Case of Kondana Review: ರೋಚಕ ಘಟ್ಟದಲ್ಲಿ ಕೊಂಡಾಣ ಕೇಸ್‌!


Team Udayavani, Jan 27, 2024, 11:01 AM IST

case of kondana review

ಆರಂಭದಲ್ಲೇ ಜೋಡಿ ಕೊಲೆಗಳಾಗುತ್ತವೆ. ಅದರ ಬೆನ್ನಲ್ಲೇ ಮತ್ತೂಂದು ಕೊಲೆ. ಇವೆಲ್ಲವೂ ಕೊಲೆ ಮಾಡುವ ಉದ್ದೇಶದಿಂದ ನಡೆದಿಧ್ದೋ ಅಥವಾ ಆಕಸ್ಮಿಕವಾಗಿ ಜರುಗಿಧ್ದೋ ಎಂದು ತನಿಖೆ ಶುರುವಾಗುವ ಹೊತ್ತಿಗೆ ಮತ್ತೂಂದು ಹೆಣ ಬೀಳುತ್ತದೆ. ಪೊಲೀಸ್‌ ಇಲಾಖೆಗೆ ಇದೊಂಥರ ಚಾಲೆಂಜಿಂಗ್‌ ಕೇಸ್‌. ಹಂತಕನ ಪೊಲೀಸರು ಪತ್ತೆಗೆ ಬಲೆ ಬೀಸಿರುತ್ತಾರೆ.

ಅನ್ಯಧರ್ಮೀಯನನ್ನು ಪ್ರೀತಿಸಿದ ಕಾರಣಕ್ಕಾಗಿ ಅಣ್ಣ ಸಿಟ್ಟು ಮಾಡಿ ಕೊಂಡಿರುತ್ತಾನೆ. ನಾಯಕ-ನಾಯಕಿ ಮಾತ್ರ ಏನೇ ಕಷ್ಟಗಳು ಎದುರಾದರೂ ಮದುವೆ ಆಗಿಯೇ ತೀರುವ ತೀರ್ಮಾನ ತೆಗೆದುಕೊಂಡಿರುತ್ತಾರೆ. ಅದರೆ ನಾಯಕ ಆಗಷ್ಟೇ ಕೆಲಸಕ್ಕೆ ಸೇರಿರುವ ಆಸಾಮಿ. ಕೈಯಲ್ಲಿ ದುಡ್ಡಿಲ್ಲ, ಒಂದಷ್ಟು ಸಾಲದ ಹೊರೆ…

ಇವೆರಡೂ ಘಟನೆಯ ಜತೆಜತೆಗೆ ಕೊಂಡಾಣದಲ್ಲಿ ಮೂವರು ಪೊಲೀಸರ ಹತ್ಯೆಯಾಗುತ್ತದೆ. ಇದರ ಹಿಂದಿನ ರೂವಾರಿ ಯಾರು? ಮಧ್ಯರಾತ್ರಿಯಲ್ಲಿ ಕೊಲೆಗೈದವರಾರು? ಹಿನ್ನೆಲೆ ಏನು… ಇತ್ಯಾದಿ ವಿಷಯಗಳ ಕುರಿತು ಸಾಕಷ್ಟು ಚರ್ಚೆಯಾಗುತ್ತದೆ. ಇಷ್ಟೂ ಘಟನೆಗಳೂ ರಾತ್ರಿ ಹೊತ್ತು ನಡೆಯುತ್ತದೆ ಎಂಬುದು ವಿಶೇಷ. ಎಲ್ಲ ಘಟನೆಗೆ ಸಾಕ್ಷಿಯಾಗಿದ್ದ ವ್ಯಕ್ತಿಗಳು ಒಂದೇ ಕಡೆ ಸೇರುವ ಸಮಯ ಸಮೀಪಿಸುತ್ತದೆ. ಅಲ್ಲಿಗೆ ಮಧ್ಯಂತರ.

ಅಸಲಿ ಕಥೆ ಶುರುವಾಗುವುದೇ ದ್ವಿತೀಯಾರ್ಧದಲ್ಲಿ..! ಜತೆಗೊಂದಿಷ್ಟು ರೋಚಕತೆ. ಡಾರ್ಕ್‌ ಕ್ರೈಂ ಥ್ರಿಲ್ಲರ್‌ ಜಾನರ್‌ನಲ್ಲಿ ಮೂಡಿಬಂದಿರುವ “ಕೇಸ್‌ ಆಫ್ ಕೊಂಡಾಣ’ ನಾನಾ ಕಾರಣಗಳಿಂದಾಗಿ ಕುತೂಹಲ ಕೆರಳಿಸುತ್ತಾ ಸಾಗುತ್ತದೆ. ಪ್ರೇಕ್ಷಕರ ತಲೆಗೆ ಹೆಚ್ಚು ಹುಳ ಬಿಡದೇ ಸತ್ಯವನ್ನು ನೇರಾ ನೇರ ಪ್ರಸ್ತುತಪಡಿಸುತ್ತಾ ಹೋಗುವ ನಿರ್ದೇಶಕ, ಯೋಚಿಸುವ ಪ್ರಕ್ರಿಯೆಯನ್ನು ಪಾತ್ರಗಳಿಗೆ ಹೊರಿಸಿರುವುದು ಜಾಣ್ಮೆಯ ಆಲೋಚನೆ!

