ಕಾಮಿಡಿ ಅಲೆಯಲ್ಲಿ ಫ್ಯಾಮಿಲಿ ಡ್ರಾಮಾ


Team Udayavani, Dec 9, 2018, 11:49 AM IST

orange.jpg

ಆತನ ಉದ್ದೇಶ ಬೇರೇಯೇ ಇರುತ್ತದೆ. ಆ ತರಹದ ಒಂದು ಸನ್ನಿವೇಶದಲ್ಲಿ ತಾನು ಸಿಲುಕಿಕೊಳ್ಳುತ್ತೇನೆ ಮತ್ತು ಮುಂದೆ ಅನೇಕ ಘಟನೆಗಳಿಗೆ ಸಾಕ್ಷಿಯಾಗುತ್ತೇನೆ ಎಂದು ಆತ ಕನಸು ಮನಸಿನಲ್ಲೂ ಅಂದುಕೊಂಡಿರುವುದಿಲ್ಲ. ಆದರೆ, ಎಲ್ಲವೂ ಅಂದುಕೊಂಡಂತೆ ನಡೆಯಬೇಕೆಂಬ ಯಾವ ನಿಯಮವೂ ಇಲ್ಲ. ಅದರಂತೆ ನಾಯಕ ಸನ್ನಿವೇಶವೊಂದರಲ್ಲಿ ನಾಯಕಿಯ ಮನೆ ಸೇರಿಬಿಡುತ್ತಾನೆ. ಅಲ್ಲಿಂದ ಫ್ಯಾಮಿಲಿ ಡ್ರಾಮಾ ಶುರುವಾಗುತ್ತದೆ. 

ಇಷ್ಟು ಹೇಳಿದ ಮೇಲೆ ಮುಂದಿನ ಒಂದಷ್ಟು ಘಟನೆಗಳನ್ನು ನೀವು ಊಹಿಸಿಕೊಳ್ಳಬಹುದು. ಏಕೆಂದರೆ ನಾಯಕಿಯ ಮನೆಗೆ ನಾಯಕ ಸೇರಿಕೊಂಡರೆ ಅಲ್ಲಿ ಏನೇನೂ ಡ್ರಾಮಾಗಳು ನಡೆಯುತ್ತವೆ ಎಂಬುದನ್ನು ಈಗಾಗಲೇ ಕೆಲವು ತೆಲುಗು, ಕನ್ನಡ ಸಿನಿಮಾಗಳಲ್ಲಿ ಪ್ರೇಕ್ಷಕ ನೋಡಿದ್ದಾನೆ. ಹಾಗಂತ “ಆರೆಂಜ್‌’ನಲ್ಲಿ ಎಲ್ಲವೂ ಪ್ರೇಕ್ಷಕ ಊಹಿಸಿಕೊಂಡಂತೆ ನಡೆಯುವುದಿಲ್ಲ. ಸಾಕಷ್ಟು ಟ್ವಿಸ್ಟ್‌-ಟರ್ನ್ಗಳೊಂದಿಗೆ ಸಿನಿಮಾವನ್ನು ಕಟ್ಟಿಕೊಟ್ಟಿದ್ದಾರೆ ನಿರ್ದೇಶಕ ಪ್ರಶಾಂತ್‌ರಾಜ್‌.

ಇಡೀ ಸಿನಿಮಾದಲ್ಲಿ ಎದ್ದು ಕಾಣುವುದು ಕಾಮಿಡಿ. ಸಂಪೂರ್ಣ ಕಥೆಯನ್ನು ಹಾಸ್ಯದ ಮೂಲಕ ಕಟ್ಟಿಕೊಡುವ ಪ್ರಯತ್ನ ಮಾಡಿದ್ದಾರೆ. ನಿರ್ದೇಶಕ ಪ್ರಶಾಂತ್‌ ರಾಜ್‌ ಉದ್ದೇಶ ಪ್ರೇಕ್ಷಕ ಕ್ಷಣ ಕ್ಷಣಕ್ಕೂ ನಗುತ್ತಿರಬೇಕು, ಹೆಚ್ಚು ಗಂಭೀರವಾಗಿ ಸಿನಿಮಾ ನೋಡಬಾರದು ಎಂಬುದು. ಅದಕ್ಕೆ ತಕ್ಕಂತಹ ಕಥೆ ಮಾಡಿಕೊಂಡು ಸಿನಿಮಾವನ್ನು ಕಟ್ಟಿಕೊಟ್ಟಿದ್ದಾರೆ. ಚಿತ್ರದಲ್ಲೊಂದು ಲವ್‌ಸ್ಟೋರಿ ಇದ್ದರೂ ಅದು ಹಾಸ್ಯದ ಮಧ್ಯೆ ಕಳೆದು ಹೋಗಿದೆ. ಮೊದಲೇ ಹೇಳಿದಂತೆ ಇಲ್ಲಿ ತೀರಾ ಹೊಸದು ಎನ್ನುವಂತಹ ಕಥೆಯಿಲ್ಲ.

