‘ಚೇಸ್’ ಚಿತ್ರ ವಿಮರ್ಶೆ: ಬೆನ್ನಟ್ಟಿ ಬೇಟೆಯಾಡುವ ಥ್ರಿಲ್ಲಿಂಗ್‌ ಸ್ಟೋರಿ


Team Udayavani, Jul 17, 2022, 2:22 PM IST

chase movie review

ಮಧ್ಯರಾತ್ರಿ ವೇಳೆಯಲ್ಲಿ ಜೋರಾಗಿ ಸುರಿಯುತ್ತಿರುವ ಮಳೆ. ಇದೇ ಸಂದರ್ಭದಲ್ಲಿ ಬೆಂಗಳೂರಿನ ಹೊರವಲಯದಲ್ಲಿ ಭೀಕರ ಅಪಘಾತವೊಂದು ನಡೆಯುತ್ತದೆ. ನಂತರ ನೋಡಿದರೆ, ಅಪಘಾತಕ್ಕೆ ಒಳಗಾದ ವ್ಯಕ್ತಿಯೇ ನಾಪತ್ತೆ! ಘಟನೆಯ ಸ್ಥಳದಲ್ಲಿದ್ದ ಕೆಲವೇ ಕೆಲವರಿಗೆ ಕೂಡ ಈ ಅಪಘಾತ ಘಟನೆ ಅಸ್ಪಷ್ಟ ಚಿತ್ರಣ. ಹಾಗಾದರೆ, ನಿಜಕ್ಕೂ ಆ ರಾತ್ರಿ ನಡೆದಿದ್ದೇನು? ಅಪಘಾತ ಮಾಡಿದರು ಯಾರು? ಅಪಘಾತಕ್ಕೆ ಒಳಗಾದವರು ಏನಾದರು? ಇದರ ತನಿಖೆಯ ಹಿಂದೆ ಬೀಳುವ ಸಿಸಿಬಿ ಇನ್ಸ್‌ಪೆಕ್ಟರ್‌ ಅವಿನಾಶ್‌ಗೆ ಈ ಘಟನೆಯ ಹಿಂದಿನ ಒಂದೊಂದೆ ಎಳೆ ತೆರೆದುಕೊಳ್ಳುತ್ತದೆ. ಅಂತಿಮವಾಗಿ ಈ ಅಪಘಾತದ ಹಿಂದಿನ ಕಾರಣ ಯಾವುದು ಅನ್ನೋದು ಕ್ಲೈಮ್ಯಾಕ್ಸ್‌ ವೇಳೆಗೆ ರಿವೀಲ್‌ ಆಗುತ್ತದೆ. ಇದು ಈ ವಾರ ತೆರೆಗೆ ಬಂದಿರುವ “ಚೇಸ್‌’ ಸಿನಿಮಾದ ಕಥಾಹಂದರ.

ಸಿನಿಮಾದ ಟೈಟಲ್ಲೇ ಹೇಳುವಂತೆ, ನಡೆಯುವ ಅಪರಾಧ ಘಟನೆಯೊಂದನ್ನು ತನಿಖೆಯ ಮೂಲಕ ಹೇಗೆಲ್ಲ “ಚೇಸ್‌’ ಮಾಡುತ್ತ ಕಥೆ ಸಾಗುತ್ತದೆ ಅನ್ನೋದೇ “ಚೇಸ್‌’ ಸಿನಿಮಾ.

