ಸವಾಲಿನ ಪಾತ್ರದಲ್ಲಿ ಮಯೂರಿ : ಅಂಧ ಪಾತ್ರದ ಮೇಲೆ ಚೆಂದದ ನಿರೀಕ್ಷೆ


Team Udayavani, May 20, 2022, 1:13 PM IST

10

ಸ್ಯಾಂಡಲ್‌ವುಡ್‌ನ‌ ಹೋಮ್ಲಿ ಲುಕ್‌ನ ನಾಯಕಿ ಮಯೂರಿ ಕಳೆದ ಎರಡು-ಮೂರು ವರ್ಷಗಳಿಂದ ಸಿನಿಮಾಗಳಿಗಿಂತ ಮದುವೆ, ಮಗು ಹೀಗೆ ವೈಯಕ್ತಿಕ ವಿಷಯಗಳಿಗೆ ಸುದ್ದಿಯಾಗಿದ್ದೇ ಹೆಚ್ಚು. “ಪೊಗರು’ ನಂತರ ಮಯೂರಿ ಬಿಗ್‌ ಸ್ಕ್ರೀನ್‌ ಮೇಲೆ ಯಾವ ಸಿನಿಮಾಗಳಲ್ಲೂ ಕಾಣಿಸಿಕೊಂಡಿರಲಿಲ್ಲ.

ಇದೀಗ ಮಯೂರಿ ನಾಯಕಿಯಾಗಿ ಅಭಿನಯಿಸಿರುವ “ವೀಲ್‌ಚೇರ್‌ ರೋವಿಯೋ’ ಚಿತ್ರ ಇದೇ ಮೇ. 27 ರಂದು ತೆರೆ ಕಾಣುತ್ತಿದ್ದು, ದೊಡ್ಡ ಗ್ಯಾಪ್‌ ಬಳಿಕ ಮಯೂರಿ ಮತ್ತೂಂದು ವಿಭಿನ್ನ ಪಾತ್ರದಲ್ಲಿ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ.

ಅಂದಹಾಗೆ, “ವೀಲ್‌ಚೇರ್‌ ರೋಮಿಯೋ’ ಚಿತ್ರದಲ್ಲಿ ನಾಯಕ ರಾಮ್‌ ಚೇತನ್‌, ವಿಕಲ ಚೇತನನಾಗಿ ಕಾಣಿಸಿಕೊಂಡರೆ, ನಾಯಕಿ ಮಯೂರಿ ಅಂಧ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಪಾತ್ರವನ್ನು ಕೇಳಿದ ಅನೇಕ ನಾಯಕಿಯರು ಈ ಪಾತ್ರವನ್ನು ನಿರ್ವಹಿಸಲು ಹಿಂದೇಟು ಹಾಕಿದ್ದರಂತೆ. ಅದಕ್ಕೆ ಕಾರಣ ನಾಯಕಿಯ ಪಾತ್ರವಂತೆ!

ಹೌದು, ಸಿನಿಮಾದಲ್ಲಿ ಕಣ್ಣು ಕಾಣಿಸದ (ಅಂಧ) ನಾಯಕಿ ವೇಶ್ಯೆಯಾಗಿಯೂ ಇರುತ್ತಾಳೆ. ಅನೇಕ ನಾಯಕಿಯರಿಗೆ ಈ ಸಿನಿಮಾದಲ್ಲಿ ತಮ್ಮ ಪರಿಚಯ ಮಾಡುತ್ತಿರುವಾಗಲೇ, ಉಳಿದ ವಿವರಗಳನ್ನು ಕೇಳದೆ ಈ ಪಾತ್ರದಿಂದ ಹಿಂದೆ ಸರಿದಿದ್ದರು. ಅಂತಿಮವಾಗಿ ಈ ಪಾತ್ರವನ್ನು ಮಯೂರಿ ಅವರಿಗೂ ಹೇಳಲಾಯಿತು. ಆರಂಭದಲ್ಲಿ ಮಯೂರಿ ಕೂಡ ಇಂಥದ್ದೊಂದು ಪಾತ್ರ ಮಾಡಲು ಹಿಂದೇಟು ಹಾಕಿದ್ದರು. ಆದರೆ ಕೊಂಚವೂ ಎಕ್ಸ್‌ಪೋಸ್‌ ಇಲ್ಲದ ಪಾತ್ರ, ಮನಮುಟ್ಟುವ ಸಂಭಾಷಣೆ, ಹೃದಯಸ್ಪರ್ಶಿ ಸನ್ನಿವೇಶಗಳು, ಪಾತ್ರವನ್ನು ತೆರೆಮೇಲೆ ತೋರಿಸುವ ರೀತಿ ಮಯೂರಿ ಅವರಿಗೆ ಇಷ್ಟವಾಯಿತು. ಕೊನೆಗೆ ಈ ಪಾತ್ರವನ್ನು ಮಯೂರಿ ಮಾಡಲು ಒಪ್ಪಿಕೊಂಡರು’ ಎನ್ನುವುದು ಚಿತ್ರತಂಡ ಮಾತು.

