‘ಕ್ರಿಟಿಕಲ್ ಕೀರ್ತನೆಗಳು’ ಚಿತ್ರ ವಿಮರ್ಶೆ: ಬೆಟ್ಟಿಂಗ್‌ ಯಾತನೆ ಕ್ರಿಕೆಟ್‌ ಕೀರ್ತನೆ


Team Udayavani, May 15, 2022, 2:41 PM IST

Critical Keertanegalu

ಸದ್ಯ ಎಲ್ಲ ಕಡೆ ಐಪಿಎಲ್‌ ಫೀವರ್‌ ಜೋರಾಗಿದೆ. ಒಂದೆಡೆ ಐಪಿಎಲ್‌ ಸೀಜನ್‌ ನಲ್ಲಿ ಕ್ರಿಕೆಟ್‌ ಆಟಗಾರರು ತಮ್ಮ ತಂಡಗಳ ಪರವಾಗಿ ಸ್ಟೇಡಿ ಯಂನಲ್ಲಿ ಆಟವಾಡುತ್ತಿದ್ದರೆ, ಮತ್ತೂಂದೆಡೆ ಬೆಟ್ಟಿಂಗ್‌ ಅನ್ನೋ ಪೆಡಂ ಭೂತ ಬುಕ್ಕಿಗಳ ಕೈಯಲ್ಲಿ ತೆರೆಮರೆಯಲ್ಲಿ ಆಟವಾಡಲು ಶುರು ಮಾಡಿ ರುತ್ತದೆ ಅನ್ನೋದು ಎಲ್ಲರಿಗೂ ಗೊತ್ತಿರುವ ಸಂಗತಿ. ಪ್ರತಿ ಐಪಿಎಲ್‌ ಸೀಜನ್‌ ನಲ್ಲೂ ಚರ್ಚೆಯಾಗುವ ಬಳಿಕ ಎಲ್ಲರೂ ಮರೆತು ಸುಮ್ಮನಾ ಗುವ ಬೆಟ್ಟಿಂಗ್‌ ಕಹಾನಿಯನ್ನು ತೆರೆಮೇಲೆ ಹೇಳಿರುವ ಸಿನಿಮಾ “ಕ್ರಿಟಿಕಲ್‌ ಕೀರ್ತನೆಗಳು’.

ಒಂದು ಗಂಭೀರ ವಿಷಯವನ್ನು ಕಥಾಹಂದರವಾಗಿ ಇಟ್ಟು ಕೊಂಡು ಅದಕ್ಕೆ ಒಂದಷ್ಟು ಮನರಂಜನಾತ್ಮಕ ಅಂಶಗಳನ್ನು ಸೇರಿಸಿ “ಕ್ರಿಟಿಕಲ್‌ ಕೀರ್ತನೆಗಳು’ ಸಿನಿಮಾವನ್ನು ಅಚ್ಚು ಕಟ್ಟಾಗಿ ಪ್ರೇಕ್ಷಕರ ಮುಂದೆ ಕಟ್ಟಿಕೊಟ್ಟಿದ್ದಾರೆ ನಿರ್ದೇಶಕ ಕುಮಾರ್‌. ಕರ್ನಾಟಕದ ನಾಲ್ಕು ಬೇರೆ ಬೇರೆ ಪ್ರಾದೇಶಿಕ ಹಿನ್ನೆಲೆಯಲ್ಲಿ ವಿಭಿನ್ನ ಮನಸ್ಥಿತಿಯ ನಾಲ್ಕು ಕಥೆಯನ್ನು ಒಂದೇ ಎಳೆಯಲ್ಲಿ ಜೋಡಿಸಿ ರುವ ನಿರ್ದೇಶಕರ ಪ್ರಯತ್ನ ಮೆಚ್ಚುವಂತದ್ದು.