ಆದರೆ, ಒಂದು ಸಿಂಪಲ್‌ ಕಥೆಯನ್ನು ಲವಲವಿಕೆಯಿಂದ ಕಟ್ಟಿಕೊಡುವಲ್ಲಿ ನಿರ್ದೇಶಕರು ಯಶಸ್ವಿಯಾಗಿದ್ದಾರೆ. ಒಂದು ಕಮರ್ಷಿಯಲ್‌ ಸಿನಿಮಾಕ್ಕೆ ಏನು ಬೇಕು ಎಂಬುದು ಪ್ರಶಾಂತ್‌ ರಾಜ್‌ಗೆ ಚೆನ್ನಾಗಿ ಗೊತ್ತಾಗಿದೆ. ಹಾಗಾಗಿಯೇ “ಆರೆಂಜ್‌’ನಲ್ಲಿ ಕಾಮಿಡಿ, ಕಲರ್‌ಫ‌ುಲ್‌ ಸಾಂಗ್‌, ಅದ್ಭುತವಾದ ಲೊಕೇಶನ್‌, ಪಂಚಿಂಗ್‌ ಡೈಲಾಗ್‌, ಜಬರ್ದಸ್ತ್ ಫೈಟ್‌ … ಎಲ್ಲವನ್ನು ಇಟ್ಟಿದ್ದಾರೆ. ಹಾಗಾಗಿ, ಪ್ರೇಕ್ಷಕ ಕಥೆಗಿಂತ ಇವುಗಳನ್ನು ಕಣ್ತುಂಬಿಕೊಳ್ಳುವಲ್ಲಿ ಹೆಚ್ಚು ಆಸಕ್ತಿ ತೋರಿಸಬಹುದು ಎಂಬ ಲೆಕ್ಕಾಚಾರ ನಿರ್ದೇಶಕರದು.

ಗಣೇಶ್‌ ನಾಯಕರಾಗಿರುವ ಸಿನಿಮಾದಲ್ಲಿ ಸಾಧುಕೋಕಿಲ ಅವರಿಗೆ ಪ್ರಮುಖ ಪಾತ್ರವಿರುತ್ತದೆ ಮತ್ತು ಸಿನಿಮಾದುದ್ದಕ್ಕೂ ಅವರು ಸಾಗಿಬರುತ್ತಾರೆಂಬುದು ಈಗಾಗಲೇ ಸಾಬೀತಾಗಿದೆ. ಪ್ರಶಾಂತ್‌ರಾಜ್‌ ಕೂಡಾ ಅವರಿಬ್ಬರ ನಡುವೆ ಸಾಕಷ್ಟು ದೃಶ್ಯಗಳನ್ನಿಟ್ಟು ಪ್ರೇಕ್ಷಕರನ್ನು ನಗಿಸಲು ಪ್ರಯತ್ನಿಸಿದ್ದಾರೆ. ಇಡೀ ಸಿನಿಮಾವನ್ನು ಹೊತ್ತು ಮುಂದೆ ಸಾಗಿದವರು ಗಣೇಶ್‌. ಪ್ರತಿ ದೃಶ್ಯಗಳಲ್ಲೂ ಗಣೇಶ್‌ ನಿಮಗೆ ಇಷ್ಟವಾಗುತ್ತಾ ಹೋಗುತ್ತಾರೆ.

ಸಿನಿಮಾವನ್ನು ಲವಲವಿಕೆಯಿಂದ ಇಡುವಲ್ಲಿ ಅವರ ಪಾತ್ರ ಇಲ್ಲಿ ಮಹತ್ವದ್ದು. ಅದು ಬಿಟ್ಟರೆ ನಾಯಕಿ ಪ್ರಿಯಾ ಆನಂದ್‌ ಹೆಚ್ಚೇನು ಗಮನ ಸೆಳೆಯೋದಿಲ್ಲ. ಬದಲಿಗೆ ಸಾಧುಕೋಕಿಲ ಅವರೇ ಹೆಚ್ಚು ತೆರೆ ಆವರಿಸಿಕೊಂಡಿದ್ದಾರೆ. ಉಳಿದಂತೆ ರಂಗಾಯಣ ರಘು, ಅವಿನಾಶ್‌, ರವಿಶಂಕರ್‌ ಗೌಡ ಸೇರಿದಂತೆ ಇತರರು ತಮ್ಮ ಪಾತ್ರಗಳಿಗೆ ನ್ಯಾಯ ಒದಗಿಸಿದ್ದಾರೆ. ಚಿತ್ರದ ಎರಡು ಹಾಡುಗಳು ಇಷ್ಟವಾಗುತ್ತವೆ. ಯಾವುದೇ ತಲೆಬಿಸಿ ಇಲ್ಲದೇ ಖುಷಿಯಿಂದ ನಗಬೇಕೆಂಬ ಉದ್ದೇಶವಿದ್ದರೇ ನೀವು “ಆರೆಂಜ್‌’ ನೋಡಲಡ್ಡಿಯಿಲ್ಲ. 

ಚಿತ್ರ: ಆರೆಂಜ್‌
ನಿರ್ಮಾಣ: ನಿಮ್ಮ ಸಿನಿಮಾ
ನಿರ್ದೇಶನ: ಪ್ರಶಾಂತ್‌ ರಾಜ್‌
ತಾರಾಗಣ: ಗಣೇಶ್‌, ಪ್ರಿಯಾ ಆನಂದ್‌, ಸಾಧುಕೋಕಿಲ, ಅವಿನಾಶ್‌, ರಂಗಾಯಣ ರಘು ಮತ್ತಿತರರು

* ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

Marigold movie review

Marigold movie review; ಥ್ರಿಲ್ಲರ್ ಹಾದಿಯಲ್ಲಿ ಗೋಲ್ಡನ್ ರೈಡ್

Matinee movie review

Matinee Review; ಪ್ರೀತಿಯ ಅರಮನೆಯಲ್ಲಿ ಆತ್ಮದ ಆಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.