ಸ್ನೇಹದ ನೆಪದಲ್ಲಿ ಆ್ಯಕ್ಷನ್‌ ಜಪ

ಚಿತ್ರ ವಿಮರ್ಶೆ

Team Udayavani, Jun 29, 2019, 3:01 AM IST

rustum

ಆತ ಖಡಕ್‌ ಪೊಲೀಸ್‌ ಆಫೀಸರ್‌. ಬಿಹಾರದ ಗೂಂಡಾಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಎನ್‌ಕೌಂಟರ್‌ ಸ್ಪೆಷಲಿಸ್ಟ್‌. ಗೂಂಡಾಗಳಿಗೆ ಗುಂಡೇಟು ಮದ್ದು ಎಂದು ಭಾವಿಸಿದ ಅಧಿಕಾರಿ. ಇಂತಹ ಅಧಿಕಾರಿ ಇನ್ನಷ್ಟು ಕೆರಳುತ್ತಾನೆ. ಅದಕ್ಕೆ ಕಾರಣ ತನ್ನ ಸ್ನೇಹಿತನ ಜೀವನದಲ್ಲಾದ ಘಟನೆ. ಅಲ್ಲಿಂದ ಆತನ ಕೆರಳಿದ ಸಿಂಹ. ಮುಂದೆ ಪ್ರೇಕ್ಷಕ ನೋಡೋದು ರಣಕಾಳಗವನ್ನು.

ಇಷ್ಟು ಹೇಳಿದ ಮೇಲೆ ಇದೊಂದು ಆ್ಯಕ್ಷನ್‌ ಸಿನಿಮಾ ಎಂದು ಪ್ರತ್ಯೇಕವಾಗಿ ಹೇಳುವ ಅಗತ್ಯವಿಲ್ಲ. ಜೊತೆಗೆ “ರುಸ್ತುಂ’ ಚಿತ್ರವನ್ನು ನಿರ್ದೇಶಿಸಿರೋದು ಸಾಹಸ ನಿರ್ದೇಶಕ ರವಿವರ್ಮ. ಹಾಗಾಗಿ, ಅವರ ಮೂಲಶಕ್ತಿಯನ್ನು ಯಥೇತ್ಛವಾಗಿ ಬಳಸಿಕೊಂಡು ಈ ಸಿನಿಮಾವನ್ನು ಮಾಡಿದ್ದಾರೆ. ಹಾಗಾಗಿಯೇ “ರುಸ್ತುಂ’ ಇತ್ತೀಚೆಗೆ ಬಂದ ಆ್ಯಕ್ಷನ್‌ ಸಿನಿಮಾಗಳಲ್ಲಿ ಒಂದು ಮೆಟ್ಟಿ ಮೇಲೆ ನಿಲ್ಲುತ್ತದೆ.

ತಲೆತುಂಬಾ ಕೆದರಿದ ಕೂದಲು, ವಿಚಿತ್ರ ಗಡ್ಡ, ಭಯಾನಕ ಲುಕ್‌ ಇರುವ ವಿಲನ್‌ಗಳು, ಅವರನ್ನು ಅಟ್ಟಾಡಿಸಿ ಹೊಡೆಯುವ ಹೀರೋ … ಈ ತರಹದ ಸಿನಿಮಾಗಳನ್ನು ನೀವು ಇಷ್ಟಪಡುವವರಾಗಿದ್ದಾರೆ ನಿಮಗೆ ಖಂಡಿತಾ “ರುಸ್ತುಂ’ ಚಿತ್ರ ಇಷ್ಟವಾಗುತ್ತದೆ. ಹೈವೋಲ್ಟೆಜ್‌ ಆ್ಯಕ್ಷನ್‌ ಮೂಲಕ ಸಾಗುವ ಸಿನಿಮಾ, ನಿಮ್ಮನ್ನು ಸದಾ ಕುತೂಹಲದಲ್ಲಿಡುತ್ತದೆ ಮತ್ತು ಮಾಸ್‌ ಪ್ರಿಯರ ರಕ್ತ ಬಿಸಿಯಾಗುವಂತೆ ಮಾಡುತ್ತದೆ.

