂ ಅಭಿನಯಿಸಿದ್ದಾಳೆ. ಮುಂದೆ ಕಟಕ-2 ಸಿನೆಮಾದಲ್ಲಿ ಅಭಿನಯಿಸಲಿದ್ದು, ಧಾರಾ ವಾಹಿಗಳಲ್ಲೂ ಅವಕಾಶ ಸಿಗುತ್ತಿವೆ.

ಪ್ರಶಸ್ತಿ, ಸಮ್ಮಾನ
“ಕಟಕ’ ಚಿತ್ರಕ್ಕೆ ಅತ್ಯುತ್ತಮ ಬಾಲನಟಿ ಅಂತಾರಾಷ್ಟ್ರೀಯ ಸೈಮಾ ಪ್ರಶಸ್ತಿ. ಮೂಡುಬಿದಿರೆಯಲ್ಲಿ ನಡೆದ ಬೆಳದಿಂಗಳ ತುಳು ಸಾಹಿತ್ಯ ಸಮ್ಮೇಳನದಲ್ಲಿ ಕರ್ನಾಟಕ ಪ್ರತಿಭಾ ರತ್ನ ಪ್ರಶಸ್ತಿ. 2017ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ, ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ಸಂಘ -ಸಂಸ್ಥೆ ಶಾಲಾ ಕಾಲೇಜು ಮೂಲಕ ಸಮ್ಮಾನ ಪುರಸ್ಕಾರಗಳನ್ನು ಮುಡಿಗೇರಿಸಿಕೊಂಡಿದ್ದಾಳೆ.

ಖುಷಿ ಅನಿಸಿದೆ
ಸಿನೆಮಾದ ನಟನೆಗೆ ತಂದೆ ತಾಯಿ ಮಾರ್ಗದರ್ಶನ ನೀಡುತ್ತಿದ್ದು ಆರಂಭದಲ್ಲಿ ಕಷ್ಟ ಅನಿಸುತ್ತಿತ್ತು. ಸ್ನೇಹಿತರು ಶಿಕ್ಷಕರು ಸಿನೆಮಾದ ಬಗ್ಗೆ ವಿಚಾರಿಸುತ್ತಿದ್ದು ಜನರು ಗುರುತಿಸಿ ಮಾತನಾಡಿಸುವಾಗ ಖುಷಿ ಅನಿಸುತ್ತದೆ. ಯಶ್‌, ಪುನೀತ್‌ ಹಾಗೂ ರಾಧಿಕಾ ಪಂಡಿತ್‌ ಅವರು ಇಷ್ಟದ ನಟ ನಟಿಯರು.
– ಶ್ಲಾಘಾ ಸಾಲಿಗ್ರಾಮ
ಬಾಲ ನಟಿ

- ಕಾರ್ತಿಕ್‌ ಚಿತ್ರಾಪುರ

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

kushee ravi spoke about Case of Kondana

Case of Kondana; ‘ಖುಷಿ’ಗೆ ವಿಭಿನ್ನ ಪಾತ್ರದ ಮೇಲೆ ಭರ್ಜರಿ ನಿರೀಕ್ಷೆ…

aradhana

Aradhana; ಕಾಟೇರಾದಲ್ಲಿ ನಾನು ಸ್ಟ್ರಾಂಗ್‌ ಗರ್ಲ್; ಮಾಲಾಶ್ರೀ ಪುತ್ರಿಯ ಗ್ರ್ಯಾಂಡ್ ಎಂಟ್ರಿ

rishab-shetty

ಪಂಜುರ್ಲಿ ಕೋಲದಲ್ಲಿ ದೈವ ಬಣ್ಣ ತೆಗೆದು ಪ್ರಸಾದ ನೀಡಿದ್ದು ಮರೆಯಲಾಗದ್ದು; ರಿಷಬ್ ಶೆಟ್ಟಿ

TDY-39

ಸಾರ್ವಜನಿಕರೇ ಆನ್‌ಲೈನ್‌ ಆಮಿಷಕ್ಕೆ ಮಾರುಹೋಗದಿರಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.