ಚಿತ್ರ ವಿಮರ್ಶೆ: ಮಜಾ‌ ಕೊಡುವ‌ ನಾರಾಯಣನ ‘ಹುಡುಕಾಟ’


Team Udayavani, Dec 27, 2019, 11:09 AM IST

asn

ಬಹುನಿರೀಕ್ಷೆಯ ಅವನೇ ಶ್ರೀಮನ್ನಾರಾಯಣ ಚಿತ್ರ ಬಿಡುಗಡೆಯಾಗಿದೆ. ಮೂರು ವರ್ಷ ಗಳ ನಂತರ ತೆರೆಮೇಲೆ ಬಂದ ರಕ್ಷಿತ್ ಶೆಟ್ಟಿ ಯನ್ನು ನೋಡಿ‌ ಅಭಿಮಾನಿಗಳು ಖುಷಿಯಾಗಿದ್ದಾರೆ.  ಚಿತ್ರದ ಬಗ್ಗೆ ಹೇಳುವುದಾದರೆ ಇದೊಂದು‌ ಕಾಲ್ಪನಿಕ‌ ಜಗತ್ತಿನಲ್ಲಿ‌ ನಡೆಯುವ ಕಥಾನಕ. ಅಭಿರ ವಂಶದ ರಾಜ ಹಾಗೂ ಆತನದ್ದೇ ಅದ‌ ಕೋಟೆ, ಆಡಳಿತದಿಂದ ಆರಂಭವಾಗುವ ಸಿನಿಮಾ‌ ಮುಂದೆ ನಿಧಿಯೊಂದರ‌ ಶೋಧಕ್ಕೆ ತೆರೆದುಕೊಳ್ಳುತ್ತದೆ. ಇದೇ‌ ಸಿನಿಮಾದ ನಿಜವಾದ ಜೀವಾಳ. ನಾರಾಯಣ ಎಂಬ ಬುದ್ಧಿವಂತ‌ ಪೊಲೀಸ್ ನಾಟಕಕಾರರು ಕಳವು‌ ಮಾಡಿ ಹೂತಿಟ್ಟ ನಿಧಿಯನ್ನು ಹೇಗೆ ‌ಹುಡುಕುತ್ತಾನೆ‌ ಮತ್ತು ಅದಕ್ಕೆ ಆತ ಅನುಸರಿಸುವ ‌ದಾರಿ ಹಾಗೂ ಎದುರಾಗುವ ಸವಾಲುಗಳೇ‌ ಸಿನಿಮಾವನ್ನು ‌ಮುಂದೆ ಸಾಗಿಸುತ್ತವೆ. ಚಿತ್ರದ ಕಥೆ ಗಂಭೀರವಾಗಿದೆ. ಆದರೆ ನಿರೂಪಣೆಯಲ್ಲಿ ಆ ಗಂಭೀರತೆ ಇಲ್ಲ. ಅದು ಪ್ರೇಕ್ಷಕರನ್ನು‌ರಂಜಿಸುವ ಉದ್ದೇಶದ ಒಂದು‌ ವಿಧಾನದಂತೆ ಕಂಡುಬರುತ್ತದೆ.‌ಮುಖ್ಯವಾಗಿ‌ ನಾರಾಯಣ ಪಾತ್ರವನ್ನು ಹೆಚ್ಚು ಗಂಭೀರಗೊಳಿಸದೇ, ಆ ಪಾತ್ರದ ಅಟಿಟ್ಯೂಡ್‌ ಮೂಲಕವೇ ನಗಿಸುವ ಪ್ರಯತ್ನ‌ ಮಾಡಲಾಗಿದೆ.