ಸಿನಿಮಾದ ಮೊದಲರ್ಧ ಕಾಮಿಡಿಯಾಗಿ ಸಾಗುವ ಕಥೆ ಮತ್ತು ದೃಶ್ಯಗಳು, ದ್ವಿತಿಯಾರ್ಧದಲ್ಲಿ ಗಂಭೀರ ಸ್ವರೂಪ ಪಡೆದುಕೊಳ್ಳು ತ್ತದೆ. ಕೆಲ ಸನ್ನಿವೇಶಗಳಿಗೆ ಮತ್ತು ಪಾತ್ರಗಳಿಗೆ ಕತ್ತರಿ ಹಾಕಿ, ಚಿತ್ರಕಥೆಗೆ ಇನ್ನಷ್ಟು ವೇಗ ಕೊಟ್ಟಿದ್ದರೆ, “ಕೀರ್ತನೆಗಳು’ ಇನ್ನಷ್ಟು ಪರಿಣಾಮಕಾರಿಯಾಗಿ ನೋಡುಗ ರನ್ನು ಮುಟ್ಟುವ ಸಾಧ್ಯತೆ ಗಳಿದ್ದವು.

ಅದೆಲ್ಲದರ ಹೊರತಾಗಿಯೂ ಅಂತಿಮವಾಗಿ, ನೋಡುಗರು ಕೆಲಹೊತ್ತು ಯೋಚಿಸುತ್ತ ಥಿಯೇಟರ್‌ನಿಂದ ಹೊರಗೆ ಬರುವಂತೆ ಮಾಡಲು “ಕ್ರಿಟಿಕಲ್‌ ಕೀರ್ತನೆ’ ಯಶಸ್ವಿಯಾಗಿದೆ.

ಇನ್ನು ತಬಲನಾಣಿ, ಸುಚೇಂದ್ರ ಪ್ರಸಾದ್‌, ರಾಜೇಶ್‌ ನಟರಂಗ, ತರಂಗ ವಿಶ್ವ, ಅಪೂರ್ವಾ ಭಾರದ್ವಾಜ್‌, ದೀಪಾ ತಮ್ಮ ಪಾತ್ರಗಳಲ್ಲಿ ನೋಡುಗರ ಗಮನ ಸೆಳೆಯುತ್ತಾರೆ. ಉಳಿದಂತೆ ಅರುಣಾ ಬಾಲರಾಜ್‌, ಧರ್ಮ, ಯಶ್ವಂತ್‌ ಶೆಟ್ಟಿ, ದಿನೇಶ್‌ ಮಂಗಳೂರು, ಮಾ. ಮಹೇಂದ್ರ, ಮಾ. ಪುಟ್ಟರಾಜು, ಅಪೂರ್ವಾ ಮೊದಲಾದ ಕಲಾವಿದರು ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಇನ್ನಿತರ ಕಲಾವಿದರು ಮತ್ತು ಪಾತ್ರಗಳ ಬಗ್ಗೆ ಹೆಚ್ಚೇನೂ ಹೇಳುವಂತಿಲ್ಲ.

ಚಿತ್ರದ ಎರಡು ಹಾಡುಗಳು ಗುನುಗುವಂತಿದ್ದು, ಛಾಯಾಗ್ರಹಣ ಕಾರ್ಯ ಚಿತ್ರವನ್ನು ಸುಂದರವಾಗಿ ಕಾಣುವಂತೆ ಮಾಡಿದೆ. ಸಂಕಲನ, ಕಲರಿಂಗ್‌, ಹಿನ್ನೆಲೆ ಸಂಗೀತದ ಕಡೆಗೆ ಚಿತ್ರತಂಡ ಇನ್ನಷ್ಟು ಗಮನ ಕೊಡಬಹುದಿತ್ತು. ಕೆಲವೊಂದು ಸಣ್ಣ ಲೋಪಗಳನ್ನು ಬದಿಗಿಟ್ಟು ನೋಡುವುದಾದರೆ, “ಕ್ರಿಟಿಕಲ್‌ ಕೀರ್ತನೆಗಳು’ ಫ್ಯಾಮಿಲಿ ಜೊತೆ ಕುಳಿತು ಆಸ್ವಾಧಿಸಬಹುದಾದ ಸಿನಿಮಾ ಎನ್ನಲು ಅಡ್ಡಿಯಿಲ್ಲ.

ಜಿ. ಎಸ್‌. ಕಾರ್ತಿಕ ಸುಧನ್‌

ಟಾಪ್ ನ್ಯೂಸ್

Today ಆರ್ಟ್‌ ಆಫ್ ಲಿವಿಂಗ್‌ “ಸಂಸ್ಕೃತಿ ಉತ್ಸವ”; ಸಮಾರಂಭಕ್ಕೆ ವಿಶ್ವದ ದೊಡ್ಡಣ್ಣನ ಆತಿಥ್ಯ

Today ಆರ್ಟ್‌ ಆಫ್ ಲಿವಿಂಗ್‌ “ಸಂಸ್ಕೃತಿ ಉತ್ಸವ”; ಸಮಾರಂಭಕ್ಕೆ ವಿಶ್ವದ ದೊಡ್ಡಣ್ಣನ ಆತಿಥ್ಯ

Tomorrow ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ದಿಲ್ಲಿಗೆ ?

