ಚಿತ್ರ ವಿಮರ್ಶೆ: ‘ಕಾಕ್ಟೆಲ್’ ಎಂಬ ಸಮ್ಮಿಶ್ರಣಗಳ ಚಿತ್ರಣ


Team Udayavani, Jan 7, 2023, 2:47 PM IST

cocktail kannada movie

ಆತ ಸಿನಿಮಾದಲ್ಲಿ ಹೀರೋ ಆಗಿ ಮಿಂಚಬೇಕು ಎಂಬ ಕನಸನ್ನು ಇಟ್ಟುಕೊಂಡಿರುವ ಹುಡುಗ. ಹೀರೋ ಆಗಲು ಬೇಕಾದ ಎಲ್ಲ ಪ್ರತಿಭೆ ಮತ್ತು ಅರ್ಹತೆಗಳಿದ್ದರೂ, ಅವಕಾಶಗಳು ಮಾತ್ರ ಈ ಹುಡುಗನ ಕೈಗೆಟಕುತ್ತಿಲ್ಲ. ಇಂಥ ಹುಡುಗನಿಗೆ ಪ್ಯಾನ್‌ ಇಂಡಿಯಾ ನಿರ್ದೇಶಕನಾಗಬೇಕು ಎಂಬ ಕನಸು ಕಾಣುವ ಸ್ನೇಹಿತನೊಬ್ಬನ ಸಾಥ್‌.

ಇಬ್ಬರು ಸೇರಿ ನಿರ್ಮಾಪಕರೊಬ್ಬರನ್ನು ಹಿಡಿದು ಸಿನಿಮಾ ಮಾಡುವ ಸಾಹಸಕ್ಕೆ ಮುಂದಾಗುತ್ತಾರೆ. ಇನ್ನೇನು ಸ್ಕ್ರಿಪ್ಟ್ ಕೆಲಸಗಳು ಶುರುವಾಗಿ, ಸಿನಿಮಾ ಆಗಬೇಕು ಎನ್ನುವಷ್ಟರಲ್ಲಿ ನಿಗೂಢವಾಗಿ ನಡೆಯುವ ಒಂದಷ್ಟು ಕೊಲೆಗಳು ಸಿನಿಮಾದ ಹೀರೋ ಮತ್ತು ನಿರ್ದೇಶಕನನ್ನು ಸುತ್ತಿಕೊಳ್ಳುತ್ತವೆ. ಸಿನಿಮಾದೊಳಗೆ ಒಂದು ಸಿನಿಮಾ ಅದರ ನಡುವೆ ಒಂದು ಮರ್ಡರ್‌ ಮಿಸ್ಟರಿ ತೆರೆದುಕೊಳ್ಳುತ್ತದೆ. ಇದು ಈ ವಾರ ತೆರೆಗೆ ಬಂದಿರುವ “ಕಾಕ್ಟೆಲ್‌’ ಸಿನಿಮಾದ ಕಥೆಯ ಎಳೆ. ಅದು ಹೇಗಿದೆ ಎಂಬುದು ಅನುಭವಕ್ಕೆ ಬರಬೇಕಾದರೆ, “ಕಾಕ್ಟೆಲ್‌’ ಅನ್ನು ತೆರೆಮೇಲೆ ನೋಡಬೇಕು.

ಸಿನಿಮಾದ ಟೈಟಲ್ಲೇ ಹೇಳುವಂತೆ, “ಕಾಕ್ಟೆಲ್‌’ ಲವ್‌, ಕ್ರೈಂ, ಸಸ್ಪೆನ್ಸ್‌, ಥ್ರಿಲ್ಲರ್‌ ಎಲ್ಲದರ ಮಿಶ್ರಣದಂತಿರುವ ಸಿನಿಮಾ. ಮಾಸ್‌ ಆಡಿಯನ್ಸ್‌ಗೆ ಇಷ್ಟವಾಗುವಂತ ಒಂದು ಎಳೆಯನ್ನು ಇಟ್ಟುಕೊಂಡು ಅದನ್ನು ತೆರೆಮೇಲೆ ತರಲಾಗಿದೆ. ನವನಟ ವೀರೇನ್‌ ಕೇಶವ್‌ ಮೊದಲ ಸಿನಿಮಾದಲ್ಲೇ ಗಮನ ಸೆಳೆಯುವ ಪಾತ್ರ ನಿಭಾಯಿಸಿದ್ದಾರೆ.