ಒಂದು ಅಪಘಾತ, ಮೆಡಿಕಲ್‌ ಮಾಫಿಯಾ, ವೈಟ್‌ ಕಾಲರ್‌ ಕ್ರೈಂ, ಪೊಲೀಸ್‌ ತನಿಖೆ, ವ್ಯವಸ್ಥೆಯ ಲೋಪ ಎಲ್ಲವನ್ನೂ ಜೋಡಿಸಿ ಒಂದು ಸಸ್ಪೆನ್ಸ್‌, ಕ್ರೈಂ-ಥ್ರಿಲ್ಲರ್‌ ಸಿನಿಮಾವನ್ನು ಕುತೂಹಲಭರಿತವಾಗಿ ಪ್ರೇಕ್ಷಕರಿಗೆ ಕಟ್ಟಿಕೊಟ್ಟಿದ್ದಾರೆ ನಿರ್ದೇಶಕ ವಿಲೋಕ್‌ ಶೆಟ್ಟಿ. ಸಸ್ಪೆನ್ಸ್‌, ಕ್ರೈಂ-ಥ್ರಿಲ್ಲರ್‌ ಸಿನಿಮಾಗಳಲ್ಲಿ ಕಥೆಯನ್ನು ಹೇಳುವ ರೀತಿ ಮತ್ತು ವೇಗ ಎರಡೂ ಕೂಡ ತುಂಬ ಮುಖ್ಯವಾಗಿರುತ್ತದೆ. ಅದನ್ನು ಅಚ್ಚುಕಟ್ಟಾಗಿ ಹೇಳುವಲ್ಲಿ “ಚೇಸ್‌’ ಯಶಸ್ವಿಯಾಗಿದೆ. ಸಿನಿಮಾದ ನಿರೂಪಣೆ ಗಂಭೀರವಾಗಿ ಸಾಗುವುದರಿಂದ ಬಹುತೇಕ ಪಾತ್ರಗಳು ಗಂಭೀರವಾಗಿಯೇ ಪ್ರೇಕ್ಷಕರ ಮುಂದೆ ಬರುತ್ತವೆ.

ಅವಿನಾಶ್‌ ನರಸಿಂಹರಾಜು, ರಾಧಿಕಾ ನಾರಾಯಣ್‌, ಶೀತಲ್‌ ಶೆಟ್ಟಿ, ಅರ್ಜುನ್‌ ಯೋಗೇಶ್‌, ಅರವಿಂದ್‌ ರಾವ್‌, ರಾಜೇಶ್‌ ನಟರಂಗ ತಮ್ಮ ಪಾತ್ರಗಳಲ್ಲಿ ಗಮನ ಸೆಳೆಯುತ್ತಾರೆ. ಸಿನಿಮಾದಲ್ಲಿ ಕಾಮಿಡಿಗಾಗಿಯೇ ಅರವಿಂದ್‌ ಬೋಳಾರ್‌ ಪಾತ್ರವನ್ನು ಸೃಷ್ಟಿಸಿ, ತೆರೆಮೇಲೆ ತಂದಂತಿದೆ.

ಉಳಿದಂತೆ ಛಾಯಾಗ್ರಹಣ, ಸಂಕಲನ ಮತ್ತು ಹಿನ್ನೆಲೆ ಸಂಗೀತ, ತಾಂತ್ರಿಕ ಕಾರ್ಯಗಳು ತೆರೆಮೇಲೆ “ಚೇಸ್‌’ ಸಿನಿಮಾವನ್ನು ಗುಣಮಟ್ಟದಲ್ಲಿ ಕಾಣುವಂತೆ ಮಾಡಿದೆ. ಸಸ್ಪೆನ್ಸ್‌ ಕಂ ಕ್ರೈಂ-ಥ್ರಿಲ್ಲರ್‌ ಸಿನಿಮಾಗಳನ್ನು ಇಷ್ಟಪಡುವ ಸಿನಿಪ್ರಿಯರಿಗೆ “ಚೇಸ್‌’ ನಿಂದ ಖಂಡಿತವಾಗಿಯೂ ಒಂದಷ್ಟು ಮನರಂಜನೆ ಸಿಗಬಹುದು

 ಜಿ.ಎಸ್‌.ಕಾರ್ತಿಕ ಸುಧನ್

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

Marigold movie review

Marigold movie review; ಥ್ರಿಲ್ಲರ್ ಹಾದಿಯಲ್ಲಿ ಗೋಲ್ಡನ್ ರೈಡ್

Matinee movie review

Matinee Review; ಪ್ರೀತಿಯ ಅರಮನೆಯಲ್ಲಿ ಆತ್ಮದ ಆಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.