Tomorrow ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ದಿಲ್ಲಿಗೆ ?

MS Swaminathan ಕೃಷಿಗೆ ಕಸುವು ತುಂಬಿದ್ದ ವಿಜ್ಞಾನಿ ಸ್ವಾಮಿನಾಥನ್‌

MS Swaminathan ಕೃಷಿಗೆ ಕಸುವು ತುಂಬಿದ್ದ ವಿಜ್ಞಾನಿ ಸ್ವಾಮಿನಾಥನ್‌

ಆಹಾರ ಭದ್ರತೆಯ ಹರಿಕಾರ ಸ್ವಾಮಿನಾಥನ್‌ ಚಿರಸ್ಥಾಯಿ

Green revolution ಆಹಾರ ಭದ್ರತೆಯ ಹರಿಕಾರ ಸ್ವಾಮಿನಾಥನ್‌ ಚಿರಸ್ಥಾಯಿ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

roadNational Highways ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Road ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಲಪ್ರಳಯದ ಮನಕಲಕುವ ಕಥಾಹಂದರದ “2018” ನಮ್ಮ ಬದುಕಿನ ಚಿತ್ರ!

ಜಲಪ್ರಳಯದ ಮನಕಲಕುವ ಕಥಾಹಂದರದ “2018” ನಮ್ಮ ಬದುಕಿನ ಚಿತ್ರ!

Dighvijay Movie review;

Dighvijaya Movie review; ರೈತಪರ ಹೋರಾಟಕ್ಕೆ ದಿಗ್ವಿಜಯ

Olave Mandara 2 movie review

Olave Mandara 2 movie review; ಪ್ರೇಮದೂರಿನ ಕರೆಯೋಲೆ

Parimala D’souza Movie Review; ನಿಗೂಢ ಹಾದಿಯಲ್ಲಿ ಪರಿಮಳ ಹೆಜ್ಜೆ

Parimala D’souza Movie Review; ನಿಗೂಢ ಹಾದಿಯಲ್ಲಿ ಪರಿಮಳ ಹೆಜ್ಜೆ

’13’ movie review

’13’ movie review: ಹಣದ ಹಿಂದೆ ಬಿದ್ದವರ ಹುಡುಕಾಟ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

Today ಆರ್ಟ್‌ ಆಫ್ ಲಿವಿಂಗ್‌ “ಸಂಸ್ಕೃತಿ ಉತ್ಸವ”; ಸಮಾರಂಭಕ್ಕೆ ವಿಶ್ವದ ದೊಡ್ಡಣ್ಣನ ಆತಿಥ್ಯ

Today ಆರ್ಟ್‌ ಆಫ್ ಲಿವಿಂಗ್‌ “ಸಂಸ್ಕೃತಿ ಉತ್ಸವ”; ಸಮಾರಂಭಕ್ಕೆ ವಿಶ್ವದ ದೊಡ್ಡಣ್ಣನ ಆತಿಥ್ಯ

Tomorrow ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ದಿಲ್ಲಿಗೆ ?

Tomorrow ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ದಿಲ್ಲಿಗೆ ?

MS Swaminathan ಕೃಷಿಗೆ ಕಸುವು ತುಂಬಿದ್ದ ವಿಜ್ಞಾನಿ ಸ್ವಾಮಿನಾಥನ್‌

MS Swaminathan ಕೃಷಿಗೆ ಕಸುವು ತುಂಬಿದ್ದ ವಿಜ್ಞಾನಿ ಸ್ವಾಮಿನಾಥನ್‌

ಆಹಾರ ಭದ್ರತೆಯ ಹರಿಕಾರ ಸ್ವಾಮಿನಾಥನ್‌ ಚಿರಸ್ಥಾಯಿ

Green revolution ಆಹಾರ ಭದ್ರತೆಯ ಹರಿಕಾರ ಸ್ವಾಮಿನಾಥನ್‌ ಚಿರಸ್ಥಾಯಿ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.