ಹಾಗಂತ ಚಿತ್ರದಲ್ಲಿ ಕಥೆ ಇಲ್ಲವೇ ಎಂದರೆ ಖಂಡಿತಾ ಇದೆ. ಆ ಕಥೆಯಲ್ಲಿ ಸ್ನೇಹ, ಸೆಂಟಿಮೆಂಟ್‌, ಹಾಸ್ಯ ಎಲ್ಲವೂ ಇದೆ. ಆದರೆ, ಅದರಾಚೆಗೂ ಒಂದು ರಿವೆಂಜ್‌ ಸ್ಟೋರಿ ಇದೆ. ಆ್ಯಕ್ಷನ್‌ ಸಿನಿಮಾ ರಂಗೇರಲು ಕಥೆಯಲ್ಲಿ ಒಂದು ಬಲವಾದ ಕಾರಣ ಬೇಕು. ಆ ಕಾರಣ ಇಲ್ಲಿದೆ. ಹಾಗಂತ ಕಥೆ ತೀರಾ ಹೊಸದು ಎಂದು ಹೇಳುವಂತಿಲ್ಲ.

ಕಳ್ಳ-ಪೊಲೀಸ್‌ ಆಟದಲ್ಲಿ ಈ ತರಹದ ಸಾಕಷ್ಟು ಕಥೆಗಳು ಕನ್ನಡ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ಬಂದು ಹೋಗಿವೆ. ಆದರೆ, “ರುಸ್ತುಂ’ನ ಸಮಯ, ಸಂದರ್ಭ, ಆಶಯ ಭಿನ್ನವಾಗಿವೆಯಷ್ಟೇ. ಇಲ್ಲಿ ಕಥೆಗಿಂತ ಎದ್ದು ಕಾಣುವುದು ನಿರೂಪಣೆ. ಮೊದಲ ಬಾರಿಗೆ ನಿರ್ದೇಶನ ಮಾಡಿರುವ ರವಿವರ್ಮ, ಇಡೀ ಸಿನಿಮಾವನ್ನು ತುಂಬಾ ನೀಟಾಗಿ ಕಟ್ಟಿಕೊಟ್ಟಿದ್ದಾರೆ.

ಯಾವುದೇ ಕನ್‌ಫ್ಯೂಶನ್‌ ಆಗಲೀ, ಅನಾವಶ್ಯಕ ಅಂಶಗಳನ್ನಾಗಲೀ ಸೇರಿಸದೇ ಅಚ್ಚುಕಟ್ಟಾಗಿ ನಿರೂಪಿಸಿದ್ದಾರೆ. ಕಥೆಗೆ ವೇದಿಕೆ ಕಲ್ಪಿಸುವ ಚಿತ್ರದ ಮೊದಲರ್ಧ ಸ್ವಲ್ಪ ನಿಧಾನಗತಿಯಲ್ಲಿ ಸಾಗುತ್ತದೆ. ಆದರೆ, ಚಿತ್ರದ ದ್ವಿತೀಯಾರ್ಧ ವೇಗ ಪಡೆದುಕೊಳ್ಳುವ ಸಿನಿಮಾದಲ್ಲಿ ರವಿವರ್ಮ, ತಮ್ಮ ಮೂಲವೃತ್ತಿಯ ಸಾಮರ್ಥ್ಯವನ್ನು ತೋರಿಸಿದ್ದಾರೆ.

ಆ ಮೂಲಕ ದ್ವಿತೀಯಾರ್ಧ ಆ್ಯಕ್ಷನ್‌ಮಯವಾಗಿದೆ. ಚಿತ್ರ ಮುಖ್ಯವಾಗಿ ಕರ್ನಾಟಕ ಹಾಗೂ ಬಿಹಾರದಲ್ಲಿ ನಡೆಯುತ್ತದೆ. ಬಿಹಾರ ದೃಶ್ಯಗಳನ್ನು ಅಲ್ಲಿನ ನೇಟಿವಿಟಿಗೆ ತಕ್ಕಂತೆ ಚಿತ್ರೀಕರಿಸಲಾಗಿದೆ. ಈ ಸಿನಿಮಾದ ಮುಖ್ಯ ಶಕ್ತಿ ಎಂದರೆ ಅದು ಶಿವರಾಜಕುಮಾರ್‌. ಅದು ಫ್ಯಾಮಿಲಿ ಮ್ಯಾನ್‌ ಆಗಿ, ಫ್ರೆಂಡ್‌ ಆಗಿ, ಖಡಕ್‌ ಪೊಲೀಸ್‌ ಆಫೀಸರ್‌ ಆಗಿ ಶಿವಣ್ಣ ಇಷ್ಟವಾಗುತ್ತಾರೆ.