ಇಂಥ ಕಥೆಗಳಿಗೆ ನಿರೂಪಣೆಯಲ್ಲಿ ವೇಗ ಇರಬೇಕು. ಅಷ್ಟೇ ಗಟ್ಟಿಯಾದ ಕಥೆಯ ಎಳೆಯೂ ಇರಬೇಕು. ಎರಡನ್ನೂ ಸರಿಸಮನಾಗಿ ಬೆರೆಸಿ ಚಿತ್ರಕಥೆಯಲ್ಲಿ ಬಿಗಿ ಕಾಪಾಡಿಕೊಳ್ಳುವಲ್ಲಿ ಸಫ‌ಲರಾಗಿದ್ದಾರೆ ನಿರ್ದೇಶಕ ದೇವಿಪ್ರಸಾದ್‌ ಶೆಟ್ಟಿ. ಕಾನೂನಾತ್ಮಕ ಚೌಕಟ್ಟಿನಲ್ಲಿ ಏನೆಲ್ಲಾ ಹೇಳಬಹುದು ಎಂಬ ಜಾಣ್ಮೆ ಅವರಲ್ಲಿದೆ. ಹೀಗಾಗಿ ಎಲ್ಲೂ ಅತಿರೇಕದ ಸನ್ನಿವೇಶಗಳಿಲ್ಲ. ಕಣ್ಣೆದುರೇ ನಡೆಯುತ್ತಿರುವ ಘಟನೆ ಎಂಬಂತೆ ನೈಜತೆಗೆ ಹೆಚ್ಚು ಒತ್ತು ಕೊಟ್ಟಿರುವುದು ಪ್ರಕರಣದ ತೀವ್ರತೆಯ ಅನಾವರಣವಾಗುತ್ತದೆ. ಮುಖ್ಯವಾಗಿ ತಾಂತ್ರಿಕತೆಯತ್ತ ಹೆಚ್ಚು ಗಮನ ಹರಿಸಿರುವುದರಿಂದ ವೃತ್ತ ಪರಿ ಪೂರ್ಣವಾಗಿದೆ.

ಕಲಾವಿದರೂ ಅಷ್ಟೇ ನೈಜತೆಯಿಂದ ಕ್ಯಾಮೆರಾ ಎದುರಿಸಿದ್ದಾರೆ. ನೆರಳು-ಬೆಳಕಿನಾಟ, ಕಳ್ಳ-ಪೊಲೀಸ್‌ ಕಣ್ಣಾಮುಚ್ಚಾಲೆ ಯಲ್ಲಿ ಸತ್ಯ ಎಷ್ಟರಮಟ್ಟಿಗೆ ಹೊರಬೀಳುತ್ತದೆ ಎಂಬುದೇ ಕೌತುಕದ ವಿಷಯ. ಅದನ್ನು ಕೊನೆಯವರೆಗೂ ತೆಗೆದುಕೊಂಡು ಹೋಗಿರುವ ಪರಿ ಮೆಚ್ಚುಗೆಗೆ ಅರ್ಹ.

ವಿಜಯ ರಾಘವೇಂದ್ರ ತಣ್ಣಗೆ ಪಾತ್ರದಾಳಕ್ಕೆ ಇಳಿದು ಕಥೆಯ ತೀವ್ರತೆಯನ್ನು ಹೆಚ್ಚಿಸುತ್ತಾರೆ. ಭಾವನಾ ಮೆನನ್‌ ಪೊಲೀಸ್‌ ಅಧಿಕಾರಿಯಾಗಿ ಖಡಕ್‌ ಆಗಿ ಕಾಣಿಸಿಕೊಂಡಿದ್ದಾರೆ. ಖುಷಿ ರವಿ, ರಂಗಾಯಣ ರಘು, ಪೆಟ್ರೋಲ್‌ ಪ್ರಸನ್ನ ಮೊದಲಾದವರ ನಟನೆ ಗಮನಾರ್ಹ. ಛಾಯಾಗ್ರಾಹಕ ವಿಶ್ವಜಿತ್‌ ರಾವ್‌ ಕ್ಯಾಮೆರಾ ಕೈಚಳಕ ಅಚ್ಚುಕಟ್ಟಾಗಿದೆ. ಸಂಭಾಷಣೆಯ ಮೂಲಕ ದೃಶ್ಯವನ್ನು ಮತ್ತೂಂದು ಹಂತಕ್ಕೆ ಕೊಂಡೊಯ್ಯುವಲ್ಲಿ ಜೋಗಿ ಸಂಭಾಷಣೆ ಕೆಲಸ ಮಾಡಿದೆ.

ಆರ್‌.ಪಿ

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.