ಅದ್ಧೂರಿ‌ ಮೇಕಿಂಗ್‌ ಇರುವ ನಾರಾಯಣನ ನಿರೂಪಣೆಯಲ್ಲಿ‌ ಮತ್ತಷ್ಟು ಹರಿತಬೇಕಿತ್ತು. ಇಲ್ಲಿ‌ನೇರ‌‌ ನಿರೂಪಣೆ‌ ಇಲ್ಲ.ಮೂಲ ಕಥೆಗೆ ಲಿಂಕ್‌‌ ಕೊಡುವ ಅನೇಕ‌ ಸನ್ನಿವೇಶಗಳು ಅಲ್ಲಲ್ಲಿ ಬರುತ್ತವೆ. ಎಲ್ಲೋ ಒಂದು ಸನ್ನಿವೇಶಕ್ಕೆ ಸಂಬಂಧಿಸಿದ ಕೊಂಡಿಯನ್ನು‌ ಇನ್ನೆಲ್ಲೋ ಇಟ್ಟಿರುತ್ತಾರೆ. ಈ ತರಹದ ಜಾಣ್ಮೆ ಯ ನಿರೂಪಣೆ ಇದ್ದರೂ ಸಾಮಾನ್ಯ‌ ಪ್ರೇಕ್ಷಕನಿಗೆ‌ ಒಮ್ಮೆಗೇ‌ ಎಲ್ಲವನ್ನು ರೀಕಾಲ್ ಮಾಡಿಕೊಂಡು‌ ಸನ್ನಿವೇಶ ಜೋಡಿಸೋದು‌ ತುಸು ಕಷ್ಟ. ಜೊತೆಗೆ ಚಿತ್ರದ ಅವಧಿಯಲ್ಲೂ‌ಕಡಿತಗೊಳಿಸುವ ಅವಕಾಶವಿತ್ತು. ಅದರಾಚೆ ಹೇಳುವುದಾದರೆ‌ ಒಂದು ಹೊಸ ಬಗೆಯ ಪ್ರಯತ್ನವಾಗಿ ಚಿತ್ರ ಇಷ್ಟವಾಗುತ್ತದೆ. ಗಾಂಧಿನಗರದ‌ ಸಿದ್ಧಸೂತ್ರಗಳನ್ನು‌ ಮುಲಾಜಿಲ್ಲದೇ ಬದಿಗೆ ಸರಿಸಿ, ಹೊಸ ಬಗೆಯಲ್ಲಿ ಸಿನಿಮಾ‌ ಕಟ್ಟಿ ಕೊಟ್ಟ ತಂಡದ ಶ್ರಮವನ್ನು‌ಮೆಚ್ಚಬೇಕು. ಚಿತ್ರದಲ್ಲಿ‌ಬರುವ‌ ಸೂಕ್ಷ್ಮ ಅಂಶಗಳ ಬಗ್ಗೆಯೂ ಚಿತ್ರತಂಡ ಗಮನ‌ಹರಿಸಿರುವುದು ತೆರೆಮೇಲೆ ಕಾಣುತ್ತದೆ.

ಬಹುತೇಕ ಚಿತ್ರ ಸೆಟ್ನಲ್ಲೇ ನಡೆಯುತ್ತದೆ. ಅದು ಕಥೆಗೆ‌ ಪೂರಕವಾಗಿದೆ ಕೂಡಾ. ಮುಖ್ಯವಾಗಿ‌ ಇಡೀ‌ ಕಥೆಯನ್ನು ಹೊತ್ತು ಸಾಗಿರೋದು‌ ನಾಯಕ ನಟ‌ ರಕ್ಷಿತ್ ಶೆಟ್ಟಿ.  ನಾರಾಯಣ ಎಂಬ ಬುದ್ಧಿವಂತ‌ ಪೊಲೀಸ್ ಆಫೀಸರ್ ಆಗಿ, ಶ್ರೀಹರಿಯಾಗಿ ಪಾತ್ರವನ್ನು ಎಂಜಾಯ್ ಮಾಡಿಕೊಂಡು‌ ಮಾಡಿದ್ದಾರೆ. ಕಿಲಾಡಿ,‌ ಬುದ್ಧಿವಂತ, ಪ್ರೇಮಿ ಹೀಗೆ ರಕ್ಷಿತ್ ಇಷ್ಟವಾಗುತ್ತಾರೆ. ಅವರಿಗೆ ನಾಯಕಿ ಶಾನ್ವಿ‌ ಸಾಥ್‌ ನೀಡಿದ್ದಾರೆ. ಉಳಿದಂತರ ಅಚ್ಯುತ್, ಬಾಲಾಜಿ, ಪ್ರಮೋದ್‌‌ ನಟಿಸಿದ್ದಾರೆ. ಚಿತ್ರದ‌ ಹಿನ್ನೆಲೆ ಸಂಗೀತ ಕಥೆಗೆ‌ ಪೂರಕವಾಗಿದೆ. ಹೊಸ ಬಗೆಯ‌ ಸಿನಿಮಾ‌ ನೋಡುವವರು ಒಮ್ಮೆ‌ನಾರಾಯಣನ ಬಾಗಿಲು ಬಡಿಯಬಹುದು.

ರವಿಪ್ರಕಾಶ್ ರೈ

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

Marigold movie review

Marigold movie review; ಥ್ರಿಲ್ಲರ್ ಹಾದಿಯಲ್ಲಿ ಗೋಲ್ಡನ್ ರೈಡ್

Matinee movie review

Matinee Review; ಪ್ರೀತಿಯ ಅರಮನೆಯಲ್ಲಿ ಆತ್ಮದ ಆಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.