ಅದರಲ್ಲೂ ಪೊಲೀಸ್‌ ಆಫೀಸರ್‌ ಆಗಿ ಆ್ಯಕ್ಷನ್‌ ದೃಶ್ಯಗಳಲ್ಲಿ ಶಿವಣ್ಣ ಅವರನ್ನು ನೋಡೋದೇ ಅವರ ಅಭಿಮಾನಿಗಳಿಗೆ ಹಬ್ಬ. ಇಡೀ ಚಿತ್ರವನ್ನು ಹೊತ್ತುಕೊಂಡು ಸಾಗಿರುವ ಶಿವರಾಜಕುಮಾರ್‌ ಅವರ ಎನರ್ಜಿಯನ್ನು ಮೆಚ್ಚಲೇಬೇಕು. ಇನ್ನು ಚಿತ್ರದಲ್ಲಿ ವಿವೇಕ್‌ ಒಬೆರಾಯ್‌ ನಟಿಸಿದ್ದು, ತೆರೆಮೇಲೆ ಇದ್ದಷ್ಟು ಹೊತ್ತು ಇಷ್ಟವಾಗುತ್ತಾರೆ. ಉಳಿದಂತೆ ಶ್ರದ್ಧಾ ಶ್ರೀನಾಥ್‌, ಮಯೂರಿ, ಮಹೇದ್ರನ್‌, ಶಿವಮಣಿ, ಶ್ರೀಧರ್‌ ಸೇರಿದಂತೆ ಇತರರು ತಮ್ಮ ಪಾತ್ರಗಳಿಗೆ ನ್ಯಾಯ ಒದಗಿಸಿದ್ದಾರೆ.

ಚಿತ್ರದ ಹೈಲೈಟ್‌ಗಳಲ್ಲಿ ಸಂಗೀತ ಹಾಗೂ ಹಿನ್ನೆಲೆ ಸಂಗೀತ ಕೂಡಾ ಒಂದು. ಸಂಗೀತ ನಿರ್ದೇಶಕ ಅನೂಪ್‌ ಸೀಳೀನ್‌ ಒಂದು ಔಟ್‌ ಅಂಡ್‌ ಔಟ್‌ ಕಮರ್ಷಿಯಲ್‌ ಚಿತ್ರಕ್ಕೆ, ಅದರಲ್ಲೂ ಆ್ಯಕ್ಷನ್‌ ಸಿನಿಮಾದ ಮೂಡ್‌ಗೆ ತಕ್ಕಂತೆ ಹಿನ್ನೆಲೆ ಸಂಗೀತ ನೀಡಿದ್ದಾರೆ. ಜೊತೆಗೆ ಹಾಡುಗಳು ಕೂಡಾ ಇಷ್ಟವಾಗುತ್ತವೆ. ಮಹೇನ್‌ ಸಿಂಹ ಅವರ ಛಾಯಾಗ್ರಹಣದಲ್ಲಿ “ರುಸ್ತುಂ’ ಖದರ್‌ ಹೆಚ್ಚಿದೆ.

ಚಿತ್ರ: ರುಸ್ತುಂ
ನಿರ್ಮಾಣ: ಜಯಣ್ಣ-ಭೋಗೇಂದ್ರ
ನಿರ್ದೇಶನ: ರವಿವರ್ಮ
ತಾರಾಗಣ: ಶಿವರಾಜಕುಮಾರ್‌, ವಿವೇಕ್‌ ಒಬೆರಾಯ್‌, ಶ್ರದ್ಧಾ ಶ್ರೀನಾಥ್‌, ಮಯೂರಿ, ಮಹೇಂದ್ರನ್‌ ಮತ್ತಿತರರು.

* ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.