Appa I Love You Review; ತಂದೆ-ಮಗನ ಭಾವ ಲಹರಿ


Team Udayavani, Apr 13, 2024, 11:19 AM IST

appa i love you movie review

ಕಷ್ಟಪಟ್ಟು ಸಾಕಿ ಬೆಳೆಸಿದ ಮಕ್ಕಳು, ದೊಡ್ಡವರಾದ ಮೇಲೆ ಪೋಷಕರನ್ನು ಕಡೆಗಣಿಸಿದರೆ ಅವರ ಪರಿಸ್ಥಿತಿ ಏನಾಗುತ್ತದೆ, ಇದಕ್ಕೆ ಪಾಲಕರು ಏನು ಮಾಡ ಬಹುದು, ಇಂತಹ “ಭಾವನಾತ್ಮಕ’ ಸಂಕಷ್ಟಕ್ಕೆ ಪರಿಹಾರ ಎಂಬುದೇ ಇಲ್ಲವೇ… ಇಂತಹ ಒಂದು ಗಂಭೀರ ವಿಚಾರವನ್ನು ಇಟ್ಟುಕೊಂಡು ಈ ವಾರ ತೆರೆಗೆ ಬಂದಿರುವ ಚಿತ್ರ “ಅಪ್ಪಾ ಐ ಲವ್‌ ಯು’. ಹೆಸರಿಗೆ ತಕ್ಕಂತೆ ಇದು ತಂದೆ-ಮಗನ ನಡುವೆ ನಡೆಯುವ ಕಥೆ.

ನಿರ್ದೇಶಕ ಅಥರ್ವ್‌ ಆರ್ಯ ಇವತ್ತಿನ ಸಮಾಜದಲ್ಲಿ ಹಲವು ತಂದೆ-ತಾಯಂದಿರು ಅನುಭವಿಸುತ್ತಿರುವ ಸಂಕಟದ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೇ ಕಾರಣದಿಂದ ಸಿನಿಮಾ ಹೆಚ್ಚು ಆಪ್ತವಾಗುತ್ತಾ, ಭಾವನಾತ್ಮಕವಾಗಿ ಕಾಡುತ್ತಾ ಸಾಗುತ್ತದೆ.  ಮುಖ್ಯವಾಗಿ ನಿರ್ದೇಶಕರು ಸಿನಿಮಾ ಆರಂಭದಿಂದಲೇ ಕಥೆಗೆ ಹೆಚ್ಚು ಮಹತ್ವ ಕೊಟ್ಟು ನಿರೂಪಣೆ ಮಾಡುತ್ತಾ ಬಂದಿದ್ದಾರೆ. ಹಾಗಾಗಿ, ಚಿತ್ರ ಒಂದಷ್ಟು ಕುತೂಹಲ ಹಾಗೂ ಟ್ವಿಸ್ಟ್‌ಗಳೊಂದಿಗೆ ಸಾಗುತ್ತದೆ.

ಮೊದಲೇ ಹೇಳಿದಂತೆ ಇಲ್ಲಿ ಕಥೆಗೆ ಹೆಚ್ಚು ಮಹತ್ವ ಕೊಟ್ಟಿದ್ದು, ಹೀರೋ, ಹೀರೋಯಿನ್‌, ಆ್ಯಕ್ಷನ್‌, ಕಾಮಿಡಿ.. ಇಂತಹ ಸಿದ್ಧಸೂತ್ರಗಳಿಂದ ಮುಕ್ತವಾಗಿ ಕಂಟೆಂಟ್‌ಗೆ ಹೆಚ್ಚು ಗಮನ ಕೊಡಲಾಗಿದೆ. ಒಬ್ಬ ತಂದೆ, ತನ್ನ ಮಗನಿಗಾಗಿ ಹೇಗೆಲ್ಲಾ ಕಷ್ಟಪಡುತ್ತಾನೆ, ಕೊನೆಗೆ ಆ ಪುತ್ರನ ವರ್ತನೆ ಹೇಗಿರುತ್ತದೆ, ಅದರಿಂದ ಒಂದು ಸಂಸಾರದಲ್ಲಿ ಹೇಗೆ ಬಿರುಗಾಳಿ ಬೀಸುತ್ತದೆ ಎಂಬುದು ಸಿನಿಮಾದ ಕಥಾಹಂದರ.

ತಾನು ಏನು ಹೇಳಬೇಕೆಂಬ ಸ್ಪಷ್ಟತೆ ನಿರ್ದೇಶಕರಿಗೆ ಇದ್ದ ಕಾರಣ ಸಿನಿಮಾ ಯಾವುದೇ ಗೊಂದಲವಿಲ್ಲದೇ ಮೂಡಿಬಂದಿದೆ. ಚಿತ್ರದಲ್ಲಿ ಒಂದಷ್ಟು ಯೋಚಿಸುವ ವಿಚಾರಗಳಿರುವುದು ಈ ಸಿನಿಮಾದ ಪ್ಲಸ್‌. ಇಡೀ ಸಿನಿಮಾದ ಕಥೆ ಸಾಗುವುದು ತಬಲ ನಾಣಿ ಅವರ ಸುತ್ತ. ಮಗನಿಗಾಗಿಯೇ ತನ್ನ ಜೀವನ ಮುಡಿಪಾಗಿಟ್ಟ ತಂದೆಯಾಗಿ ಅವರು ಕಾಣಿಸಿಕೊಂಡಿದ್ದಾರೆ. ಅವರಿಂದ ಕಾಮಿಡಿ ಬಯಸುವವರಿಗೆ ಅವರು “ಸೆಂಟಿಮೆಂಟ್‌’ ದರ್ಶನ ಮಾಡಿಸಿದ್ದಾರೆ.

ಚಿತ್ರದಲ್ಲಿ ಪ್ರೇಮ್‌ ಹಾಗೂ ಮಾನ್ವಿತಾ ಕೆಲವೇ ಕೆಲವು ದೃಶ್ಯಗಳಲ್ಲಿ ಬಂದು ಹೋಗುತ್ತಾರೆ. ಉಳಿದಂತೆ ಸಂಜಯ್‌, ಜೀವಿತಾ, ಅರವಿಂದ್‌ ರಾವ್‌, ಬಲರಾಜವಾಡಿ ತಮ್ಮ ಪಾತ್ರಗಳಿಗೆ ನ್ಯಾಯ ಒದಗಿಸಿದ್ದಾರೆ

 ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vidyarthi Vidyarthiniyare Movie Review

Vidyarthi Vidyarthiniyare Review;ವಿದ್ಯಾರ್ಥಿಗಳ ಆಟದೊಳಗೊಂದು ಪಾಠ

Not Out movie review

Not Out movie review; ಮಧ್ಯಮ ಹುಡುಗನ ಕಾಸು-ಕನಸು

Hejjaru Movie Review

Hejjaru Movie Review; ಹೆಜ್ಜಾರು ಎಂಬ ಹೊಸ ಕೌತುಕ

Hiranya

Hiranya Review; ಆ್ಯಕ್ಷನ್‌-ಥ್ರಿಲ್ಲರ್‌ನಲ್ಲಿ ನಿರ್ದಯಿ ಪಯಣ

Jigar movie review

Jigar movie review; ಆ್ಯಕನ್‌ ಡ್ರಾಮಾದಲ್ಲೊಂದು ಪ್ರೇಮ್‌ ಕಹಾನಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.