‘ಬಾಂಡ್ ರವಿ’ ಚಿತ್ರ ವಿಮರ್ಶೆ: ಸೆಟ್ಲಮೆಂಟ್‌ ಹುಡುಗನ ಸೆಂಟಿಮೆಂಟ್‌!


Team Udayavani, Dec 10, 2022, 3:54 PM IST

‘ಬಾಂಡ್ ರವಿ’ ಚಿತ್ರ ವಿಮರ್ಶೆ: ಸೆಟ್ಲಮೆಂಟ್‌ ಹುಡುಗನ ಸೆಂಟಿಮೆಂಟ್‌!

ಆತ ಕಾಸಿಲ್ಲದೇ ಕನೆಕ್ಟ್ ಆಗುವ ವ್ಯಕ್ತಿಯಲ್ಲ, ಸೆಂಟಿಮೆಂಟ್‌ಗಿಂತ ಸೆಟ್ಲಮೆಂಟ್‌ ಮುಖ್ಯ ಎಂಬ “ಕಮಿಟ್‌ಮೆಂಟ್‌’ನೊಂದಿಗೆ ಬದುಕುತ್ತಿರುವ ಹುಡುಗ..ಇಂತಹ ರಗಡ್‌ ಹುಡುಗನ ದಿಲ್‌ಗೊಂದು ಪ್ರೀತಿಯ ಸಿಂಚನ, ಅಲ್ಲಿಂದ “ಬಿಸಿ’ ರಕ್ತ ಕೂಲ್‌ ಕೂಲ್‌… ಹೀಗೆ “ತಂಪಾಗಿ’ ಪ್ರೀತಿಯ ಅಮಲಿನಲ್ಲಿ ಇರುವ ಆತನ ಹಿಂದೊಂದು ಸಂಚು, ಹೊಂಚು… ಕ್ಲೈಮ್ಯಾಕ್ಸ್‌ನಲ್ಲೊಂದು ಬಿಗ್‌ ಟ್ವಿಸ್ಟ್‌….

ಈ ವಾರ ತೆರೆಕಂಡಿರುವ “ಬಾಂಡ್‌ ರವಿ’ ಆ್ಯಕ್ಷನ್‌ ಇಮೇಜ್‌ ನೊಂದಿಗೆ ಆರಂಭವಾಗಿ ಲವ್‌ಸ್ಟೋರಿ ಮೂಲಕ ಕೊನೆಯಾಗುವ ಸಿನಿಮಾ. ಒಂದು ಮಾಸ್‌ ಸಿನಮಾದಲ್ಲಿ ಏನೆಲ್ಲಾ ಇರಬೇಕೋ, ಆ ಎಲ್ಲಾ ಅಂಶಗಳು ಈ ಸಿನಿಮಾದಲ್ಲಿದೆ. ಮಾಸ್‌ ಎಂಟ್ರಿ, ಫೈಟ್‌, ಹಾಡು.. ಹೀಗೆ ಎಲ್ಲವೂ “ಬಾಂಡ್‌ ರವಿ’ಯಲ್ಲಿದೆ. ಕಥೆಯ ವಿಚಾರಕ್ಕೆ ಬರುವುದಾದರೆ ಮಾಸ್‌ ಕಥೆಗೆ ಲವ್‌ ಟಚ್‌ ಕೊಡಲಾಗಿದೆ.

ಮೊದಲರ್ಧ ಸಿನಿಮಾ ಜೈಲು, ಗಲಾಟೆ, ಸೆಟ್ಲಮೆಂಟ್‌ಗಳಲ್ಲಿ ಸಾಗಿದರೆ, ಸಿನಿಮಾದ ನಿಜವಾದ ಜೀವಾಳ ದ್ವಿತೀಯಾರ್ಧ. ಅದರಲ್ಲೂ ಚಿತ್ರದ ಕ್ಲೈಮ್ಯಾಕ್ಸ್‌. ಆರಂಭದಲ್ಲಿ ಪ್ರೇಕ್ಷಕನ ಊಹೆಗೆ ತಕ್ಕಂತೆ ಸಿನಿಮಾ ಸಾಗಿದರೆ, ಚಿತ್ರದ ಕ್ಲೈಮ್ಯಾಕ್ಸ್‌ ಮಾತ್ರ ಭಿನ್ನವಾಗಿದೆ. ಆ ಮಟ್ಟಿಗೆ ನಿರ್ದೇಶಕರ ಶ್ರಮವನ್ನು ಮೆಚ್ಚಬಹುದು.

ಕೆಲವೇ ಕೆಲವು ಲೊಕೇಶನ್‌ಗಳಲ್ಲಿ ಈ ಸಿನಿಮಾವನ್ನು ಕಟ್ಟಿಕೊಡುವ ಮೂಲಕ ಸಿನಿಮಾ ಒಂದೇ ಕಡೆ ಸುತ್ತಿದಂತೆ ಭಾಸವಾಗುತ್ತದೆ. ಆರಂಭದಲ್ಲಿ ಬರುವ ಒಂದಷ್ಟು ಜೈಲು ದೃಶ್ಯಗಳಿಗೆ ಕತ್ತರಿ ಹಾಕಿ, ಸಿನಿಮಾದ ಕಥೆಯನ್ನು ಮತ್ತಷ್ಟು ಗಟ್ಟಿಗೊಳಿಸುವ ಅವಕಾಶ ನಿರ್ದೇಶಕರಿಗಿತ್ತು. ಚಿತ್ರದ ಹೈಲೈಟ್‌ಗಳಲ್ಲಿ ಸಂಭಾಷಣೆ ಕೂಡಾ ಒಂದು. ಮಾಸ್‌ ಸಿನಿಮಾಗಳಿಗೆ ಬೇಕಾದ ಪಂಚಿಂಗ್‌ ಡೈಲಾಗ್‌ ಮೂಲಕ ಸಿನಿಮಾದ “ಖದರ್‌’ ಹೆಚ್ಚಿಸಲು ಪ್ರಯತ್ನಿಸಿದ್ದಾರೆ.

ನಾಯಕ ಪ್ರಮೋದ್‌ ಮತ್ತೂಮ್ಮೆ ತಾನು ಭವಿಷ್ಯದ ಮಾಸ್‌ ಹೀರೋ ಎಂಬುದನ್ನು ಸಾಬೀತು ಮಾಡಿದ್ದಾರೆ. ರಗಡ್‌ ಲುಕ್‌ನಲ್ಲಿ ಅವರ ಮ್ಯಾನರಿಸಂ, ಡೈಲಾಗ್‌ ಡೆಲಿವರಿ ಶೈಲಿ ಎಲ್ಲವೂ “ಮಾಸ್‌’ ಇಮೇಜ್‌ಗೆ ಒತ್ತು ನೀಡುವಂತಿದೆ. ನಾಯಕಿ ಕಾಜಲ್‌ ಕುಂದರ್‌ ಕ್ಲೈಮ್ಯಾಕ್ಸ್‌ನಲ್ಲಿ ಮಿಂಚಿದ್ದಾರೆ. ಉಳಿದಂತೆ ಶೋಭರಾಜ್‌, ರವಿಕಾಳೆ ಸೇರಿದಂತೆ ಇತರರು ನಟಿಸಿದ್ದಾರೆ. ಒಂದು ಮಾಸ್‌ ಲವ್‌ಸ್ಟೋರಿ ಇಷ್ಟಪಡುವವರಿಗೆ ಬಾಂಡ್‌ ರವಿ ಮೆಚ್ಚುಗೆಯಾಗಬಹುದು.

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.