ಡ್ಯಾನ್ಸ್‌, ಆ್ಯಕ್ಷನ್‌, ಡೈಲಾಗ್ಸ್‌ ಡೆಲಿವರಿ ಹೀಗೆ ಎಲ್ಲದರಲ್ಲೂ ವೀರೇನ್‌ ಕೇಶವ್‌ ಪಾತ್ರಕ್ಕೆ ಹಾಕಿರುವ ‌ಪರಿಶ್ರಮ ಕಾಣುತ್ತದೆ. ನಾಯಕಿ ಚರಿಷ್ಮಾ ಕೂಡ ಅಂದಕ್ಕೊಪ್ಪುವ ಅಭಿನಯ=ನೀಡಿದ್ದಾರೆ. ಉಳಿದಂತೆ ಶೋಭರಾಜ್‌, ಶಿವಮಣಿ, ರಮೇಶ್‌ ಪಂಡಿತ್‌, ಚಂದ್ರಕಲಾ ಮೋಹನ್‌, ಕರಿಸುಬ್ಬು ಮತ್ತಿತರರದ್ದು ಅಚ್ಚುಕಟ್ಟು ಅಭಿನಯ. ಸಿನಿಮಾದ ಎರಡು ಹಾಡುಗಳು ಥಿಯೇಟರ್‌ ಹೊರಗೂ ಗುನುಗುವಂತಿದೆ. ಛಾಯಾಗ್ರಹಣ ಸಿನಿಮಾದ ದೃಶ್ಯಗಳನ್ನು ಅಂದವನ್ನು ಹೆಚ್ಚಿಸಿದ್ದು, ಸಂಕಲನ ಕಾರ್ಯ, ಕಲರಿಂಗ್‌ ಮತ್ತು ಹಿನ್ನೆಲೆ ಸಂಗೀತದ ಕಡೆಗೆ ಚಿತ್ರತಂಡ ಇನ್ನಷ್ಟು ಗಮನ ನೀಡಬಹುದಿತ್ತು.

ಜಿಎಸ್ ಕೆ

ಟಾಪ್ ನ್ಯೂಸ್

Vachanananda Swamiji spoke about getting reservation to Panchmasali community

ನಾಳೆ ರಾಜ್ಯ ಸರಕಾರದಿಂದ ಪಂಚಮಸಾಲಿ ಸಮುದಾಯಕ್ಕೆ ಕೊಡುಗೆ: ವಚನಾನಂದ ಸ್ವಾಮೀಜಿ ವಿಶ್ವಾಸ

ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…

ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…

ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು

ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು

1-manipal-station

ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪ; ಐವರು ವಿದ್ಯಾರ್ಥಿಗಳು ವಶಕ್ಕೆ

tdy-2

ಕನಸಿನಲ್ಲಿ ʼಶ್ರೀಕೃಷ್ಣʼ ದೇವರನ್ನು ಕಂಡು ನಿದ್ದೆಯಿಂದ ಎಚ್ಚೆದ್ದ ಸಚಿವ.!

Modi ಉಪನಾಮ ಪ್ರಕರಣ: ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲುಶಿಕ್ಷೆ ವಿಧಿಸಿದ ಕೋರ್ಟ್

Modi ಉಪನಾಮ ಪ್ರಕರಣ: ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲುಶಿಕ್ಷೆ ವಿಧಿಸಿದ ಕೋರ್ಟ್

TDY-22

ಸ್ಟಾರ್ಟ್‌ಅಪ್‌ ಕನಸು ಹೊತ್ತವರ ಚಿತ್ರ: ಮೇಡ್ ಇನ್ ಬೆಂಗಳೂರು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kabzaa

ಕಬ್ಜ ಚಿತ್ರ ವಿಮರ್ಶೆ; ಮಾಸ್ ಮನತಣಿಸುವ ಅರ್ಕೇಶ್ವರ ವೈಭವ

‘ಚೌಕಾಬಾರ’ ಮೆಚ್ಚುಗೆ

‘ಚೌಕಾಬಾರ’ ಮೆಚ್ಚುಗೆ

kannada movie mary review

ಚಿತ್ರ ವಿಮರ್ಶೆ; ಥ್ರಿಲ್ಲರ್ ‘ಮೇರಿ’ಯ ಜಾಡು ಹಿಡಿದು..

dddooradarshana kannada movie

ದೂರದರ್ಶನ ಚಿತ್ರ ವಿಮರ್ಶೆ; ಟಿವಿಯ ಸದ್ದು, ಅಹಂಗೊಂದು ಗುದ್ದು

kadala theerada bhargava movie

ಕಡಲ ತೀರದ ಭಾರ್ಗವ ಚಿತ್ರ ವಿಮರ್ಶೆ: ಕಡಲ ತೀರದ ಭಾವಯಾನ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

Vachanananda Swamiji spoke about getting reservation to Panchmasali community

ನಾಳೆ ರಾಜ್ಯ ಸರಕಾರದಿಂದ ಪಂಚಮಸಾಲಿ ಸಮುದಾಯಕ್ಕೆ ಕೊಡುಗೆ: ವಚನಾನಂದ ಸ್ವಾಮೀಜಿ ವಿಶ್ವಾಸ

ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…

ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…

ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು

ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು

1-manipal-station

ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪ; ಐವರು ವಿದ್ಯಾರ್ಥಿಗಳು ವಶಕ್ಕೆ

tdy-2

ಕನಸಿನಲ್ಲಿ ʼಶ್ರೀಕೃಷ್ಣʼ ದೇವರನ್ನು ಕಂಡು ನಿದ್ದೆಯಿಂದ ಎಚ್ಚೆದ್ದ ಸಚಿವ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.