Abhiramachandra movie review; ಹುಡುಕಾಟದ ನಡುವೆ ತ್ರಿಕೋನ ಪ್ರೇಮಕಥೆ


Team Udayavani, Oct 7, 2023, 3:42 PM IST

abhiramachandra movie review

“ಅಭಿರಾಮಚಂದ್ರ’ ಸಿನಿಮಾದ ಟೈಟಲ್ಲೇ ಹೇಳುವಂತೆ ಅಭಿ, ರಾಮ ಮತ್ತು ಚಂದ್ರ ಎಂಬ ಮೂವರು ಹುಡುಗರು ಮತ್ತವರ ಸ್ನೇಹ, ಪ್ರೀತಿ, ಪ್ರೇಮ ಹುಡುಕಾಟ ಮತ್ತು ಹುಡುಕಾಟದ ಸುತ್ತ ನಡೆಯುವ ಸಿನಿಮಾ. ಮೂರು ಬೇರೆ ಬೇರೆ ಹಿನ್ನೆಲೆಯಿಂದ ಬಂದ ಮೂವರು ಹುಡುಗರು, ತಮ್ಮ ಸ್ನೇಹದ ಜೊತೆ ಜೊತೆಗೇ ಕಣ್ಣಿಗೆ ಕಾಣದ ಪ್ರೀತಿಯ ಬಲೆಯೊಳಕ್ಕೆ ಸಿಲುಕಿಕೊಳ್ಳುತ್ತಾರೆ. ಅಂತಿಮವಾಗಿ ಈ ಹುಡುಗರ ನಡುವಿನ ಸ್ನೇಹ ಉಳಿದುಕೊಳ್ಳುತ್ತದೆಯಾ ಅಥವಾ ಪ್ರೀತಿ ಗೆಲ್ಲುತ್ತದೆಯಾ ಎಂಬುದೇ “ಅಭಿರಾಮಚಂದ್ರ’ ಸಿನಿಮಾದ ಕಥಾಹಂದರ. ಅದು ಹೇಗಿದೆ ಎಂಬುದನ್ನು ನಿಮ್ಮ ಅನುಭವಕ್ಕೆ ತಂದುಕೊಳ್ಳುವುದಾದರೆ, ನೀವೊಮ್ಮೆ ಈ ಹೊಸಬರ “ಅಭಿರಾಮಚಂದ್ರ’ ಸಿನಿಮಾದ ಕಡೆಗೆ ಮುಖ ಮಾಡಬಹುದು.

“ಅಭಿರಾಮಚಂದ್ರ’ ಬಹುತೇಕ ಹೊಸ ಪ್ರತಿಭೆಗಳೇ ಸೇರಿ ಮಾಡಿರುವ ಸಿನಿಮಾ. ಹಾಗಾಗಿ ಸಿನಿಮಾದ ಕಲಾವಿದರ ಅಭಿನಯ, ಪಾತ್ರಗಳ ಪೋಷಣೆ ಮತ್ತು ಚಿತ್ರಕಥೆ ನಿರೂಪಣೆ ಎಲ್ಲದರಲ್ಲೂ ಒಂದಷ್ಟು ಹೊಸತನ ನಿರೀಕ್ಷಿಸಬಹುದು. ಕಲಾವಿದರಾದ ರಥ ಕಿರಣ್‌, ಸಿದ್ಧು ಮೂಲಿಮನಿ, ನಾಟ್ಯರಂಗ, ಶಿವಾನಿ ರೈ ತಮ್ಮ ಪಾತ್ರಗಳಲ್ಲಿ ನೋಡುಗರಿಗೆ ಇಷ್ಟವಾಗುತ್ತಾರೆ.

ಬೆಂಗಳೂರಿನ ಜಂಜಾಟದ ಬದುಕು, ದಕ್ಷಿಣ ಕನ್ನಡದ ಕರಾವಳಿಯ ಸೊಗಡು, ಮಲೆನಾಡ ಸೊಬಗು ಎಲ್ಲವನ್ನೂ ಚಿತ್ರದಲ್ಲಿ ಅಚ್ಚುಕಟ್ಟಾಗಿ ಕಟ್ಟಿಕೊಡಲಾಗಿದೆ. “ಅಭಿರಾಮಚಂದ್ರ’ದ ಚಿತ್ರಕಥೆ ಮತ್ತು ನಿರೂಪಣೆಗೆ ನಿರ್ದೇಶಕರು ಇನ್ನಷ್ಟು ವೇಗ ನೀಡಿದ್ದರೆ, ಹುಡುಗರ ಹುಡುಗಾಟ ಮತ್ತು ಹುಡುಕಾಟ ಎಲ್ಲವೂ ಇನ್ನಷ್ಟು ಪರಿಣಾಮಕಾರಿಯಾಗಿ ಮೂಡಿಬರುವ ಸಾಧ್ಯತೆಗಳಿದ್ದವು.

ತಾಂತ್ರಿಕವಾಗಿ ಸಿನಿಮಾದ ಛಾಯಾ ಗ್ರಹಣ ಗಮನ ಸೆಳೆಯುವಂತಿದೆ. ಒಂದೆರಡು ಹಾಡುಗಳು ಅಲ್ಲಲ್ಲಿ ಗುನುಗುವಂತಿದೆ. ಸಂಕಲನ ಕಾರ್ಯ ಇನ್ನಷ್ಟು ಹರಿತವಾಗಿದ್ದರೆ, ಕೆಲ ದೃಶ್ಯಗಳಿಗೆ ಕತ್ತರಿ ಪ್ರಯೋಗ ಮಾಡಿದ್ದರೆ, “ಅಭಿರಾಮಚಂದ್ರ’ ಇನ್ನಷ್ಟು ಹೊಳೆಯುವಂತೆ ಮಾಡಬಹುದಿತ್ತು.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.