“ತೆರೆಮೇಲೆ ಮಯೂರಿ ಅವರ ಪಾತ್ರವನ್ನು ನೋಡಿದ ಪ್ರತಿಯೊಬ್ಬರಿಗೂ ಅವರು ಇಷ್ಟವಾಗುತ್ತಾರೆ. ಅಷ್ಟು ಸಹಜವಾಗಿ, ಮನಮುಟ್ಟುವಂತೆ ಮಯೂರಿ ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ. ಅಂತಿಮವಾಗಿ ಇಂಥದ್ದೊಂದು ಪಾತ್ರ ರಿಜೆಕ್ಟ್ ಮಾಡಿದವರಿಗೇ ಹೊಟ್ಟೆ ಉರಿ ತರಿಸುವಷ್ಟರ ಮಟ್ಟಿಗೆ ಪರಿಣಾಮಕಾರಿಯಾಗಿ ಪಾತ್ರ ತೆರೆಮೇಲೆ ಮೂಡಿ ಬಂದಿದೆ’ ಎಂದು ಮಯೂರಿ ಅವರ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡುತ್ತದೆ “ವೀಲ್‌ ಚೇರ್‌ ರೋಮಿಯೋ’ ಚಿತ್ರತಂಡ.

ಇನ್ನು “ಅಗಸ್ತ್ಯ ಕ್ರಿಯೇಶನ್ಸ್‌’ ಬ್ಯಾನರ್‌ನಲ್ಲಿ ಟಿ. ವೆಂಕಟಾಚಲಯ್ಯ ನಿರ್ಮಿಸಿರುವ “ವೀಲ್‌ಚೇರ್‌ ರೋಮಿಯೋ’ ಚಿತ್ರಕ್ಕೆ ಜಿ. ನಟರಾಜ್‌ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ರಾಮ್‌ ಚೇತನ್‌, ಮಯೂರಿ ಅವರೊಂದಿಗೆ ಸುಚೇಂದ್ರ ಪ್ರಸಾದ್‌, ರಂಗಾಯಣ ರಘು, ತಬಲನಾಣಿ, ಗಿರೀಶ್‌ ಶಿವಣ್ಣ ಮೊದಲಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಈಗಾಗಲೇ ಬಿಡುಗಡೆ ಯಾಗಿರುವ “ವೀಲ್‌ಚೇರ್‌ ರೋಮಿಯೋ’ ಚಿತ್ರದ ಟ್ರೇಲರ್‌ ಮತ್ತು ಹಾಡುಗಳಿಗೆ ಸೋಶಿಯಲ್‌ ಮೀಡಿಯಾಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಥಿಯೇಟರ್‌ನಲ್ಲಿ ಸಿನಿಮಾ ಎಷ್ಟರ ಮಟ್ಟಿಗೆ ಸಿನಿಪ್ರಿಯರಿಗೆ ಇಷ್ಟವಾಗಲಿದೆ ಅನ್ನೋದು ಮುಂದಿನವಾರದ ಹೊತ್ತಿಗೆ ಗೊತ್ತಾಗಲಿದೆ.

ಜಿ. ಎಸ್‌. ಕಾರ್ತಿಕ ಸುಧನ್‌

ಟಾಪ್ ನ್ಯೂಸ್

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.